Homeಕರೋನಾ ತಲ್ಲಣಅನ್‌ಲಾಕ್‌-4 ರಲ್ಲಿ ಕೇಂದ್ರದಿಂದ ಮೆಟ್ರೋ ಸೇವೆಗೆ ಅನುಮತಿ ಸಾಧ್ಯತೆ; ಅಂತಿಮ ನಿರ್ಧಾರ ರಾಜ್ಯ ಸರ್ಕಾರಗಳದ್ದು

ಅನ್‌ಲಾಕ್‌-4 ರಲ್ಲಿ ಕೇಂದ್ರದಿಂದ ಮೆಟ್ರೋ ಸೇವೆಗೆ ಅನುಮತಿ ಸಾಧ್ಯತೆ; ಅಂತಿಮ ನಿರ್ಧಾರ ರಾಜ್ಯ ಸರ್ಕಾರಗಳದ್ದು

ಶಾಲಾ ಕಾಲೇಜುಗಳು ಮತ್ತು ಸಿನೆಮಾ ಹಾಲ್‌ಗಳಂತಹ ಜನದಟ್ಟಣೆಯ ಸ್ಥಳಗಳಲ್ಲಿ ನಿರ್ಬಂಧಗಳು ಇನ್ನೂ ಉಳಿಯಲಿದೆ.

- Advertisement -
- Advertisement -

ಕೊರೊನಾ ವೈರಸ್ ಸಂಬಂಧಿತ ನಿರ್ಬಂಧಗಳಿಂದ ದೇಶವನ್ನು ಅನ್ಲಾಕ್ ಮಾಡುವ ನಾಲ್ಕನೇ ಹಂತ (ಅನ್‌ಲಾಕ್‌-4) ದಲ್ಲಿ ಮೆಟ್ರೊ ರೈಲು ಸೇವೆಗಳನ್ನು ಮುಂದಿನ ತಿಂಗಳು ಜಾರಿಗೆ ತರಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆದರೆ ಇದರ ಅಂತಿಮ ನಿರ್ಧಾರ ರಾಜ್ಯ ಸರ್ಕಾರಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಮೂಲಗಳು ತಿಳಿಸಿದೆ.

ಆದರೆ ಶಾಲಾ ಕಾಲೇಜುಗಳು ಇನ್ನೂ ಮುಚ್ಚಿರುತ್ತದೆ ಮತ್ತು ಸಿನೆಮಾ ಹಾಲ್‌ಗಳಂತಹ ಜನದಟ್ಟಣೆಯ ಸ್ಥಳಗಳಲ್ಲಿ ನಿರ್ಬಂಧಗಳು ಇನ್ನೂ ಉಳಿಯಲಿದೆ. ವ್ಯಾಪಕವಾದ ನಿರ್ಬಂಧಗಳೊಂದಿಗೆ ದೆಹಲಿ ಮೆಟ್ರೋ ಸೆಪ್ಟೆಂಬರ್ 1 ರಿಂದ ತನ್ನ ಸೇವೆಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಲಿಂಗತ್ವ ಕಂದರವನ್ನು ಹೆಚ್ಚಿಸಿದ ಲಾಕ್‌ಡೌನ್‌: ಮಹಿಳೆಯರನ್ನು ಮರೆತುಬಿಟ್ಟ ಸರ್ಕಾರ

ದೆಹಲಿಯಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ಸುಧಾರಿಸಿದೆ ಎಂದು ಪ್ರತಿಪಾದಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನವಿಯ ನಂತರ ದೆಹಲಿ ಮೆಟ್ರೋ ಸೇವೆಯನ್ನು ಒದಗಿಸುವ ಬಗೆಗಿನ ತೀರ್ಮಾನಕ್ಕೆ ವೇಗ ಬಂದಿದೆ ಎನ್ನಲಾಗಿದೆ.

“ದೆಹಲಿಯನ್ನು ವಿಭಿನ್ನವಾಗಿ ಪರಿಗಣಿಸಬೇಕು ಎಂದು ನಾನು ಕೇಂದ್ರವನ್ನು ವಿನಂತಿಸಿದ್ದೇನೆ” ಎಂದು ಕೇಜ್ರಿವಾಲ್ ಅವರು ನಿನ್ನೆ ವ್ಯಾಪಾರಿಗಳು ಮತ್ತು ಉದ್ಯಮಿಗಳೊಂದಿಗೆ ನಡೆಸಿದ ಆನ್‌ಲೈನ್ ಸಭೆಯಲ್ಲಿ ಹೇಳಿದರು.

“ದೆಹಲಿಯಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ಸುಧಾರಿಸುತ್ತಿದೆ. ಅವರು ಇತರ ನಗರಗಳಲ್ಲಿ ಮೆಟ್ರೋ ರೈಲುಗಳನ್ನು ಓಡಿಸಲು ಬಯಸದಿದ್ದರೆ, ಅದು ಹಾಗೇ ಇರಲಿ. ಆದರೆ, ದೆಹಲಿಯಲ್ಲಿ, ಮೆಟ್ರೊ ರೈಲು ಸೇವೆಗಳನ್ನು ಹಂತಹಂತವಾಗಿ, ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಬೇಕು” ಎಂದು ಹೇಳಿದ್ದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ಸಮಸ್ಯೆ: ಹೈಕೋರ್ಟ್ ಮುಂದೆ ತರಕಾರಿ ಮಾರಿದ ವಕೀಲ!

ಜುಲೈ 30 ರಂದು ಬಂದ ಅನ್ಲಾಕ್ 3 ಮಾರ್ಗಸೂಚಿಗಳು ರಾತ್ರಿ ಕರ್ಫ್ಯೂ ಕೊನೆಗೊಳಿಸಿ, ಕೊರೊನಾ ಕಂಟೈನ್‌ಮೆಂಟ್ ವಲಯಗಳಲ್ಲಿಲ್ಲದ ಯೋಗ ಮತ್ತು ಜಿಮ್ ಸಂಸ್ಥೆಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟವು. ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಉದ್ಯಾನವನಗಳು ಅಥವಾ ಸಿನೆಮಾ ಸಭಾಂಗಣಗಳು ಸೇರಿದಂತೆ ಎಲ್ಲಾ ರೀತಿಯ ದೊಡ್ಡ ಕೂಟಗಳ ಮೇಲೆ ಇನ್ನೂ ನಿರ್ಬಂಧಗಳು ಜಾರಿಯಲ್ಲಿವೆ.

ಆಗಸ್ಟ್ 8 ರಿಂದ ಭಾರತವು ಕೊರೊನಾ ವೈರಸ್ ಅಂಕಿಅಂಶಗಳಲ್ಲಿ ವಿಶ್ವದ ಅತಿ ಹೆಚ್ಚು ದೈನಂದಿನ ಏರಿಕೆಯನ್ನು ದಾಖಲಿಸುತ್ತಿದೆ. ಕಳೆದ ಮೂರು ದಿನಗಳಲ್ಲಿ ಸತತವಾಗಿ ಈ ಸಂಖ್ಯೆ 70,000 ಕ್ಕೆ ಹತ್ತಿರದಲ್ಲಿದೆ.

ಇಂದು ಆರೋಗ್ಯ ಸಚಿವಾಲಯ ನೀಡಿದ ಮಾಹಿತಿಯಂತೆ 61,408 ಪ್ರಕರಣಗಳು ವರದಿಯಾಗಿರುವುದರಿಂದ ಇಂದು ಪ್ರಕರಣವು ತುಸು ಇಳಿಮುಕವಾಗಿದೆ. ದೇಶವು ಈಗಾಗಲೇ 31 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. ಸಾವಿನ ಸಂಖ್ಯೆ 57,542 ಕ್ಕೆ ಏರಿದೆ.


ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...