Homeಕರೋನಾ ತಲ್ಲಣಅನ್‌ಲಾಕ್‌-4 ರಲ್ಲಿ ಕೇಂದ್ರದಿಂದ ಮೆಟ್ರೋ ಸೇವೆಗೆ ಅನುಮತಿ ಸಾಧ್ಯತೆ; ಅಂತಿಮ ನಿರ್ಧಾರ ರಾಜ್ಯ ಸರ್ಕಾರಗಳದ್ದು

ಅನ್‌ಲಾಕ್‌-4 ರಲ್ಲಿ ಕೇಂದ್ರದಿಂದ ಮೆಟ್ರೋ ಸೇವೆಗೆ ಅನುಮತಿ ಸಾಧ್ಯತೆ; ಅಂತಿಮ ನಿರ್ಧಾರ ರಾಜ್ಯ ಸರ್ಕಾರಗಳದ್ದು

ಶಾಲಾ ಕಾಲೇಜುಗಳು ಮತ್ತು ಸಿನೆಮಾ ಹಾಲ್‌ಗಳಂತಹ ಜನದಟ್ಟಣೆಯ ಸ್ಥಳಗಳಲ್ಲಿ ನಿರ್ಬಂಧಗಳು ಇನ್ನೂ ಉಳಿಯಲಿದೆ.

- Advertisement -
- Advertisement -

ಕೊರೊನಾ ವೈರಸ್ ಸಂಬಂಧಿತ ನಿರ್ಬಂಧಗಳಿಂದ ದೇಶವನ್ನು ಅನ್ಲಾಕ್ ಮಾಡುವ ನಾಲ್ಕನೇ ಹಂತ (ಅನ್‌ಲಾಕ್‌-4) ದಲ್ಲಿ ಮೆಟ್ರೊ ರೈಲು ಸೇವೆಗಳನ್ನು ಮುಂದಿನ ತಿಂಗಳು ಜಾರಿಗೆ ತರಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆದರೆ ಇದರ ಅಂತಿಮ ನಿರ್ಧಾರ ರಾಜ್ಯ ಸರ್ಕಾರಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಮೂಲಗಳು ತಿಳಿಸಿದೆ.

ಆದರೆ ಶಾಲಾ ಕಾಲೇಜುಗಳು ಇನ್ನೂ ಮುಚ್ಚಿರುತ್ತದೆ ಮತ್ತು ಸಿನೆಮಾ ಹಾಲ್‌ಗಳಂತಹ ಜನದಟ್ಟಣೆಯ ಸ್ಥಳಗಳಲ್ಲಿ ನಿರ್ಬಂಧಗಳು ಇನ್ನೂ ಉಳಿಯಲಿದೆ. ವ್ಯಾಪಕವಾದ ನಿರ್ಬಂಧಗಳೊಂದಿಗೆ ದೆಹಲಿ ಮೆಟ್ರೋ ಸೆಪ್ಟೆಂಬರ್ 1 ರಿಂದ ತನ್ನ ಸೇವೆಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಲಿಂಗತ್ವ ಕಂದರವನ್ನು ಹೆಚ್ಚಿಸಿದ ಲಾಕ್‌ಡೌನ್‌: ಮಹಿಳೆಯರನ್ನು ಮರೆತುಬಿಟ್ಟ ಸರ್ಕಾರ

ದೆಹಲಿಯಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ಸುಧಾರಿಸಿದೆ ಎಂದು ಪ್ರತಿಪಾದಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನವಿಯ ನಂತರ ದೆಹಲಿ ಮೆಟ್ರೋ ಸೇವೆಯನ್ನು ಒದಗಿಸುವ ಬಗೆಗಿನ ತೀರ್ಮಾನಕ್ಕೆ ವೇಗ ಬಂದಿದೆ ಎನ್ನಲಾಗಿದೆ.

“ದೆಹಲಿಯನ್ನು ವಿಭಿನ್ನವಾಗಿ ಪರಿಗಣಿಸಬೇಕು ಎಂದು ನಾನು ಕೇಂದ್ರವನ್ನು ವಿನಂತಿಸಿದ್ದೇನೆ” ಎಂದು ಕೇಜ್ರಿವಾಲ್ ಅವರು ನಿನ್ನೆ ವ್ಯಾಪಾರಿಗಳು ಮತ್ತು ಉದ್ಯಮಿಗಳೊಂದಿಗೆ ನಡೆಸಿದ ಆನ್‌ಲೈನ್ ಸಭೆಯಲ್ಲಿ ಹೇಳಿದರು.

“ದೆಹಲಿಯಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ಸುಧಾರಿಸುತ್ತಿದೆ. ಅವರು ಇತರ ನಗರಗಳಲ್ಲಿ ಮೆಟ್ರೋ ರೈಲುಗಳನ್ನು ಓಡಿಸಲು ಬಯಸದಿದ್ದರೆ, ಅದು ಹಾಗೇ ಇರಲಿ. ಆದರೆ, ದೆಹಲಿಯಲ್ಲಿ, ಮೆಟ್ರೊ ರೈಲು ಸೇವೆಗಳನ್ನು ಹಂತಹಂತವಾಗಿ, ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭಿಸಬೇಕು” ಎಂದು ಹೇಳಿದ್ದಾಗಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ಸಮಸ್ಯೆ: ಹೈಕೋರ್ಟ್ ಮುಂದೆ ತರಕಾರಿ ಮಾರಿದ ವಕೀಲ!

ಜುಲೈ 30 ರಂದು ಬಂದ ಅನ್ಲಾಕ್ 3 ಮಾರ್ಗಸೂಚಿಗಳು ರಾತ್ರಿ ಕರ್ಫ್ಯೂ ಕೊನೆಗೊಳಿಸಿ, ಕೊರೊನಾ ಕಂಟೈನ್‌ಮೆಂಟ್ ವಲಯಗಳಲ್ಲಿಲ್ಲದ ಯೋಗ ಮತ್ತು ಜಿಮ್ ಸಂಸ್ಥೆಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟವು. ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಉದ್ಯಾನವನಗಳು ಅಥವಾ ಸಿನೆಮಾ ಸಭಾಂಗಣಗಳು ಸೇರಿದಂತೆ ಎಲ್ಲಾ ರೀತಿಯ ದೊಡ್ಡ ಕೂಟಗಳ ಮೇಲೆ ಇನ್ನೂ ನಿರ್ಬಂಧಗಳು ಜಾರಿಯಲ್ಲಿವೆ.

ಆಗಸ್ಟ್ 8 ರಿಂದ ಭಾರತವು ಕೊರೊನಾ ವೈರಸ್ ಅಂಕಿಅಂಶಗಳಲ್ಲಿ ವಿಶ್ವದ ಅತಿ ಹೆಚ್ಚು ದೈನಂದಿನ ಏರಿಕೆಯನ್ನು ದಾಖಲಿಸುತ್ತಿದೆ. ಕಳೆದ ಮೂರು ದಿನಗಳಲ್ಲಿ ಸತತವಾಗಿ ಈ ಸಂಖ್ಯೆ 70,000 ಕ್ಕೆ ಹತ್ತಿರದಲ್ಲಿದೆ.

ಇಂದು ಆರೋಗ್ಯ ಸಚಿವಾಲಯ ನೀಡಿದ ಮಾಹಿತಿಯಂತೆ 61,408 ಪ್ರಕರಣಗಳು ವರದಿಯಾಗಿರುವುದರಿಂದ ಇಂದು ಪ್ರಕರಣವು ತುಸು ಇಳಿಮುಕವಾಗಿದೆ. ದೇಶವು ಈಗಾಗಲೇ 31 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ. ಸಾವಿನ ಸಂಖ್ಯೆ 57,542 ಕ್ಕೆ ಏರಿದೆ.


ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...