Homeಕರ್ನಾಟಕ26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

- Advertisement -
- Advertisement -

ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ3 ವರ್ಷಗಳಲ್ಲಿ 1 ಲಕ್ಷ  ‘ಸಂವಿಧಾನ ಸಂರಕ್ಷಣಾ ಪಡೆ’ ಕಟ್ಟುವ ಮಹಾಯಾನ

ಬೆಂಗಳೂರು: ಎದ್ದೇಳು ಕರ್ನಾಟಕದ ವತಿಯಿಂದ ದಾವಣಗೇರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವು ಇದೇ ಏಪ್ರಿಲ್ 26ರಂದು ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಅಂದಿನ ಕಾರ್ಯಕ್ರಮದ ವೇಳಾಪಟ್ಟಿಯನ್ನು ಎದ್ದೇಳು ಕರ್ನಾಟಕದ ಅಧ್ಯಕ್ಷೀಯ ಮಂಡಳಿ ಬಿಡುಗಡೆ ಮಾಡಿದೆ.

ಬೆಳಗ್ಗೆ 10.30ರಿಂದ 11.30ರವರೆಗೆ ಸಾಂಸ್ಕೃತಿಕ ಕಲರವ ನಡೆಯಲಿದ್ದು, 11.30ರಿಂದ 1ರವರೆಗೆ ನಗರದಾದ್ಯಂತ 10 ಸಾವಿರಕ್ಕೂ ಹೆಚ್ಚು ಸೇರುವ ಸಂವಿಧಾನ ಸಂರಕ್ಷಕರ ಪಡೆಯಿಂದ ಸಂವಿಧಾನ ಪೆರೇಡ್ ನಡೆಯಲಿದೆ.  1ರಿಂದ 2 ಗಂಟೆಯವರೆಗೆ ಸಾಂಸ್ಕೃತಿಕ ಸಜ್ಜಿಕೆ, 2ರಿಂದ ಸಂಜೆ 6ರವರೆಗೆ ಬಹಿರಂಗ ಸಮಾವೇಶ ನಡೆಯಲಿದೆ ಎಂದು ತಂಡವು ಹೇಳಿದೆ.

ಬೆಳಗ್ಗೆ 11.30ರಿಂದ ಪ್ರಾರಂಭವಾಗುವ ಸಂವಿಧಾನ ಪೆರೇಡ್ ನಿನ ಉದ್ಘಾಟನೆಯನ್ನು ಹಿರಿಯ ದಸಂಸ ನೇತಾರರಾದ  ಚಿಂತಾಮಣಿಯ ಎನ್, ವೆಂಕಟೇಶ್,   ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರು ಮತ್ತು ಎದ್ದೇಳು ಕರ್ನಾಟಕದ ಶ್ರೀಮತಿ ತಾರಾ ರಾವ್,  ರಾಜ್ಯ ಜಮಾತ್-ಎ-ಇಸ್ಲಾಮಿ-ಹಿಂದ್ ನ ಕಾರ್ಯದರ್ಶಿಗಳಾದ ಮೊಹಮ್ಮದ್ ಯೂಸುಫ್ ಕನ್ನಿ, ನಿರ್ದೇಶಕರು, ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ಮಹಾವಿದ್ಯಾಲಯದ ನಿರ್ದೇಶಕರಾದ  ಫಾದರ್ ಜರಾಲ್ಡ್ ಡಿಸೋಜಾ ನೆರವೇರಿಸಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮದ ವಿಶೇಷ ಉಪಸ್ಥಿತಿಯಾಗಿ ಕರ್ನಾಟಕದ ಬದ್ಧತೆಯ ದಿಟ್ಟ ಹೋರಾಟಗಾರರಾದ ಎಸ್. ಆರ್. ಹಿರೇಮಠ, ಹಿರಿಯ ಪತ್ರಕರ್ತೆ, ಸ್ತ್ರೀವಾದಿ ಚಿಂತಕರು ಹಾಗೂ ಬರಹಗಾರರಾದ ಡಾ. ವಿಜಯ, ಜನಪರ ಸಾಹಿತಿಗಳು ಮತ್ತು ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರು,  ಕರ್ನಾಟಕದ ರೈತ ಚಳವಳಿಯ ಹಿರಿಯ ಹೋರಾಟಗಾರರಾದ ಚಾಮರಸ ಮಾಲಿ ಪಾಟೀಲ್ ಹಾಜರಿರಲಿದ್ದಾರೆ ಎಂದು ಅದು ತಿಳಿಸಿದೆ.

ಬಹಿರಂಗ ಸಭೆಯ ಉದ್ಘಾಟನಾ ಮಾತುಗಳನ್ನು  ಹಿರಿಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ ನುಡಿಯಲಿದ್ದಾರೆ. ಮಹಾಯಾನದ ಪರಿಕಲ್ಪನೆಯನ್ನು ಎದ್ದೇಳು ಕರ್ನಾಟಕದ ಸೆಂಟ್ರಲ್ ವರ್ಕಿಂಗ್ ಗ್ರೂಪ್ ಪರವಾಗಿ ನೂರ್ ಶ್ರೀಧರ್ ಮಂಡಿಸಲಿದ್ದಾರೆ.

ಸಮಾರೋಪ ಮಾತುಗಳನ್ನು ಸಮಾವೇಶ ಸಂಘಟನಾ ಸಮಿತಿಯ ಸಂಚಾಲಕರಾದ  ಕೆ.ಎಲ್. ಅಶೋಕ್ ನುಡಿಯಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಿಂದ ಸಂದೇಶವಿರುತ್ತದೆ. ಅವರು ಈ ಕೆಳಗಿನಂತೆ ಇದೆ.

ಪ್ರಕಾಶ್ ರಾಜ್, ಪ್ರಸಿದ್ಧ ನಟರು ಹಾಗೂ ಪ್ರಖರ ಚಿಂತಕರು

ಮೇಧಾ ಪಾಟ್ಕರ್, ಆದಿವಾಸಿ ಮತ್ತು ಪರಿಸರ ಹೋರಾಟಗಾರರು [ಆನ್ ಲೈನ್ ಮೂಲಕ]

ಜಿಗ್ನೇಶ್ ಮೇವಾನಿ, ಹೋರಾಟಗಾರರು ಮತ್ತು ಶಾಸಕರು, ಗುಜರಾತ್

ಪರಕಾಲ ಪ್ರಭಾಕರ್, ಪ್ರಸಿದ್ಧ ಆರ್ಥಿಕ ವಿಶ್ಲೇಷಕಾರರು.

ದರ್ಶನ್ ಪಾಲ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು [ಆನ್ ಲೈನ್ ಮೂಲಕ]

ಡಾ. ಸುನೀಲಮ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು, ಮಧ್ಯಪ್ರದೇಶ

ಕೆ ಎಂ ರಾಮಚಂದ್ರಪ್ಪ, ಪ್ರಧಾನ ಸಂಚಾಲಕರು, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ಪುರುಷೊತ್ತಮ ಬಿಳಿಮಲೆ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು

ಮೊಹಮ್ಮದ್ ಸಲೀಂ, ಪ್ರಧಾನ ಕಾರ್ಯದರ್ಶಿಗಳು, ಡೆಮೊಕ್ರೆಟಿಕ್ ಅಂಡ್ ಕಮ್ಯುನಲ್ ಅಮಿಟಿ, ನವದೆಹಲಿ

ಕವಿತಾ ಲಂಕೇಶ್, ಸಿನೆಮಾ ನಿರ್ದೇಶಕರು ಮತ್ತು ಹೋರಾಟದ ಒಡನಾಡಿಗಳು

ಬಿ. ಆರ್. ಪಾಟೀಲ್, ಹಿರಿಯ ಸಮಾಜವಾದಿಗಳು.

ಮಾವಳ್ಳಿ ಶಂಕರ್, ರಾಜ್ಯ ಸಂಚಾಲಕರು, ದಸಂಸ (ಅಂಬೇಡ್ಕರ್ ವಾದ)

ಫಾ. ವೀರೇಶ್ ಮೋರಸ್, ಕ್ರೈಸ್ತ ಸಮುದಾಯದ ಪಾದ್ರಿಗಳು

ವಿ. ನಾಗರಾಜ್, ರಾಜ್ಯ ಮುಖಂಡರು, ದಸಂಸ.

ಡಾ. ಸಿದ್ದನಗೌಡ ಪಾಟೀಲ್, ಚಿಂತಕರು ಹಾಗೂ ಹೋರಾಟಗಾರರು

ಪ್ರೊ. ಜಾಫೆಟ್, ನಿವೃತ್ತ ಉಪಕುಲಾಪತಿಗಳು, ಬೆಂಗಳೂರು ವಿವಿ

ಡಾ. ಫಾ. ರೆವೆರೆಂಡ್ ಮನೋಹರ್ ಚಂದ್ರಪ್ರಸಾದ್, ಬರಹಗಾರರು ಮತ್ತು ಮುಖಂಡರು ದಲಿತ-ಕ್ರೆöÊಸ್ತ ಒಕ್ಕೂಟ

ಅಂಬಣ್ಣ ಆರೋಲಿಕರ್, ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟ ಸಮಿತಿ

ಯಶವಂತ್ ಟಿ, ಮುಖಂಡರು, ಕರ್ನಾಟಕ ಪ್ರಾಂತ ರೈತ ಸಂಘ

ಬಸವರಾಜ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ

ಅಬ್ದುಲ್ ಖಾದರ್ ಮಸೂದ್, ಸಮನ್ವಯಕರು, ಕರ್ನಾಟಕ ಮುಸ್ಲಿಂ ಮುತ್ತಹದೇ ಮಹಾಜ್

ರವಿ ನಾಯ್ಕರ್, ಮಾನವ ಬಂಧುತ್ವ ವೇದಿಕೆ

ಜನಾರ್ಧನ್ ಕೇಸರಗದ್ದೆ, ಜನಪರ ಸಾಹಿತ್ಯ ರಚನೆಕಾರರು

ಕೆ.ವಿ. ಭಟ್, ಸಮನ್ವಯಕರು, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಎಅಖಿU)

ಪ್ರೊ.ಜೆ.ಎಸ್.ಪಾಟೀಲ್, ಬಸವ ತತ್ವ ಪ್ರಚಾರಕರು.

ಮೌಲಾನ ಸಮೀಉಲ್ಲಾ ಕಾಸ್ಮಿ, ಜಾಮಿಯತ್ ಉಲ್ಮಾ ಕರ್ನಾಟಕ.

ರಮೇಶ್ ಹೆಗ್ಗಡೆ, ಒಕ್ಕಲಿಗ ಸಮುದಾಯದ ಮುಖಂಡರು, ಶಿವಮೊಗ್ಗ

ಮಲ್ಲು ಕುಂಬಾರ್, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಸಾಮಾಜಿಕ ಹೋರಾಟಗಾರರು.

ಡಿ.ಹೆಚ್. ಪೂಜಾರ್, ರಾಜ್ಯ ಮುಖಂಡರು, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬಿ ಸಿ ಬಸವರಾಜ್, ಜಾಗೃತ ಕರ್ನಾಟಕ  ಮುಂತಾದವರು ತಮ್ಮ ಸಂದೇಶವನ್ನು ಕಾರ್ಯಕ್ರಮದಲ್ಲಿ ರವಾನಿಸಲಿದ್ದಾರೆ ಎಂದು ಅದು ಮಾಹಿತಿ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಕೇಂದ್ರ ಕಛೇರಿ – 8056035809, 8884872595, ದಾವಣಗೆರೆಯ ಸಮಾವೇಶ ಸಂಘಟನಾ ಸಮಿತಿ 9844188128, 9742171342, 9916274999, 9148319357  ಸಂಪರ್ಕಿಸಲು ಸಮಾವೇಶದ ಕೇಂದ್ರ ತಂಡವು ಕೋರಿದೆ.

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...