Homeಕರ್ನಾಟಕ26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

- Advertisement -
- Advertisement -

ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ3 ವರ್ಷಗಳಲ್ಲಿ 1 ಲಕ್ಷ  ‘ಸಂವಿಧಾನ ಸಂರಕ್ಷಣಾ ಪಡೆ’ ಕಟ್ಟುವ ಮಹಾಯಾನ

ಬೆಂಗಳೂರು: ಎದ್ದೇಳು ಕರ್ನಾಟಕದ ವತಿಯಿಂದ ದಾವಣಗೇರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವು ಇದೇ ಏಪ್ರಿಲ್ 26ರಂದು ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಅಂದಿನ ಕಾರ್ಯಕ್ರಮದ ವೇಳಾಪಟ್ಟಿಯನ್ನು ಎದ್ದೇಳು ಕರ್ನಾಟಕದ ಅಧ್ಯಕ್ಷೀಯ ಮಂಡಳಿ ಬಿಡುಗಡೆ ಮಾಡಿದೆ.

ಬೆಳಗ್ಗೆ 10.30ರಿಂದ 11.30ರವರೆಗೆ ಸಾಂಸ್ಕೃತಿಕ ಕಲರವ ನಡೆಯಲಿದ್ದು, 11.30ರಿಂದ 1ರವರೆಗೆ ನಗರದಾದ್ಯಂತ 10 ಸಾವಿರಕ್ಕೂ ಹೆಚ್ಚು ಸೇರುವ ಸಂವಿಧಾನ ಸಂರಕ್ಷಕರ ಪಡೆಯಿಂದ ಸಂವಿಧಾನ ಪೆರೇಡ್ ನಡೆಯಲಿದೆ.  1ರಿಂದ 2 ಗಂಟೆಯವರೆಗೆ ಸಾಂಸ್ಕೃತಿಕ ಸಜ್ಜಿಕೆ, 2ರಿಂದ ಸಂಜೆ 6ರವರೆಗೆ ಬಹಿರಂಗ ಸಮಾವೇಶ ನಡೆಯಲಿದೆ ಎಂದು ತಂಡವು ಹೇಳಿದೆ.

ಬೆಳಗ್ಗೆ 11.30ರಿಂದ ಪ್ರಾರಂಭವಾಗುವ ಸಂವಿಧಾನ ಪೆರೇಡ್ ನಿನ ಉದ್ಘಾಟನೆಯನ್ನು ಹಿರಿಯ ದಸಂಸ ನೇತಾರರಾದ  ಚಿಂತಾಮಣಿಯ ಎನ್, ವೆಂಕಟೇಶ್,   ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರು ಮತ್ತು ಎದ್ದೇಳು ಕರ್ನಾಟಕದ ಶ್ರೀಮತಿ ತಾರಾ ರಾವ್,  ರಾಜ್ಯ ಜಮಾತ್-ಎ-ಇಸ್ಲಾಮಿ-ಹಿಂದ್ ನ ಕಾರ್ಯದರ್ಶಿಗಳಾದ ಮೊಹಮ್ಮದ್ ಯೂಸುಫ್ ಕನ್ನಿ, ನಿರ್ದೇಶಕರು, ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ಮಹಾವಿದ್ಯಾಲಯದ ನಿರ್ದೇಶಕರಾದ  ಫಾದರ್ ಜರಾಲ್ಡ್ ಡಿಸೋಜಾ ನೆರವೇರಿಸಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮದ ವಿಶೇಷ ಉಪಸ್ಥಿತಿಯಾಗಿ ಕರ್ನಾಟಕದ ಬದ್ಧತೆಯ ದಿಟ್ಟ ಹೋರಾಟಗಾರರಾದ ಎಸ್. ಆರ್. ಹಿರೇಮಠ, ಹಿರಿಯ ಪತ್ರಕರ್ತೆ, ಸ್ತ್ರೀವಾದಿ ಚಿಂತಕರು ಹಾಗೂ ಬರಹಗಾರರಾದ ಡಾ. ವಿಜಯ, ಜನಪರ ಸಾಹಿತಿಗಳು ಮತ್ತು ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರು,  ಕರ್ನಾಟಕದ ರೈತ ಚಳವಳಿಯ ಹಿರಿಯ ಹೋರಾಟಗಾರರಾದ ಚಾಮರಸ ಮಾಲಿ ಪಾಟೀಲ್ ಹಾಜರಿರಲಿದ್ದಾರೆ ಎಂದು ಅದು ತಿಳಿಸಿದೆ.

ಬಹಿರಂಗ ಸಭೆಯ ಉದ್ಘಾಟನಾ ಮಾತುಗಳನ್ನು  ಹಿರಿಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ ನುಡಿಯಲಿದ್ದಾರೆ. ಮಹಾಯಾನದ ಪರಿಕಲ್ಪನೆಯನ್ನು ಎದ್ದೇಳು ಕರ್ನಾಟಕದ ಸೆಂಟ್ರಲ್ ವರ್ಕಿಂಗ್ ಗ್ರೂಪ್ ಪರವಾಗಿ ನೂರ್ ಶ್ರೀಧರ್ ಮಂಡಿಸಲಿದ್ದಾರೆ.

ಸಮಾರೋಪ ಮಾತುಗಳನ್ನು ಸಮಾವೇಶ ಸಂಘಟನಾ ಸಮಿತಿಯ ಸಂಚಾಲಕರಾದ  ಕೆ.ಎಲ್. ಅಶೋಕ್ ನುಡಿಯಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಿಂದ ಸಂದೇಶವಿರುತ್ತದೆ. ಅವರು ಈ ಕೆಳಗಿನಂತೆ ಇದೆ.

ಪ್ರಕಾಶ್ ರಾಜ್, ಪ್ರಸಿದ್ಧ ನಟರು ಹಾಗೂ ಪ್ರಖರ ಚಿಂತಕರು

ಮೇಧಾ ಪಾಟ್ಕರ್, ಆದಿವಾಸಿ ಮತ್ತು ಪರಿಸರ ಹೋರಾಟಗಾರರು [ಆನ್ ಲೈನ್ ಮೂಲಕ]

ಜಿಗ್ನೇಶ್ ಮೇವಾನಿ, ಹೋರಾಟಗಾರರು ಮತ್ತು ಶಾಸಕರು, ಗುಜರಾತ್

ಪರಕಾಲ ಪ್ರಭಾಕರ್, ಪ್ರಸಿದ್ಧ ಆರ್ಥಿಕ ವಿಶ್ಲೇಷಕಾರರು.

ದರ್ಶನ್ ಪಾಲ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು [ಆನ್ ಲೈನ್ ಮೂಲಕ]

ಡಾ. ಸುನೀಲಮ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು, ಮಧ್ಯಪ್ರದೇಶ

ಕೆ ಎಂ ರಾಮಚಂದ್ರಪ್ಪ, ಪ್ರಧಾನ ಸಂಚಾಲಕರು, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ಪುರುಷೊತ್ತಮ ಬಿಳಿಮಲೆ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು

ಮೊಹಮ್ಮದ್ ಸಲೀಂ, ಪ್ರಧಾನ ಕಾರ್ಯದರ್ಶಿಗಳು, ಡೆಮೊಕ್ರೆಟಿಕ್ ಅಂಡ್ ಕಮ್ಯುನಲ್ ಅಮಿಟಿ, ನವದೆಹಲಿ

ಕವಿತಾ ಲಂಕೇಶ್, ಸಿನೆಮಾ ನಿರ್ದೇಶಕರು ಮತ್ತು ಹೋರಾಟದ ಒಡನಾಡಿಗಳು

ಬಿ. ಆರ್. ಪಾಟೀಲ್, ಹಿರಿಯ ಸಮಾಜವಾದಿಗಳು.

ಮಾವಳ್ಳಿ ಶಂಕರ್, ರಾಜ್ಯ ಸಂಚಾಲಕರು, ದಸಂಸ (ಅಂಬೇಡ್ಕರ್ ವಾದ)

ಫಾ. ವೀರೇಶ್ ಮೋರಸ್, ಕ್ರೈಸ್ತ ಸಮುದಾಯದ ಪಾದ್ರಿಗಳು

ವಿ. ನಾಗರಾಜ್, ರಾಜ್ಯ ಮುಖಂಡರು, ದಸಂಸ.

ಡಾ. ಸಿದ್ದನಗೌಡ ಪಾಟೀಲ್, ಚಿಂತಕರು ಹಾಗೂ ಹೋರಾಟಗಾರರು

ಪ್ರೊ. ಜಾಫೆಟ್, ನಿವೃತ್ತ ಉಪಕುಲಾಪತಿಗಳು, ಬೆಂಗಳೂರು ವಿವಿ

ಡಾ. ಫಾ. ರೆವೆರೆಂಡ್ ಮನೋಹರ್ ಚಂದ್ರಪ್ರಸಾದ್, ಬರಹಗಾರರು ಮತ್ತು ಮುಖಂಡರು ದಲಿತ-ಕ್ರೆöÊಸ್ತ ಒಕ್ಕೂಟ

ಅಂಬಣ್ಣ ಆರೋಲಿಕರ್, ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟ ಸಮಿತಿ

ಯಶವಂತ್ ಟಿ, ಮುಖಂಡರು, ಕರ್ನಾಟಕ ಪ್ರಾಂತ ರೈತ ಸಂಘ

ಬಸವರಾಜ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ

ಅಬ್ದುಲ್ ಖಾದರ್ ಮಸೂದ್, ಸಮನ್ವಯಕರು, ಕರ್ನಾಟಕ ಮುಸ್ಲಿಂ ಮುತ್ತಹದೇ ಮಹಾಜ್

ರವಿ ನಾಯ್ಕರ್, ಮಾನವ ಬಂಧುತ್ವ ವೇದಿಕೆ

ಜನಾರ್ಧನ್ ಕೇಸರಗದ್ದೆ, ಜನಪರ ಸಾಹಿತ್ಯ ರಚನೆಕಾರರು

ಕೆ.ವಿ. ಭಟ್, ಸಮನ್ವಯಕರು, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಎಅಖಿU)

ಪ್ರೊ.ಜೆ.ಎಸ್.ಪಾಟೀಲ್, ಬಸವ ತತ್ವ ಪ್ರಚಾರಕರು.

ಮೌಲಾನ ಸಮೀಉಲ್ಲಾ ಕಾಸ್ಮಿ, ಜಾಮಿಯತ್ ಉಲ್ಮಾ ಕರ್ನಾಟಕ.

ರಮೇಶ್ ಹೆಗ್ಗಡೆ, ಒಕ್ಕಲಿಗ ಸಮುದಾಯದ ಮುಖಂಡರು, ಶಿವಮೊಗ್ಗ

ಮಲ್ಲು ಕುಂಬಾರ್, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಸಾಮಾಜಿಕ ಹೋರಾಟಗಾರರು.

ಡಿ.ಹೆಚ್. ಪೂಜಾರ್, ರಾಜ್ಯ ಮುಖಂಡರು, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬಿ ಸಿ ಬಸವರಾಜ್, ಜಾಗೃತ ಕರ್ನಾಟಕ  ಮುಂತಾದವರು ತಮ್ಮ ಸಂದೇಶವನ್ನು ಕಾರ್ಯಕ್ರಮದಲ್ಲಿ ರವಾನಿಸಲಿದ್ದಾರೆ ಎಂದು ಅದು ಮಾಹಿತಿ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಕೇಂದ್ರ ಕಛೇರಿ – 8056035809, 8884872595, ದಾವಣಗೆರೆಯ ಸಮಾವೇಶ ಸಂಘಟನಾ ಸಮಿತಿ 9844188128, 9742171342, 9916274999, 9148319357  ಸಂಪರ್ಕಿಸಲು ಸಮಾವೇಶದ ಕೇಂದ್ರ ತಂಡವು ಕೋರಿದೆ.

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...