Homeಕರ್ನಾಟಕ26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

- Advertisement -
- Advertisement -

ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ3 ವರ್ಷಗಳಲ್ಲಿ 1 ಲಕ್ಷ  ‘ಸಂವಿಧಾನ ಸಂರಕ್ಷಣಾ ಪಡೆ’ ಕಟ್ಟುವ ಮಹಾಯಾನ

ಬೆಂಗಳೂರು: ಎದ್ದೇಳು ಕರ್ನಾಟಕದ ವತಿಯಿಂದ ದಾವಣಗೇರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವು ಇದೇ ಏಪ್ರಿಲ್ 26ರಂದು ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಅಂದಿನ ಕಾರ್ಯಕ್ರಮದ ವೇಳಾಪಟ್ಟಿಯನ್ನು ಎದ್ದೇಳು ಕರ್ನಾಟಕದ ಅಧ್ಯಕ್ಷೀಯ ಮಂಡಳಿ ಬಿಡುಗಡೆ ಮಾಡಿದೆ.

ಬೆಳಗ್ಗೆ 10.30ರಿಂದ 11.30ರವರೆಗೆ ಸಾಂಸ್ಕೃತಿಕ ಕಲರವ ನಡೆಯಲಿದ್ದು, 11.30ರಿಂದ 1ರವರೆಗೆ ನಗರದಾದ್ಯಂತ 10 ಸಾವಿರಕ್ಕೂ ಹೆಚ್ಚು ಸೇರುವ ಸಂವಿಧಾನ ಸಂರಕ್ಷಕರ ಪಡೆಯಿಂದ ಸಂವಿಧಾನ ಪೆರೇಡ್ ನಡೆಯಲಿದೆ.  1ರಿಂದ 2 ಗಂಟೆಯವರೆಗೆ ಸಾಂಸ್ಕೃತಿಕ ಸಜ್ಜಿಕೆ, 2ರಿಂದ ಸಂಜೆ 6ರವರೆಗೆ ಬಹಿರಂಗ ಸಮಾವೇಶ ನಡೆಯಲಿದೆ ಎಂದು ತಂಡವು ಹೇಳಿದೆ.

ಬೆಳಗ್ಗೆ 11.30ರಿಂದ ಪ್ರಾರಂಭವಾಗುವ ಸಂವಿಧಾನ ಪೆರೇಡ್ ನಿನ ಉದ್ಘಾಟನೆಯನ್ನು ಹಿರಿಯ ದಸಂಸ ನೇತಾರರಾದ  ಚಿಂತಾಮಣಿಯ ಎನ್, ವೆಂಕಟೇಶ್,   ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರು ಮತ್ತು ಎದ್ದೇಳು ಕರ್ನಾಟಕದ ಶ್ರೀಮತಿ ತಾರಾ ರಾವ್,  ರಾಜ್ಯ ಜಮಾತ್-ಎ-ಇಸ್ಲಾಮಿ-ಹಿಂದ್ ನ ಕಾರ್ಯದರ್ಶಿಗಳಾದ ಮೊಹಮ್ಮದ್ ಯೂಸುಫ್ ಕನ್ನಿ, ನಿರ್ದೇಶಕರು, ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ಮಹಾವಿದ್ಯಾಲಯದ ನಿರ್ದೇಶಕರಾದ  ಫಾದರ್ ಜರಾಲ್ಡ್ ಡಿಸೋಜಾ ನೆರವೇರಿಸಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮದ ವಿಶೇಷ ಉಪಸ್ಥಿತಿಯಾಗಿ ಕರ್ನಾಟಕದ ಬದ್ಧತೆಯ ದಿಟ್ಟ ಹೋರಾಟಗಾರರಾದ ಎಸ್. ಆರ್. ಹಿರೇಮಠ, ಹಿರಿಯ ಪತ್ರಕರ್ತೆ, ಸ್ತ್ರೀವಾದಿ ಚಿಂತಕರು ಹಾಗೂ ಬರಹಗಾರರಾದ ಡಾ. ವಿಜಯ, ಜನಪರ ಸಾಹಿತಿಗಳು ಮತ್ತು ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರು,  ಕರ್ನಾಟಕದ ರೈತ ಚಳವಳಿಯ ಹಿರಿಯ ಹೋರಾಟಗಾರರಾದ ಚಾಮರಸ ಮಾಲಿ ಪಾಟೀಲ್ ಹಾಜರಿರಲಿದ್ದಾರೆ ಎಂದು ಅದು ತಿಳಿಸಿದೆ.

ಬಹಿರಂಗ ಸಭೆಯ ಉದ್ಘಾಟನಾ ಮಾತುಗಳನ್ನು  ಹಿರಿಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ ನುಡಿಯಲಿದ್ದಾರೆ. ಮಹಾಯಾನದ ಪರಿಕಲ್ಪನೆಯನ್ನು ಎದ್ದೇಳು ಕರ್ನಾಟಕದ ಸೆಂಟ್ರಲ್ ವರ್ಕಿಂಗ್ ಗ್ರೂಪ್ ಪರವಾಗಿ ನೂರ್ ಶ್ರೀಧರ್ ಮಂಡಿಸಲಿದ್ದಾರೆ.

ಸಮಾರೋಪ ಮಾತುಗಳನ್ನು ಸಮಾವೇಶ ಸಂಘಟನಾ ಸಮಿತಿಯ ಸಂಚಾಲಕರಾದ  ಕೆ.ಎಲ್. ಅಶೋಕ್ ನುಡಿಯಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಿಂದ ಸಂದೇಶವಿರುತ್ತದೆ. ಅವರು ಈ ಕೆಳಗಿನಂತೆ ಇದೆ.

ಪ್ರಕಾಶ್ ರಾಜ್, ಪ್ರಸಿದ್ಧ ನಟರು ಹಾಗೂ ಪ್ರಖರ ಚಿಂತಕರು

ಮೇಧಾ ಪಾಟ್ಕರ್, ಆದಿವಾಸಿ ಮತ್ತು ಪರಿಸರ ಹೋರಾಟಗಾರರು [ಆನ್ ಲೈನ್ ಮೂಲಕ]

ಜಿಗ್ನೇಶ್ ಮೇವಾನಿ, ಹೋರಾಟಗಾರರು ಮತ್ತು ಶಾಸಕರು, ಗುಜರಾತ್

ಪರಕಾಲ ಪ್ರಭಾಕರ್, ಪ್ರಸಿದ್ಧ ಆರ್ಥಿಕ ವಿಶ್ಲೇಷಕಾರರು.

ದರ್ಶನ್ ಪಾಲ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು [ಆನ್ ಲೈನ್ ಮೂಲಕ]

ಡಾ. ಸುನೀಲಮ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು, ಮಧ್ಯಪ್ರದೇಶ

ಕೆ ಎಂ ರಾಮಚಂದ್ರಪ್ಪ, ಪ್ರಧಾನ ಸಂಚಾಲಕರು, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ಪುರುಷೊತ್ತಮ ಬಿಳಿಮಲೆ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು

ಮೊಹಮ್ಮದ್ ಸಲೀಂ, ಪ್ರಧಾನ ಕಾರ್ಯದರ್ಶಿಗಳು, ಡೆಮೊಕ್ರೆಟಿಕ್ ಅಂಡ್ ಕಮ್ಯುನಲ್ ಅಮಿಟಿ, ನವದೆಹಲಿ

ಕವಿತಾ ಲಂಕೇಶ್, ಸಿನೆಮಾ ನಿರ್ದೇಶಕರು ಮತ್ತು ಹೋರಾಟದ ಒಡನಾಡಿಗಳು

ಬಿ. ಆರ್. ಪಾಟೀಲ್, ಹಿರಿಯ ಸಮಾಜವಾದಿಗಳು.

ಮಾವಳ್ಳಿ ಶಂಕರ್, ರಾಜ್ಯ ಸಂಚಾಲಕರು, ದಸಂಸ (ಅಂಬೇಡ್ಕರ್ ವಾದ)

ಫಾ. ವೀರೇಶ್ ಮೋರಸ್, ಕ್ರೈಸ್ತ ಸಮುದಾಯದ ಪಾದ್ರಿಗಳು

ವಿ. ನಾಗರಾಜ್, ರಾಜ್ಯ ಮುಖಂಡರು, ದಸಂಸ.

ಡಾ. ಸಿದ್ದನಗೌಡ ಪಾಟೀಲ್, ಚಿಂತಕರು ಹಾಗೂ ಹೋರಾಟಗಾರರು

ಪ್ರೊ. ಜಾಫೆಟ್, ನಿವೃತ್ತ ಉಪಕುಲಾಪತಿಗಳು, ಬೆಂಗಳೂರು ವಿವಿ

ಡಾ. ಫಾ. ರೆವೆರೆಂಡ್ ಮನೋಹರ್ ಚಂದ್ರಪ್ರಸಾದ್, ಬರಹಗಾರರು ಮತ್ತು ಮುಖಂಡರು ದಲಿತ-ಕ್ರೆöÊಸ್ತ ಒಕ್ಕೂಟ

ಅಂಬಣ್ಣ ಆರೋಲಿಕರ್, ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟ ಸಮಿತಿ

ಯಶವಂತ್ ಟಿ, ಮುಖಂಡರು, ಕರ್ನಾಟಕ ಪ್ರಾಂತ ರೈತ ಸಂಘ

ಬಸವರಾಜ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ

ಅಬ್ದುಲ್ ಖಾದರ್ ಮಸೂದ್, ಸಮನ್ವಯಕರು, ಕರ್ನಾಟಕ ಮುಸ್ಲಿಂ ಮುತ್ತಹದೇ ಮಹಾಜ್

ರವಿ ನಾಯ್ಕರ್, ಮಾನವ ಬಂಧುತ್ವ ವೇದಿಕೆ

ಜನಾರ್ಧನ್ ಕೇಸರಗದ್ದೆ, ಜನಪರ ಸಾಹಿತ್ಯ ರಚನೆಕಾರರು

ಕೆ.ವಿ. ಭಟ್, ಸಮನ್ವಯಕರು, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಎಅಖಿU)

ಪ್ರೊ.ಜೆ.ಎಸ್.ಪಾಟೀಲ್, ಬಸವ ತತ್ವ ಪ್ರಚಾರಕರು.

ಮೌಲಾನ ಸಮೀಉಲ್ಲಾ ಕಾಸ್ಮಿ, ಜಾಮಿಯತ್ ಉಲ್ಮಾ ಕರ್ನಾಟಕ.

ರಮೇಶ್ ಹೆಗ್ಗಡೆ, ಒಕ್ಕಲಿಗ ಸಮುದಾಯದ ಮುಖಂಡರು, ಶಿವಮೊಗ್ಗ

ಮಲ್ಲು ಕುಂಬಾರ್, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಸಾಮಾಜಿಕ ಹೋರಾಟಗಾರರು.

ಡಿ.ಹೆಚ್. ಪೂಜಾರ್, ರಾಜ್ಯ ಮುಖಂಡರು, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬಿ ಸಿ ಬಸವರಾಜ್, ಜಾಗೃತ ಕರ್ನಾಟಕ  ಮುಂತಾದವರು ತಮ್ಮ ಸಂದೇಶವನ್ನು ಕಾರ್ಯಕ್ರಮದಲ್ಲಿ ರವಾನಿಸಲಿದ್ದಾರೆ ಎಂದು ಅದು ಮಾಹಿತಿ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಕೇಂದ್ರ ಕಛೇರಿ – 8056035809, 8884872595, ದಾವಣಗೆರೆಯ ಸಮಾವೇಶ ಸಂಘಟನಾ ಸಮಿತಿ 9844188128, 9742171342, 9916274999, 9148319357  ಸಂಪರ್ಕಿಸಲು ಸಮಾವೇಶದ ಕೇಂದ್ರ ತಂಡವು ಕೋರಿದೆ.

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...