Homeಕರ್ನಾಟಕ26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

26ರ ಸಂವಿಧಾನ ಸಂರಕ್ಷಕರ ಸಮಾವೇಶದ ವೇಳಾಪಟ್ಟಿ ಬಿಡುಗಡೆ ಮಾಡಿದ ಅಧ್ಯಕ್ಷೀಯ ಮಂಡಳಿ

- Advertisement -
- Advertisement -

ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ3 ವರ್ಷಗಳಲ್ಲಿ 1 ಲಕ್ಷ  ‘ಸಂವಿಧಾನ ಸಂರಕ್ಷಣಾ ಪಡೆ’ ಕಟ್ಟುವ ಮಹಾಯಾನ

ಬೆಂಗಳೂರು: ಎದ್ದೇಳು ಕರ್ನಾಟಕದ ವತಿಯಿಂದ ದಾವಣಗೇರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವು ಇದೇ ಏಪ್ರಿಲ್ 26ರಂದು ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ ಅಂದಿನ ಕಾರ್ಯಕ್ರಮದ ವೇಳಾಪಟ್ಟಿಯನ್ನು ಎದ್ದೇಳು ಕರ್ನಾಟಕದ ಅಧ್ಯಕ್ಷೀಯ ಮಂಡಳಿ ಬಿಡುಗಡೆ ಮಾಡಿದೆ.

ಬೆಳಗ್ಗೆ 10.30ರಿಂದ 11.30ರವರೆಗೆ ಸಾಂಸ್ಕೃತಿಕ ಕಲರವ ನಡೆಯಲಿದ್ದು, 11.30ರಿಂದ 1ರವರೆಗೆ ನಗರದಾದ್ಯಂತ 10 ಸಾವಿರಕ್ಕೂ ಹೆಚ್ಚು ಸೇರುವ ಸಂವಿಧಾನ ಸಂರಕ್ಷಕರ ಪಡೆಯಿಂದ ಸಂವಿಧಾನ ಪೆರೇಡ್ ನಡೆಯಲಿದೆ.  1ರಿಂದ 2 ಗಂಟೆಯವರೆಗೆ ಸಾಂಸ್ಕೃತಿಕ ಸಜ್ಜಿಕೆ, 2ರಿಂದ ಸಂಜೆ 6ರವರೆಗೆ ಬಹಿರಂಗ ಸಮಾವೇಶ ನಡೆಯಲಿದೆ ಎಂದು ತಂಡವು ಹೇಳಿದೆ.

ಬೆಳಗ್ಗೆ 11.30ರಿಂದ ಪ್ರಾರಂಭವಾಗುವ ಸಂವಿಧಾನ ಪೆರೇಡ್ ನಿನ ಉದ್ಘಾಟನೆಯನ್ನು ಹಿರಿಯ ದಸಂಸ ನೇತಾರರಾದ  ಚಿಂತಾಮಣಿಯ ಎನ್, ವೆಂಕಟೇಶ್,   ಸೆಂಟ್ರಲ್ ವರ್ಕಿಂಗ್ ಕಮಿಟಿ ಸದಸ್ಯರು ಮತ್ತು ಎದ್ದೇಳು ಕರ್ನಾಟಕದ ಶ್ರೀಮತಿ ತಾರಾ ರಾವ್,  ರಾಜ್ಯ ಜಮಾತ್-ಎ-ಇಸ್ಲಾಮಿ-ಹಿಂದ್ ನ ಕಾರ್ಯದರ್ಶಿಗಳಾದ ಮೊಹಮ್ಮದ್ ಯೂಸುಫ್ ಕನ್ನಿ, ನಿರ್ದೇಶಕರು, ಬೆಂಗಳೂರಿನ ಸೇಂಟ್ ಜೋಸೆಫ್ ಕಾನೂನು ಮಹಾವಿದ್ಯಾಲಯದ ನಿರ್ದೇಶಕರಾದ  ಫಾದರ್ ಜರಾಲ್ಡ್ ಡಿಸೋಜಾ ನೆರವೇರಿಸಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮದ ವಿಶೇಷ ಉಪಸ್ಥಿತಿಯಾಗಿ ಕರ್ನಾಟಕದ ಬದ್ಧತೆಯ ದಿಟ್ಟ ಹೋರಾಟಗಾರರಾದ ಎಸ್. ಆರ್. ಹಿರೇಮಠ, ಹಿರಿಯ ಪತ್ರಕರ್ತೆ, ಸ್ತ್ರೀವಾದಿ ಚಿಂತಕರು ಹಾಗೂ ಬರಹಗಾರರಾದ ಡಾ. ವಿಜಯ, ಜನಪರ ಸಾಹಿತಿಗಳು ಮತ್ತು ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರು,  ಕರ್ನಾಟಕದ ರೈತ ಚಳವಳಿಯ ಹಿರಿಯ ಹೋರಾಟಗಾರರಾದ ಚಾಮರಸ ಮಾಲಿ ಪಾಟೀಲ್ ಹಾಜರಿರಲಿದ್ದಾರೆ ಎಂದು ಅದು ತಿಳಿಸಿದೆ.

ಬಹಿರಂಗ ಸಭೆಯ ಉದ್ಘಾಟನಾ ಮಾತುಗಳನ್ನು  ಹಿರಿಯ ಸಾಹಿತಿಗಳಾದ ನಾಡೋಜ ಬರಗೂರು ರಾಮಚಂದ್ರಪ್ಪ ನುಡಿಯಲಿದ್ದಾರೆ. ಮಹಾಯಾನದ ಪರಿಕಲ್ಪನೆಯನ್ನು ಎದ್ದೇಳು ಕರ್ನಾಟಕದ ಸೆಂಟ್ರಲ್ ವರ್ಕಿಂಗ್ ಗ್ರೂಪ್ ಪರವಾಗಿ ನೂರ್ ಶ್ರೀಧರ್ ಮಂಡಿಸಲಿದ್ದಾರೆ.

ಸಮಾರೋಪ ಮಾತುಗಳನ್ನು ಸಮಾವೇಶ ಸಂಘಟನಾ ಸಮಿತಿಯ ಸಂಚಾಲಕರಾದ  ಕೆ.ಎಲ್. ಅಶೋಕ್ ನುಡಿಯಲಿದ್ದಾರೆ ಎಂದು ತಂಡವು ಹೇಳಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಿಂದ ಸಂದೇಶವಿರುತ್ತದೆ. ಅವರು ಈ ಕೆಳಗಿನಂತೆ ಇದೆ.

ಪ್ರಕಾಶ್ ರಾಜ್, ಪ್ರಸಿದ್ಧ ನಟರು ಹಾಗೂ ಪ್ರಖರ ಚಿಂತಕರು

ಮೇಧಾ ಪಾಟ್ಕರ್, ಆದಿವಾಸಿ ಮತ್ತು ಪರಿಸರ ಹೋರಾಟಗಾರರು [ಆನ್ ಲೈನ್ ಮೂಲಕ]

ಜಿಗ್ನೇಶ್ ಮೇವಾನಿ, ಹೋರಾಟಗಾರರು ಮತ್ತು ಶಾಸಕರು, ಗುಜರಾತ್

ಪರಕಾಲ ಪ್ರಭಾಕರ್, ಪ್ರಸಿದ್ಧ ಆರ್ಥಿಕ ವಿಶ್ಲೇಷಕಾರರು.

ದರ್ಶನ್ ಪಾಲ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು [ಆನ್ ಲೈನ್ ಮೂಲಕ]

ಡಾ. ಸುನೀಲಮ್, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕರು, ಮಧ್ಯಪ್ರದೇಶ

ಕೆ ಎಂ ರಾಮಚಂದ್ರಪ್ಪ, ಪ್ರಧಾನ ಸಂಚಾಲಕರು, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

ಪುರುಷೊತ್ತಮ ಬಿಳಿಮಲೆ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು

ಮೊಹಮ್ಮದ್ ಸಲೀಂ, ಪ್ರಧಾನ ಕಾರ್ಯದರ್ಶಿಗಳು, ಡೆಮೊಕ್ರೆಟಿಕ್ ಅಂಡ್ ಕಮ್ಯುನಲ್ ಅಮಿಟಿ, ನವದೆಹಲಿ

ಕವಿತಾ ಲಂಕೇಶ್, ಸಿನೆಮಾ ನಿರ್ದೇಶಕರು ಮತ್ತು ಹೋರಾಟದ ಒಡನಾಡಿಗಳು

ಬಿ. ಆರ್. ಪಾಟೀಲ್, ಹಿರಿಯ ಸಮಾಜವಾದಿಗಳು.

ಮಾವಳ್ಳಿ ಶಂಕರ್, ರಾಜ್ಯ ಸಂಚಾಲಕರು, ದಸಂಸ (ಅಂಬೇಡ್ಕರ್ ವಾದ)

ಫಾ. ವೀರೇಶ್ ಮೋರಸ್, ಕ್ರೈಸ್ತ ಸಮುದಾಯದ ಪಾದ್ರಿಗಳು

ವಿ. ನಾಗರಾಜ್, ರಾಜ್ಯ ಮುಖಂಡರು, ದಸಂಸ.

ಡಾ. ಸಿದ್ದನಗೌಡ ಪಾಟೀಲ್, ಚಿಂತಕರು ಹಾಗೂ ಹೋರಾಟಗಾರರು

ಪ್ರೊ. ಜಾಫೆಟ್, ನಿವೃತ್ತ ಉಪಕುಲಾಪತಿಗಳು, ಬೆಂಗಳೂರು ವಿವಿ

ಡಾ. ಫಾ. ರೆವೆರೆಂಡ್ ಮನೋಹರ್ ಚಂದ್ರಪ್ರಸಾದ್, ಬರಹಗಾರರು ಮತ್ತು ಮುಖಂಡರು ದಲಿತ-ಕ್ರೆöÊಸ್ತ ಒಕ್ಕೂಟ

ಅಂಬಣ್ಣ ಆರೋಲಿಕರ್, ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟ ಸಮಿತಿ

ಯಶವಂತ್ ಟಿ, ಮುಖಂಡರು, ಕರ್ನಾಟಕ ಪ್ರಾಂತ ರೈತ ಸಂಘ

ಬಸವರಾಜ್, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ

ಅಬ್ದುಲ್ ಖಾದರ್ ಮಸೂದ್, ಸಮನ್ವಯಕರು, ಕರ್ನಾಟಕ ಮುಸ್ಲಿಂ ಮುತ್ತಹದೇ ಮಹಾಜ್

ರವಿ ನಾಯ್ಕರ್, ಮಾನವ ಬಂಧುತ್ವ ವೇದಿಕೆ

ಜನಾರ್ಧನ್ ಕೇಸರಗದ್ದೆ, ಜನಪರ ಸಾಹಿತ್ಯ ರಚನೆಕಾರರು

ಕೆ.ವಿ. ಭಟ್, ಸಮನ್ವಯಕರು, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಎಅಖಿU)

ಪ್ರೊ.ಜೆ.ಎಸ್.ಪಾಟೀಲ್, ಬಸವ ತತ್ವ ಪ್ರಚಾರಕರು.

ಮೌಲಾನ ಸಮೀಉಲ್ಲಾ ಕಾಸ್ಮಿ, ಜಾಮಿಯತ್ ಉಲ್ಮಾ ಕರ್ನಾಟಕ.

ರಮೇಶ್ ಹೆಗ್ಗಡೆ, ಒಕ್ಕಲಿಗ ಸಮುದಾಯದ ಮುಖಂಡರು, ಶಿವಮೊಗ್ಗ

ಮಲ್ಲು ಕುಂಬಾರ್, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಸಾಮಾಜಿಕ ಹೋರಾಟಗಾರರು.

ಡಿ.ಹೆಚ್. ಪೂಜಾರ್, ರಾಜ್ಯ ಮುಖಂಡರು, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬಿ ಸಿ ಬಸವರಾಜ್, ಜಾಗೃತ ಕರ್ನಾಟಕ  ಮುಂತಾದವರು ತಮ್ಮ ಸಂದೇಶವನ್ನು ಕಾರ್ಯಕ್ರಮದಲ್ಲಿ ರವಾನಿಸಲಿದ್ದಾರೆ ಎಂದು ಅದು ಮಾಹಿತಿ ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರಿನ ಕೇಂದ್ರ ಕಛೇರಿ – 8056035809, 8884872595, ದಾವಣಗೆರೆಯ ಸಮಾವೇಶ ಸಂಘಟನಾ ಸಮಿತಿ 9844188128, 9742171342, 9916274999, 9148319357  ಸಂಪರ್ಕಿಸಲು ಸಮಾವೇಶದ ಕೇಂದ್ರ ತಂಡವು ಕೋರಿದೆ.

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...