Homeಅಂತರಾಷ್ಟ್ರೀಯಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂಗೆ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ

ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂಗೆ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ

- Advertisement -
- Advertisement -

ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅವರು ‘ಫೀಚರ್ ಫೋಟೋಗ್ರಫಿ-2022’ ವಿಭಾಗದಲ್ಲಿ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಭಾರತದಲ್ಲಿ ಕೊರೊನಾ ಬಿಕ್ಕಟ್ಟಿನ ಕುರಿತ ಚಿತ್ರಕ್ಕಾಗಿ ದಿವಂಗತ ಫೋಟೊ ಜರ್ನಲಿಸ್ಟ್‌‌ ಡ್ಯಾನಿಶ್ ಸಿದ್ದಿಕಿ, ಅದ್ನಾನ್ ಅಬಿದಿ ಮತ್ತು ಅಮಿತ್ ದೇವ್ ಸೇರಿದ ರಾಯಿಟರ್ಸ್ ತಂಡದೊಂದಿಗೆ ಮಟ್ಟೂನ ಅವರು ಕೂಡಾ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸ್ವಾಧೀನಪಡಿಸಿಕೊಳ್ಳುವ ಸಂದರ್ಭ ನಡೆದ ಸಂಘರ್ಷದಲ್ಲಿ ಡ್ಯಾನಿಶ್‌ ಸಿದ್ದಿಕಿಯನ್ನು ಕೊಲ್ಲಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ಮತ್ತು ಅವರ ರಾಯಿಟರ್ಸ್‌ ಕುಟುಂಬದ ದಿವಂಗತ ಡ್ಯಾನಿಶ್‌ ಸಿದ್ದೀಕಿ ಅವರಿಗೆ ಅಭಿನಂದನೆಗಳು. #Pulitzer” ಎಂದು ಪುಲಿಟ್ಜರ್ ಟ್ವಿಟ್ಟರ್ನಲ್ಲಿ ಘೋಷಿಸಿದೆ.

ಸನ್ನಾ ಇರ್ಷಾದ್ ಮಟ್ಟೂ ಕಾಶ್ಮೀರ ಮೂಲದ ಫೋಟೋ ಜರ್ನಲಿಸ್ಟ್ ಮತ್ತು ಸಾಕ್ಷ್ಯಚಿತ್ರ ಛಾಯಾಗ್ರಾಹಕಿಯಾಗಿದ್ದಾರೆ. ಅವರ ಚಿತ್ರಗಳು ಕಾಶ್ಮೀರದ ಭಯಂಕರ ಮಿಲಿಟರಿ ಪರಿಸರದ ಸ್ಪಷ್ಟ ಸಂಕೇತಗಳ ನಡುವಿನ ಉದ್ವೇಗವನ್ನು ಚಿತ್ರಿಸುವುದರ ಮೇಲೆ ಕೇಂದ್ರೀಕರಿಸುತ್ತದೆ.

ಪ್ರಪಂಚದಾದ್ಯಂತದ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳಲ್ಲಿ ಅವರ ಕೆಲಸವನ್ನು ಪ್ರಕಟಿಸಲಾಗಿದೆ. ಅಲ್ಲದೆ ವಿವಿಧ ಪ್ರದರ್ಶನಗಳು ಮತ್ತು ಉತ್ಸವಗಳಲ್ಲೂ ಅವರ ಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಪ್ರಸ್ತುತ ಅವರು ಮಲ್ಟಿಮೀಡಿಯಾ ಪತ್ರಕರ್ತರಾಗಿ ರಾಯಿಟರ್ಸ್‌ಗಾಗಿ ಕೆಲಸ ಮಾಡುತ್ತಿದ್ದಾರೆ.

2020 ರಲ್ಲಿ ಕೂಡಾ ಮೂವರು ಕಾಶ್ಮೀರಿ ಫೋಟೋ ಜರ್ನಲಿಸ್ಟ್‌ಗಳಾದ ದಾರ್ ಯಾಸಿನ್, ಮುಖ್ತಾರ್ ಖಾನ್ ಮತ್ತು ಚನ್ನಿ ಆನಂದ್ ಅವರು ಪ್ರತಿಷ್ಠಿತ ಪುಲಿಟೈಜರ್ ಪ್ರಶಸ್ತಿಯನ್ನು ಗೆದ್ದಿದ್ದರು.

ಇದನ್ನೂ ಓದಿ: ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

ಸನ್ನಾ ಇರ್ಷಾದ್ ಮಟ್ಟೂ ಅವರ ಚಿತ್ರಗಳು ಹಲವಾರು ಅಂತರರಾಷ್ಟ್ರೀಯ ಪ್ರಕಟಣೆಗಳಲ್ಲಿ ಕಾಣಿಸಿಕೊಂಡಿದೆ. ಪುಲಿಟ್ಜರ್‌‌ ಪ್ರಶಸ್ತಿ ಗೆದ್ದ ಅವರ ಚಿತ್ರ ಕೆಳಗಿವೆ.

ಜೂನ್‌ 10, 2021ರಂದು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಲಿಡ್ಡರ್‌ವಾಟ್‌ನಲ್ಲಿ ವ್ಯಾಕ್ಸಿನೇಷನ್ ಡ್ರೈವ್‌ ಭಾಗವಾಗಿ ಆರೋಗ್ಯ ಕಾರ್ಯಕರ್ತರು ಕೋವಿಶೀಲ್ಡ್ ಲಸಿಕೆಯನ್ನು ಕುರಿ ಕಾಯುವ ವ್ಯಕ್ತಿಗೆ ನೀಡಿದ್ದು ಹೀಗೆ… (ಚಿತ್ರ: ಸನ್ನಾ ಇರ್ಷಾದ್ ಮಟ್ಟೂ)

ಪುಲಿಟ್ಜರ್ ಪ್ರಶಸ್ತಿಯು ಪತ್ರಿಕೆ, ನಿಯತಕಾಲಿಕೆ, ಆನ್‌ಲೈನ್ ಪತ್ರಿಕೋದ್ಯಮ, ಸಾಹಿತ್ಯ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸಂಗೀತ ಸಂಯೋಜನೆಯಲ್ಲಿನ ಸಾಧನೆಗಳಿಗಾಗಿ ನೀಡುವ ಪ್ರಶಸ್ತಿಯಾಗಿದೆ. ಇದನ್ನು 1917 ರಲ್ಲಿ ಜೋಸೆಫ್ ಪುಲಿಟ್ಜರ್ ಅವರ ಹೆಸರಿನಲ್ಲಿ ಸ್ಥಾಪಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...