Homeಅಂತರಾಷ್ಟ್ರೀಯಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂಗೆ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ

ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂಗೆ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ

- Advertisement -
- Advertisement -

ಕಾಶ್ಮೀರಿ ಫೋಟೋ ಜರ್ನಲಿಸ್ಟ್ ಸನ್ನಾ ಇರ್ಷಾದ್ ಮಟ್ಟೂ ಅವರು ‘ಫೀಚರ್ ಫೋಟೋಗ್ರಫಿ-2022’ ವಿಭಾಗದಲ್ಲಿ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಭಾರತದಲ್ಲಿ ಕೊರೊನಾ ಬಿಕ್ಕಟ್ಟಿನ ಕುರಿತ ಚಿತ್ರಕ್ಕಾಗಿ ದಿವಂಗತ ಫೋಟೊ ಜರ್ನಲಿಸ್ಟ್‌‌ ಡ್ಯಾನಿಶ್ ಸಿದ್ದಿಕಿ, ಅದ್ನಾನ್ ಅಬಿದಿ ಮತ್ತು ಅಮಿತ್ ದೇವ್ ಸೇರಿದ ರಾಯಿಟರ್ಸ್ ತಂಡದೊಂದಿಗೆ ಮಟ್ಟೂನ ಅವರು ಕೂಡಾ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸ್ವಾಧೀನಪಡಿಸಿಕೊಳ್ಳುವ ಸಂದರ್ಭ ನಡೆದ ಸಂಘರ್ಷದಲ್ಲಿ ಡ್ಯಾನಿಶ್‌ ಸಿದ್ದಿಕಿಯನ್ನು ಕೊಲ್ಲಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅದ್ನಾನ್ ಅಬಿದಿ, ಸನ್ನಾ ಇರ್ಷಾದ್ ಮಟ್ಟೂ, ಅಮಿತ್ ದೇವ್ ಮತ್ತು ಅವರ ರಾಯಿಟರ್ಸ್‌ ಕುಟುಂಬದ ದಿವಂಗತ ಡ್ಯಾನಿಶ್‌ ಸಿದ್ದೀಕಿ ಅವರಿಗೆ ಅಭಿನಂದನೆಗಳು. #Pulitzer” ಎಂದು ಪುಲಿಟ್ಜರ್ ಟ್ವಿಟ್ಟರ್ನಲ್ಲಿ ಘೋಷಿಸಿದೆ.

ಸನ್ನಾ ಇರ್ಷಾದ್ ಮಟ್ಟೂ ಕಾಶ್ಮೀರ ಮೂಲದ ಫೋಟೋ ಜರ್ನಲಿಸ್ಟ್ ಮತ್ತು ಸಾಕ್ಷ್ಯಚಿತ್ರ ಛಾಯಾಗ್ರಾಹಕಿಯಾಗಿದ್ದಾರೆ. ಅವರ ಚಿತ್ರಗಳು ಕಾಶ್ಮೀರದ ಭಯಂಕರ ಮಿಲಿಟರಿ ಪರಿಸರದ ಸ್ಪಷ್ಟ ಸಂಕೇತಗಳ ನಡುವಿನ ಉದ್ವೇಗವನ್ನು ಚಿತ್ರಿಸುವುದರ ಮೇಲೆ ಕೇಂದ್ರೀಕರಿಸುತ್ತದೆ.

ಪ್ರಪಂಚದಾದ್ಯಂತದ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳಲ್ಲಿ ಅವರ ಕೆಲಸವನ್ನು ಪ್ರಕಟಿಸಲಾಗಿದೆ. ಅಲ್ಲದೆ ವಿವಿಧ ಪ್ರದರ್ಶನಗಳು ಮತ್ತು ಉತ್ಸವಗಳಲ್ಲೂ ಅವರ ಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಪ್ರಸ್ತುತ ಅವರು ಮಲ್ಟಿಮೀಡಿಯಾ ಪತ್ರಕರ್ತರಾಗಿ ರಾಯಿಟರ್ಸ್‌ಗಾಗಿ ಕೆಲಸ ಮಾಡುತ್ತಿದ್ದಾರೆ.

2020 ರಲ್ಲಿ ಕೂಡಾ ಮೂವರು ಕಾಶ್ಮೀರಿ ಫೋಟೋ ಜರ್ನಲಿಸ್ಟ್‌ಗಳಾದ ದಾರ್ ಯಾಸಿನ್, ಮುಖ್ತಾರ್ ಖಾನ್ ಮತ್ತು ಚನ್ನಿ ಆನಂದ್ ಅವರು ಪ್ರತಿಷ್ಠಿತ ಪುಲಿಟೈಜರ್ ಪ್ರಶಸ್ತಿಯನ್ನು ಗೆದ್ದಿದ್ದರು.

ಇದನ್ನೂ ಓದಿ: ಮರಣೋತ್ತರ ಪುಲಿಟ್ಝರ್‌ ಪ್ರಶಸ್ತಿಗೆ ದಾನಿಶ್‌ ಸಿದ್ದಿಕಿ ಭಾಜನ

ಸನ್ನಾ ಇರ್ಷಾದ್ ಮಟ್ಟೂ ಅವರ ಚಿತ್ರಗಳು ಹಲವಾರು ಅಂತರರಾಷ್ಟ್ರೀಯ ಪ್ರಕಟಣೆಗಳಲ್ಲಿ ಕಾಣಿಸಿಕೊಂಡಿದೆ. ಪುಲಿಟ್ಜರ್‌‌ ಪ್ರಶಸ್ತಿ ಗೆದ್ದ ಅವರ ಚಿತ್ರ ಕೆಳಗಿವೆ.

ಜೂನ್‌ 10, 2021ರಂದು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಲಿಡ್ಡರ್‌ವಾಟ್‌ನಲ್ಲಿ ವ್ಯಾಕ್ಸಿನೇಷನ್ ಡ್ರೈವ್‌ ಭಾಗವಾಗಿ ಆರೋಗ್ಯ ಕಾರ್ಯಕರ್ತರು ಕೋವಿಶೀಲ್ಡ್ ಲಸಿಕೆಯನ್ನು ಕುರಿ ಕಾಯುವ ವ್ಯಕ್ತಿಗೆ ನೀಡಿದ್ದು ಹೀಗೆ… (ಚಿತ್ರ: ಸನ್ನಾ ಇರ್ಷಾದ್ ಮಟ್ಟೂ)

ಪುಲಿಟ್ಜರ್ ಪ್ರಶಸ್ತಿಯು ಪತ್ರಿಕೆ, ನಿಯತಕಾಲಿಕೆ, ಆನ್‌ಲೈನ್ ಪತ್ರಿಕೋದ್ಯಮ, ಸಾಹಿತ್ಯ ಮತ್ತು ಯುನೈಟೆಡ್ ಸ್ಟೇಟ್ಸ್‌ನ ಸಂಗೀತ ಸಂಯೋಜನೆಯಲ್ಲಿನ ಸಾಧನೆಗಳಿಗಾಗಿ ನೀಡುವ ಪ್ರಶಸ್ತಿಯಾಗಿದೆ. ಇದನ್ನು 1917 ರಲ್ಲಿ ಜೋಸೆಫ್ ಪುಲಿಟ್ಜರ್ ಅವರ ಹೆಸರಿನಲ್ಲಿ ಸ್ಥಾಪಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...