Homeಮುಖಪುಟಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ಕೇರಳದಲ್ಲಿ ಸೋಮವಾರದಿಂದ ಮಂಗಳವಾರದವರೆಗಿನ ಅವಧಿಯಲ್ಲಿ ವರದಕ್ಷಿಣೆ ಕಿರುಕುಳದಿಂದಾಗಿ ಮೂವರು ಯುವತಿಯರು ಸಾವಿಗೀಡಾಗಿದ್ದಾರೆ

- Advertisement -
- Advertisement -

ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಬುಧವಾರ ಹೇಳಿದ್ದಾರೆ.

ಕೇರಳದಲ್ಲಿ ಸೋಮವಾರದಿಂದ ಮಂಗಳವಾರದವರೆಗಿನ ಅವಧಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಮೂವರು ಯುವತಿಯರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಇದು ಕೇರಳದಾದ್ಯಂತ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ. ಪ್ರಕರಣಗಳ ತನಿಖೆಗಾಗಿ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ ಬೆಹ್ರಾ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಹರ್ಷಿತಾ ಅಟ್ಟಲೂರಿ ಅವರ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ.

ಇದನ್ನೂ ಓದಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಓಪನ್ ಸೊಸೈಟಿ ಪ್ರಶಸ್ತಿ

ಈ ಹಿನ್ನಲೆಯಲ್ಲಿ ಇಂದು ಸರಣಿ ಟ್ವೀಟ್ ಮಾಡಿರುವ ಪಿಣರಾಯಿ ವಿಜಯನ್‌, “ನ್ಯಾಯಯುತ ಸಮಾಜವೆಂದರೆ ಅದು ಮಹಿಳೆಯರು ಮತ್ತು ಪುರುಷರನ್ನು ಸಮಾನವಾಗಿ ಪರಿಗಣಿಸುತ್ತದೆ. ಕೌಟುಂಬಿಕ ದೌರ್ಜನ್ಯದ ಇತ್ತೀಚಿನ ಭಯಾನಕ ಘಟನೆಗಳ ಹಿನ್ನಲೆಯಲ್ಲಿ, ನ್ಯಾಯಯುತ ಸಮಾಜವನ್ನು ಕಟ್ಟಲು ಕೇರಳವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ. ಈ ಅನ್ಯಾಯವನ್ನು ಕೊನೆಗೊಳಿಸಲು ಸರ್ಕಾರ ಮತ್ತು ಜನರು ಒಟ್ಟಾಗಿ ನಿಲ್ಲುತ್ತಾರೆ” ಎಂದು ಹೇಳಿದ್ದಾರೆ.

“ಮಹಿಳೆಯರು ಕೀಳಲ್ಲ, ಅವರಿಗೆ ಸಮಾನ ಹಕ್ಕುಗಳಿವೆ ಎಂಬ ಸತ್ಯವನ್ನು ಪುರುಷರು ಒಪ್ಪಿಕೊಳ್ಳಬೇಕು. ಯುವ ಸಂಘಟನೆಗಳು ಜಾಗೃತಿ ಅಭಿಯಾನವನ್ನು ಪ್ರಾರಂಭಿಸಬೇಕಾಗಿದೆ. ಅಂತಹ ಪ್ರಗತಿಪರ ವರ್ತನೆಗಳನ್ನು ತಮ್ಮ ಮಕ್ಕಳಲ್ಲಿ ಬೆಳೆಸಲು ಪೋಷಕರು ಪ್ರಜ್ಞಾಪೂರ್ವಕ ಪ್ರಯತ್ನಗಳನ್ನು ಮಾಡಬೇಕು. ನಾವು ಹೊಸ ಸಂಸ್ಕೃತಿಯನ್ನು ಪೋಷಿಸಬೇಕು” ಎಂದು ಅವರು ಹೇಳಿದ್ದಾರೆ.

“ಸಮಾಜವು ಏನು ಯೋಚಿಸುತ್ತದೆ ಎಂದು ಹೆದರುವ ಬದಲು, ಕೌಟುಂಬಿಕ ದೌರ್ಜನ್ಯವನ್ನು ಎದುರಿಸುತ್ತಿರುವ ಮಹಿಳೆಯರು ಧ್ವನಿ ಎತ್ತಬೇಕಾಗಿದೆ. ಸರ್ಕಾರ ನಿಮ್ಮ ಪರವಾಗಿ ನಿಂತು ನಿಮ್ಮ ಹಕ್ಕುಗಳನ್ನು ರಕ್ಷಿಸುತ್ತದೆ. ನಾವು ಈಗಾಗಲೇ ಅಸ್ತಿತ್ವದಲ್ಲಿರುವ ಬೆಂಬಲ ವ್ಯವಸ್ಥೆಗಳನ್ನು ಬಲಪಡಿಸುತ್ತೇವೆ. ಮಹಿಳೆಯರಿಗೆ ಸಹಾಯ ಒದಗಿಸಲು ನವೀನ ಕ್ರಮಗಳನ್ನು ಪರಿಚಯಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

“ಮಹಿಳೆಯರ ಮೇಲಿನ ದೌರ್ಜನ್ಯದ ಮೇಲಿನ ದೂರುಗಳನ್ನು ಪರಿಹರಿಸಲು ಪ್ರತಿ ಜಿಲ್ಲೆಯಲ್ಲಿ ‘ಕೌಟುಂಬಿಕ ದೌರ್ಜನ್ಯ ಪರಿಹಾರ ಕೇಂದ್ರ’ವು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ತನ್ನ ಕಾರ್ಯಾಚರಣೆಯನ್ನು ಹೆಚ್ಚಿಸಲು ಮತ್ತು ಸ್ವೀಕರಿಸಿದ ದೂರುಗಳನ್ನು ವಿಳಂಬವಿಲ್ಲದೆ ಪರಿಹರಿಸಲು ಡಿಜಿಪಿಗೆ ನಿರ್ದೇಶನ ನೀಡಲಾಗಿದೆ” ಎಂದು ಹೇಳಿದ್ದಾರೆ.

ಮಹಿಳೆಯರ ಮೇಲಿನ ಸೈಬರ್ ಅಪರಾಧಗಳನ್ನು ಪರಿಹರಿಸುವ ಆನ್‌ಲೈನ್ ಸೇವೆಯಾದ ‘ಅಪರಾಜಿತಾ’ ಮಹಿಳೆಯರ ಮೇಲಿನ ಅಪರಾಧಗಳು ಮತ್ತು ಕೌಟುಂಬಿಕ ದೌರ್ಜನ್ಯಗಳ ಬಗ್ಗೆ ದೂರುಗಳನ್ನು ಸಲ್ಲಿಸಲು ಇಂದಿನಿಂದ ಬಳಸಬಹುದು ಎಂದು ಪಿಣರಾಯಿ ಹೇಳಿದ್ದಾರೆ. ಅಲ್ಲದೆ [email protected] ಗೆ ಈ ಮೇಲ್ ಅಥವಾ 9497996992 ಗೆ ಕರೆ ಮಾಡಬಹುದು ಎಂದು ಕೂಡಾ ಅವರು ಹೇಳಿದ್ದಾರೆ.

ವರದಕ್ಷಿಣೆ ಬಗ್ಗೆ ದೂರುಗಳನ್ನು ತನಿಖೆ ಮಾಡಲು ಮತ್ತು ಪರಿಹರಿಸಲು ರಾಜ್ಯ ನೋಡಲ್ ಅಧಿಕಾರಿಯನ್ನು ನಿಯೋಜಿಸಲಾಗಿದೆ ಎಂದಿರುವ ಮುಖ್ಯಮಂತ್ರಿ, “ಮಹಿಳಾ ಎಸ್‌ಐ ನೋಡಲ್ ಅಧಿಕಾರಿಗೆ ಸಹಾಯ ಮಾಡಲಿದ್ದಾರೆ. ದೂರುಗಳನ್ನು ದೂರವಾಣಿಯಲ್ಲಿ 9497999955 ಗೆ ಸಲ್ಲಿಸಬಹುದು. ಈ ಸೇವೆಗಳನ್ನು ಪರಿಣಾಮಕಾರಿಯಾಗಿ ಬಳಸಲು ಎಲ್ಲರಿಗೂ ಸೂಚಿಸಿ. ಸಾಮಾಜಿಕ ಕಳಂಕವನ್ನು ನಿಗ್ರಹಿಸೋಣ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...