Homeಮುಖಪುಟಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ಕೇರಳದಲ್ಲಿ ಸೋಮವಾರದಿಂದ ಮಂಗಳವಾರದವರೆಗಿನ ಅವಧಿಯಲ್ಲಿ ವರದಕ್ಷಿಣೆ ಕಿರುಕುಳದಿಂದಾಗಿ ಮೂವರು ಯುವತಿಯರು ಸಾವಿಗೀಡಾಗಿದ್ದಾರೆ

- Advertisement -
- Advertisement -

ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಬುಧವಾರ ಹೇಳಿದ್ದಾರೆ.

ಕೇರಳದಲ್ಲಿ ಸೋಮವಾರದಿಂದ ಮಂಗಳವಾರದವರೆಗಿನ ಅವಧಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಮೂವರು ಯುವತಿಯರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಇದು ಕೇರಳದಾದ್ಯಂತ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ. ಪ್ರಕರಣಗಳ ತನಿಖೆಗಾಗಿ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ ಬೆಹ್ರಾ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಹರ್ಷಿತಾ ಅಟ್ಟಲೂರಿ ಅವರ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ.

ಇದನ್ನೂ ಓದಿ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್‌ಗೆ ಪ್ರತಿಷ್ಟಿತ ಓಪನ್ ಸೊಸೈಟಿ ಪ್ರಶಸ್ತಿ

ಈ ಹಿನ್ನಲೆಯಲ್ಲಿ ಇಂದು ಸರಣಿ ಟ್ವೀಟ್ ಮಾಡಿರುವ ಪಿಣರಾಯಿ ವಿಜಯನ್‌, “ನ್ಯಾಯಯುತ ಸಮಾಜವೆಂದರೆ ಅದು ಮಹಿಳೆಯರು ಮತ್ತು ಪುರುಷರನ್ನು ಸಮಾನವಾಗಿ ಪರಿಗಣಿಸುತ್ತದೆ. ಕೌಟುಂಬಿಕ ದೌರ್ಜನ್ಯದ ಇತ್ತೀಚಿನ ಭಯಾನಕ ಘಟನೆಗಳ ಹಿನ್ನಲೆಯಲ್ಲಿ, ನ್ಯಾಯಯುತ ಸಮಾಜವನ್ನು ಕಟ್ಟಲು ಕೇರಳವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ. ಈ ಅನ್ಯಾಯವನ್ನು ಕೊನೆಗೊಳಿಸಲು ಸರ್ಕಾರ ಮತ್ತು ಜನರು ಒಟ್ಟಾಗಿ ನಿಲ್ಲುತ್ತಾರೆ” ಎಂದು ಹೇಳಿದ್ದಾರೆ.

“ಮಹಿಳೆಯರು ಕೀಳಲ್ಲ, ಅವರಿಗೆ ಸಮಾನ ಹಕ್ಕುಗಳಿವೆ ಎಂಬ ಸತ್ಯವನ್ನು ಪುರುಷರು ಒಪ್ಪಿಕೊಳ್ಳಬೇಕು. ಯುವ ಸಂಘಟನೆಗಳು ಜಾಗೃತಿ ಅಭಿಯಾನವನ್ನು ಪ್ರಾರಂಭಿಸಬೇಕಾಗಿದೆ. ಅಂತಹ ಪ್ರಗತಿಪರ ವರ್ತನೆಗಳನ್ನು ತಮ್ಮ ಮಕ್ಕಳಲ್ಲಿ ಬೆಳೆಸಲು ಪೋಷಕರು ಪ್ರಜ್ಞಾಪೂರ್ವಕ ಪ್ರಯತ್ನಗಳನ್ನು ಮಾಡಬೇಕು. ನಾವು ಹೊಸ ಸಂಸ್ಕೃತಿಯನ್ನು ಪೋಷಿಸಬೇಕು” ಎಂದು ಅವರು ಹೇಳಿದ್ದಾರೆ.

“ಸಮಾಜವು ಏನು ಯೋಚಿಸುತ್ತದೆ ಎಂದು ಹೆದರುವ ಬದಲು, ಕೌಟುಂಬಿಕ ದೌರ್ಜನ್ಯವನ್ನು ಎದುರಿಸುತ್ತಿರುವ ಮಹಿಳೆಯರು ಧ್ವನಿ ಎತ್ತಬೇಕಾಗಿದೆ. ಸರ್ಕಾರ ನಿಮ್ಮ ಪರವಾಗಿ ನಿಂತು ನಿಮ್ಮ ಹಕ್ಕುಗಳನ್ನು ರಕ್ಷಿಸುತ್ತದೆ. ನಾವು ಈಗಾಗಲೇ ಅಸ್ತಿತ್ವದಲ್ಲಿರುವ ಬೆಂಬಲ ವ್ಯವಸ್ಥೆಗಳನ್ನು ಬಲಪಡಿಸುತ್ತೇವೆ. ಮಹಿಳೆಯರಿಗೆ ಸಹಾಯ ಒದಗಿಸಲು ನವೀನ ಕ್ರಮಗಳನ್ನು ಪರಿಚಯಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

“ಮಹಿಳೆಯರ ಮೇಲಿನ ದೌರ್ಜನ್ಯದ ಮೇಲಿನ ದೂರುಗಳನ್ನು ಪರಿಹರಿಸಲು ಪ್ರತಿ ಜಿಲ್ಲೆಯಲ್ಲಿ ‘ಕೌಟುಂಬಿಕ ದೌರ್ಜನ್ಯ ಪರಿಹಾರ ಕೇಂದ್ರ’ವು ಆನ್‌ಲೈನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ತನ್ನ ಕಾರ್ಯಾಚರಣೆಯನ್ನು ಹೆಚ್ಚಿಸಲು ಮತ್ತು ಸ್ವೀಕರಿಸಿದ ದೂರುಗಳನ್ನು ವಿಳಂಬವಿಲ್ಲದೆ ಪರಿಹರಿಸಲು ಡಿಜಿಪಿಗೆ ನಿರ್ದೇಶನ ನೀಡಲಾಗಿದೆ” ಎಂದು ಹೇಳಿದ್ದಾರೆ.

ಮಹಿಳೆಯರ ಮೇಲಿನ ಸೈಬರ್ ಅಪರಾಧಗಳನ್ನು ಪರಿಹರಿಸುವ ಆನ್‌ಲೈನ್ ಸೇವೆಯಾದ ‘ಅಪರಾಜಿತಾ’ ಮಹಿಳೆಯರ ಮೇಲಿನ ಅಪರಾಧಗಳು ಮತ್ತು ಕೌಟುಂಬಿಕ ದೌರ್ಜನ್ಯಗಳ ಬಗ್ಗೆ ದೂರುಗಳನ್ನು ಸಲ್ಲಿಸಲು ಇಂದಿನಿಂದ ಬಳಸಬಹುದು ಎಂದು ಪಿಣರಾಯಿ ಹೇಳಿದ್ದಾರೆ. ಅಲ್ಲದೆ [email protected] ಗೆ ಈ ಮೇಲ್ ಅಥವಾ 9497996992 ಗೆ ಕರೆ ಮಾಡಬಹುದು ಎಂದು ಕೂಡಾ ಅವರು ಹೇಳಿದ್ದಾರೆ.

ವರದಕ್ಷಿಣೆ ಬಗ್ಗೆ ದೂರುಗಳನ್ನು ತನಿಖೆ ಮಾಡಲು ಮತ್ತು ಪರಿಹರಿಸಲು ರಾಜ್ಯ ನೋಡಲ್ ಅಧಿಕಾರಿಯನ್ನು ನಿಯೋಜಿಸಲಾಗಿದೆ ಎಂದಿರುವ ಮುಖ್ಯಮಂತ್ರಿ, “ಮಹಿಳಾ ಎಸ್‌ಐ ನೋಡಲ್ ಅಧಿಕಾರಿಗೆ ಸಹಾಯ ಮಾಡಲಿದ್ದಾರೆ. ದೂರುಗಳನ್ನು ದೂರವಾಣಿಯಲ್ಲಿ 9497999955 ಗೆ ಸಲ್ಲಿಸಬಹುದು. ಈ ಸೇವೆಗಳನ್ನು ಪರಿಣಾಮಕಾರಿಯಾಗಿ ಬಳಸಲು ಎಲ್ಲರಿಗೂ ಸೂಚಿಸಿ. ಸಾಮಾಜಿಕ ಕಳಂಕವನ್ನು ನಿಗ್ರಹಿಸೋಣ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ಮೇಲೆ ಲಂಚ ಪ್ರಕರಣ ದಾಖಲಿಸಲು ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...