Homeಮುಖಪುಟ11 ವರ್ಷ ಅವಧಿಯಲ್ಲಿ ಗರಿಷ್ಠ ಮಟ್ಟ ತಲುಪಿದ ಅಡುಗೆ ಎಣ್ಣೆ ಬೆಲೆ

11 ವರ್ಷ ಅವಧಿಯಲ್ಲಿ ಗರಿಷ್ಠ ಮಟ್ಟ ತಲುಪಿದ ಅಡುಗೆ ಎಣ್ಣೆ ಬೆಲೆ

- Advertisement -
- Advertisement -

ಕೆಲವು ಕಡೆ ಪೆಟ್ರೋಲ್ ದರವು ನೂರರ ಗಡಿಯನ್ನು ದಾಟುವ ಮೊದಲೆ, ಅಡುಗೆ ಎಣ್ಣೆಗೆ 150 ರೂ.ಗಳ ಗಡಿಯನ್ನು ದಾಟಿ ಬಹಳ ದಿನಗಳಾಗಿವೆ. ಈಗ ಪ್ಯಾಕ್‌ ಮಾಡಿದ ಅಡುಗೆ ಎಣ್ಣೆಗಳ ದರ 130 ರಿಂದ 170 ರೂ. ತಲುಪಿದೆ.

ಪೆಟ್ರೋಲ್, ಡಿಸೇಲ್ ದರಗಳ ಸತತ ಏರಿಕೆಯಿಂದ ಸಾಮಾನ್ಯ ಜನರು ತೊಂದರೆಗೆ ಒಳಗಾಗಿದ್ದಾರೆ. ಆದರೆ ಅಡುಗೆ ಮನೆಯಾಚೆ ಅಷ್ಟಾಗಿ ಸುದ್ದಿಯಾಗದ, ಭಾರತದಲ್ಲಿ ಮಹಿಳೆಯರಿಗಷ್ಟೇ ಸಂಬಂಧಿಸಿದ್ದು ಎಂಬಂತಿರುವ ಅಡುಗೆ ಎಣ್ಣೆ ದರ ಏರುತ್ತಲೇ ಸಾಗಿದೆ.

ಈಗ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಈ ಬಗ್ಗೆ ಸಮಾಲೋಚನೆ ಶುರು ಮಾಡಿದೆ. ಸಾಂಕ್ರಾಮಿಕ ಮತ್ತು ವಿವಿಧ ರಾಜ್ಯಗಳಲ್ಲಿನ ಲಾಕ್‌ಡೌನ್‌ಗಳ ಮಧ್ಯೆ ಅಡುಗೆ ಎಣ್ಣೆಗಳ ಬೆಲೆಯಲ್ಲಿನ ಹೆಚ್ಚಳವು ಆರ್ಥಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಕೇಂದ್ರ ಆಹಾರ ಇಲಾಖೆ ‘ಇದು ಕಳವಳಕಾರಿ’ ಎಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಪ್ಯಾಕ್ ಮಾಡಿದ ಖಾದ್ಯ ತೈಲಗಳ (ಅಡುಗೆ ಎಣ್ಣೆ) ಮಾಸಿಕ ಸರಾಸರಿ ಚಿಲ್ಲರೆ ಬೆಲೆಗಳು ಈ ತಿಂಗಳು ಒಂದು ದಶಕದಲ್ಲಿ ಗರಿಷ್ಠ ಮಟ್ಟಕ್ಕೆ ಏರಿವೆ. ಇದರಲ್ಲಿ ನೆಲಗಡಲೆ(ಸೇಂಗಾ), ಸಾಸಿವೆ, ವನಸ್ಪತಿ, ಸೋಯಾ, ಸೂರ್ಯಕಾಂತಿ ಮತ್ತು ತಾಳೆ ಎಣ್ಣೆಗಳು ಸೇರಿವೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ಸೋಮವಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಭೆ ನಡೆಸಿ, ಖಾದ್ಯ ತೈಲಗಳ ಬೆಲೆಯನ್ನು ತಗ್ಗಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಖಾದ್ಯ ತೈಲದ ಅಂತರರಾಷ್ಟ್ರೀಯ ಬೆಲೆಗಳ ಏರಿಕೆಗೆ ಹೋಲಿಸಿದರೆ ಭಾರತದಲ್ಲಿ ಖಾದ್ಯ ತೈಲದ ಬೆಲೆಯಲ್ಲಿ ತುಸು ಜಾಸ್ತಿ ಪ್ರಮಾಣದಲ್ಲಿ ಏರಿಕೆಯಾಗುವುದರ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ್ದರಿಂದ ಸಭೆಯನ್ನು ನಡೆಸುವ ಅಗತ್ಯ ಬಿತ್ತು ಎಂದು ಇಲಾಖೆ ತಿಳಿಸಿದೆ.

ದೇಶೀಯ ಖಾದ್ಯ ತೈಲ ಬೆಲೆಗಳು ಸಾಮಾನ್ಯವಾಗಿ ಅಂತರರಾಷ್ಟ್ರೀಯ ಬೆಲೆಗಳನ್ನೇ ಪ್ರತಿಬಿಂಬಿಸುತ್ತವೆ, ಏಕೆಂದರೆ ಭಾರತದ ಶೇಕಡಾ 60 ರಷ್ಟು ಬೇಡಿಕೆಯನ್ನು ಆಮದಿನ ಮೂಲಕ ಪೂರೈಸಲಾಗುತ್ತದೆ.
ಬುರ್ಸಾ ಮಲೇಷ್ಯನ್ ವಿನಿಮಯ ಕೇಂದ್ರದಲ್ಲಿ ಕಚ್ಚಾ ತಾಳೆ ಎಣ್ಣೆಯ (ಪಾಮ್ ಆಯಿಲ್) ಬೆಲೆಯನ್ನು ಮೇ 25 ರಂದು ಪ್ರತಿ ಟನ್‌ಗೆ 3,890 ರಿಂಗಿಟ್ (ಮಲೇಷ್ಯಾ ಕರೆನ್ಸಿ) ಎಂದು ಉಲ್ಲೇಖಿಸಲಾಗಿದೆ. ಇದು ಒಂದು ವರ್ಷದ ಹಿಂದೆ 2,281 ಇತ್ತು.

ಚಿಕಾಗೊ ಬೋರ್ಡ್ ಆಫ್ ಟ್ರೇಡ್ (ಸಿಬಿಒಟಿ)ನಲ್ಲಿನ ಸೋಯಾಬೀನ್ ಎಣ್ಣೆ ಬೆಲೆಗಳು ಸಹ ಹೆಚ್ಚಿನ ಮಟ್ಟದಲ್ಲಿವೆ. ಸಿಬಿಒಟಿಯಲ್ಲಿ, ಜುಲೈನಲ್ಲಿ ಸೋಯಾಬೀನ್ ಮುಕ್ತಾಯದ ಬೆಲೆ ಮೇ 24 ರಂದು ಪ್ರತಿ ಟನ್‌ಗೆ 559.51 ಡಾಲರ್‌‌ನಷ್ಟಾಗಿದೆ. ಕಳೆದ ವರ್ಷದ ಈ ಸಮಯದಲ್ಲಿ ಇದು 306.16 ಡಾಲರ್‌ನಷ್ಟಿತ್ತು. ಅಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ದುಬಾರಿ ಬೆಲೆಯಿದೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯ ನಾಗರಿಕ ಸರಬರಾಜು ಇಲಾಖೆಗಳು ಒದಗಿಸಿದ ಮಾಹಿತಿ ಮತ್ತು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಅಖಿಲ ಭಾರತ ಮಟ್ಟದಲ್ಲಿ ಆರು ಖಾದ್ಯ ತೈಲಗಳ ಚಿಲ್ಲರೆ ಬೆಲೆಗಳು ಜನವರಿ 2010 ಕ್ಕೆ ಹೋಲಿಸಿದರೆ ಗರಿಷ್ಠ ಮಟ್ಟವನ್ನು ತಲುಪಿವೆ ಎಂಬುದು ಗೊತ್ತಾಗುತ್ತದೆ.

ಮಂಗಳವಾರದ ಅಂಕಿಅಂಶದ ಪ್ರಕಾರ, ಸಾಮಾನ್ಯ ಅಡುಗೆ ಎಣ್ಣೆಯಾದ ಸಾಸಿವೆ ಎಣ್ಣೆಯ (ಪ್ಯಾಕ್ಡ್) ಮಾಸಿಕ ಸರಾಸರಿ ಚಿಲ್ಲರೆ ಬೆಲೆ ಈ ವರ್ಷದ ಮೇ ತಿಂಗಳಲ್ಲಿ ಒಂದು ಕೆ.ಜಿ.ಗೆ 164.44 ರೂ.ಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇದು ಕಳೆದ ವರ್ಷ ಮೇ ತಿಂಗಳಿಮ ದರಕ್ಕಿಂತ (ಆಗ ರೂ 118.25) ಶೇ 39ರಷ್ಟು ಹೆಚ್ಚಾಗಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಖಾದ್ಯ ತೈಲಗಳ ಸರಾಸರಿ ಬೆಲೆ ಕೆ.ಜಿ.ಗೆ 155.39 ರೂ. ಇದ್ದರೆ, ಮೇ 2010 ರಲ್ಲಿ ಅದು ಕೆ.ಜಿ.ಗೆ 63.05 ರೂ. ಇತ್ತು. ಅಂದರೆ ಎರಡೂವರೆ ಪಟ್ಟು ಏರಿಕೆಯಾಗಿದೆ.

ತಾಳೆ ಎಣ್ಣೆ (ಪಾಮ್ ಆಯಿಲ್) ಭಾರತೀಯ ಮನೆಗಳಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತದೆ, ಇದರ ರೇಟು ಇನ್ನೂ ಜೋರಾಗಿ ಏರಿಕೆ ಕಂಡಿದೆ. ಪಾಮ್ ಆಯಿಲ್ ಮಾಸಿಕ ಸರಾಸರಿ ಚಿಲ್ಲರೆ ಬೆಲೆ ಈ ವರ್ಷದ ಮೇ ತಿಂಗಳಿಗೆ ಪ್ರತಿ ಕೆ.ಜಿ.ಗೆ 131.69 ರೂ.ಗಳಷ್ಟಿದೆ. ಇದು ಕಳೆದ 11 ವರ್ಷಗಳಲ್ಲಿ ಅತಿ ಹೆಚ್ಚು ಮತ್ತು ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಶೇಕಡಾ 49 ರಷ್ಟು ಹೆಚ್ಚಾಗಿದೆ. ಈಗ ಪ್ರತಿ ಕೆ.ಜಿ.ಗೆ 87.27 ರೂ. ದರವಿದೆ. 11 ವರ್ಷಗಳ ಹಿಂದೆ 2010 ರ ಏಪ್ರಿಲ್‌ನಲ್ಲಿ ತಾಳೆ ಎಣ್ಣೆಯ ಮಾಸಿಕ ಚಿಲ್ಲರೆ ಬೆಲೆಯು ದಾಖಲಾಗಿದ್ದು, ಪ್ರತಿ ಕೆ.ಜಿ.ಗೆ 49.13 ರೂ. ಇತ್ತು. ಅಂದರೆ ಈಗ ಡಬಲ್ ಆಗಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾಲ್ಕು ಇತರ ಖಾದ್ಯ ತೈಲಗಳ ಮಾಸಿಕ ಸರಾಸರಿ ಚಿಲ್ಲರೆ ಬೆಲೆಗಳು – ನೆಲಗಡಲೆ (ಪ್ರತಿ ಕೆ.ಜಿ.ಗೆ  175.55 ರೂ.), ವನಸ್ಪತಿ (ಕೆ.ಜಿ.ಗೆ 128.7 ರೂ.), ಸೋಯಾ (ಕೆ.ಜಿ.ಗೆ 148.27 ರೂ.) ಮತ್ತು ಸೂರ್ಯಕಾಂತಿ (ಕೆ.ಜಿ.ಗೆ 169.54 ರೂ.) ಇವೆ. ಮೇ ತಿಂಗಳಲ್ಲಿ ಈ ದರಗಳು ಗರಿಷ್ಠ ಮಟ್ಟವನ್ನು ತಲುಪಿವೆ. ಕಳೆದ ವರ್ಷಕ್ಕಿಂತ ಶೇಕಡಾ 19-52 ರ ವ್ಯಾಪ್ತಿಯಲ್ಲಿ ಹೆಚ್ಚಳವಾಗಿದೆ.

2019-20 ತೈಲ ವರ್ಷದಲ್ಲಿ (ನವೆಂಬರ್-ಅಕ್ಟೋಬರ್), ಭಾರತದ ದೇಶೀಯ ಸಸ್ಯಜನ್ಯ ತೈಲ ಉತ್ಪಾದನೆಯು ಕೇವಲ 8.5 ದಶಲಕ್ಷ ಟನ್‌ಗಳಷ್ಟಿದೆ ಎಂದು ಅಂದಾಜಿಸಲಾಗಿದ್ದು, ಆಮದು ಪ್ರಮಾಣ 13.5 ಮೆ.ಟನ್ ಇದೆ. ಆಮದು ಮಾಡಿಕೊಳ್ಳುವ ತೈಲಗಳಲ್ಲಿ ತಾಳೆ (7 ಮೆ.ಟನ್), ಸೋಯಾಬೀನ್ (3.5 ಮೆ.ಟನ್) ಮತ್ತು ಸೂರ್ಯಕಾಂತಿ (2.5 ಮೆ.ಟನ್) ಸೇರಿವೆ.

ಒಟ್ಟಿನಲ್ಲಿ ಪೆಟ್ರೋಲ್, ಡಿಸೇಲ್ ದರಗಳನ್ನೂ ಮೀರಿ ಅಡುಗೆ ಎಣ್ಣೆಯ ದರಗಳು ನಾಗಾಲೋಟದಲ್ಲಿದೆ. “ಲಾಕ್‌ಡೌನ್‌ನಲ್ಲಿ ಬೈಕ್ ಮನೆಯಲ್ಲಿಟ್ಟು ಆರಾಮಾಗಿರಬಹುದು. ಆದರೆ ಅಡುಗೆ ಮನೆಯಲ್ಲಿ ಕುದಿ, ಝಳ ಅನುಭವಿಸುವವರಿಗಷ್ಟೇ ಗೊತ್ತು ಇದರ ಕಷ್ಟ” ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ: ಕೇಂದ್ರ ಸಚಿವರು ಸುಳ್ಳು ಹೇಳಿದರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...