Homeಮುಖಪುಟ11 ವರ್ಷ ಅವಧಿಯಲ್ಲಿ ಗರಿಷ್ಠ ಮಟ್ಟ ತಲುಪಿದ ಅಡುಗೆ ಎಣ್ಣೆ ಬೆಲೆ

11 ವರ್ಷ ಅವಧಿಯಲ್ಲಿ ಗರಿಷ್ಠ ಮಟ್ಟ ತಲುಪಿದ ಅಡುಗೆ ಎಣ್ಣೆ ಬೆಲೆ

- Advertisement -
- Advertisement -

ಕೆಲವು ಕಡೆ ಪೆಟ್ರೋಲ್ ದರವು ನೂರರ ಗಡಿಯನ್ನು ದಾಟುವ ಮೊದಲೆ, ಅಡುಗೆ ಎಣ್ಣೆಗೆ 150 ರೂ.ಗಳ ಗಡಿಯನ್ನು ದಾಟಿ ಬಹಳ ದಿನಗಳಾಗಿವೆ. ಈಗ ಪ್ಯಾಕ್‌ ಮಾಡಿದ ಅಡುಗೆ ಎಣ್ಣೆಗಳ ದರ 130 ರಿಂದ 170 ರೂ. ತಲುಪಿದೆ.

ಪೆಟ್ರೋಲ್, ಡಿಸೇಲ್ ದರಗಳ ಸತತ ಏರಿಕೆಯಿಂದ ಸಾಮಾನ್ಯ ಜನರು ತೊಂದರೆಗೆ ಒಳಗಾಗಿದ್ದಾರೆ. ಆದರೆ ಅಡುಗೆ ಮನೆಯಾಚೆ ಅಷ್ಟಾಗಿ ಸುದ್ದಿಯಾಗದ, ಭಾರತದಲ್ಲಿ ಮಹಿಳೆಯರಿಗಷ್ಟೇ ಸಂಬಂಧಿಸಿದ್ದು ಎಂಬಂತಿರುವ ಅಡುಗೆ ಎಣ್ಣೆ ದರ ಏರುತ್ತಲೇ ಸಾಗಿದೆ.

ಈಗ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಈ ಬಗ್ಗೆ ಸಮಾಲೋಚನೆ ಶುರು ಮಾಡಿದೆ. ಸಾಂಕ್ರಾಮಿಕ ಮತ್ತು ವಿವಿಧ ರಾಜ್ಯಗಳಲ್ಲಿನ ಲಾಕ್‌ಡೌನ್‌ಗಳ ಮಧ್ಯೆ ಅಡುಗೆ ಎಣ್ಣೆಗಳ ಬೆಲೆಯಲ್ಲಿನ ಹೆಚ್ಚಳವು ಆರ್ಥಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಕೇಂದ್ರ ಆಹಾರ ಇಲಾಖೆ ‘ಇದು ಕಳವಳಕಾರಿ’ ಎಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಪ್ಯಾಕ್ ಮಾಡಿದ ಖಾದ್ಯ ತೈಲಗಳ (ಅಡುಗೆ ಎಣ್ಣೆ) ಮಾಸಿಕ ಸರಾಸರಿ ಚಿಲ್ಲರೆ ಬೆಲೆಗಳು ಈ ತಿಂಗಳು ಒಂದು ದಶಕದಲ್ಲಿ ಗರಿಷ್ಠ ಮಟ್ಟಕ್ಕೆ ಏರಿವೆ. ಇದರಲ್ಲಿ ನೆಲಗಡಲೆ(ಸೇಂಗಾ), ಸಾಸಿವೆ, ವನಸ್ಪತಿ, ಸೋಯಾ, ಸೂರ್ಯಕಾಂತಿ ಮತ್ತು ತಾಳೆ ಎಣ್ಣೆಗಳು ಸೇರಿವೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ಸೋಮವಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಭೆ ನಡೆಸಿ, ಖಾದ್ಯ ತೈಲಗಳ ಬೆಲೆಯನ್ನು ತಗ್ಗಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಖಾದ್ಯ ತೈಲದ ಅಂತರರಾಷ್ಟ್ರೀಯ ಬೆಲೆಗಳ ಏರಿಕೆಗೆ ಹೋಲಿಸಿದರೆ ಭಾರತದಲ್ಲಿ ಖಾದ್ಯ ತೈಲದ ಬೆಲೆಯಲ್ಲಿ ತುಸು ಜಾಸ್ತಿ ಪ್ರಮಾಣದಲ್ಲಿ ಏರಿಕೆಯಾಗುವುದರ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ್ದರಿಂದ ಸಭೆಯನ್ನು ನಡೆಸುವ ಅಗತ್ಯ ಬಿತ್ತು ಎಂದು ಇಲಾಖೆ ತಿಳಿಸಿದೆ.

ದೇಶೀಯ ಖಾದ್ಯ ತೈಲ ಬೆಲೆಗಳು ಸಾಮಾನ್ಯವಾಗಿ ಅಂತರರಾಷ್ಟ್ರೀಯ ಬೆಲೆಗಳನ್ನೇ ಪ್ರತಿಬಿಂಬಿಸುತ್ತವೆ, ಏಕೆಂದರೆ ಭಾರತದ ಶೇಕಡಾ 60 ರಷ್ಟು ಬೇಡಿಕೆಯನ್ನು ಆಮದಿನ ಮೂಲಕ ಪೂರೈಸಲಾಗುತ್ತದೆ.
ಬುರ್ಸಾ ಮಲೇಷ್ಯನ್ ವಿನಿಮಯ ಕೇಂದ್ರದಲ್ಲಿ ಕಚ್ಚಾ ತಾಳೆ ಎಣ್ಣೆಯ (ಪಾಮ್ ಆಯಿಲ್) ಬೆಲೆಯನ್ನು ಮೇ 25 ರಂದು ಪ್ರತಿ ಟನ್‌ಗೆ 3,890 ರಿಂಗಿಟ್ (ಮಲೇಷ್ಯಾ ಕರೆನ್ಸಿ) ಎಂದು ಉಲ್ಲೇಖಿಸಲಾಗಿದೆ. ಇದು ಒಂದು ವರ್ಷದ ಹಿಂದೆ 2,281 ಇತ್ತು.

ಚಿಕಾಗೊ ಬೋರ್ಡ್ ಆಫ್ ಟ್ರೇಡ್ (ಸಿಬಿಒಟಿ)ನಲ್ಲಿನ ಸೋಯಾಬೀನ್ ಎಣ್ಣೆ ಬೆಲೆಗಳು ಸಹ ಹೆಚ್ಚಿನ ಮಟ್ಟದಲ್ಲಿವೆ. ಸಿಬಿಒಟಿಯಲ್ಲಿ, ಜುಲೈನಲ್ಲಿ ಸೋಯಾಬೀನ್ ಮುಕ್ತಾಯದ ಬೆಲೆ ಮೇ 24 ರಂದು ಪ್ರತಿ ಟನ್‌ಗೆ 559.51 ಡಾಲರ್‌‌ನಷ್ಟಾಗಿದೆ. ಕಳೆದ ವರ್ಷದ ಈ ಸಮಯದಲ್ಲಿ ಇದು 306.16 ಡಾಲರ್‌ನಷ್ಟಿತ್ತು. ಅಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ದುಬಾರಿ ಬೆಲೆಯಿದೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯ ನಾಗರಿಕ ಸರಬರಾಜು ಇಲಾಖೆಗಳು ಒದಗಿಸಿದ ಮಾಹಿತಿ ಮತ್ತು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಅಖಿಲ ಭಾರತ ಮಟ್ಟದಲ್ಲಿ ಆರು ಖಾದ್ಯ ತೈಲಗಳ ಚಿಲ್ಲರೆ ಬೆಲೆಗಳು ಜನವರಿ 2010 ಕ್ಕೆ ಹೋಲಿಸಿದರೆ ಗರಿಷ್ಠ ಮಟ್ಟವನ್ನು ತಲುಪಿವೆ ಎಂಬುದು ಗೊತ್ತಾಗುತ್ತದೆ.

ಮಂಗಳವಾರದ ಅಂಕಿಅಂಶದ ಪ್ರಕಾರ, ಸಾಮಾನ್ಯ ಅಡುಗೆ ಎಣ್ಣೆಯಾದ ಸಾಸಿವೆ ಎಣ್ಣೆಯ (ಪ್ಯಾಕ್ಡ್) ಮಾಸಿಕ ಸರಾಸರಿ ಚಿಲ್ಲರೆ ಬೆಲೆ ಈ ವರ್ಷದ ಮೇ ತಿಂಗಳಲ್ಲಿ ಒಂದು ಕೆ.ಜಿ.ಗೆ 164.44 ರೂ.ಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇದು ಕಳೆದ ವರ್ಷ ಮೇ ತಿಂಗಳಿಮ ದರಕ್ಕಿಂತ (ಆಗ ರೂ 118.25) ಶೇ 39ರಷ್ಟು ಹೆಚ್ಚಾಗಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಖಾದ್ಯ ತೈಲಗಳ ಸರಾಸರಿ ಬೆಲೆ ಕೆ.ಜಿ.ಗೆ 155.39 ರೂ. ಇದ್ದರೆ, ಮೇ 2010 ರಲ್ಲಿ ಅದು ಕೆ.ಜಿ.ಗೆ 63.05 ರೂ. ಇತ್ತು. ಅಂದರೆ ಎರಡೂವರೆ ಪಟ್ಟು ಏರಿಕೆಯಾಗಿದೆ.

ತಾಳೆ ಎಣ್ಣೆ (ಪಾಮ್ ಆಯಿಲ್) ಭಾರತೀಯ ಮನೆಗಳಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತದೆ, ಇದರ ರೇಟು ಇನ್ನೂ ಜೋರಾಗಿ ಏರಿಕೆ ಕಂಡಿದೆ. ಪಾಮ್ ಆಯಿಲ್ ಮಾಸಿಕ ಸರಾಸರಿ ಚಿಲ್ಲರೆ ಬೆಲೆ ಈ ವರ್ಷದ ಮೇ ತಿಂಗಳಿಗೆ ಪ್ರತಿ ಕೆ.ಜಿ.ಗೆ 131.69 ರೂ.ಗಳಷ್ಟಿದೆ. ಇದು ಕಳೆದ 11 ವರ್ಷಗಳಲ್ಲಿ ಅತಿ ಹೆಚ್ಚು ಮತ್ತು ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಶೇಕಡಾ 49 ರಷ್ಟು ಹೆಚ್ಚಾಗಿದೆ. ಈಗ ಪ್ರತಿ ಕೆ.ಜಿ.ಗೆ 87.27 ರೂ. ದರವಿದೆ. 11 ವರ್ಷಗಳ ಹಿಂದೆ 2010 ರ ಏಪ್ರಿಲ್‌ನಲ್ಲಿ ತಾಳೆ ಎಣ್ಣೆಯ ಮಾಸಿಕ ಚಿಲ್ಲರೆ ಬೆಲೆಯು ದಾಖಲಾಗಿದ್ದು, ಪ್ರತಿ ಕೆ.ಜಿ.ಗೆ 49.13 ರೂ. ಇತ್ತು. ಅಂದರೆ ಈಗ ಡಬಲ್ ಆಗಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾಲ್ಕು ಇತರ ಖಾದ್ಯ ತೈಲಗಳ ಮಾಸಿಕ ಸರಾಸರಿ ಚಿಲ್ಲರೆ ಬೆಲೆಗಳು – ನೆಲಗಡಲೆ (ಪ್ರತಿ ಕೆ.ಜಿ.ಗೆ  175.55 ರೂ.), ವನಸ್ಪತಿ (ಕೆ.ಜಿ.ಗೆ 128.7 ರೂ.), ಸೋಯಾ (ಕೆ.ಜಿ.ಗೆ 148.27 ರೂ.) ಮತ್ತು ಸೂರ್ಯಕಾಂತಿ (ಕೆ.ಜಿ.ಗೆ 169.54 ರೂ.) ಇವೆ. ಮೇ ತಿಂಗಳಲ್ಲಿ ಈ ದರಗಳು ಗರಿಷ್ಠ ಮಟ್ಟವನ್ನು ತಲುಪಿವೆ. ಕಳೆದ ವರ್ಷಕ್ಕಿಂತ ಶೇಕಡಾ 19-52 ರ ವ್ಯಾಪ್ತಿಯಲ್ಲಿ ಹೆಚ್ಚಳವಾಗಿದೆ.

2019-20 ತೈಲ ವರ್ಷದಲ್ಲಿ (ನವೆಂಬರ್-ಅಕ್ಟೋಬರ್), ಭಾರತದ ದೇಶೀಯ ಸಸ್ಯಜನ್ಯ ತೈಲ ಉತ್ಪಾದನೆಯು ಕೇವಲ 8.5 ದಶಲಕ್ಷ ಟನ್‌ಗಳಷ್ಟಿದೆ ಎಂದು ಅಂದಾಜಿಸಲಾಗಿದ್ದು, ಆಮದು ಪ್ರಮಾಣ 13.5 ಮೆ.ಟನ್ ಇದೆ. ಆಮದು ಮಾಡಿಕೊಳ್ಳುವ ತೈಲಗಳಲ್ಲಿ ತಾಳೆ (7 ಮೆ.ಟನ್), ಸೋಯಾಬೀನ್ (3.5 ಮೆ.ಟನ್) ಮತ್ತು ಸೂರ್ಯಕಾಂತಿ (2.5 ಮೆ.ಟನ್) ಸೇರಿವೆ.

ಒಟ್ಟಿನಲ್ಲಿ ಪೆಟ್ರೋಲ್, ಡಿಸೇಲ್ ದರಗಳನ್ನೂ ಮೀರಿ ಅಡುಗೆ ಎಣ್ಣೆಯ ದರಗಳು ನಾಗಾಲೋಟದಲ್ಲಿದೆ. “ಲಾಕ್‌ಡೌನ್‌ನಲ್ಲಿ ಬೈಕ್ ಮನೆಯಲ್ಲಿಟ್ಟು ಆರಾಮಾಗಿರಬಹುದು. ಆದರೆ ಅಡುಗೆ ಮನೆಯಲ್ಲಿ ಕುದಿ, ಝಳ ಅನುಭವಿಸುವವರಿಗಷ್ಟೇ ಗೊತ್ತು ಇದರ ಕಷ್ಟ” ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ: ಕೇಂದ್ರ ಸಚಿವರು ಸುಳ್ಳು ಹೇಳಿದರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...