Homeಮುಖಪುಟ11 ವರ್ಷ ಅವಧಿಯಲ್ಲಿ ಗರಿಷ್ಠ ಮಟ್ಟ ತಲುಪಿದ ಅಡುಗೆ ಎಣ್ಣೆ ಬೆಲೆ

11 ವರ್ಷ ಅವಧಿಯಲ್ಲಿ ಗರಿಷ್ಠ ಮಟ್ಟ ತಲುಪಿದ ಅಡುಗೆ ಎಣ್ಣೆ ಬೆಲೆ

- Advertisement -
- Advertisement -

ಕೆಲವು ಕಡೆ ಪೆಟ್ರೋಲ್ ದರವು ನೂರರ ಗಡಿಯನ್ನು ದಾಟುವ ಮೊದಲೆ, ಅಡುಗೆ ಎಣ್ಣೆಗೆ 150 ರೂ.ಗಳ ಗಡಿಯನ್ನು ದಾಟಿ ಬಹಳ ದಿನಗಳಾಗಿವೆ. ಈಗ ಪ್ಯಾಕ್‌ ಮಾಡಿದ ಅಡುಗೆ ಎಣ್ಣೆಗಳ ದರ 130 ರಿಂದ 170 ರೂ. ತಲುಪಿದೆ.

ಪೆಟ್ರೋಲ್, ಡಿಸೇಲ್ ದರಗಳ ಸತತ ಏರಿಕೆಯಿಂದ ಸಾಮಾನ್ಯ ಜನರು ತೊಂದರೆಗೆ ಒಳಗಾಗಿದ್ದಾರೆ. ಆದರೆ ಅಡುಗೆ ಮನೆಯಾಚೆ ಅಷ್ಟಾಗಿ ಸುದ್ದಿಯಾಗದ, ಭಾರತದಲ್ಲಿ ಮಹಿಳೆಯರಿಗಷ್ಟೇ ಸಂಬಂಧಿಸಿದ್ದು ಎಂಬಂತಿರುವ ಅಡುಗೆ ಎಣ್ಣೆ ದರ ಏರುತ್ತಲೇ ಸಾಗಿದೆ.

ಈಗ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಈ ಬಗ್ಗೆ ಸಮಾಲೋಚನೆ ಶುರು ಮಾಡಿದೆ. ಸಾಂಕ್ರಾಮಿಕ ಮತ್ತು ವಿವಿಧ ರಾಜ್ಯಗಳಲ್ಲಿನ ಲಾಕ್‌ಡೌನ್‌ಗಳ ಮಧ್ಯೆ ಅಡುಗೆ ಎಣ್ಣೆಗಳ ಬೆಲೆಯಲ್ಲಿನ ಹೆಚ್ಚಳವು ಆರ್ಥಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದು, ಕೇಂದ್ರ ಆಹಾರ ಇಲಾಖೆ ‘ಇದು ಕಳವಳಕಾರಿ’ ಎಂದಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಧಿಕೃತ ಅಂಕಿಅಂಶಗಳ ಪ್ರಕಾರ, ಪ್ಯಾಕ್ ಮಾಡಿದ ಖಾದ್ಯ ತೈಲಗಳ (ಅಡುಗೆ ಎಣ್ಣೆ) ಮಾಸಿಕ ಸರಾಸರಿ ಚಿಲ್ಲರೆ ಬೆಲೆಗಳು ಈ ತಿಂಗಳು ಒಂದು ದಶಕದಲ್ಲಿ ಗರಿಷ್ಠ ಮಟ್ಟಕ್ಕೆ ಏರಿವೆ. ಇದರಲ್ಲಿ ನೆಲಗಡಲೆ(ಸೇಂಗಾ), ಸಾಸಿವೆ, ವನಸ್ಪತಿ, ಸೋಯಾ, ಸೂರ್ಯಕಾಂತಿ ಮತ್ತು ತಾಳೆ ಎಣ್ಣೆಗಳು ಸೇರಿವೆ.

ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ಸೋಮವಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಭೆ ನಡೆಸಿ, ಖಾದ್ಯ ತೈಲಗಳ ಬೆಲೆಯನ್ನು ತಗ್ಗಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಖಾದ್ಯ ತೈಲದ ಅಂತರರಾಷ್ಟ್ರೀಯ ಬೆಲೆಗಳ ಏರಿಕೆಗೆ ಹೋಲಿಸಿದರೆ ಭಾರತದಲ್ಲಿ ಖಾದ್ಯ ತೈಲದ ಬೆಲೆಯಲ್ಲಿ ತುಸು ಜಾಸ್ತಿ ಪ್ರಮಾಣದಲ್ಲಿ ಏರಿಕೆಯಾಗುವುದರ ಬಗ್ಗೆ ಕೇಂದ್ರವು ಕಳವಳ ವ್ಯಕ್ತಪಡಿಸಿದ್ದರಿಂದ ಸಭೆಯನ್ನು ನಡೆಸುವ ಅಗತ್ಯ ಬಿತ್ತು ಎಂದು ಇಲಾಖೆ ತಿಳಿಸಿದೆ.

ದೇಶೀಯ ಖಾದ್ಯ ತೈಲ ಬೆಲೆಗಳು ಸಾಮಾನ್ಯವಾಗಿ ಅಂತರರಾಷ್ಟ್ರೀಯ ಬೆಲೆಗಳನ್ನೇ ಪ್ರತಿಬಿಂಬಿಸುತ್ತವೆ, ಏಕೆಂದರೆ ಭಾರತದ ಶೇಕಡಾ 60 ರಷ್ಟು ಬೇಡಿಕೆಯನ್ನು ಆಮದಿನ ಮೂಲಕ ಪೂರೈಸಲಾಗುತ್ತದೆ.
ಬುರ್ಸಾ ಮಲೇಷ್ಯನ್ ವಿನಿಮಯ ಕೇಂದ್ರದಲ್ಲಿ ಕಚ್ಚಾ ತಾಳೆ ಎಣ್ಣೆಯ (ಪಾಮ್ ಆಯಿಲ್) ಬೆಲೆಯನ್ನು ಮೇ 25 ರಂದು ಪ್ರತಿ ಟನ್‌ಗೆ 3,890 ರಿಂಗಿಟ್ (ಮಲೇಷ್ಯಾ ಕರೆನ್ಸಿ) ಎಂದು ಉಲ್ಲೇಖಿಸಲಾಗಿದೆ. ಇದು ಒಂದು ವರ್ಷದ ಹಿಂದೆ 2,281 ಇತ್ತು.

ಚಿಕಾಗೊ ಬೋರ್ಡ್ ಆಫ್ ಟ್ರೇಡ್ (ಸಿಬಿಒಟಿ)ನಲ್ಲಿನ ಸೋಯಾಬೀನ್ ಎಣ್ಣೆ ಬೆಲೆಗಳು ಸಹ ಹೆಚ್ಚಿನ ಮಟ್ಟದಲ್ಲಿವೆ. ಸಿಬಿಒಟಿಯಲ್ಲಿ, ಜುಲೈನಲ್ಲಿ ಸೋಯಾಬೀನ್ ಮುಕ್ತಾಯದ ಬೆಲೆ ಮೇ 24 ರಂದು ಪ್ರತಿ ಟನ್‌ಗೆ 559.51 ಡಾಲರ್‌‌ನಷ್ಟಾಗಿದೆ. ಕಳೆದ ವರ್ಷದ ಈ ಸಮಯದಲ್ಲಿ ಇದು 306.16 ಡಾಲರ್‌ನಷ್ಟಿತ್ತು. ಅಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ದುಬಾರಿ ಬೆಲೆಯಿದೆ.

ಇದನ್ನೂ ಓದಿ: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಸ್ತೆಯಲ್ಲಿ ಅಡುಗೆ ಮಾಡಿದ ಡಿ.ಕೆ. ಶಿವಕುಮಾರ್‌

ರಾಜ್ಯ ನಾಗರಿಕ ಸರಬರಾಜು ಇಲಾಖೆಗಳು ಒದಗಿಸಿದ ಮಾಹಿತಿ ಮತ್ತು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಅಖಿಲ ಭಾರತ ಮಟ್ಟದಲ್ಲಿ ಆರು ಖಾದ್ಯ ತೈಲಗಳ ಚಿಲ್ಲರೆ ಬೆಲೆಗಳು ಜನವರಿ 2010 ಕ್ಕೆ ಹೋಲಿಸಿದರೆ ಗರಿಷ್ಠ ಮಟ್ಟವನ್ನು ತಲುಪಿವೆ ಎಂಬುದು ಗೊತ್ತಾಗುತ್ತದೆ.

ಮಂಗಳವಾರದ ಅಂಕಿಅಂಶದ ಪ್ರಕಾರ, ಸಾಮಾನ್ಯ ಅಡುಗೆ ಎಣ್ಣೆಯಾದ ಸಾಸಿವೆ ಎಣ್ಣೆಯ (ಪ್ಯಾಕ್ಡ್) ಮಾಸಿಕ ಸರಾಸರಿ ಚಿಲ್ಲರೆ ಬೆಲೆ ಈ ವರ್ಷದ ಮೇ ತಿಂಗಳಲ್ಲಿ ಒಂದು ಕೆ.ಜಿ.ಗೆ 164.44 ರೂ.ಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಇದು ಕಳೆದ ವರ್ಷ ಮೇ ತಿಂಗಳಿಮ ದರಕ್ಕಿಂತ (ಆಗ ರೂ 118.25) ಶೇ 39ರಷ್ಟು ಹೆಚ್ಚಾಗಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಖಾದ್ಯ ತೈಲಗಳ ಸರಾಸರಿ ಬೆಲೆ ಕೆ.ಜಿ.ಗೆ 155.39 ರೂ. ಇದ್ದರೆ, ಮೇ 2010 ರಲ್ಲಿ ಅದು ಕೆ.ಜಿ.ಗೆ 63.05 ರೂ. ಇತ್ತು. ಅಂದರೆ ಎರಡೂವರೆ ಪಟ್ಟು ಏರಿಕೆಯಾಗಿದೆ.

ತಾಳೆ ಎಣ್ಣೆ (ಪಾಮ್ ಆಯಿಲ್) ಭಾರತೀಯ ಮನೆಗಳಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತದೆ, ಇದರ ರೇಟು ಇನ್ನೂ ಜೋರಾಗಿ ಏರಿಕೆ ಕಂಡಿದೆ. ಪಾಮ್ ಆಯಿಲ್ ಮಾಸಿಕ ಸರಾಸರಿ ಚಿಲ್ಲರೆ ಬೆಲೆ ಈ ವರ್ಷದ ಮೇ ತಿಂಗಳಿಗೆ ಪ್ರತಿ ಕೆ.ಜಿ.ಗೆ 131.69 ರೂ.ಗಳಷ್ಟಿದೆ. ಇದು ಕಳೆದ 11 ವರ್ಷಗಳಲ್ಲಿ ಅತಿ ಹೆಚ್ಚು ಮತ್ತು ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಶೇಕಡಾ 49 ರಷ್ಟು ಹೆಚ್ಚಾಗಿದೆ. ಈಗ ಪ್ರತಿ ಕೆ.ಜಿ.ಗೆ 87.27 ರೂ. ದರವಿದೆ. 11 ವರ್ಷಗಳ ಹಿಂದೆ 2010 ರ ಏಪ್ರಿಲ್‌ನಲ್ಲಿ ತಾಳೆ ಎಣ್ಣೆಯ ಮಾಸಿಕ ಚಿಲ್ಲರೆ ಬೆಲೆಯು ದಾಖಲಾಗಿದ್ದು, ಪ್ರತಿ ಕೆ.ಜಿ.ಗೆ 49.13 ರೂ. ಇತ್ತು. ಅಂದರೆ ಈಗ ಡಬಲ್ ಆಗಿದೆ.

ಇದನ್ನೂ ಓದಿ: ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ನಾಲ್ಕು ಇತರ ಖಾದ್ಯ ತೈಲಗಳ ಮಾಸಿಕ ಸರಾಸರಿ ಚಿಲ್ಲರೆ ಬೆಲೆಗಳು – ನೆಲಗಡಲೆ (ಪ್ರತಿ ಕೆ.ಜಿ.ಗೆ  175.55 ರೂ.), ವನಸ್ಪತಿ (ಕೆ.ಜಿ.ಗೆ 128.7 ರೂ.), ಸೋಯಾ (ಕೆ.ಜಿ.ಗೆ 148.27 ರೂ.) ಮತ್ತು ಸೂರ್ಯಕಾಂತಿ (ಕೆ.ಜಿ.ಗೆ 169.54 ರೂ.) ಇವೆ. ಮೇ ತಿಂಗಳಲ್ಲಿ ಈ ದರಗಳು ಗರಿಷ್ಠ ಮಟ್ಟವನ್ನು ತಲುಪಿವೆ. ಕಳೆದ ವರ್ಷಕ್ಕಿಂತ ಶೇಕಡಾ 19-52 ರ ವ್ಯಾಪ್ತಿಯಲ್ಲಿ ಹೆಚ್ಚಳವಾಗಿದೆ.

2019-20 ತೈಲ ವರ್ಷದಲ್ಲಿ (ನವೆಂಬರ್-ಅಕ್ಟೋಬರ್), ಭಾರತದ ದೇಶೀಯ ಸಸ್ಯಜನ್ಯ ತೈಲ ಉತ್ಪಾದನೆಯು ಕೇವಲ 8.5 ದಶಲಕ್ಷ ಟನ್‌ಗಳಷ್ಟಿದೆ ಎಂದು ಅಂದಾಜಿಸಲಾಗಿದ್ದು, ಆಮದು ಪ್ರಮಾಣ 13.5 ಮೆ.ಟನ್ ಇದೆ. ಆಮದು ಮಾಡಿಕೊಳ್ಳುವ ತೈಲಗಳಲ್ಲಿ ತಾಳೆ (7 ಮೆ.ಟನ್), ಸೋಯಾಬೀನ್ (3.5 ಮೆ.ಟನ್) ಮತ್ತು ಸೂರ್ಯಕಾಂತಿ (2.5 ಮೆ.ಟನ್) ಸೇರಿವೆ.

ಒಟ್ಟಿನಲ್ಲಿ ಪೆಟ್ರೋಲ್, ಡಿಸೇಲ್ ದರಗಳನ್ನೂ ಮೀರಿ ಅಡುಗೆ ಎಣ್ಣೆಯ ದರಗಳು ನಾಗಾಲೋಟದಲ್ಲಿದೆ. “ಲಾಕ್‌ಡೌನ್‌ನಲ್ಲಿ ಬೈಕ್ ಮನೆಯಲ್ಲಿಟ್ಟು ಆರಾಮಾಗಿರಬಹುದು. ಆದರೆ ಅಡುಗೆ ಮನೆಯಲ್ಲಿ ಕುದಿ, ಝಳ ಅನುಭವಿಸುವವರಿಗಷ್ಟೇ ಗೊತ್ತು ಇದರ ಕಷ್ಟ” ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ: ಕೇಂದ್ರ ಸಚಿವರು ಸುಳ್ಳು ಹೇಳಿದರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...