Homeಮುಖಪುಟದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! - ಹೀಗೊಂದು ರಾಜಕೀಯ ಮೈಲೇಜ್‌!

ದೇಶದ ಹೆಮ್ಮೆ ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರೇ ಇಲ್ಲ! – ಹೀಗೊಂದು ರಾಜಕೀಯ ಮೈಲೇಜ್‌!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ ಮುಗಿಲು ಇನ್ನೇನು ಎರಡು ದಿನಗಳು ಬಾಕಿಯಿದೆ. ಆಗಸ್ಟ್‌ 8 ರ ಭಾನುವಾರದಂದು ಜಪಾನಿನ ಟೋಕಿಯೊದ ಒಲಿಂಪಿಕ್ ಸ್ಟೇಡಿಯಂನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಈಗಾಗಲೆ ನಿಗದಿಯಾಗಿದೆ. ಪದಕ ಗಳಿಕೆಯಲ್ಲಿ 74 ಪದಕಗಳೊಂದಿಗೆ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಜನಸಂಖ್ಯೆಯಲ್ಲಿ ಚೀನಾಕ್ಕಿಂತ ಮೂರು ಕೋಟಿ ಕಡಿಮೆಯಿರುವ ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ 65 ನೇ ಸ್ಥಾನ!. ಆದರೆ ಒಲಿಂಪಿಕ್ ಗೇಮ್ಸ್‌‌ ಅನ್ನು ಹಿಡಿದು ದೇಶದ ಒಳಗೆ ನಡೆಯುತ್ತಿರುವ ರಾಜಕೀಯ ಮತ್ತು ಜಾತೀಯತೆಯ ಆಟಗಳಿಗೆ ಲೆಕ್ಕವೆ ಇಲ್ಲ.

ಟೋಕಿಯೊ ಒಲಿಂಪಿಕ್ಸ್‌ನ ಮಹಿಳಾ ಹಾಕಿಯಲ್ಲಿ ಭಾರತದ ತಂಡ ಸೋತಿದ್ದಕ್ಕಾಗಿ, ಆಟಗಾರರನ್ನು ಜನಾಂಗೀಯ ನಿಂದನೆಗೆ ಗುರಿಮಾಡಿದ್ದು ಇತ್ತೀಚೆಗೆ ವರದಿಯಾಗಿತ್ತು. ಆಟಗಾರ್ತಿ ಒಬ್ಬರನ್ನು ಇಟ್ಟುಕೊಂಡು ತನ್ನ ರಾಜಕೀಯ ಮೈಲೇಜ್‌‌ ಪಡೆಯಲು ಯತ್ನಿಸಿರುವ ಘಟನೆ ಇದೀಗ ವರದಿಯಾಗಿದೆ.

ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ವೆಲ್ಟರ್ ವೇಟ್ ವಿಭಾಗದಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಕಂಚಿನ ಪದಕ ಗೆದ್ದಿದ್ದಾರೆ. ಅಸ್ಸಾಂ ರಾಜ್ಯದವರಾದ ಅವರು ತನ್ನ ಚೊಚ್ಚಲ ಒಲಿಂಪಿಕ್ಸ್‌ ಪಂದ್ಯದಲ್ಲೇ ಇಡೀ ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ.

ಇದನ್ನೂ ಓದಿ: ಒಲಿಂಪಿಕ್ ವರದಿಗಳು ಓದಿ 

 

ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ! | Naanu gauri

ಆದರೆ ಅವರು ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕೂಡಲೇ ಅವರ ಹೆಸರಲ್ಲಿ ರಾಜಕೀಯ ಮೈಲೇಜ್ ಹೆಚ್ಚಿಸುರುವ ಘಟನೆ ನಡೆದಿದೆ. ಲವ್ಲೀನಾ ಅವರಿಗೆ ಶುಭ ಹಾರೈಸಿದ ಹಾಕಿರುವ ಅವರ ಫೋಟೋ ಕಾಣದಾಗಿದ್ದು, ಕೇವಲ ಶುಭಹಾರೈಸಿರುವವರ ಫೋಟೋಗಳಷ್ಟೇ ಕಾಣಿಸಿಕೊಂಡಿದೆ.

ಬ್ಯಾನರ್‌ಗಳಲ್ಲಿ, “ಟೋಕಿಯೊ ಒಲಿಂಪಿಕ್-2020 ಕ್ಕೆ ಅರ್ಹತೆ ಪಡೆದಿದ್ದಕ್ಕಾಗಿ ಲವ್ಲಿನಾ ಬೊರ್ಗೊಹೈನ್ (ಬಾಕ್ಸರ್) ಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ನೀವು ಅಸ್ಸಾಂನ ಹೆಮ್ಮೆ” ಎಂಬ ಶೀರ್ಷಿಕೆಯ ಬ್ಯಾನರ್‌ನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಕ್ರೀಡಾ ಮತ್ತು ಯುವಜನ ಕಲ್ಯಾಣ ಸಚಿವ ಬಿಮಲ್ ಬೋರಾ ಅವರ ಚಿತ್ರ ಮಾತ್ರವಿದೆ.

ಇದನ್ನೂ ಓದಿ: ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕೆಲವರು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರೆ, ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, “ಮಹಿಳೆಯರ ಹಾಕಿ ತಂಡದಲ್ಲಿ ದಲಿತ ಆಟಗಾರರೇ ಇರುವುದರಿಂದ ಸೆಮಿಫೈನಲ್ ಸೋತು ಹೋಯಿತು. ದಲಿತರನ್ನು ಹಾಕಿ ಮಾತ್ರವಲ್ಲ, ಯಾವುದೆ ಆಟಕ್ಕೂ ಸೇರಿಸಿಕೊಳ್ಳಬಾರದು” ಎಂದು ಹಾಕಿ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಗಲಾಟೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಇಬ್ಬರು ದುಷ್ಕರ್ಮಿಗಳು ಭಾರತ ತಂಡ ಸೆಮಿಫೈನಲ್‌ನಲ್ಲಿ ಸೋತಿದ್ದಕ್ಕಾಗಿ ಸಂತೋಷ ವ್ಯಕ್ತಪಡಿಸಿ ಜನಾಂಗೀಯ ಮತ್ತು ಜಾತಿ ನಿಂದನೆ ಮಾಡಿ ವಂದನಾ ಅವರ ಮನೆಯ ಮುಂದೆ ಕುಣಿದು ಸಂತೋಷ ವ್ಯಕ್ತಪಡಿಸಿದ್ದರು ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿತ್ತು.


ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...