Homeಮುಖಪುಟಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ನಮ್ಮ ಸರ್ಕಾರವು ಮಧ್ಯಮ ವರ್ಗದವರ ಬಗ್ಗೆ ಸಂವೇದನಾಶೀಲಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ರಾಜಸ್ಥಾನದಲ್ಲಿ ಪೆಟ್ರೋಲ್ ಒಂದು ಲೀಟರ್‌ಗೆ 100 ರೂ.ಗಳು ದಾಟಿದ್ದು, ಭಾರತದಲ್ಲಿ ಸಾರ್ವಕಾಲಿಕ ಹೆಚ್ಚಳ ಕಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಇಂಧನದ ಬೆಲೆ ಹೆಚ್ಚಳಕ್ಕೆ ಹಿಂದೆ ಅಧಿಕಾರದಲ್ಲಿದ್ದ ಸರ್ಕಾರದತ್ತ ಕೈ ತೋರಿಸಿದ್ದಾರೆ. ಅವರು, “ಹಿಂದಿನ ಸರ್ಕಾರಗಳು ಇಂಧನ ಆಮದು ಪ್ರಮಾಣ ತಗ್ಗಿಸುವತ್ತ ಗಮನ ನೀಡಿದ್ದರೆ ಮಧ್ಯಮ ವರ್ಗಕ್ಕೆ ಹೊರೆ ಆಗುತ್ತಿರಲಿಲ್ಲ’’ ಎಂದು ತಿಳಿಸಿದ್ದಾರೆ.

ತಮಿಳುನಾಡಿನ ತೈಲ ಮತ್ತು ಅನಿಲ ಯೋಜನೆಗಳನ್ನು ಉದ್ಘಾಟಿಸುವ ಆನ್‌ಲೈನ್ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಮೋದಿ, “2019–20 ರಲ್ಲಿ ಭಾರತಕ್ಕೆ ಅಗತ್ಯವಿದ್ದ 85% ಕ್ಕಿಂತ ಹೆಚ್ಚಿನ ಪ್ರಮಾಣದ ತೈಲವನ್ನು ಆಮದು ಮಾಡಿಕೊಳ್ಳಲಾಯಿತು, ನೈಸರ್ಗಿಕ ಅನಿಲದ ಅಗತ್ಯತೆಯ ಶೇ 53ರಷ್ಟನ್ನು ಆಮದು ಮಾಡಿಕೊಳ್ಳಲಾಯಿತು” ಎಂದು ಹೇಳಿದ್ದಾರೆ.

ಆದರೆ ಅವರು ತಮ್ಮ ಮಾತಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳ ಆಗುತ್ತಿರುವುದರ ಬಗ್ಗೆ ಮಾತನಾಡಲಿಲ್ಲ.

ಇದನ್ನೂ ಓದಿ: ದೆಹಲಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

‘‘ನಮ್ಮಷ್ಟು ವೈವಿಧ್ಯತೆ ಹೊಂದಿರುವ, ಇಷ್ಟೊಂದು ಪ್ರತಿಭೆ ಹೊಂದಿರುವ ದೇಶವು ಇಂಧನದ ಅಗತ್ಯಗಳಿಗೆ ಈ ರೀತಿಯಲ್ಲಿ ಆಮದನ್ನು ಅವಲಂಬಿಸಿರಬೇಕೆ?. ನಾನು ಯಾರನ್ನೂ ಟೀಕಿಸಲು ಬಯಸುವುದಿಲ್ಲ. ಆದರೆ, ಈ ವಿಚಾರ ಇಂಧನ ಬೆಲೆ ಹೆಚ್ಚಳದ ಹೊಣೆಯನ್ನು ಹಿಂದಿನ ಸರ್ಕಾರದ ಮೇಲೆ ಹೊರಿಸಿದ್ದಾರೆ.

“ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಸಾಮೂಹಿಕ ಪ್ರಯತ್ನದ ಅಗತ್ಯವಿದೆ. ನಮ್ಮ ಸರ್ಕಾರವು ಮಧ್ಯಮ ವರ್ಗದವರ ಬಗ್ಗೆ ಸಂವೇದನಾಶೀಲಕಾರಿಯಾಗಿದೆ. ಹಾಗಾಗಿ ದೇಶವು ಇಂದು ಎಥೆನಾಲ್ ಬಳಕೆಗೆ ಆದ್ಯತೆ ನೀಡುತ್ತಿದೆ. ಇದು ಗ್ರಾಹಕರಿಗೂ ರೈತರಿಗೂ ಸಹಾಯ ಮಾಡುತ್ತದೆ. ಇಂಧನ ಆಮದನ್ನು ತಗ್ಗಿಸಲು ದೇಶ ಯತ್ನಿಸುತ್ತಿದೆ’’ ಎಂದು ಪ್ರಧಾನಿ ಹೇಳಿದ್ದಾರೆ.

“2014 ರಿಂದ, ನಾವು ತೈಲ ಮತ್ತು ಅನಿಲ ವಲಯದಾದ್ಯಂತ ವಿವಿಧ ಸುಧಾರಣೆಗಳನ್ನು ತಂದಿದ್ದೇವೆ. ಪರಿಶೋಧನೆ ಮತ್ತು ಉತ್ಪಾದನೆ, ನೈಸರ್ಗಿಕ ಅನಿಲ ಮಾರುಕಟ್ಟೆ ಮತ್ತು ವಿತರಣೆಯನ್ನು ಒಳಗೊಂಡಿದೆ. ಹೂಡಿಕೆದಾರ ಸ್ನೇಹಿ ಕ್ರಮಗಳ ಮೂಲಕ ದೇಶೀಯ ಮತ್ತು ಅಂತರರಾಷ್ಟ್ರೀಯ ಹೂಡಿಕೆಯನ್ನು ಆಕರ್ಷಿಸುವ ಕೆಲಸ ಮಾಡುತ್ತಿದ್ದೇವೆ. ಭಾರತದ ಶಕ್ತಿಯ ಮೇಲೆ ಹೂಡಿಕೆ ಮಾಡಬೇಕೆಂದು ಜಗತ್ತಿಗೆ ಹೇಳಲು ನಾನು ಬಯಸುತ್ತೇನೆ” ಎಂದು ಮೋದಿ ಹೇಳಿದ್ದಾರೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಪೆಟ್ರೋಲ್ ಬೆಲೆಯಲ್ಲಿ 60% ದಷ್ಟು ಹಾಗೂ ಡೀಸೆಲ್ ಬೆಲೆಯಲ್ಲಿ 54% ದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ವಿವಿಧ ಸುಂಕ, ತೆರಿಗೆಗಳಿಗೆ ಪಾವತಿಯಾಗುತ್ತವೆ.

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...