Homeಮುಖಪುಟಕೋವಿಡ್ ಬಿಕ್ಕಟ್ಟಿಗೆ ಪ್ರಧಾನಿಯೇ ಕಾರಣ: 'ಮೋದಿ ರಾಜೀನಾಮೆ ನೀಡಿ' ಟ್ವಿಟರ್‌ ಟ್ರೆಂಡಿಂಗ್‌

ಕೋವಿಡ್ ಬಿಕ್ಕಟ್ಟಿಗೆ ಪ್ರಧಾನಿಯೇ ಕಾರಣ: ‘ಮೋದಿ ರಾಜೀನಾಮೆ ನೀಡಿ’ ಟ್ವಿಟರ್‌ ಟ್ರೆಂಡಿಂಗ್‌

- Advertisement -
- Advertisement -

ದೇಶದಲ್ಲಿ ಕೋವಿಡ್ ಎರಡನೇ ಅಲೆ ಅಪ್ಪಳಿಸಿದೆ. ಪ್ರತಿದಿನ ಹತ್ತಿರತ್ತಿರ ಮೂರು ಲಕ್ಷದಷ್ಟು ಪ್ರಕರಣಗಳು ದಾಖಲಾಗುತ್ತಿವೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಮ್ಲಜನಕವಿಲ್ಲದೇ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯಗಳು ಚಿಕಿತ್ಸೆಗೆ ರೆಮ್‌ಡಿಸಿವಿರ್ ಔಷಧಿಯಿಲ್ಲ, ಲಸಿಕೆ ಇಲ್ಲ ಎಂದು ದೂರುತ್ತಿವೆ. ಆದರೆ ನರೇಂದ್ರ ಮೋದಿ ಮಾತ್ರ ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ದೇಶದಲ್ಲಿನ ಅಲ್ಲೋಲಕಲ್ಲೋಲಕ್ಕೆ ಅವರ ಅಸಾಮರ್ಥ್ಯವೇ ಕಾರಣವಾಗಿದ್ದು ಮೋದಿ ಕೂಡಲೇ ರಾಜೀನಾಮೆ ಕೊಡಬೇಕೆಂದು ಕೂಗು ಟ್ವಿಟರ್‌ನಲ್ಲಿ ಜೋರಾಗಿ ಕೇಳಿಬಂದಿದೆ.

#ResignModi (‘ಮೋದಿ ರಾಜೀನಾಮೆ ನೀಡಿ’) ಎಂಬ ಹ್ಯಾಷ್‌ಟ್ಯಾಗ್‌ ಟ್ವಿಟರ್‌ನಲ್ಲಿ ನಂ 1 ಸ್ಥಾನದಲ್ಲಿ‌ ಟ್ರೆಂಡಿಂಗ್‌ ಆಗುತ್ತಿದೆ. ನೆಟ್ಟಿಗರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವನ್ನು ತರಾಟೆಗೆ ತೆಗೆದುಕೊಂಡಿದ್ದು, ದುರ್ಬಲ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ.

ಗಗನಕ್ಕೇರುತ್ತಿರುವ ಕೋವಿಡ್ -19 ಪ್ರಕರಣಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣರಾಗಿದ್ದಾರೆ. ಅವನು ಜವಾಬ್ದಾರಿಯುತ ಸ್ಥಾನದಲ್ಲಿದ್ದರು ಅವರ ಬಳಿ ಯಾವುದೇ ಯೋಜನೆ ಇಲ್ಲ, ಆಡಳಿತಾತ್ಮಕ ಸಾಮರ್ಥ್ಯಗಳಿಲ್ಲ. ಅವರು ಮುಂದಾಲೋಚನೆ ಮಾಡಲಿಲ್ಲ ಮತ್ತು ಯಾರಿಗೂ ಹಾಗೆ ಮಾಡಲು ಅವರು ಅವಕಾಶ ನೀಡಲಿಲ್ಲ. ಸಂಪೂರ್ಣ ಅಸಮರ್ಥ ವ್ಯಕ್ತಿಯಾದ ಅವರು ರಾಜೀನಾಮೆ ನೀಡಬೆಕು ಎಂದು ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಮೋದಿಯವರ ದುರ್ಬಲ ಆಡಳಿತದಿಂದ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟು ಉಂಟಾಗಿದೆ. ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಮೋದಿ ಮಾತ್ರ ಬೃಹತ್ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಬಂಗಾಳದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಇಂದಿನ ಕೋವಿಡ್‌ ಸಾವುಗಳಿಗೆ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ನಿನ್ನೆ ತಮಿಳುನಾಡಿನ ವಿಸಿಕೆ ಪಕ್ಷದ ಅಧ್ಯಕ್ಷ ತೋಲ್ ತಿರುಮಾವಲವನ್‌ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಾಮಾಜಿಕ ಕಾರ್ಯಕರ್ತೆ ಮತ್ತು ಲೇಖಕಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿ “ತಮಿಳುನಾಡಿನಲ್ಲಿ ಆರಂಭವಾದರೆ ಅದು ರಾಷ್ಟ್ರಕ್ಕೆ ವ್ಯಾಪಿಸುತ್ತದೆ. ಈ ಪ್ರಧಾನಿ ಮುಂದುವರಿದರೆ, ನಮ್ಮ ರಾಷ್ಟ್ರವು ಕೆಟ್ಟ ದುಃಸ್ವಪ್ನಗಳನ್ನು ಮೀರಿ ವಿಪತ್ತಿನಲ್ಲಿ ಮುಳುಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಇಂದಿನ ತೀವ್ರ ಬಿಕ್ಕಟ್ಟಿಗೆ ಮೋದಿ ರಾಜೀನಾಮೆ ನೀಡಿ ಎಂದು ಕೇಳುವುದು ಸರಿಯಾದ ಪ್ರತಿಕ್ರಿಯೆಯಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟು ಮುಗಿದಿದೆ ಎಂದು ನಂಬಿ ನಮ್ಮ ಲಸಿಕೆಗಳನ್ನು ವಿದೇಶಗಳಿಗೆ ರಫ್ತು ಮಾಡುತ್ತಿದ್ದಾರೆ. ಯುದ್ದೋಪಾದಿಯಲ್ಲಿ ಆಮ್ಲಜನಕ, ಔಷಧಿಗಳು ಮತ್ತು ಐಸಿಯುಗಳನ್ನು ಸಜ್ಜುಗೊಳಿಸಿಕೊಂಡು ಎರಡನೇ ಅಲೆಗೆ ಅವರು ಸಿದ್ದತೆ ನಡೆಸಿರಲಿಲ್ಲ” ಎಂದು ಪತ್ರಕರ್ತ ಶಿವಂ ವಿಜ್ ಟ್ವೀಟ್‌ ಮಾಡಿದ್ದಾರೆ.

ಟ್ವಿಟರ್‌ನಲ್ಲಿ ಗಮನಸೆಳದ ಇತರ ಟ್ವೀಟ್‌ಗಳು ಕೆಳಗಿನಂತಿವೆ.

#ResignModi ಟ್ವಿಟರ್‌ನಲ್ಲಿ ಟ್ರೆಂಡ್‌ ಆಗುತ್ತಲೆ, ಮೋದಿ ಪರವಾಗಿಯೂ ಕೆಲವರು ಟ್ವೀಟ್ ಮಾಡಲು ಆಂರಭಿಸಿ #Nation_With_Modi ಎಂಬ ಹ್ಯಾಷ್‌ಟ್ಯಾಗ್‌ ಅನ್ನು ಟ್ರೆಂಡ್ ಮಾಡಿದ್ದಾರೆ.


ಇದನ್ನೂ ಓದಿ: ಬಂಗಾಳ ಚುನಾವಣಾ ಪ್ರಚಾರದಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ: ಡೆರೆಕ್ ಒ’ಬ್ರಿಯೆನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಓರ್ವ ದುರ್ಬಲ ಪ್ರಧಾನಿ. ಕೋವಿಡ್ ಲಸಿಕೆಯನ್ನು ಉಚಿತವಾಗಿ ರಾಜ್ಯಗಳಿಗೆ ಕೊಡಬೇಕಿತ್ತು. ಆದ್ರೆ ಅದರಲ್ಲೂ ವ್ಯಾಪಾರದೃಷ್ಟಿ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...