Homeಮುಖಪುಟಕೋವಿಡ್ ಬಿಕ್ಕಟ್ಟಿಗೆ ಪ್ರಧಾನಿಯೇ ಕಾರಣ: 'ಮೋದಿ ರಾಜೀನಾಮೆ ನೀಡಿ' ಟ್ವಿಟರ್‌ ಟ್ರೆಂಡಿಂಗ್‌

ಕೋವಿಡ್ ಬಿಕ್ಕಟ್ಟಿಗೆ ಪ್ರಧಾನಿಯೇ ಕಾರಣ: ‘ಮೋದಿ ರಾಜೀನಾಮೆ ನೀಡಿ’ ಟ್ವಿಟರ್‌ ಟ್ರೆಂಡಿಂಗ್‌

- Advertisement -
- Advertisement -

ದೇಶದಲ್ಲಿ ಕೋವಿಡ್ ಎರಡನೇ ಅಲೆ ಅಪ್ಪಳಿಸಿದೆ. ಪ್ರತಿದಿನ ಹತ್ತಿರತ್ತಿರ ಮೂರು ಲಕ್ಷದಷ್ಟು ಪ್ರಕರಣಗಳು ದಾಖಲಾಗುತ್ತಿವೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಮ್ಲಜನಕವಿಲ್ಲದೇ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯಗಳು ಚಿಕಿತ್ಸೆಗೆ ರೆಮ್‌ಡಿಸಿವಿರ್ ಔಷಧಿಯಿಲ್ಲ, ಲಸಿಕೆ ಇಲ್ಲ ಎಂದು ದೂರುತ್ತಿವೆ. ಆದರೆ ನರೇಂದ್ರ ಮೋದಿ ಮಾತ್ರ ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ದೇಶದಲ್ಲಿನ ಅಲ್ಲೋಲಕಲ್ಲೋಲಕ್ಕೆ ಅವರ ಅಸಾಮರ್ಥ್ಯವೇ ಕಾರಣವಾಗಿದ್ದು ಮೋದಿ ಕೂಡಲೇ ರಾಜೀನಾಮೆ ಕೊಡಬೇಕೆಂದು ಕೂಗು ಟ್ವಿಟರ್‌ನಲ್ಲಿ ಜೋರಾಗಿ ಕೇಳಿಬಂದಿದೆ.

#ResignModi (‘ಮೋದಿ ರಾಜೀನಾಮೆ ನೀಡಿ’) ಎಂಬ ಹ್ಯಾಷ್‌ಟ್ಯಾಗ್‌ ಟ್ವಿಟರ್‌ನಲ್ಲಿ ನಂ 1 ಸ್ಥಾನದಲ್ಲಿ‌ ಟ್ರೆಂಡಿಂಗ್‌ ಆಗುತ್ತಿದೆ. ನೆಟ್ಟಿಗರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವನ್ನು ತರಾಟೆಗೆ ತೆಗೆದುಕೊಂಡಿದ್ದು, ದುರ್ಬಲ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ.

ಗಗನಕ್ಕೇರುತ್ತಿರುವ ಕೋವಿಡ್ -19 ಪ್ರಕರಣಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣರಾಗಿದ್ದಾರೆ. ಅವನು ಜವಾಬ್ದಾರಿಯುತ ಸ್ಥಾನದಲ್ಲಿದ್ದರು ಅವರ ಬಳಿ ಯಾವುದೇ ಯೋಜನೆ ಇಲ್ಲ, ಆಡಳಿತಾತ್ಮಕ ಸಾಮರ್ಥ್ಯಗಳಿಲ್ಲ. ಅವರು ಮುಂದಾಲೋಚನೆ ಮಾಡಲಿಲ್ಲ ಮತ್ತು ಯಾರಿಗೂ ಹಾಗೆ ಮಾಡಲು ಅವರು ಅವಕಾಶ ನೀಡಲಿಲ್ಲ. ಸಂಪೂರ್ಣ ಅಸಮರ್ಥ ವ್ಯಕ್ತಿಯಾದ ಅವರು ರಾಜೀನಾಮೆ ನೀಡಬೆಕು ಎಂದು ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಮೋದಿಯವರ ದುರ್ಬಲ ಆಡಳಿತದಿಂದ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟು ಉಂಟಾಗಿದೆ. ಸಾವಿರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಮೋದಿ ಮಾತ್ರ ಬೃಹತ್ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಬಂಗಾಳದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಇಂದಿನ ಕೋವಿಡ್‌ ಸಾವುಗಳಿಗೆ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ನಿನ್ನೆ ತಮಿಳುನಾಡಿನ ವಿಸಿಕೆ ಪಕ್ಷದ ಅಧ್ಯಕ್ಷ ತೋಲ್ ತಿರುಮಾವಲವನ್‌ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಾಮಾಜಿಕ ಕಾರ್ಯಕರ್ತೆ ಮತ್ತು ಲೇಖಕಿ ಮೀನಾ ಕಂದಸ್ವಾಮಿ ಟ್ವೀಟ್ ಮಾಡಿ “ತಮಿಳುನಾಡಿನಲ್ಲಿ ಆರಂಭವಾದರೆ ಅದು ರಾಷ್ಟ್ರಕ್ಕೆ ವ್ಯಾಪಿಸುತ್ತದೆ. ಈ ಪ್ರಧಾನಿ ಮುಂದುವರಿದರೆ, ನಮ್ಮ ರಾಷ್ಟ್ರವು ಕೆಟ್ಟ ದುಃಸ್ವಪ್ನಗಳನ್ನು ಮೀರಿ ವಿಪತ್ತಿನಲ್ಲಿ ಮುಳುಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಇಂದಿನ ತೀವ್ರ ಬಿಕ್ಕಟ್ಟಿಗೆ ಮೋದಿ ರಾಜೀನಾಮೆ ನೀಡಿ ಎಂದು ಕೇಳುವುದು ಸರಿಯಾದ ಪ್ರತಿಕ್ರಿಯೆಯಾಗಿದೆ. ನರೇಂದ್ರ ಮೋದಿಯವರು ಕೋವಿಡ್ ಬಿಕ್ಕಟ್ಟು ಮುಗಿದಿದೆ ಎಂದು ನಂಬಿ ನಮ್ಮ ಲಸಿಕೆಗಳನ್ನು ವಿದೇಶಗಳಿಗೆ ರಫ್ತು ಮಾಡುತ್ತಿದ್ದಾರೆ. ಯುದ್ದೋಪಾದಿಯಲ್ಲಿ ಆಮ್ಲಜನಕ, ಔಷಧಿಗಳು ಮತ್ತು ಐಸಿಯುಗಳನ್ನು ಸಜ್ಜುಗೊಳಿಸಿಕೊಂಡು ಎರಡನೇ ಅಲೆಗೆ ಅವರು ಸಿದ್ದತೆ ನಡೆಸಿರಲಿಲ್ಲ” ಎಂದು ಪತ್ರಕರ್ತ ಶಿವಂ ವಿಜ್ ಟ್ವೀಟ್‌ ಮಾಡಿದ್ದಾರೆ.

ಟ್ವಿಟರ್‌ನಲ್ಲಿ ಗಮನಸೆಳದ ಇತರ ಟ್ವೀಟ್‌ಗಳು ಕೆಳಗಿನಂತಿವೆ.

#ResignModi ಟ್ವಿಟರ್‌ನಲ್ಲಿ ಟ್ರೆಂಡ್‌ ಆಗುತ್ತಲೆ, ಮೋದಿ ಪರವಾಗಿಯೂ ಕೆಲವರು ಟ್ವೀಟ್ ಮಾಡಲು ಆಂರಭಿಸಿ #Nation_With_Modi ಎಂಬ ಹ್ಯಾಷ್‌ಟ್ಯಾಗ್‌ ಅನ್ನು ಟ್ರೆಂಡ್ ಮಾಡಿದ್ದಾರೆ.


ಇದನ್ನೂ ಓದಿ: ಬಂಗಾಳ ಚುನಾವಣಾ ಪ್ರಚಾರದಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ: ಡೆರೆಕ್ ಒ’ಬ್ರಿಯೆನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಓರ್ವ ದುರ್ಬಲ ಪ್ರಧಾನಿ. ಕೋವಿಡ್ ಲಸಿಕೆಯನ್ನು ಉಚಿತವಾಗಿ ರಾಜ್ಯಗಳಿಗೆ ಕೊಡಬೇಕಿತ್ತು. ಆದ್ರೆ ಅದರಲ್ಲೂ ವ್ಯಾಪಾರದೃಷ್ಟಿ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...