Homeಮುಖಪುಟಮೋದಿ ಸತ್ಯ ಒಪ್ಪಿಕೊಂಡಿದ್ದಾರೆ, ಹಾಗೆಯೆ ಕಾಯ್ದೆ ವಾಪಸ್ ಪಡೆಯಲಿ: ದರ್ಶನ್ ಪಾಲ್

ಮೋದಿ ಸತ್ಯ ಒಪ್ಪಿಕೊಂಡಿದ್ದಾರೆ, ಹಾಗೆಯೆ ಕಾಯ್ದೆ ವಾಪಸ್ ಪಡೆಯಲಿ: ದರ್ಶನ್ ಪಾಲ್

ಟಿಕ್ರಿ ಮೋರ್ಚಾದಲ್ಲಿ ಸಿಸಿಟಿವಿ ಅಳವಡಿಸುವ ಹರಿಯಾಣ ಸರ್ಕಾರದ ಪ್ರಸ್ತಾಪವನ್ನು ವಿರೋಧಿಸಿರುವ ಅವರು ರೈತರ ಶಾಂತಿಯುತ ಪ್ರತಿಭಟನೆಗೆ ಅಡ್ಡಿಪಡಿಸಬಾರದೆಂದು ಆಗ್ರಹಿಸಿದ್ದಾರೆ.

- Advertisement -
- Advertisement -

ಜನರ ಒತ್ತಾಯವಿಲ್ಲದಿದ್ದರೂ ಹಲವಾರು ಕಾನೂನುಗಳನ್ನು ಈ ದೇಶದಲ್ಲಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರೈತರ ಒತ್ತಾಯವಿಲ್ಲದೇ ಈ ಕಾಯ್ದೆಗಳನ್ನು ತರಲಾಗಿದೆ ಎಂದು ಸತ್ಯ ಒಪ್ಪಿಕೊಂಡಿದ್ದಾರೆ. ಹಾಗಾಗಿ ರೈತರಿಗೆ ಬೇಕಿಲ್ಲದ ಈ ಕಾನೂನುಗಳನ್ನು ಅವರು ವಾಪಸ್ ಪಡೆಯಬೇಕು ಮತ್ತು ರೈತವಿರೋಧಿ ಹೇಳಿಕೆ ನೀಡುವುದನ್ನು ನಿಲ್ಲಸಬೇಕು ಎಂದು ಕಿಸಾನ್ ಸಂಯುಕ್ತ ಮೋರ್ಚಾ ಆಗ್ರಹಿಸಿದೆ.

ಮೋರ್ಚಾದ ಪರವಾಗಿ ದರ್ಶನ್ ಪಾಲ್ ಪತ್ರಿಕಾ ಹೇಳಿಕೆ ನೀಡಿ, ರೈತರ ಹಕ್ಕೊತ್ತಾಯಗಳ ಬಗ್ಗೆ ಪ್ರಧಾನಿ ಮಂತ್ರಿಗೆ ಗಂಭೀರತೆ ಇಲ್ಲ. ಸರ್ಕಾರ ಒಂದು ಕಡೆ ರೈತರನ್ನು ಹೀಯಾಳಿಸುತ್ತಾ ಇನ್ನೊಂದು ಕಡೆ ಮಾತುಕತೆಗೆ ಸಿದ್ದ ಎನ್ನುವುದನ್ನು ನಂಬಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಪಂಜಾಬ್‌ನ ಲೂಧಿಯಾನ ಜಿಲ್ಲೆಯ ಜಾಗ್ರಾವ್ನ್ ಮಾರುಕಟ್ಟೆಯಲ್ಲಿ ಪಂಜಾಬ್‌ನ 31 ರೈತ ಸಂಘಟನೆಗಳು ಜಂಟಿಯಾಗಿ ಕಿಸಾನ್ ಮಹಾಪಂಚಾಯತ್ ಆಯೋಜಿಸಿದ್ದವು. ಮಾರುಕಟ್ಟೆ ಅಂಗಳದ ತುಂಬೆಲ್ಲಾ ರೈತರು ಮತ್ತು ಸಾರ್ವಜನಿಕರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಶಂಭು ಗಡಿಯಲ್ಲಿಯೂ ರೈತರು ಮಹಾಪಂಚಾಯತ್ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಟಿಕ್ರಿ ಮೋರ್ಚಾದಲ್ಲಿ ಸಿಸಿಟಿವಿ ಅಳವಡಿಸುವ ಹರಿಯಾಣ ಸರ್ಕಾರದ ಪ್ರಸ್ತಾಪವನ್ನು ವಿರೋಧಿಸಿರುವ ಅವರು ರೈತರ ಶಾಂತಿಯುತ ಪ್ರತಿಭಟನೆಗೆ ಅಡ್ಡಿಪಡಿಸಬಾರದೆಂದು ಆಗ್ರಹಿಸಿದ್ದಾರೆ.

ಕಿಸಾನ್ ಮಹಾಪಂಚಾಯತ್‌ಗಳನ್ನು ಮುಂದಿನ ದಿನಗಳಲ್ಲಿ ದೇಶಾದ್ಯಂತ ಆಯೋಜಿಸಲಾಗುವುದು. ಸಂಯುಕ್ತಾ ಕಿಸಾನ್ ಮೋರ್ಚಾ ತಂಡಗಳು ರಾಜ್ಯವಾರು ಮಹಾಪಂಚಾಯತ್‌ಗಳ ಕಾರ್ಯಕ್ರಮಗಳನ್ನು ಯೋಜಿಸುತ್ತಿವೆ. ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವವರೆಗೆ ಮತ್ತು ಎಂಎಸ್‌ಪಿಗೆ ಕಾನೂನು ಮಾನ್ಯತೆ ನೀಡುವವರೆಗೂ ಸಮುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಫೆಬ್ರವರಿ 12 – ಬಿಲಾರಿ, ಮೊರಾದಾಬಾದ್‌ನಲ್ಲಿ, 13 ಫೆಬ್ರವರಿ – ಪಿಡಿಎಂ ಕಾಲೇಜು ಬಹದ್ದೂರ್‌ ಬೈಪಾಸ್ ಬಳಿ, ಫೆಬ್ರವರಿ 18 – ರೈಸಿಂಗ್ ನಗರ, ಶ್ರೀ ಗಂಗನಗರ ರಾಜಸ್ಥಾನ, 19 ಫೆಬ್ರವರಿ – ಹನುಮನ್‌ಗರ್, ರಾಜಸ್ಥಾನ, ಫೆಬ್ರವರಿ 23 – ಸಿಕಾರ್, ರಾಜಸ್ಥಾನದಲ್ಲಿ ಕಿಸಾನ್ ಮಹಾಪಂಚಾಯತ್‌ ಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ. ದರ್ಶನ್ ಪಾಲ್ ತಿಳಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...