Homeಮುಖಪುಟಮೋದಿ ಸತ್ಯ ಒಪ್ಪಿಕೊಂಡಿದ್ದಾರೆ, ಹಾಗೆಯೆ ಕಾಯ್ದೆ ವಾಪಸ್ ಪಡೆಯಲಿ: ದರ್ಶನ್ ಪಾಲ್

ಮೋದಿ ಸತ್ಯ ಒಪ್ಪಿಕೊಂಡಿದ್ದಾರೆ, ಹಾಗೆಯೆ ಕಾಯ್ದೆ ವಾಪಸ್ ಪಡೆಯಲಿ: ದರ್ಶನ್ ಪಾಲ್

ಟಿಕ್ರಿ ಮೋರ್ಚಾದಲ್ಲಿ ಸಿಸಿಟಿವಿ ಅಳವಡಿಸುವ ಹರಿಯಾಣ ಸರ್ಕಾರದ ಪ್ರಸ್ತಾಪವನ್ನು ವಿರೋಧಿಸಿರುವ ಅವರು ರೈತರ ಶಾಂತಿಯುತ ಪ್ರತಿಭಟನೆಗೆ ಅಡ್ಡಿಪಡಿಸಬಾರದೆಂದು ಆಗ್ರಹಿಸಿದ್ದಾರೆ.

- Advertisement -
- Advertisement -

ಜನರ ಒತ್ತಾಯವಿಲ್ಲದಿದ್ದರೂ ಹಲವಾರು ಕಾನೂನುಗಳನ್ನು ಈ ದೇಶದಲ್ಲಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರೈತರ ಒತ್ತಾಯವಿಲ್ಲದೇ ಈ ಕಾಯ್ದೆಗಳನ್ನು ತರಲಾಗಿದೆ ಎಂದು ಸತ್ಯ ಒಪ್ಪಿಕೊಂಡಿದ್ದಾರೆ. ಹಾಗಾಗಿ ರೈತರಿಗೆ ಬೇಕಿಲ್ಲದ ಈ ಕಾನೂನುಗಳನ್ನು ಅವರು ವಾಪಸ್ ಪಡೆಯಬೇಕು ಮತ್ತು ರೈತವಿರೋಧಿ ಹೇಳಿಕೆ ನೀಡುವುದನ್ನು ನಿಲ್ಲಸಬೇಕು ಎಂದು ಕಿಸಾನ್ ಸಂಯುಕ್ತ ಮೋರ್ಚಾ ಆಗ್ರಹಿಸಿದೆ.

ಮೋರ್ಚಾದ ಪರವಾಗಿ ದರ್ಶನ್ ಪಾಲ್ ಪತ್ರಿಕಾ ಹೇಳಿಕೆ ನೀಡಿ, ರೈತರ ಹಕ್ಕೊತ್ತಾಯಗಳ ಬಗ್ಗೆ ಪ್ರಧಾನಿ ಮಂತ್ರಿಗೆ ಗಂಭೀರತೆ ಇಲ್ಲ. ಸರ್ಕಾರ ಒಂದು ಕಡೆ ರೈತರನ್ನು ಹೀಯಾಳಿಸುತ್ತಾ ಇನ್ನೊಂದು ಕಡೆ ಮಾತುಕತೆಗೆ ಸಿದ್ದ ಎನ್ನುವುದನ್ನು ನಂಬಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಪಂಜಾಬ್‌ನ ಲೂಧಿಯಾನ ಜಿಲ್ಲೆಯ ಜಾಗ್ರಾವ್ನ್ ಮಾರುಕಟ್ಟೆಯಲ್ಲಿ ಪಂಜಾಬ್‌ನ 31 ರೈತ ಸಂಘಟನೆಗಳು ಜಂಟಿಯಾಗಿ ಕಿಸಾನ್ ಮಹಾಪಂಚಾಯತ್ ಆಯೋಜಿಸಿದ್ದವು. ಮಾರುಕಟ್ಟೆ ಅಂಗಳದ ತುಂಬೆಲ್ಲಾ ರೈತರು ಮತ್ತು ಸಾರ್ವಜನಿಕರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಶಂಭು ಗಡಿಯಲ್ಲಿಯೂ ರೈತರು ಮಹಾಪಂಚಾಯತ್ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಟಿಕ್ರಿ ಮೋರ್ಚಾದಲ್ಲಿ ಸಿಸಿಟಿವಿ ಅಳವಡಿಸುವ ಹರಿಯಾಣ ಸರ್ಕಾರದ ಪ್ರಸ್ತಾಪವನ್ನು ವಿರೋಧಿಸಿರುವ ಅವರು ರೈತರ ಶಾಂತಿಯುತ ಪ್ರತಿಭಟನೆಗೆ ಅಡ್ಡಿಪಡಿಸಬಾರದೆಂದು ಆಗ್ರಹಿಸಿದ್ದಾರೆ.

ಕಿಸಾನ್ ಮಹಾಪಂಚಾಯತ್‌ಗಳನ್ನು ಮುಂದಿನ ದಿನಗಳಲ್ಲಿ ದೇಶಾದ್ಯಂತ ಆಯೋಜಿಸಲಾಗುವುದು. ಸಂಯುಕ್ತಾ ಕಿಸಾನ್ ಮೋರ್ಚಾ ತಂಡಗಳು ರಾಜ್ಯವಾರು ಮಹಾಪಂಚಾಯತ್‌ಗಳ ಕಾರ್ಯಕ್ರಮಗಳನ್ನು ಯೋಜಿಸುತ್ತಿವೆ. ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವವರೆಗೆ ಮತ್ತು ಎಂಎಸ್‌ಪಿಗೆ ಕಾನೂನು ಮಾನ್ಯತೆ ನೀಡುವವರೆಗೂ ಸಮುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಫೆಬ್ರವರಿ 12 – ಬಿಲಾರಿ, ಮೊರಾದಾಬಾದ್‌ನಲ್ಲಿ, 13 ಫೆಬ್ರವರಿ – ಪಿಡಿಎಂ ಕಾಲೇಜು ಬಹದ್ದೂರ್‌ ಬೈಪಾಸ್ ಬಳಿ, ಫೆಬ್ರವರಿ 18 – ರೈಸಿಂಗ್ ನಗರ, ಶ್ರೀ ಗಂಗನಗರ ರಾಜಸ್ಥಾನ, 19 ಫೆಬ್ರವರಿ – ಹನುಮನ್‌ಗರ್, ರಾಜಸ್ಥಾನ, ಫೆಬ್ರವರಿ 23 – ಸಿಕಾರ್, ರಾಜಸ್ಥಾನದಲ್ಲಿ ಕಿಸಾನ್ ಮಹಾಪಂಚಾಯತ್‌ ಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ. ದರ್ಶನ್ ಪಾಲ್ ತಿಳಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್ ಲೂಧಿಯಾನ ಮಹಾಪಂಚಾಯತ್‌ನಲ್ಲಿ ಲಕ್ಷಕ್ಕೂ ಅಧಿಕ ರೈತರು ಭಾಗಿ: ಚಳವಳಿ ತೀವ್ರಗೊಳಿಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...