Homeಮುಖಪುಟಮೇ 15ರವರೆಗೂ ಲಾಕ್‌ಡೌನ್‌ ಮುಂದುವರೆಸುವ ಸುಳಿವ ಕೊಟ್ಟ ಪ್ರಧಾನಿ ಮೋದಿ

ಮೇ 15ರವರೆಗೂ ಲಾಕ್‌ಡೌನ್‌ ಮುಂದುವರೆಸುವ ಸುಳಿವ ಕೊಟ್ಟ ಪ್ರಧಾನಿ ಮೋದಿ

- Advertisement -
- Advertisement -

ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ಮೋದಿಯವರು ವಿಡಿಯೋ ಕಾನ್ಫರೆನ್ಸ್‌ ನಡೆಸುತ್ತಿದ್ದು, ದೇಶದ ಹಲವು ಭಾಗಗಳಲ್ಲಿ ಮೇ 15ರವರೆಗೂ ಲಾಕ್‌ಡೌನ್‌ ಮುಂದುವರೆಸುವ ಸುಳಿವು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಆರ್ಥಿಕ ಮುಂಚೂಣಿಯಲ್ಲಿ ಚಿಂತೆ ಮಾಡುವ ಅಗತ್ಯವಿಲ್ಲ, ನಮ್ಮ ಆರ್ಥಿಕತೆ ಉತ್ತಮವಾಗಿದೆ” ಎಂದು ಪಿಎಂ ಮೋದಿ ಒಂಬತ್ತು ಮುಖ್ಯಮಂತ್ರಿಗಳಿಗೆ ವೀಡಿಯೊ ಸಭೆಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಒಂಬತ್ತು ಮುಖ್ಯಮಂತ್ರಿಗಳಲ್ಲಿ ಐವರು ಲಾಕ್‌ಡೌನ್ ಕೊನೆಗೊಳ್ಳಬೇಕು ಎಂದು ಹೇಳಿದರೆ, ಉಳಿದವರು COVID-19 ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಅದನ್ನು ವಿಸ್ತರಿಸಲು ಒಲವು ತೋರಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸೋಂಕಿನ ಮಟ್ಟವನ್ನು ಆಧರಿಸಿ ಜಿಲ್ಲೆಗಳನ್ನು ಕೆಂಪು, ಹಸಿರು ಮತ್ತು ಕಿತ್ತಳೆ ಎಂದು ಗುರುತಿಸುವ ಮೂಲಕ ಲಾಕ್‌ಡೌನ್‌ನಿಂದ ನಿರ್ಗಮಿಸುವ ಯೋಜನೆಯನ್ನು ಸಿದ್ಧಪಡಿಸುವಂತೆ ಪ್ರಧಾನಿ ಎಲ್ಲ ರಾಜ್ಯಗಳನ್ನು ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಸಿರು ಮತ್ತು ಕಿತ್ತಳೆ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳು ಮತ್ತೆ ತೆರೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ಯಾವುದೇ ವಾಣಿಜ್ಯ ಚಟುವಟಿಕೆಯನ್ನು ಸಾಮಾಜಿಕ ಅಂತರದ ನಿಯಮಗಳು ಮತ್ತು ಮಾಸ್ಕ್‌ಗಳೊಂದಿಗೆ ಮಾತ್ರ ಮರುಪ್ರಾರಂಭಿಸಲು ಅನುಮತಿಸಲಾಗುತ್ತದೆ.

ಪ್ರಧಾನಿ ಮೋದಿ ಜೊತೆಗಿನ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮುಕ್ತಾಯವಾಗಿದ್ದು, ರಾಜ್ಯದ ಮುಖ್ಯಮಂತ್ರಿಗಳು ಲಾಕ್‌ಡೌನ್‌ನಲ್ಲಿ ವಲಯವಾರು ವಿನಾಯಿತಿ ಬೇಕು ಎಂದು ಕೇಳಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ರಾಜ್ಯದ ಅಭಿಪ್ರಾಯಕ್ಕೆ ತಕ್ಷಣಕ್ಕೆ ಪ್ರಧಾನಿ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಯಡಿಯೂರಪ್ಪನವರು ಸೋಂಕು‌ ಹರಡದಂತೆ ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಅದನ್ನು ಮುಂದುವರಿಸುತ್ತೇವೆ. ವಲಯವಾರು ವಿಂಗಡಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಆದರೆ ಮೋದಿಯವರು ಮೇ 15ರವರೆಗೂ ಅಂದರೆ ಮತ್ತೆ ಎರಡು ವಾರಗಳ ಕಾಲ ಲಾಕ್ ಡೌನ್ ಮುಂದುವರಿಸಬೇಕಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ, ನಾವು ವಲಯವಾರು ಸಡಿಲತೆ ಕೇಳಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಬಿಹಾರ, ಒಡಿಶಾ, ಗುಜರಾತ್, ಹರಿಯಾಣ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ಮತ್ತು ಕೇಂದ್ರ ಪ್ರಾಂತ್ಯದ ಪುದುಚೇರಿಯ ಮುಖ್ಯಮಂತ್ರಿಗಳು ಇಂದು ಮಾತನಾಡಿದರು. ಈಶಾನ್ಯದಿಂದ ಮೇಘಾಲಯ ಮತ್ತು ಮಿಜೋರಾಂ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಭೆಯಲ್ಲಿ ತಮ್ಮ ರಾಜ್ಯವನ್ನು ಪ್ರತಿನಿಧಿಸಲು ಮುಖ್ಯ ಕಾರ್ಯದರ್ಶಿಯನ್ನು ಕಳುಹಿಸಿದರು.


ಇದನ್ನೂ ಓದಿ: ಇನ್ನೂ ಬಾರದ ಅಕ್ಕಿ ಬೇಳೆ – ಹುಸಿಯಾದ ಕೇಂದ್ರ ಸರ್ಕಾರದ ಭರವಸೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...