Homeಚಳವಳಿಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ಇವು ರಾಷ್ಟ್ರೀಯ ಸ್ವತ್ತು. ಇವುಗಳನ್ನು ಪ್ರತಿಯೊಬ್ಬ ಬಡವರ, ತೆರಿಗೆದಾರರ, ಮಧ್ಯಮ ವರ್ಗದವರ ಮತ್ತು ಸಮಾಜದ ಪ್ರತಿಯೊಂದು ವರ್ಗದವರ ಬೆವರಿನಿಂದ ಸೃಷ್ಟಿಸಲಾಗಿದೆ. ಹಾಗಾಗಿ ಇವುಗಳಿಗೆ ಹಾನಿ ಮಾಡಿದರೆ ಅದು ಜನಸಾಮಾನ್ಯನ ಮೇಲೆ ನೇರವಾಗಿ ಮಾಡಿದ ದಾಳಿಯಾಗುತ್ತದೆ

- Advertisement -
- Advertisement -

ಕೇಂದ್ರ ಸರ್ಕಾರದ ಕಾಯ್ದೆಗಳ ವಿರುದ್ಧ ಹೋರಾಟ ಮಾಡುತ್ತಿರುವ ರೈತರು ಇತ್ತೀಚೆಗೆ ಪಂಜಾಬಿನಲ್ಲಿರುವ ಸಾವಿರಾರು ಜಿಯೋ ಟವರ್‌ಗಳಿಗೆ ಹಾನಿಯುಂಟುಮಾಡಿದ್ದರು. ಇದನ್ನು ಪರೋಕ್ಷವಾಗಿ ಖಂಡಿಸಿರುವ ಪ್ರಧಾನಿ ಮೋದಿ, “ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡುವುದು ಜನಸಾಮಾನ್ಯರ ಮೇಲೆ ದಾಳಿ ಮಾಡಿದಂತೆ” ಎಂದು ಹೇಳಿದ್ದಾರೆ.

“ಪ್ರತಿಭಟನೆಯ ಸಮಯದಲ್ಲಿ ಮೂಲಭೂತ ಸೌಕರ್ಯಗಳ ಮೇಲೆ ದಾಳಿ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟುಮಾಡುವುದು ಒಳ್ಳೆಯದಲ್ಲ. ಈ ಮೂಲಭೂತ ಸೌಕರ್ಯಗಳು ಯಾವುದೇ ನಾಯಕ ಅಥವಾ ಪಕ್ಷ ಅಥವಾ ಸರ್ಕಾರದ್ದಲ್ಲ ಎನ್ನುವುದನ್ನು ಅವರು ನೆನಪಿನಲ್ಲಿಡಬೇಕು. ಇವು ರಾಷ್ಟ್ರೀಯ ಸ್ವತ್ತು. ಇವುಗಳನ್ನು ಪ್ರತಿಯೊಬ್ಬ ಬಡವರ, ತೆರಿಗೆದಾರರ, ಮಧ್ಯಮ ವರ್ಗದವರ ಮತ್ತು ಸಮಾಜದ ಪ್ರತಿಯೊಂದು ವರ್ಗದವರ ಬೆವರಿನಿಂದ ಸೃಷ್ಟಿಸಲಾಗಿದೆ. ಹಾಗಾಗಿ ಇವುಗಳಿಗೆ ಹಾನಿ ಮಾಡಿದರೆ ಅದು ಜನಸಾಮಾನ್ಯನ ಮೇಲೆ ನೇರವಾಗಿ ಮಾಡಿದ ದಾಳಿಯಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ರೈತರು ಖಲೀಸ್ತಾನಿಗಳಲ್ಲ, ನಮ್ಮ ಅನ್ನದಾತರು: ವಿಷಾದ ವ್ಯಕ್ತಪಡಿಸಿದ ರಾಜನಾಥ್ ಸಿಂಗ್

“ಪ್ರಜಾಪ್ರಭುತ್ವದ ಹಕ್ಕುಗಳನ್ನು ಚಲಾಯಿಸುವಾಗ ಜನರು ತಮ್ಮ ರಾಷ್ಟ್ರೀಯ ಕರ್ತವ್ಯಗಳನ್ನು ಮರೆಯಬಾರದು” ಎಂದು ಮೋದಿ ಹೇಳಿದರು.

‘ರೈಲ್‌ ರೊಕೊ’ ಹೋರಾಟದಲ್ಲಿ ಪ್ರತಿಭಟನಾಕಾರರು ರೈಲ್ವೆ ಹಳಿಗಳನ್ನು ಸ್ವಾಧೀನಪಡಿಸಿಕೊಂಡಿದ್ದರು. ಇದನ್ನು ಉಲ್ಲೇಖಿಸಿದ ಪ್ರಧಾನಿ, “ಪ್ರತಿಭಟನಾಕಾರರು ರೈಲುಗಳನ್ನು ಹೆಚ್ಚಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು…

ಕಳೆದ ಒಂದು ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆ ಆರು ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ನಡುವೆಯೇ ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸಲು ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಬಲಪಂಥೀಯ ಮಾಧ್ಯಮಗಳು ಹಾಗೂ ಬಿಜೆಪಿ ಐಟಿ ಸೆಲ್‌ಗಳು ಪ್ರಯತ್ನಿಸುತ್ತಿವೆ. ಇದರ ಭಾಗವಾಗಿ ರೈತರನ್ನು ನಕ್ಸಲರು, ಖಲೀಸ್ತಾನಿಗಳು, ಭಯೋತ್ಪಾದಕರು, ನಕಲಿ ರೈತರು ಎಂದು ಮುಂತಾದ ಅಸಾಂವಿಧಾನಿಕ ಪದಗಳನ್ನು ಪ್ರಯೋಗಿಸಿ ಜನರಲ್ಲಿ ನಕಾರಾತ್ಮಕ ಭಾವನೆಯನ್ನು ಹರಡುತ್ತಿದೆ. ಆದರೆ ಇದಾವುದಕ್ಕೂ ಅಂಜದ ರೈತರು ತಮ್ಮ ದಿಟ್ಟ ಹೋರಾಟವನ್ನು ಮುಂದುವರೆಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...