Homeಚಳವಳಿಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ಜಿಯೋ ಟವರ್‌ಗಳ ಮೇಲಿನ ರೈತರ ದಾಳಿಯನ್ನು ಪರೋಕ್ಷವಾಗಿ ಖಂಡಿಸಿದ ಪ್ರಧಾನಿ

ಇವು ರಾಷ್ಟ್ರೀಯ ಸ್ವತ್ತು. ಇವುಗಳನ್ನು ಪ್ರತಿಯೊಬ್ಬ ಬಡವರ, ತೆರಿಗೆದಾರರ, ಮಧ್ಯಮ ವರ್ಗದವರ ಮತ್ತು ಸಮಾಜದ ಪ್ರತಿಯೊಂದು ವರ್ಗದವರ ಬೆವರಿನಿಂದ ಸೃಷ್ಟಿಸಲಾಗಿದೆ. ಹಾಗಾಗಿ ಇವುಗಳಿಗೆ ಹಾನಿ ಮಾಡಿದರೆ ಅದು ಜನಸಾಮಾನ್ಯನ ಮೇಲೆ ನೇರವಾಗಿ ಮಾಡಿದ ದಾಳಿಯಾಗುತ್ತದೆ

- Advertisement -
- Advertisement -

ಕೇಂದ್ರ ಸರ್ಕಾರದ ಕಾಯ್ದೆಗಳ ವಿರುದ್ಧ ಹೋರಾಟ ಮಾಡುತ್ತಿರುವ ರೈತರು ಇತ್ತೀಚೆಗೆ ಪಂಜಾಬಿನಲ್ಲಿರುವ ಸಾವಿರಾರು ಜಿಯೋ ಟವರ್‌ಗಳಿಗೆ ಹಾನಿಯುಂಟುಮಾಡಿದ್ದರು. ಇದನ್ನು ಪರೋಕ್ಷವಾಗಿ ಖಂಡಿಸಿರುವ ಪ್ರಧಾನಿ ಮೋದಿ, “ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡುವುದು ಜನಸಾಮಾನ್ಯರ ಮೇಲೆ ದಾಳಿ ಮಾಡಿದಂತೆ” ಎಂದು ಹೇಳಿದ್ದಾರೆ.

“ಪ್ರತಿಭಟನೆಯ ಸಮಯದಲ್ಲಿ ಮೂಲಭೂತ ಸೌಕರ್ಯಗಳ ಮೇಲೆ ದಾಳಿ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟುಮಾಡುವುದು ಒಳ್ಳೆಯದಲ್ಲ. ಈ ಮೂಲಭೂತ ಸೌಕರ್ಯಗಳು ಯಾವುದೇ ನಾಯಕ ಅಥವಾ ಪಕ್ಷ ಅಥವಾ ಸರ್ಕಾರದ್ದಲ್ಲ ಎನ್ನುವುದನ್ನು ಅವರು ನೆನಪಿನಲ್ಲಿಡಬೇಕು. ಇವು ರಾಷ್ಟ್ರೀಯ ಸ್ವತ್ತು. ಇವುಗಳನ್ನು ಪ್ರತಿಯೊಬ್ಬ ಬಡವರ, ತೆರಿಗೆದಾರರ, ಮಧ್ಯಮ ವರ್ಗದವರ ಮತ್ತು ಸಮಾಜದ ಪ್ರತಿಯೊಂದು ವರ್ಗದವರ ಬೆವರಿನಿಂದ ಸೃಷ್ಟಿಸಲಾಗಿದೆ. ಹಾಗಾಗಿ ಇವುಗಳಿಗೆ ಹಾನಿ ಮಾಡಿದರೆ ಅದು ಜನಸಾಮಾನ್ಯನ ಮೇಲೆ ನೇರವಾಗಿ ಮಾಡಿದ ದಾಳಿಯಾಗುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ರೈತರು ಖಲೀಸ್ತಾನಿಗಳಲ್ಲ, ನಮ್ಮ ಅನ್ನದಾತರು: ವಿಷಾದ ವ್ಯಕ್ತಪಡಿಸಿದ ರಾಜನಾಥ್ ಸಿಂಗ್

“ಪ್ರಜಾಪ್ರಭುತ್ವದ ಹಕ್ಕುಗಳನ್ನು ಚಲಾಯಿಸುವಾಗ ಜನರು ತಮ್ಮ ರಾಷ್ಟ್ರೀಯ ಕರ್ತವ್ಯಗಳನ್ನು ಮರೆಯಬಾರದು” ಎಂದು ಮೋದಿ ಹೇಳಿದರು.

‘ರೈಲ್‌ ರೊಕೊ’ ಹೋರಾಟದಲ್ಲಿ ಪ್ರತಿಭಟನಾಕಾರರು ರೈಲ್ವೆ ಹಳಿಗಳನ್ನು ಸ್ವಾಧೀನಪಡಿಸಿಕೊಂಡಿದ್ದರು. ಇದನ್ನು ಉಲ್ಲೇಖಿಸಿದ ಪ್ರಧಾನಿ, “ಪ್ರತಿಭಟನಾಕಾರರು ರೈಲುಗಳನ್ನು ಹೆಚ್ಚಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೃಷಿ ಕಾಯ್ದೆಗಳ ಜಾರಿ: ವರ್ತಕರಿಂದ ಸುಮಾರು 5 ಕೋಟಿ ರೂ ವಂಚನೆಯಾಗಿದೆ ಎಂದು…

ಕಳೆದ ಒಂದು ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆ ಆರು ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ನಡುವೆಯೇ ರೈತರ ಪ್ರತಿಭಟನೆಯನ್ನು ದಿಕ್ಕುತಪ್ಪಿಸಲು ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಬಲಪಂಥೀಯ ಮಾಧ್ಯಮಗಳು ಹಾಗೂ ಬಿಜೆಪಿ ಐಟಿ ಸೆಲ್‌ಗಳು ಪ್ರಯತ್ನಿಸುತ್ತಿವೆ. ಇದರ ಭಾಗವಾಗಿ ರೈತರನ್ನು ನಕ್ಸಲರು, ಖಲೀಸ್ತಾನಿಗಳು, ಭಯೋತ್ಪಾದಕರು, ನಕಲಿ ರೈತರು ಎಂದು ಮುಂತಾದ ಅಸಾಂವಿಧಾನಿಕ ಪದಗಳನ್ನು ಪ್ರಯೋಗಿಸಿ ಜನರಲ್ಲಿ ನಕಾರಾತ್ಮಕ ಭಾವನೆಯನ್ನು ಹರಡುತ್ತಿದೆ. ಆದರೆ ಇದಾವುದಕ್ಕೂ ಅಂಜದ ರೈತರು ತಮ್ಮ ದಿಟ್ಟ ಹೋರಾಟವನ್ನು ಮುಂದುವರೆಸಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...