Homeಮುಖಪುಟ’ಪ್ರಧಾನಿ ಒಬ್ಬ ದಂಗಾಬಾಜ್ ಮತ್ತು ರಾಕ್ಷಸ’: ಬಿಜೆಪಿ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

’ಪ್ರಧಾನಿ ಒಬ್ಬ ದಂಗಾಬಾಜ್ ಮತ್ತು ರಾಕ್ಷಸ’: ಬಿಜೆಪಿ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

"ನಾನು ವಿಧಾನಸಭಾ ಚುನಾವಣೆಯಲ್ಲಿ ಗೋಲ್‌ಕೀಪರ್ ಆಗಿರುತ್ತೇನೆ. ಬಿಜೆಪಿಗೆ ಒಂದೇ ಒಂದು ಗೋಲು ಗಳಿಸಲು ಬಿಡುವುದಿಲ್ಲ" ಎಂದು ಅವರು ಹೇಳಿದರು.

- Advertisement -
- Advertisement -

ತನ್ನ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಯನ್ನು ಸಿಬಿಐ ತನಿಖೆಗೆ ಒಳಪಡಿಸಿದ ಕುರಿತು ಪ್ರಸ್ತಾಪಿಸಿದ ಮಮತಾ ಬ್ಯಾನರ್ಜಿ, ಇಂದು ಬಿಜೆಪಿ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು “ದಂಗಬಾಜ್ (ದಂಗೆಕೋರ)” ಮತ್ತು “ದೈತ್ಯ (ರಾಕ್ಷಸ)” ಎಂಬ ಪದಗಳನ್ನು ಬಳಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮೂರು ತಿಂಗಳ ಅಂತರದಲ್ಲಿರುವ ರಾಜ್ಯ ಚುನಾವಣೆಯ ಪ್ರಚಾರಕ್ಕಾಗಿ ಕೋಲ್ಕತ್ತಾದ ಹೂಗ್ಲಿಯಲ್ಲಿ ನಡೆದ ತೃಣಮೂಲ ಕಾಂಗ್ರೆಸ್ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, “ಪ್ರಧಾನಿ ಈ ದೇಶದ ಅತಿ ದೊಡ್ಡ ದಂಗಾಬಾಜ್” ಎಂದು ಕಿಡಿಕಾರಿದ್ದಾರೆ.

ತೃಣಮೂಲದವರ ಮೇಲೆ ಬಿಜೆಪಿ ಬಳಸುವ “ತೋಲಾಬಾಜ್” ನಿಂದನೆಗೆ ನೇರ ಪ್ರತಿಕ್ರಿಯೆಯಾಗಿ ದಂಗಬಾಜ್ ಪದದ ಮೂಲಕ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: 300 ಕ್ಕೂ ಹೆಚ್ಚು ಗುಡಿಸಲುಗಳ ಧ್ವಂಸ: ಚಿಕ್ಕಮಗಳೂರು ನಗರಸಭೆಯ ವಿರುದ್ದ ಪ್ರತಿಭಟನೆ

2020ರ ನವೆಂಬರ್‌ನಲ್ಲಿ ಅಮೆರಿಕ ಚುನಾವಣೆಯ ಅಖಾಡದಲ್ಲಿ ಹೀನಾಯವಾಗಿ ಸೋತ ಡೊನಾಲ್ಡ್ ಟ್ರಂಪ್ ಅವರಿಗಿಂತಲೂ “ಕೆಟ್ಟ ಪರಿಸ್ಥಿತಿ” ನಮ್ಮ ಪ್ರಧಾನಮಂತ್ರಿಗಾಗಿ ಕಾಯುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

“ನಾನು ವಿಧಾನಸಭಾ ಚುನಾವಣೆಯಲ್ಲಿ ಗೋಲ್‌ ಕೀಪರ್ ಆಗಿರುತ್ತೇನೆ. ಬಿಜೆಪಿಗೆ ಒಂದೇ ಒಂದು ಗೋಲು ಗಳಿಸಲು ಬಿಡುವುದಿಲ್ಲ” ಎಂದು ಅವರು ಹೇಳಿದರು.

ಕಲ್ಲಿದ್ದಲು ಮಾಫಿಯಾದಿಂದ ಲಂಚ ಪಡೆದ ಪ್ರಕರಣದಲ್ಲಿ ಮಮತಾರವರ ಸೋದರಳಿಯ ಮತ್ತು ತೃಣಮೂಲ ಸಂಸದ ಅಭಿಷೆಕ್ ಬ್ಯಾನರ್ಜಿ ಅವರ ಪತ್ನಿ ರುಜೀರಾ ಅವರನ್ನು ಮನೆಯಲ್ಲಿ ಸಿಬಿಐ ಪ್ರಶ್ನಿಸಿತ್ತು. ಇದಾದ ಒಂದು ದಿನದ ನಂತರ ಮಮತಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರುಜೀರಾ ಬ್ಯಾನರ್ಜಿಯ ಸಹೋದರಿಯನ್ನೂ ಈ ಹಿಂದೆ ಪ್ರಶ್ನಿಸಲಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನೀವು ನನ್ನನ್ನು ಕೊಲ್ಲಬಹುದು, ನನ್ನನ್ನು ಥಳಿಸಬಹುದು. ಆದರೆ ನೀವು ಒಬ್ಬ ಮಹಿಳೆಯನ್ನು, ನನ್ನ ಮನೆಯ ಸೊಸೆಯನ್ನು ಅಗೌರವಗೊಳಿಸಬಹುದೇ? ಆಕೆಯನ್ನು ಕಲ್ಲಿದ್ದಲು ಕಳ್ಳಿ ಎಂದು ಕರೆಯುತ್ತೀರಾ?”ಎಂದು ಮುಖ್ಯಮಂತ್ರಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ: ಪೌರಕಾರ್ಮಿಕರ ಪ್ರತಿಭಟನೆ

“ನೀವು ನಮ್ಮ ತಾಯಂದಿರು ಮತ್ತು ಹೆಣ್ಣುಮಕ್ಕಳನ್ನು ಕಲ್ಲಿದ್ದಲು ಕಳ್ಳರು ಎಂದು ಕರೆಯುತ್ತಿದ್ದೀರಾ? ಓಹೋ ನೀವು ಅಷ್ಟೇನೂ ಕಳಂಕವಿಲ್ಲದವರು ಎಂದುಕೊಂಡಿದ್ದೀರಾ? ನಮಗೆ ಎಲ್ಲವೂ ಗೊತ್ತು. ಆದರೆ ಅದು ನನ್ನ ಮಟ್ಟಕ್ಕಿಂತ ಕೆಳಗೆ ಇರುವ ಕಾರಣ ನಾನು ಏನನ್ನೂ ಹೇಳುವುದಿಲ್ಲ” ಎಂದು ಹೇಳಿದ್ದಾರೆ.

ರ್‍ಯಾಲಿಯಲ್ಲಿ, ಸಿನಿತಾರೆಯರಾದ ಸಯೋನಿ ದತ್ತಾ, ಜೂನ್ ಮಾಲಿಯಾ ಮತ್ತು ಕ್ರಿಕೆಟಿಗ ಮನೋಜ್ ತಿವಾರಿ ಸೇರಿದಂತೆ ಹಲವಾರು ಗಣ್ಯರು ತೃಣಮೂಲ ಕಾಂಗ್ರೆಸ್ ಸೇರಿಕೊಂಡು, ಬಂಗಾಳದ ಆಡಳಿತ ಪಕ್ಷವು ಅಂಗೀಕರಿಸಿದ “ಖೇಲಾ ಹೋಬೆ (ಗೇಮ್ ಆನ್- ಆಟ ಚಾಲೂ)” ಘೋಷಣೆಯನ್ನು ಪುನರುಚ್ಚರಿಸಿದರು.

“ದೇಶವನ್ನು ದೈತ್ಯ ಮತ್ತು ದಾನಬ್ (ಬಂಗಾಳಿಯಲ್ಲಿ ರಾಕ್ಷಸರು ಎಂದರ್ಥ) ಆಳುತ್ತಿವೆ. ಅವರು ನಮ್ಮ ಬೆನ್ನುಮೂಳೆಯನ್ನು ಮುರಿಯಲು ಪ್ರಯತ್ನಿಸುತ್ತಿದ್ದಾರೆ. ಅವರು ಒಳನುಸುಳುತ್ತಾರೆ! ಅವರು ಬಂಗಾಳವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಾರೆ! ನಿಮಗೆ (ಬಂಗಾಳಿಗರಿಗೆ) ಏನು ಬೇಕು? ಬಂಗಾಳ ಬಂಗಾಳವಾಗಿ ಉಳಿಯುವುದು ಬೇಕಾಗಿದೆಯೋ ಅಥವಾ ಬಿಜೆಪಿ ಈಗ ದೇಶದಾದ್ಯಂತ ಏನು ಮಾಡುತ್ತದೆಯೋ ಅದು ಬೇಕೊ? ಗುಜರಾತ್ ಬಂಗಾಳವನ್ನು ಆಳುವುದಿಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...