Homeಮುಖಪುಟ’ಪ್ರಧಾನಿ ಒಬ್ಬ ದಂಗಾಬಾಜ್ ಮತ್ತು ರಾಕ್ಷಸ’: ಬಿಜೆಪಿ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

’ಪ್ರಧಾನಿ ಒಬ್ಬ ದಂಗಾಬಾಜ್ ಮತ್ತು ರಾಕ್ಷಸ’: ಬಿಜೆಪಿ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

"ನಾನು ವಿಧಾನಸಭಾ ಚುನಾವಣೆಯಲ್ಲಿ ಗೋಲ್‌ಕೀಪರ್ ಆಗಿರುತ್ತೇನೆ. ಬಿಜೆಪಿಗೆ ಒಂದೇ ಒಂದು ಗೋಲು ಗಳಿಸಲು ಬಿಡುವುದಿಲ್ಲ" ಎಂದು ಅವರು ಹೇಳಿದರು.

- Advertisement -
- Advertisement -

ತನ್ನ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಯನ್ನು ಸಿಬಿಐ ತನಿಖೆಗೆ ಒಳಪಡಿಸಿದ ಕುರಿತು ಪ್ರಸ್ತಾಪಿಸಿದ ಮಮತಾ ಬ್ಯಾನರ್ಜಿ, ಇಂದು ಬಿಜೆಪಿ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು “ದಂಗಬಾಜ್ (ದಂಗೆಕೋರ)” ಮತ್ತು “ದೈತ್ಯ (ರಾಕ್ಷಸ)” ಎಂಬ ಪದಗಳನ್ನು ಬಳಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮೂರು ತಿಂಗಳ ಅಂತರದಲ್ಲಿರುವ ರಾಜ್ಯ ಚುನಾವಣೆಯ ಪ್ರಚಾರಕ್ಕಾಗಿ ಕೋಲ್ಕತ್ತಾದ ಹೂಗ್ಲಿಯಲ್ಲಿ ನಡೆದ ತೃಣಮೂಲ ಕಾಂಗ್ರೆಸ್ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, “ಪ್ರಧಾನಿ ಈ ದೇಶದ ಅತಿ ದೊಡ್ಡ ದಂಗಾಬಾಜ್” ಎಂದು ಕಿಡಿಕಾರಿದ್ದಾರೆ.

ತೃಣಮೂಲದವರ ಮೇಲೆ ಬಿಜೆಪಿ ಬಳಸುವ “ತೋಲಾಬಾಜ್” ನಿಂದನೆಗೆ ನೇರ ಪ್ರತಿಕ್ರಿಯೆಯಾಗಿ ದಂಗಬಾಜ್ ಪದದ ಮೂಲಕ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: 300 ಕ್ಕೂ ಹೆಚ್ಚು ಗುಡಿಸಲುಗಳ ಧ್ವಂಸ: ಚಿಕ್ಕಮಗಳೂರು ನಗರಸಭೆಯ ವಿರುದ್ದ ಪ್ರತಿಭಟನೆ

2020ರ ನವೆಂಬರ್‌ನಲ್ಲಿ ಅಮೆರಿಕ ಚುನಾವಣೆಯ ಅಖಾಡದಲ್ಲಿ ಹೀನಾಯವಾಗಿ ಸೋತ ಡೊನಾಲ್ಡ್ ಟ್ರಂಪ್ ಅವರಿಗಿಂತಲೂ “ಕೆಟ್ಟ ಪರಿಸ್ಥಿತಿ” ನಮ್ಮ ಪ್ರಧಾನಮಂತ್ರಿಗಾಗಿ ಕಾಯುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

“ನಾನು ವಿಧಾನಸಭಾ ಚುನಾವಣೆಯಲ್ಲಿ ಗೋಲ್‌ ಕೀಪರ್ ಆಗಿರುತ್ತೇನೆ. ಬಿಜೆಪಿಗೆ ಒಂದೇ ಒಂದು ಗೋಲು ಗಳಿಸಲು ಬಿಡುವುದಿಲ್ಲ” ಎಂದು ಅವರು ಹೇಳಿದರು.

ಕಲ್ಲಿದ್ದಲು ಮಾಫಿಯಾದಿಂದ ಲಂಚ ಪಡೆದ ಪ್ರಕರಣದಲ್ಲಿ ಮಮತಾರವರ ಸೋದರಳಿಯ ಮತ್ತು ತೃಣಮೂಲ ಸಂಸದ ಅಭಿಷೆಕ್ ಬ್ಯಾನರ್ಜಿ ಅವರ ಪತ್ನಿ ರುಜೀರಾ ಅವರನ್ನು ಮನೆಯಲ್ಲಿ ಸಿಬಿಐ ಪ್ರಶ್ನಿಸಿತ್ತು. ಇದಾದ ಒಂದು ದಿನದ ನಂತರ ಮಮತಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರುಜೀರಾ ಬ್ಯಾನರ್ಜಿಯ ಸಹೋದರಿಯನ್ನೂ ಈ ಹಿಂದೆ ಪ್ರಶ್ನಿಸಲಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ನೀವು ನನ್ನನ್ನು ಕೊಲ್ಲಬಹುದು, ನನ್ನನ್ನು ಥಳಿಸಬಹುದು. ಆದರೆ ನೀವು ಒಬ್ಬ ಮಹಿಳೆಯನ್ನು, ನನ್ನ ಮನೆಯ ಸೊಸೆಯನ್ನು ಅಗೌರವಗೊಳಿಸಬಹುದೇ? ಆಕೆಯನ್ನು ಕಲ್ಲಿದ್ದಲು ಕಳ್ಳಿ ಎಂದು ಕರೆಯುತ್ತೀರಾ?”ಎಂದು ಮುಖ್ಯಮಂತ್ರಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ: ಪೌರಕಾರ್ಮಿಕರ ಪ್ರತಿಭಟನೆ

“ನೀವು ನಮ್ಮ ತಾಯಂದಿರು ಮತ್ತು ಹೆಣ್ಣುಮಕ್ಕಳನ್ನು ಕಲ್ಲಿದ್ದಲು ಕಳ್ಳರು ಎಂದು ಕರೆಯುತ್ತಿದ್ದೀರಾ? ಓಹೋ ನೀವು ಅಷ್ಟೇನೂ ಕಳಂಕವಿಲ್ಲದವರು ಎಂದುಕೊಂಡಿದ್ದೀರಾ? ನಮಗೆ ಎಲ್ಲವೂ ಗೊತ್ತು. ಆದರೆ ಅದು ನನ್ನ ಮಟ್ಟಕ್ಕಿಂತ ಕೆಳಗೆ ಇರುವ ಕಾರಣ ನಾನು ಏನನ್ನೂ ಹೇಳುವುದಿಲ್ಲ” ಎಂದು ಹೇಳಿದ್ದಾರೆ.

ರ್‍ಯಾಲಿಯಲ್ಲಿ, ಸಿನಿತಾರೆಯರಾದ ಸಯೋನಿ ದತ್ತಾ, ಜೂನ್ ಮಾಲಿಯಾ ಮತ್ತು ಕ್ರಿಕೆಟಿಗ ಮನೋಜ್ ತಿವಾರಿ ಸೇರಿದಂತೆ ಹಲವಾರು ಗಣ್ಯರು ತೃಣಮೂಲ ಕಾಂಗ್ರೆಸ್ ಸೇರಿಕೊಂಡು, ಬಂಗಾಳದ ಆಡಳಿತ ಪಕ್ಷವು ಅಂಗೀಕರಿಸಿದ “ಖೇಲಾ ಹೋಬೆ (ಗೇಮ್ ಆನ್- ಆಟ ಚಾಲೂ)” ಘೋಷಣೆಯನ್ನು ಪುನರುಚ್ಚರಿಸಿದರು.

“ದೇಶವನ್ನು ದೈತ್ಯ ಮತ್ತು ದಾನಬ್ (ಬಂಗಾಳಿಯಲ್ಲಿ ರಾಕ್ಷಸರು ಎಂದರ್ಥ) ಆಳುತ್ತಿವೆ. ಅವರು ನಮ್ಮ ಬೆನ್ನುಮೂಳೆಯನ್ನು ಮುರಿಯಲು ಪ್ರಯತ್ನಿಸುತ್ತಿದ್ದಾರೆ. ಅವರು ಒಳನುಸುಳುತ್ತಾರೆ! ಅವರು ಬಂಗಾಳವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಾರೆ! ನಿಮಗೆ (ಬಂಗಾಳಿಗರಿಗೆ) ಏನು ಬೇಕು? ಬಂಗಾಳ ಬಂಗಾಳವಾಗಿ ಉಳಿಯುವುದು ಬೇಕಾಗಿದೆಯೋ ಅಥವಾ ಬಿಜೆಪಿ ಈಗ ದೇಶದಾದ್ಯಂತ ಏನು ಮಾಡುತ್ತದೆಯೋ ಅದು ಬೇಕೊ? ಗುಜರಾತ್ ಬಂಗಾಳವನ್ನು ಆಳುವುದಿಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...