Homeಕರೋನಾ ತಲ್ಲಣ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

- Advertisement -
- Advertisement -

ಕೊರೊನಾ ವಿರುದ್ಧ ಗರಿಷ್ಠ ಸಂಖ್ಯೆಯ ಅರ್ಹ ಜನರಿಗೆ ಚುಚ್ಚುಮದ್ದು ಮಾಡುವ ಗುರಿಯನ್ನು ಹೊಂದಿರುವ ಟಿಕಾ ಉತ್ಸವ ಅಥವಾ ಲಸಿಕಾ ಉತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟ್ವಿಟರ್‌ನಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಆದರೆ ಕೊರೊನಾವು ದೇಶದಾದ್ಯಂತ ಹೆಚ್ಚುತ್ತಿರಬೇಕಾದರೆ ‘ಹಬ್ಬ’ ಆಚರಿಸುವಂತೆ ಪ್ರಧಾನಿ ಕರೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ.

ಲಸಿಕಾ ಉತ್ಸವ ಆಚರಣೆಯ ಬಗ್ಗೆ ಪ್ರಧಾನಿ ಈ ಹಿಂದೆಯೆ ಹೇಳಿದ್ದರು, ಆದರೆ ಇಂದು ಟ್ವಿಟರ್‌ನಲ್ಲಿ ನಾಲ್ಕು ವಿನಂತಿಗಳನ್ನೂ ಮಾಡಿದ್ದಾರೆ. ಅವರು, “ಇಂದು, ನಾವು ದೇಶಾದ್ಯಂತ ಟಿಕಾ ಉತ್ಸವವನ್ನು ಪ್ರಾರಂಭಿಸುತ್ತಿದ್ದೇವೆ. ಕೊರೊನಾ ವಿರುದ್ಧದ ಈ ಸುತ್ತಿನ ಹೋರಾಟದಲ್ಲಿ, ನನಗೆ ನಾಲ್ಕು ವಿನಂತಿಗಳಿವೆ …” ಎಂದು ಹೇಳಿದ್ದಾರೆ. ಅವರು ತಮ್ಮ ವಿನಂತಿಗಳ ಪಟ್ಟಿಯ ಲಿಂಕ್‌ ಅನ್ನು ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಹಿನ್ನೆಲೆ ರೈತ ಹೋರಾಟ ಮುಂದೂಡಿ, ಮಾತುಕತೆಗೆ ಬನ್ನಿ ಎಂದ ಕೃಷಿ ಸಚಿವ

ಅವರು ಹಂಚಿಕೊಂಡಿರುವ ಲಿಂಕ್‌ನಲ್ಲಿ ಅವರ ವಿನಂತಿಗಳಿಗೆ.

ಅದರಲ್ಲಿ ಮೊದಲನೆಯದಾಗಿ, ಪ್ರತಿಯೊಬ್ಬರೂ ವ್ಯಾಕ್ಸಿನೇಟ್ ಮಾಡಿಕೊಳ್ಳಿ – ಅನಕ್ಷರಸ್ಥರು ಮತ್ತು ವೃದ್ಧರಂತಹ ಜನರಿಗೆ ವ್ಯಾಕ್ಸಿನೇಷನ್‌ಗೆ ತೆರಳಲು ಸಹಾಯ ಮಾಡಿ.

ಎರಡನೆಯದಾಗಿ, ಪ್ರತಿಯೊಬ್ಬರೂ ಇನ್ನೊಬ್ಬರನ್ನು ಆರೈಕೆ ಮಾಡಿ – ಅಂದರೆ ಕೊರೊನಾ ಚಿಕಿತ್ಸೆ ಪಡೆಯಲು ಸಂಪನ್ಮೂಲ ಇಲ್ಲದ, ಜ್ಞಾನವಿಲ್ಲದ ಜನರಿಗೆ ಸಹಾಯ ಮಾಡಿ.

ಮೂರನೆಯದಾಗಿ, ಪ್ರತಿಯೊಬ್ಬರೂ ಇನ್ನೊಬ್ಬರನ್ನು ಉಳಿಸಿ – ಅಂದರೆ ತಾನು ಮಾಸ್ಕ್‌ ಧರಿಸಿ, ತನ್ನೊಂದಿಗೆ ಇತರರನ್ನು ಉಳಿಸಿ.

ಅಂತಿಮವಾಗಿ, ಸಮಾಜ ಮತ್ತು ಜನರು ‘ಸೂಕ್ಷ್ಮ ಧಾರಕ ವಲಯಗಳನ್ನು’ ರಚಿಸುವಲ್ಲಿ ಮುಂದಾಗಬೇಕು. ಒಂದೇ ಒಂದು ಕೊರೊನಾ ಪ್ರಕರಣ ವರದಿಯಾದ ಸಂದರ್ಭದಲ್ಲಿ ಕುಟುಂಬ ಸದಸ್ಯರು ಮತ್ತು ಸಮುದಾಯದ ಸದಸ್ಯರು ‘ಮೈಕ್ರೋ ಕಂಟೈನ್‌ಮೆಂಟ್ ವಲಯ’ ರಚಿಸಬೇಕು. ಭಾರತದಂತಹ ಜನನಿಬಿಡ ದೇಶದಲ್ಲಿ ಕೊರೊನಾ ವಿರುದ್ಧದ ಹೋರಾಟದ ಪ್ರಮುಖ ಅಂಶವೆಂದರೆ ‘ಮೈಕ್ರೋ ಕಂಟೈನ್‌ಮೆಂಟ್ ವಲಯಗಳು’ ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

“ಈ ಟೀಕಾ ಉತ್ಸವವು ಕೊರೊನಾ ವಿರುದ್ಧದ ಎರಡನೇ ದೊಡ್ಡ ಹೋರಾಟದ ಪ್ರಾರಂಭವಾಗಿದೆ. ವೈಯಕ್ತಿಕ ನೈರ್ಮಲ್ಯ ಮತ್ತು ಸಾಮಾಜಿಕ ನೈರ್ಮಲ್ಯಕ್ಕೆ ನಾವು ವಿಶೇಷ ಒತ್ತು ನೀಡಬೇಕಾಗಿದೆ” ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಆದರೆ ಪ್ರಧಾನಿ ಕರೆ ನೀಡಿರುವ ‘ಉತ್ಸವ’ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಉಂಟು ಮಾಡಿದೆ. ದೇಶದಾದ್ಯಂತ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದೆ. ಸೋಂಕಿನಿಂದಾಗಿ ಸಾವು ನೋವುಗಳು ಕೂಡಾ ಹೆಚ್ಚುತ್ತಿದೆ. ಈ ಹೊತ್ತಿನಲ್ಲಿ ಪ್ರಧಾನಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ಅಷ್ಟೆ ಅಲ್ಲದೆ ಲಸಿಕೆ ಉತ್ಸವಕ್ಕೆ ಕರೆ ನೀಡಲಾಗಿದೆಯಾದರೂ, ಪಂಜಾಬ್, ಮಹಾರಾಷ್ಟ್ರ, ಒರಿಸ್ಸಾ, ಬಿಹಾರ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳು ಲಸಿಕೆ ಕೊರತೆಯ ಬಗ್ಗೆ ಕೇಂದ್ರಕ್ಕೆ ನೆನಪಿಸಿದೆ. ಆದರೆ ಪ್ರಧಾನಿ ಇದರ ಬಗ್ಗೆ ಗಮನ ಹರಿಸದೆ ಲಸಿಕೆ ಕೊರತೆಯ ಸಮಯದಲ್ಲಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಕೂಡಾ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದೇಶದಾದ್ಯಂತ ಕೊರೊನಾ ಸಮಸ್ಯೆಗಳು ಹೆಚ್ಚುತ್ತಿರಬೇಕಾದರೆ ಪ್ರಧಾನಿಯು ‘ಉತ್ಸವ’ಕ್ಕೆ ಕರೆ ನೀಡಿರುವುದು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...