Homeಕರೋನಾ ತಲ್ಲಣ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

- Advertisement -
- Advertisement -

ಕೊರೊನಾ ವಿರುದ್ಧ ಗರಿಷ್ಠ ಸಂಖ್ಯೆಯ ಅರ್ಹ ಜನರಿಗೆ ಚುಚ್ಚುಮದ್ದು ಮಾಡುವ ಗುರಿಯನ್ನು ಹೊಂದಿರುವ ಟಿಕಾ ಉತ್ಸವ ಅಥವಾ ಲಸಿಕಾ ಉತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟ್ವಿಟರ್‌ನಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಆದರೆ ಕೊರೊನಾವು ದೇಶದಾದ್ಯಂತ ಹೆಚ್ಚುತ್ತಿರಬೇಕಾದರೆ ‘ಹಬ್ಬ’ ಆಚರಿಸುವಂತೆ ಪ್ರಧಾನಿ ಕರೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ.

ಲಸಿಕಾ ಉತ್ಸವ ಆಚರಣೆಯ ಬಗ್ಗೆ ಪ್ರಧಾನಿ ಈ ಹಿಂದೆಯೆ ಹೇಳಿದ್ದರು, ಆದರೆ ಇಂದು ಟ್ವಿಟರ್‌ನಲ್ಲಿ ನಾಲ್ಕು ವಿನಂತಿಗಳನ್ನೂ ಮಾಡಿದ್ದಾರೆ. ಅವರು, “ಇಂದು, ನಾವು ದೇಶಾದ್ಯಂತ ಟಿಕಾ ಉತ್ಸವವನ್ನು ಪ್ರಾರಂಭಿಸುತ್ತಿದ್ದೇವೆ. ಕೊರೊನಾ ವಿರುದ್ಧದ ಈ ಸುತ್ತಿನ ಹೋರಾಟದಲ್ಲಿ, ನನಗೆ ನಾಲ್ಕು ವಿನಂತಿಗಳಿವೆ …” ಎಂದು ಹೇಳಿದ್ದಾರೆ. ಅವರು ತಮ್ಮ ವಿನಂತಿಗಳ ಪಟ್ಟಿಯ ಲಿಂಕ್‌ ಅನ್ನು ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಹಿನ್ನೆಲೆ ರೈತ ಹೋರಾಟ ಮುಂದೂಡಿ, ಮಾತುಕತೆಗೆ ಬನ್ನಿ ಎಂದ ಕೃಷಿ ಸಚಿವ

ಅವರು ಹಂಚಿಕೊಂಡಿರುವ ಲಿಂಕ್‌ನಲ್ಲಿ ಅವರ ವಿನಂತಿಗಳಿಗೆ.

ಅದರಲ್ಲಿ ಮೊದಲನೆಯದಾಗಿ, ಪ್ರತಿಯೊಬ್ಬರೂ ವ್ಯಾಕ್ಸಿನೇಟ್ ಮಾಡಿಕೊಳ್ಳಿ – ಅನಕ್ಷರಸ್ಥರು ಮತ್ತು ವೃದ್ಧರಂತಹ ಜನರಿಗೆ ವ್ಯಾಕ್ಸಿನೇಷನ್‌ಗೆ ತೆರಳಲು ಸಹಾಯ ಮಾಡಿ.

ಎರಡನೆಯದಾಗಿ, ಪ್ರತಿಯೊಬ್ಬರೂ ಇನ್ನೊಬ್ಬರನ್ನು ಆರೈಕೆ ಮಾಡಿ – ಅಂದರೆ ಕೊರೊನಾ ಚಿಕಿತ್ಸೆ ಪಡೆಯಲು ಸಂಪನ್ಮೂಲ ಇಲ್ಲದ, ಜ್ಞಾನವಿಲ್ಲದ ಜನರಿಗೆ ಸಹಾಯ ಮಾಡಿ.

ಮೂರನೆಯದಾಗಿ, ಪ್ರತಿಯೊಬ್ಬರೂ ಇನ್ನೊಬ್ಬರನ್ನು ಉಳಿಸಿ – ಅಂದರೆ ತಾನು ಮಾಸ್ಕ್‌ ಧರಿಸಿ, ತನ್ನೊಂದಿಗೆ ಇತರರನ್ನು ಉಳಿಸಿ.

ಅಂತಿಮವಾಗಿ, ಸಮಾಜ ಮತ್ತು ಜನರು ‘ಸೂಕ್ಷ್ಮ ಧಾರಕ ವಲಯಗಳನ್ನು’ ರಚಿಸುವಲ್ಲಿ ಮುಂದಾಗಬೇಕು. ಒಂದೇ ಒಂದು ಕೊರೊನಾ ಪ್ರಕರಣ ವರದಿಯಾದ ಸಂದರ್ಭದಲ್ಲಿ ಕುಟುಂಬ ಸದಸ್ಯರು ಮತ್ತು ಸಮುದಾಯದ ಸದಸ್ಯರು ‘ಮೈಕ್ರೋ ಕಂಟೈನ್‌ಮೆಂಟ್ ವಲಯ’ ರಚಿಸಬೇಕು. ಭಾರತದಂತಹ ಜನನಿಬಿಡ ದೇಶದಲ್ಲಿ ಕೊರೊನಾ ವಿರುದ್ಧದ ಹೋರಾಟದ ಪ್ರಮುಖ ಅಂಶವೆಂದರೆ ‘ಮೈಕ್ರೋ ಕಂಟೈನ್‌ಮೆಂಟ್ ವಲಯಗಳು’ ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

“ಈ ಟೀಕಾ ಉತ್ಸವವು ಕೊರೊನಾ ವಿರುದ್ಧದ ಎರಡನೇ ದೊಡ್ಡ ಹೋರಾಟದ ಪ್ರಾರಂಭವಾಗಿದೆ. ವೈಯಕ್ತಿಕ ನೈರ್ಮಲ್ಯ ಮತ್ತು ಸಾಮಾಜಿಕ ನೈರ್ಮಲ್ಯಕ್ಕೆ ನಾವು ವಿಶೇಷ ಒತ್ತು ನೀಡಬೇಕಾಗಿದೆ” ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಆದರೆ ಪ್ರಧಾನಿ ಕರೆ ನೀಡಿರುವ ‘ಉತ್ಸವ’ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಉಂಟು ಮಾಡಿದೆ. ದೇಶದಾದ್ಯಂತ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದೆ. ಸೋಂಕಿನಿಂದಾಗಿ ಸಾವು ನೋವುಗಳು ಕೂಡಾ ಹೆಚ್ಚುತ್ತಿದೆ. ಈ ಹೊತ್ತಿನಲ್ಲಿ ಪ್ರಧಾನಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ಅಷ್ಟೆ ಅಲ್ಲದೆ ಲಸಿಕೆ ಉತ್ಸವಕ್ಕೆ ಕರೆ ನೀಡಲಾಗಿದೆಯಾದರೂ, ಪಂಜಾಬ್, ಮಹಾರಾಷ್ಟ್ರ, ಒರಿಸ್ಸಾ, ಬಿಹಾರ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳು ಲಸಿಕೆ ಕೊರತೆಯ ಬಗ್ಗೆ ಕೇಂದ್ರಕ್ಕೆ ನೆನಪಿಸಿದೆ. ಆದರೆ ಪ್ರಧಾನಿ ಇದರ ಬಗ್ಗೆ ಗಮನ ಹರಿಸದೆ ಲಸಿಕೆ ಕೊರತೆಯ ಸಮಯದಲ್ಲಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಕೂಡಾ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದೇಶದಾದ್ಯಂತ ಕೊರೊನಾ ಸಮಸ್ಯೆಗಳು ಹೆಚ್ಚುತ್ತಿರಬೇಕಾದರೆ ಪ್ರಧಾನಿಯು ‘ಉತ್ಸವ’ಕ್ಕೆ ಕರೆ ನೀಡಿರುವುದು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...