Homeಕರೋನಾ ತಲ್ಲಣ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

- Advertisement -
- Advertisement -

ಕೊರೊನಾ ವಿರುದ್ಧ ಗರಿಷ್ಠ ಸಂಖ್ಯೆಯ ಅರ್ಹ ಜನರಿಗೆ ಚುಚ್ಚುಮದ್ದು ಮಾಡುವ ಗುರಿಯನ್ನು ಹೊಂದಿರುವ ಟಿಕಾ ಉತ್ಸವ ಅಥವಾ ಲಸಿಕಾ ಉತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟ್ವಿಟರ್‌ನಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಆದರೆ ಕೊರೊನಾವು ದೇಶದಾದ್ಯಂತ ಹೆಚ್ಚುತ್ತಿರಬೇಕಾದರೆ ‘ಹಬ್ಬ’ ಆಚರಿಸುವಂತೆ ಪ್ರಧಾನಿ ಕರೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ.

ಲಸಿಕಾ ಉತ್ಸವ ಆಚರಣೆಯ ಬಗ್ಗೆ ಪ್ರಧಾನಿ ಈ ಹಿಂದೆಯೆ ಹೇಳಿದ್ದರು, ಆದರೆ ಇಂದು ಟ್ವಿಟರ್‌ನಲ್ಲಿ ನಾಲ್ಕು ವಿನಂತಿಗಳನ್ನೂ ಮಾಡಿದ್ದಾರೆ. ಅವರು, “ಇಂದು, ನಾವು ದೇಶಾದ್ಯಂತ ಟಿಕಾ ಉತ್ಸವವನ್ನು ಪ್ರಾರಂಭಿಸುತ್ತಿದ್ದೇವೆ. ಕೊರೊನಾ ವಿರುದ್ಧದ ಈ ಸುತ್ತಿನ ಹೋರಾಟದಲ್ಲಿ, ನನಗೆ ನಾಲ್ಕು ವಿನಂತಿಗಳಿವೆ …” ಎಂದು ಹೇಳಿದ್ದಾರೆ. ಅವರು ತಮ್ಮ ವಿನಂತಿಗಳ ಪಟ್ಟಿಯ ಲಿಂಕ್‌ ಅನ್ನು ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಹಿನ್ನೆಲೆ ರೈತ ಹೋರಾಟ ಮುಂದೂಡಿ, ಮಾತುಕತೆಗೆ ಬನ್ನಿ ಎಂದ ಕೃಷಿ ಸಚಿವ

ಅವರು ಹಂಚಿಕೊಂಡಿರುವ ಲಿಂಕ್‌ನಲ್ಲಿ ಅವರ ವಿನಂತಿಗಳಿಗೆ.

ಅದರಲ್ಲಿ ಮೊದಲನೆಯದಾಗಿ, ಪ್ರತಿಯೊಬ್ಬರೂ ವ್ಯಾಕ್ಸಿನೇಟ್ ಮಾಡಿಕೊಳ್ಳಿ – ಅನಕ್ಷರಸ್ಥರು ಮತ್ತು ವೃದ್ಧರಂತಹ ಜನರಿಗೆ ವ್ಯಾಕ್ಸಿನೇಷನ್‌ಗೆ ತೆರಳಲು ಸಹಾಯ ಮಾಡಿ.

ಎರಡನೆಯದಾಗಿ, ಪ್ರತಿಯೊಬ್ಬರೂ ಇನ್ನೊಬ್ಬರನ್ನು ಆರೈಕೆ ಮಾಡಿ – ಅಂದರೆ ಕೊರೊನಾ ಚಿಕಿತ್ಸೆ ಪಡೆಯಲು ಸಂಪನ್ಮೂಲ ಇಲ್ಲದ, ಜ್ಞಾನವಿಲ್ಲದ ಜನರಿಗೆ ಸಹಾಯ ಮಾಡಿ.

ಮೂರನೆಯದಾಗಿ, ಪ್ರತಿಯೊಬ್ಬರೂ ಇನ್ನೊಬ್ಬರನ್ನು ಉಳಿಸಿ – ಅಂದರೆ ತಾನು ಮಾಸ್ಕ್‌ ಧರಿಸಿ, ತನ್ನೊಂದಿಗೆ ಇತರರನ್ನು ಉಳಿಸಿ.

ಅಂತಿಮವಾಗಿ, ಸಮಾಜ ಮತ್ತು ಜನರು ‘ಸೂಕ್ಷ್ಮ ಧಾರಕ ವಲಯಗಳನ್ನು’ ರಚಿಸುವಲ್ಲಿ ಮುಂದಾಗಬೇಕು. ಒಂದೇ ಒಂದು ಕೊರೊನಾ ಪ್ರಕರಣ ವರದಿಯಾದ ಸಂದರ್ಭದಲ್ಲಿ ಕುಟುಂಬ ಸದಸ್ಯರು ಮತ್ತು ಸಮುದಾಯದ ಸದಸ್ಯರು ‘ಮೈಕ್ರೋ ಕಂಟೈನ್‌ಮೆಂಟ್ ವಲಯ’ ರಚಿಸಬೇಕು. ಭಾರತದಂತಹ ಜನನಿಬಿಡ ದೇಶದಲ್ಲಿ ಕೊರೊನಾ ವಿರುದ್ಧದ ಹೋರಾಟದ ಪ್ರಮುಖ ಅಂಶವೆಂದರೆ ‘ಮೈಕ್ರೋ ಕಂಟೈನ್‌ಮೆಂಟ್ ವಲಯಗಳು’ ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

“ಈ ಟೀಕಾ ಉತ್ಸವವು ಕೊರೊನಾ ವಿರುದ್ಧದ ಎರಡನೇ ದೊಡ್ಡ ಹೋರಾಟದ ಪ್ರಾರಂಭವಾಗಿದೆ. ವೈಯಕ್ತಿಕ ನೈರ್ಮಲ್ಯ ಮತ್ತು ಸಾಮಾಜಿಕ ನೈರ್ಮಲ್ಯಕ್ಕೆ ನಾವು ವಿಶೇಷ ಒತ್ತು ನೀಡಬೇಕಾಗಿದೆ” ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಆದರೆ ಪ್ರಧಾನಿ ಕರೆ ನೀಡಿರುವ ‘ಉತ್ಸವ’ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಉಂಟು ಮಾಡಿದೆ. ದೇಶದಾದ್ಯಂತ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದೆ. ಸೋಂಕಿನಿಂದಾಗಿ ಸಾವು ನೋವುಗಳು ಕೂಡಾ ಹೆಚ್ಚುತ್ತಿದೆ. ಈ ಹೊತ್ತಿನಲ್ಲಿ ಪ್ರಧಾನಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ಅಷ್ಟೆ ಅಲ್ಲದೆ ಲಸಿಕೆ ಉತ್ಸವಕ್ಕೆ ಕರೆ ನೀಡಲಾಗಿದೆಯಾದರೂ, ಪಂಜಾಬ್, ಮಹಾರಾಷ್ಟ್ರ, ಒರಿಸ್ಸಾ, ಬಿಹಾರ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳು ಲಸಿಕೆ ಕೊರತೆಯ ಬಗ್ಗೆ ಕೇಂದ್ರಕ್ಕೆ ನೆನಪಿಸಿದೆ. ಆದರೆ ಪ್ರಧಾನಿ ಇದರ ಬಗ್ಗೆ ಗಮನ ಹರಿಸದೆ ಲಸಿಕೆ ಕೊರತೆಯ ಸಮಯದಲ್ಲಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಕೂಡಾ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದೇಶದಾದ್ಯಂತ ಕೊರೊನಾ ಸಮಸ್ಯೆಗಳು ಹೆಚ್ಚುತ್ತಿರಬೇಕಾದರೆ ಪ್ರಧಾನಿಯು ‘ಉತ್ಸವ’ಕ್ಕೆ ಕರೆ ನೀಡಿರುವುದು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...