Homeಕರೋನಾ ತಲ್ಲಣ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

- Advertisement -
- Advertisement -

ಕೊರೊನಾ ವಿರುದ್ಧ ಗರಿಷ್ಠ ಸಂಖ್ಯೆಯ ಅರ್ಹ ಜನರಿಗೆ ಚುಚ್ಚುಮದ್ದು ಮಾಡುವ ಗುರಿಯನ್ನು ಹೊಂದಿರುವ ಟಿಕಾ ಉತ್ಸವ ಅಥವಾ ಲಸಿಕಾ ಉತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟ್ವಿಟರ್‌ನಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಆದರೆ ಕೊರೊನಾವು ದೇಶದಾದ್ಯಂತ ಹೆಚ್ಚುತ್ತಿರಬೇಕಾದರೆ ‘ಹಬ್ಬ’ ಆಚರಿಸುವಂತೆ ಪ್ರಧಾನಿ ಕರೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ.

ಲಸಿಕಾ ಉತ್ಸವ ಆಚರಣೆಯ ಬಗ್ಗೆ ಪ್ರಧಾನಿ ಈ ಹಿಂದೆಯೆ ಹೇಳಿದ್ದರು, ಆದರೆ ಇಂದು ಟ್ವಿಟರ್‌ನಲ್ಲಿ ನಾಲ್ಕು ವಿನಂತಿಗಳನ್ನೂ ಮಾಡಿದ್ದಾರೆ. ಅವರು, “ಇಂದು, ನಾವು ದೇಶಾದ್ಯಂತ ಟಿಕಾ ಉತ್ಸವವನ್ನು ಪ್ರಾರಂಭಿಸುತ್ತಿದ್ದೇವೆ. ಕೊರೊನಾ ವಿರುದ್ಧದ ಈ ಸುತ್ತಿನ ಹೋರಾಟದಲ್ಲಿ, ನನಗೆ ನಾಲ್ಕು ವಿನಂತಿಗಳಿವೆ …” ಎಂದು ಹೇಳಿದ್ದಾರೆ. ಅವರು ತಮ್ಮ ವಿನಂತಿಗಳ ಪಟ್ಟಿಯ ಲಿಂಕ್‌ ಅನ್ನು ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಹಿನ್ನೆಲೆ ರೈತ ಹೋರಾಟ ಮುಂದೂಡಿ, ಮಾತುಕತೆಗೆ ಬನ್ನಿ ಎಂದ ಕೃಷಿ ಸಚಿವ

ಅವರು ಹಂಚಿಕೊಂಡಿರುವ ಲಿಂಕ್‌ನಲ್ಲಿ ಅವರ ವಿನಂತಿಗಳಿಗೆ.

ಅದರಲ್ಲಿ ಮೊದಲನೆಯದಾಗಿ, ಪ್ರತಿಯೊಬ್ಬರೂ ವ್ಯಾಕ್ಸಿನೇಟ್ ಮಾಡಿಕೊಳ್ಳಿ – ಅನಕ್ಷರಸ್ಥರು ಮತ್ತು ವೃದ್ಧರಂತಹ ಜನರಿಗೆ ವ್ಯಾಕ್ಸಿನೇಷನ್‌ಗೆ ತೆರಳಲು ಸಹಾಯ ಮಾಡಿ.

ಎರಡನೆಯದಾಗಿ, ಪ್ರತಿಯೊಬ್ಬರೂ ಇನ್ನೊಬ್ಬರನ್ನು ಆರೈಕೆ ಮಾಡಿ – ಅಂದರೆ ಕೊರೊನಾ ಚಿಕಿತ್ಸೆ ಪಡೆಯಲು ಸಂಪನ್ಮೂಲ ಇಲ್ಲದ, ಜ್ಞಾನವಿಲ್ಲದ ಜನರಿಗೆ ಸಹಾಯ ಮಾಡಿ.

ಮೂರನೆಯದಾಗಿ, ಪ್ರತಿಯೊಬ್ಬರೂ ಇನ್ನೊಬ್ಬರನ್ನು ಉಳಿಸಿ – ಅಂದರೆ ತಾನು ಮಾಸ್ಕ್‌ ಧರಿಸಿ, ತನ್ನೊಂದಿಗೆ ಇತರರನ್ನು ಉಳಿಸಿ.

ಅಂತಿಮವಾಗಿ, ಸಮಾಜ ಮತ್ತು ಜನರು ‘ಸೂಕ್ಷ್ಮ ಧಾರಕ ವಲಯಗಳನ್ನು’ ರಚಿಸುವಲ್ಲಿ ಮುಂದಾಗಬೇಕು. ಒಂದೇ ಒಂದು ಕೊರೊನಾ ಪ್ರಕರಣ ವರದಿಯಾದ ಸಂದರ್ಭದಲ್ಲಿ ಕುಟುಂಬ ಸದಸ್ಯರು ಮತ್ತು ಸಮುದಾಯದ ಸದಸ್ಯರು ‘ಮೈಕ್ರೋ ಕಂಟೈನ್‌ಮೆಂಟ್ ವಲಯ’ ರಚಿಸಬೇಕು. ಭಾರತದಂತಹ ಜನನಿಬಿಡ ದೇಶದಲ್ಲಿ ಕೊರೊನಾ ವಿರುದ್ಧದ ಹೋರಾಟದ ಪ್ರಮುಖ ಅಂಶವೆಂದರೆ ‘ಮೈಕ್ರೋ ಕಂಟೈನ್‌ಮೆಂಟ್ ವಲಯಗಳು’ ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

“ಈ ಟೀಕಾ ಉತ್ಸವವು ಕೊರೊನಾ ವಿರುದ್ಧದ ಎರಡನೇ ದೊಡ್ಡ ಹೋರಾಟದ ಪ್ರಾರಂಭವಾಗಿದೆ. ವೈಯಕ್ತಿಕ ನೈರ್ಮಲ್ಯ ಮತ್ತು ಸಾಮಾಜಿಕ ನೈರ್ಮಲ್ಯಕ್ಕೆ ನಾವು ವಿಶೇಷ ಒತ್ತು ನೀಡಬೇಕಾಗಿದೆ” ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಆದರೆ ಪ್ರಧಾನಿ ಕರೆ ನೀಡಿರುವ ‘ಉತ್ಸವ’ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಉಂಟು ಮಾಡಿದೆ. ದೇಶದಾದ್ಯಂತ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದೆ. ಸೋಂಕಿನಿಂದಾಗಿ ಸಾವು ನೋವುಗಳು ಕೂಡಾ ಹೆಚ್ಚುತ್ತಿದೆ. ಈ ಹೊತ್ತಿನಲ್ಲಿ ಪ್ರಧಾನಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ಅಷ್ಟೆ ಅಲ್ಲದೆ ಲಸಿಕೆ ಉತ್ಸವಕ್ಕೆ ಕರೆ ನೀಡಲಾಗಿದೆಯಾದರೂ, ಪಂಜಾಬ್, ಮಹಾರಾಷ್ಟ್ರ, ಒರಿಸ್ಸಾ, ಬಿಹಾರ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳು ಲಸಿಕೆ ಕೊರತೆಯ ಬಗ್ಗೆ ಕೇಂದ್ರಕ್ಕೆ ನೆನಪಿಸಿದೆ. ಆದರೆ ಪ್ರಧಾನಿ ಇದರ ಬಗ್ಗೆ ಗಮನ ಹರಿಸದೆ ಲಸಿಕೆ ಕೊರತೆಯ ಸಮಯದಲ್ಲಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಕೂಡಾ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದೇಶದಾದ್ಯಂತ ಕೊರೊನಾ ಸಮಸ್ಯೆಗಳು ಹೆಚ್ಚುತ್ತಿರಬೇಕಾದರೆ ಪ್ರಧಾನಿಯು ‘ಉತ್ಸವ’ಕ್ಕೆ ಕರೆ ನೀಡಿರುವುದು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...