HomeಚಳವಳಿRSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

RSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

- Advertisement -
- Advertisement -

ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಯನ್ನು ರಾಷ್ಟ್ರವ್ಯಾಪಿ ಜಾರಿ ಮಾಡುತ್ತಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಳನ್ನು ಖಂಡಿಸಿ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆರ್‌ಎಸ್‌ಎಸ್‌ನ ಪ್ರಧಾನ ಮಂತ್ರಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ #JhootJhootJhoot (ಸುಳ್ಳು, ಸುಳ್ಳು, ಸುಳ್ಳು) ಎಂಬ ಹ್ಯಾಶ್‌ಟ್ಯಾಗ್ ಕೂಡ ಸೇರಿಸಿದ್ದಾರೆ.

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಭಾನುವಾರ ಪ್ರಧಾನಿ ಮೋದಿಯವರ ಭಾಷಣದ ವಿಡಿಯೋ ಕ್ಲಿಪ್ ಮತ್ತು ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬಂಧನ ಕೇಂದ್ರದ ವಿಡಿಯೋವನ್ನು ರಾಹುಲ್‌ ಗಾಂಧಿ ಟ್ವೀಟ್‌ನೊಂದಿಗೆ ಹಂಚಿಕೊಂಡಿದ್ದಾರೆ. ಆ ಮೂಲಕ ಒಂದು ಕಡೆ ಬಂಧನ ಕೇಂದ್ರ ಕಟ್ಟುತ್ತಿದ್ದರೂ ನರೇಂದ್ರ ಮೋದಿಯವರು ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕುರಿತ ಪ್ರಧಾನಮಂತ್ರಿಯವರ ಹೇಳಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಅವರ ನಡೆಯನ್ನು ಪ್ರತಿಪಕ್ಷಗಳು ತೀವ್ರವಾಗಿ ಪ್ರಶ್ನಿಸಿವೆ.

ಕಾಂಗ್ರೆಸ್ ಮತ್ತು ನಗರ ನಕ್ಸಲರು ಈ ವಿಷಯದ ಬಗ್ಗೆ ವದಂತಿಗಳನ್ನು ಹಬ್ಬಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಕೆಲವು ನಗರ ನಕ್ಸಲರು ಎಲ್ಲಾ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಎಂಬ ವದಂತಿಗಳನ್ನು ಹರಡುತ್ತಿದ್ದಾರೆ. ದೇಶದ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವುದಿಲ್ಲ. ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ. ಭಾರತದ ಮುಸ್ಲಿಮರು ಚಿಂತಿಸಬೇಕಾಗಿಲ್ಲ. ಸಿಎಬಿ ಮತ್ತು ಎನ್‌ಆರ್‌ಸಿ ದೇಶದ ಮುಸ್ಲಿಮರಿಗೆ ಅನ್ವಯಿಸುವುದಿಲ್ಲ” ಎಂದು ಪ್ರಧಾನಿ ಮೋದಿ ಭಾನುವಾರ ರಾಮ್‌ಲೀಲಾ ಮೈದಾನದಲ್ಲಿ ನಡೆದ ಬೃಹತ್‌ ರ್‍ಯಾಲಿಯಲ್ಲಿ ತಿಳಿಸಿದ್ದರು.

“ನನ್ನ ಸರ್ಕಾರ 2014 ರಿಂದ ಅಧಿಕಾರಕ್ಕೆ ಬಂದಾಗಿನಿಂದ, ಎನ್‌ಆರ್‌ಸಿ ಬಗ್ಗೆ ಎಲ್ಲಿಯೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಭಾರತದ 130 ಕೋಟಿ ನಾಗರಿಕರಿಗೆ ಹೇಳಲು ನಾನು ಬಯಸುತ್ತೇನೆ. ಸುಪ್ರೀಂ ಕೋರ್ಟ್‌ನ ಆದೇಶದ ನಂತರವೇ ಈ ಎನ್‌ಆರ್‌ಸಿಯನ್ನು ಅಸ್ಸಾಂನಲ್ಲಿ ಮಾಡಲಾಗಿದೆ” ಎಂದು ಅವರು ಹೇಳಿದ್ದರು. ಅವರ 97 ನಿಮಿಷಗಳ ಭಾಷಣದಲ್ಲಿ ಹೆಚ್ಚಿನ ಸಮಯವನ್ನು ಎನ್‌ಆರ್‌ಸಿ ಮತ್ತು ಹೊಸ ಪೌರತ್ವ ಕಾನೂನಿಗೆ ಮೀಸಲಿ‌ಟ್ಟಿದ್ದರು.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡಿದ ಮೊದಲ ಕಾನೂನು ಎಂಬುದಾಗಿ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಬೃಹತ್‌ ಪ್ರತಿಭಟನೆಗಳು ನಡೆದಿವೆ. ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿರೋಧ ಪಕ್ಷಗಳು ಮತ್ತು ಇತರ ಪ್ರತಿಭಟನಾಕಾರರು ಕಾನೂನು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಎಂದು ಹೇಳುತ್ತಾರೆ ಮತ್ತು ಇದು ಸಂವಿಧಾನದ ಜಾತ್ಯತೀತ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲಯಲ್ಲಿ ರಾಹುಲ್‌ ಗಾಂಧಿ ಮಾಡಿದ ಟ್ವೀಟ್‌ ವೈರಲ್‌ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಕಾಂಗ್ರೆಸ್ , ಇತರೆ ಪಕ್ಷಗಳಿಗಾಗಿ ಗುರಿ ಇಟ್ಟಿದ್ದೀರಾ ಮೋದಿಯವರೇ, ಜನರ ಪರಿಸ್ಥಿತಿ ಬಗ್ಗೆ ಯೋಚಿಸಿ. ಒಂದು ಉಪಯೋಗ ನಿಮ್ಮಿಂದ ಆಗಿಲ್ಲ

  2. ಎರಡು ಸಾವಿರದ 14ನೇ ಚುನಾವಣೆಯಲ್ಲಿ ಕೊಟ್ಟ ಪ್ರಣಾಳಿಕೆ ಗಳೆಲ್ಲವೂ ಬರೀ ಸುಳ್ಳು ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡಿದವರಿಗೆ ಭಯವಿರಬೇಕು ನಮ್ಮ ಅಧಿಕಾರ ಅಂತ ಹೇಳಿದ ಮೋದಿ
    ಕೂದಲೆಳೆಯಷ್ಟು ಬದಲಾವಣೆ ತರಲಿಲ್ಲ ಮೇಕ್ ಇನ್ ಇಂಡಿಯಾ
    ಸ್ವಚ್ಛ ಭಾರತ
    ಸಂವಿಧಾನ ವಿರೋಧಿಯಾಗಿ ಮುಂದುವರಿಯುತ್ತಾ ಸಮಾಜದ ನಾಗರಿಕರು ಎಲ್ಲರಿಗೂ ದ್ರೋಹ ಮಾಡುತ್ತಾ ಹಿಟ್ಲರ್ ಭಾಷಣ ಬಿಟ್ರೆ ಬೇರೆ ಏನು
    ಹೊಸ ಯೋಜನೆಗಳು ಕೈಗಾರಿಕಾ ಸಂಸ್ಥೆ ಉದ್ಯೋಗ ಸೃಷ್ಟಿ ಕೃಷಿ ಇಲಾಖೆಗೆ ಸಂಬಂಧಪಟ್ಟ ಯಾವ ಯೋಜನೆಗಳನ್ನು ರೂಪಿಸಲಿಲ್ಲ

    ಕಾಂಗ್ರೆಸ್ನ ಮನಮೋಹನ್ ಸಿಂಗ್ ಹೋಲಿಸಿಕೊಂಡರೆ
    ನರೇಂದ್ರ ಮೋದಿ ಝೀರೋ ವ್ಯಾಲ್ಯೂ ನು ಕಡಿಮೇನೆ

    ದೇಶದೆಲ್ಲೆಡೆ ಶಾಂತಿಯನ್ನು ಸಾರುತ್ತಾರೆ ಎನ್ನಬೇಕು ಜನಸಾಮಾನ್ಯರು

    ಹೇಳುವುದು ಮಾತ್ರ ಲಾರ್ಡ ಬುದ್ಧ ನೋ ಯುದ್ಧ ಅನ್ನುತ್ತಾರೆ ಇವು ಭಾಷಣಕ್ಕೆ ಮಾತ್ರ ಸೀಮಿತ

    ಮಾಡುತ್ತಿರುವ ಕೆಲಸಗಳು ಮಾತ್ರ ಕೋಮುಗಲಭೆಗಳಿಗೆ ಹೇಳಿ ಕೊಟ್ಟಂತಹ ಮಾರ್ಗದರ್ಶಕರಾಗಿದ್ದಾರೆ ಜೈ ಭೀಮ್

  3. ಶಾಂತಿ ಸೌಹಾರ್ದತೆಯಿಂದ ಕೂಡಿದ ಈ ಭಾರತದಲ್ಲಿ, ಕೋಮುವಾದವನ್ನು ಹುಟ್ಟುಹಾಕುತ್ತಿರುವ, ಸಂವಿಧಾನದ ಆಶಯಕ್ಕೆ ಧಕ್ಕೆ ತರುತ್ತಿರುವ, ಪ್ರಧಾನಮಂತ್ರಿ ಅಂದರೆ ಅದು ನೀವೇ. ಇನ್ನು ಹೆಚ್ಚು ಹೇಳುವುದಕ್ಕೆ ಆಗುವುದಿಲ್ಲ, ದೇಶದ ಪ್ರತಿಯೊಬ್ಬ ಜನರು ನಿಮ್ಮ ನಡೆಯನ್ನು ವೀಕ್ಷಿಸುತ್ತಿದ್ದಾರೆ, ಎಚ್ಚರವಿರಲಿ ಎಲ್ಲಕ್ಕಿಂತ ದೊಡ್ಡದು ದೇಶ, ನಿಮ್ಮ ನಿರ್ಧಾರ ಎಲ್ಲ ಧರ್ಮವನ್ನು ಸಮಾನವಾಗಿ ನೋಡಬೇಕೆ ಹೊರತು, ಕೋಮುವಾದವನ್ನು ಸೃಷ್ಟಿಸಬಾರದು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...