HomeಚಳವಳಿRSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

RSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

- Advertisement -
- Advertisement -

ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಯನ್ನು ರಾಷ್ಟ್ರವ್ಯಾಪಿ ಜಾರಿ ಮಾಡುತ್ತಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಳನ್ನು ಖಂಡಿಸಿ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆರ್‌ಎಸ್‌ಎಸ್‌ನ ಪ್ರಧಾನ ಮಂತ್ರಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ #JhootJhootJhoot (ಸುಳ್ಳು, ಸುಳ್ಳು, ಸುಳ್ಳು) ಎಂಬ ಹ್ಯಾಶ್‌ಟ್ಯಾಗ್ ಕೂಡ ಸೇರಿಸಿದ್ದಾರೆ.

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಭಾನುವಾರ ಪ್ರಧಾನಿ ಮೋದಿಯವರ ಭಾಷಣದ ವಿಡಿಯೋ ಕ್ಲಿಪ್ ಮತ್ತು ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬಂಧನ ಕೇಂದ್ರದ ವಿಡಿಯೋವನ್ನು ರಾಹುಲ್‌ ಗಾಂಧಿ ಟ್ವೀಟ್‌ನೊಂದಿಗೆ ಹಂಚಿಕೊಂಡಿದ್ದಾರೆ. ಆ ಮೂಲಕ ಒಂದು ಕಡೆ ಬಂಧನ ಕೇಂದ್ರ ಕಟ್ಟುತ್ತಿದ್ದರೂ ನರೇಂದ್ರ ಮೋದಿಯವರು ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕುರಿತ ಪ್ರಧಾನಮಂತ್ರಿಯವರ ಹೇಳಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಅವರ ನಡೆಯನ್ನು ಪ್ರತಿಪಕ್ಷಗಳು ತೀವ್ರವಾಗಿ ಪ್ರಶ್ನಿಸಿವೆ.

ಕಾಂಗ್ರೆಸ್ ಮತ್ತು ನಗರ ನಕ್ಸಲರು ಈ ವಿಷಯದ ಬಗ್ಗೆ ವದಂತಿಗಳನ್ನು ಹಬ್ಬಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಕೆಲವು ನಗರ ನಕ್ಸಲರು ಎಲ್ಲಾ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಎಂಬ ವದಂತಿಗಳನ್ನು ಹರಡುತ್ತಿದ್ದಾರೆ. ದೇಶದ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವುದಿಲ್ಲ. ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ. ಭಾರತದ ಮುಸ್ಲಿಮರು ಚಿಂತಿಸಬೇಕಾಗಿಲ್ಲ. ಸಿಎಬಿ ಮತ್ತು ಎನ್‌ಆರ್‌ಸಿ ದೇಶದ ಮುಸ್ಲಿಮರಿಗೆ ಅನ್ವಯಿಸುವುದಿಲ್ಲ” ಎಂದು ಪ್ರಧಾನಿ ಮೋದಿ ಭಾನುವಾರ ರಾಮ್‌ಲೀಲಾ ಮೈದಾನದಲ್ಲಿ ನಡೆದ ಬೃಹತ್‌ ರ್‍ಯಾಲಿಯಲ್ಲಿ ತಿಳಿಸಿದ್ದರು.

“ನನ್ನ ಸರ್ಕಾರ 2014 ರಿಂದ ಅಧಿಕಾರಕ್ಕೆ ಬಂದಾಗಿನಿಂದ, ಎನ್‌ಆರ್‌ಸಿ ಬಗ್ಗೆ ಎಲ್ಲಿಯೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಭಾರತದ 130 ಕೋಟಿ ನಾಗರಿಕರಿಗೆ ಹೇಳಲು ನಾನು ಬಯಸುತ್ತೇನೆ. ಸುಪ್ರೀಂ ಕೋರ್ಟ್‌ನ ಆದೇಶದ ನಂತರವೇ ಈ ಎನ್‌ಆರ್‌ಸಿಯನ್ನು ಅಸ್ಸಾಂನಲ್ಲಿ ಮಾಡಲಾಗಿದೆ” ಎಂದು ಅವರು ಹೇಳಿದ್ದರು. ಅವರ 97 ನಿಮಿಷಗಳ ಭಾಷಣದಲ್ಲಿ ಹೆಚ್ಚಿನ ಸಮಯವನ್ನು ಎನ್‌ಆರ್‌ಸಿ ಮತ್ತು ಹೊಸ ಪೌರತ್ವ ಕಾನೂನಿಗೆ ಮೀಸಲಿ‌ಟ್ಟಿದ್ದರು.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡಿದ ಮೊದಲ ಕಾನೂನು ಎಂಬುದಾಗಿ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಬೃಹತ್‌ ಪ್ರತಿಭಟನೆಗಳು ನಡೆದಿವೆ. ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿರೋಧ ಪಕ್ಷಗಳು ಮತ್ತು ಇತರ ಪ್ರತಿಭಟನಾಕಾರರು ಕಾನೂನು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಎಂದು ಹೇಳುತ್ತಾರೆ ಮತ್ತು ಇದು ಸಂವಿಧಾನದ ಜಾತ್ಯತೀತ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲಯಲ್ಲಿ ರಾಹುಲ್‌ ಗಾಂಧಿ ಮಾಡಿದ ಟ್ವೀಟ್‌ ವೈರಲ್‌ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಕಾಂಗ್ರೆಸ್ , ಇತರೆ ಪಕ್ಷಗಳಿಗಾಗಿ ಗುರಿ ಇಟ್ಟಿದ್ದೀರಾ ಮೋದಿಯವರೇ, ಜನರ ಪರಿಸ್ಥಿತಿ ಬಗ್ಗೆ ಯೋಚಿಸಿ. ಒಂದು ಉಪಯೋಗ ನಿಮ್ಮಿಂದ ಆಗಿಲ್ಲ

  2. ಎರಡು ಸಾವಿರದ 14ನೇ ಚುನಾವಣೆಯಲ್ಲಿ ಕೊಟ್ಟ ಪ್ರಣಾಳಿಕೆ ಗಳೆಲ್ಲವೂ ಬರೀ ಸುಳ್ಳು ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡಿದವರಿಗೆ ಭಯವಿರಬೇಕು ನಮ್ಮ ಅಧಿಕಾರ ಅಂತ ಹೇಳಿದ ಮೋದಿ
    ಕೂದಲೆಳೆಯಷ್ಟು ಬದಲಾವಣೆ ತರಲಿಲ್ಲ ಮೇಕ್ ಇನ್ ಇಂಡಿಯಾ
    ಸ್ವಚ್ಛ ಭಾರತ
    ಸಂವಿಧಾನ ವಿರೋಧಿಯಾಗಿ ಮುಂದುವರಿಯುತ್ತಾ ಸಮಾಜದ ನಾಗರಿಕರು ಎಲ್ಲರಿಗೂ ದ್ರೋಹ ಮಾಡುತ್ತಾ ಹಿಟ್ಲರ್ ಭಾಷಣ ಬಿಟ್ರೆ ಬೇರೆ ಏನು
    ಹೊಸ ಯೋಜನೆಗಳು ಕೈಗಾರಿಕಾ ಸಂಸ್ಥೆ ಉದ್ಯೋಗ ಸೃಷ್ಟಿ ಕೃಷಿ ಇಲಾಖೆಗೆ ಸಂಬಂಧಪಟ್ಟ ಯಾವ ಯೋಜನೆಗಳನ್ನು ರೂಪಿಸಲಿಲ್ಲ

    ಕಾಂಗ್ರೆಸ್ನ ಮನಮೋಹನ್ ಸಿಂಗ್ ಹೋಲಿಸಿಕೊಂಡರೆ
    ನರೇಂದ್ರ ಮೋದಿ ಝೀರೋ ವ್ಯಾಲ್ಯೂ ನು ಕಡಿಮೇನೆ

    ದೇಶದೆಲ್ಲೆಡೆ ಶಾಂತಿಯನ್ನು ಸಾರುತ್ತಾರೆ ಎನ್ನಬೇಕು ಜನಸಾಮಾನ್ಯರು

    ಹೇಳುವುದು ಮಾತ್ರ ಲಾರ್ಡ ಬುದ್ಧ ನೋ ಯುದ್ಧ ಅನ್ನುತ್ತಾರೆ ಇವು ಭಾಷಣಕ್ಕೆ ಮಾತ್ರ ಸೀಮಿತ

    ಮಾಡುತ್ತಿರುವ ಕೆಲಸಗಳು ಮಾತ್ರ ಕೋಮುಗಲಭೆಗಳಿಗೆ ಹೇಳಿ ಕೊಟ್ಟಂತಹ ಮಾರ್ಗದರ್ಶಕರಾಗಿದ್ದಾರೆ ಜೈ ಭೀಮ್

  3. ಶಾಂತಿ ಸೌಹಾರ್ದತೆಯಿಂದ ಕೂಡಿದ ಈ ಭಾರತದಲ್ಲಿ, ಕೋಮುವಾದವನ್ನು ಹುಟ್ಟುಹಾಕುತ್ತಿರುವ, ಸಂವಿಧಾನದ ಆಶಯಕ್ಕೆ ಧಕ್ಕೆ ತರುತ್ತಿರುವ, ಪ್ರಧಾನಮಂತ್ರಿ ಅಂದರೆ ಅದು ನೀವೇ. ಇನ್ನು ಹೆಚ್ಚು ಹೇಳುವುದಕ್ಕೆ ಆಗುವುದಿಲ್ಲ, ದೇಶದ ಪ್ರತಿಯೊಬ್ಬ ಜನರು ನಿಮ್ಮ ನಡೆಯನ್ನು ವೀಕ್ಷಿಸುತ್ತಿದ್ದಾರೆ, ಎಚ್ಚರವಿರಲಿ ಎಲ್ಲಕ್ಕಿಂತ ದೊಡ್ಡದು ದೇಶ, ನಿಮ್ಮ ನಿರ್ಧಾರ ಎಲ್ಲ ಧರ್ಮವನ್ನು ಸಮಾನವಾಗಿ ನೋಡಬೇಕೆ ಹೊರತು, ಕೋಮುವಾದವನ್ನು ಸೃಷ್ಟಿಸಬಾರದು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...