HomeಚಳವಳಿRSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

RSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

- Advertisement -
- Advertisement -

ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಯನ್ನು ರಾಷ್ಟ್ರವ್ಯಾಪಿ ಜಾರಿ ಮಾಡುತ್ತಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಳನ್ನು ಖಂಡಿಸಿ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆರ್‌ಎಸ್‌ಎಸ್‌ನ ಪ್ರಧಾನ ಮಂತ್ರಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ #JhootJhootJhoot (ಸುಳ್ಳು, ಸುಳ್ಳು, ಸುಳ್ಳು) ಎಂಬ ಹ್ಯಾಶ್‌ಟ್ಯಾಗ್ ಕೂಡ ಸೇರಿಸಿದ್ದಾರೆ.

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಭಾನುವಾರ ಪ್ರಧಾನಿ ಮೋದಿಯವರ ಭಾಷಣದ ವಿಡಿಯೋ ಕ್ಲಿಪ್ ಮತ್ತು ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬಂಧನ ಕೇಂದ್ರದ ವಿಡಿಯೋವನ್ನು ರಾಹುಲ್‌ ಗಾಂಧಿ ಟ್ವೀಟ್‌ನೊಂದಿಗೆ ಹಂಚಿಕೊಂಡಿದ್ದಾರೆ. ಆ ಮೂಲಕ ಒಂದು ಕಡೆ ಬಂಧನ ಕೇಂದ್ರ ಕಟ್ಟುತ್ತಿದ್ದರೂ ನರೇಂದ್ರ ಮೋದಿಯವರು ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕುರಿತ ಪ್ರಧಾನಮಂತ್ರಿಯವರ ಹೇಳಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಅವರ ನಡೆಯನ್ನು ಪ್ರತಿಪಕ್ಷಗಳು ತೀವ್ರವಾಗಿ ಪ್ರಶ್ನಿಸಿವೆ.

ಕಾಂಗ್ರೆಸ್ ಮತ್ತು ನಗರ ನಕ್ಸಲರು ಈ ವಿಷಯದ ಬಗ್ಗೆ ವದಂತಿಗಳನ್ನು ಹಬ್ಬಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಕೆಲವು ನಗರ ನಕ್ಸಲರು ಎಲ್ಲಾ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಎಂಬ ವದಂತಿಗಳನ್ನು ಹರಡುತ್ತಿದ್ದಾರೆ. ದೇಶದ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವುದಿಲ್ಲ. ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ. ಭಾರತದ ಮುಸ್ಲಿಮರು ಚಿಂತಿಸಬೇಕಾಗಿಲ್ಲ. ಸಿಎಬಿ ಮತ್ತು ಎನ್‌ಆರ್‌ಸಿ ದೇಶದ ಮುಸ್ಲಿಮರಿಗೆ ಅನ್ವಯಿಸುವುದಿಲ್ಲ” ಎಂದು ಪ್ರಧಾನಿ ಮೋದಿ ಭಾನುವಾರ ರಾಮ್‌ಲೀಲಾ ಮೈದಾನದಲ್ಲಿ ನಡೆದ ಬೃಹತ್‌ ರ್‍ಯಾಲಿಯಲ್ಲಿ ತಿಳಿಸಿದ್ದರು.

“ನನ್ನ ಸರ್ಕಾರ 2014 ರಿಂದ ಅಧಿಕಾರಕ್ಕೆ ಬಂದಾಗಿನಿಂದ, ಎನ್‌ಆರ್‌ಸಿ ಬಗ್ಗೆ ಎಲ್ಲಿಯೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಭಾರತದ 130 ಕೋಟಿ ನಾಗರಿಕರಿಗೆ ಹೇಳಲು ನಾನು ಬಯಸುತ್ತೇನೆ. ಸುಪ್ರೀಂ ಕೋರ್ಟ್‌ನ ಆದೇಶದ ನಂತರವೇ ಈ ಎನ್‌ಆರ್‌ಸಿಯನ್ನು ಅಸ್ಸಾಂನಲ್ಲಿ ಮಾಡಲಾಗಿದೆ” ಎಂದು ಅವರು ಹೇಳಿದ್ದರು. ಅವರ 97 ನಿಮಿಷಗಳ ಭಾಷಣದಲ್ಲಿ ಹೆಚ್ಚಿನ ಸಮಯವನ್ನು ಎನ್‌ಆರ್‌ಸಿ ಮತ್ತು ಹೊಸ ಪೌರತ್ವ ಕಾನೂನಿಗೆ ಮೀಸಲಿ‌ಟ್ಟಿದ್ದರು.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡಿದ ಮೊದಲ ಕಾನೂನು ಎಂಬುದಾಗಿ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಬೃಹತ್‌ ಪ್ರತಿಭಟನೆಗಳು ನಡೆದಿವೆ. ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿರೋಧ ಪಕ್ಷಗಳು ಮತ್ತು ಇತರ ಪ್ರತಿಭಟನಾಕಾರರು ಕಾನೂನು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಎಂದು ಹೇಳುತ್ತಾರೆ ಮತ್ತು ಇದು ಸಂವಿಧಾನದ ಜಾತ್ಯತೀತ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲಯಲ್ಲಿ ರಾಹುಲ್‌ ಗಾಂಧಿ ಮಾಡಿದ ಟ್ವೀಟ್‌ ವೈರಲ್‌ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಕಾಂಗ್ರೆಸ್ , ಇತರೆ ಪಕ್ಷಗಳಿಗಾಗಿ ಗುರಿ ಇಟ್ಟಿದ್ದೀರಾ ಮೋದಿಯವರೇ, ಜನರ ಪರಿಸ್ಥಿತಿ ಬಗ್ಗೆ ಯೋಚಿಸಿ. ಒಂದು ಉಪಯೋಗ ನಿಮ್ಮಿಂದ ಆಗಿಲ್ಲ

  2. ಎರಡು ಸಾವಿರದ 14ನೇ ಚುನಾವಣೆಯಲ್ಲಿ ಕೊಟ್ಟ ಪ್ರಣಾಳಿಕೆ ಗಳೆಲ್ಲವೂ ಬರೀ ಸುಳ್ಳು ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡಿದವರಿಗೆ ಭಯವಿರಬೇಕು ನಮ್ಮ ಅಧಿಕಾರ ಅಂತ ಹೇಳಿದ ಮೋದಿ
    ಕೂದಲೆಳೆಯಷ್ಟು ಬದಲಾವಣೆ ತರಲಿಲ್ಲ ಮೇಕ್ ಇನ್ ಇಂಡಿಯಾ
    ಸ್ವಚ್ಛ ಭಾರತ
    ಸಂವಿಧಾನ ವಿರೋಧಿಯಾಗಿ ಮುಂದುವರಿಯುತ್ತಾ ಸಮಾಜದ ನಾಗರಿಕರು ಎಲ್ಲರಿಗೂ ದ್ರೋಹ ಮಾಡುತ್ತಾ ಹಿಟ್ಲರ್ ಭಾಷಣ ಬಿಟ್ರೆ ಬೇರೆ ಏನು
    ಹೊಸ ಯೋಜನೆಗಳು ಕೈಗಾರಿಕಾ ಸಂಸ್ಥೆ ಉದ್ಯೋಗ ಸೃಷ್ಟಿ ಕೃಷಿ ಇಲಾಖೆಗೆ ಸಂಬಂಧಪಟ್ಟ ಯಾವ ಯೋಜನೆಗಳನ್ನು ರೂಪಿಸಲಿಲ್ಲ

    ಕಾಂಗ್ರೆಸ್ನ ಮನಮೋಹನ್ ಸಿಂಗ್ ಹೋಲಿಸಿಕೊಂಡರೆ
    ನರೇಂದ್ರ ಮೋದಿ ಝೀರೋ ವ್ಯಾಲ್ಯೂ ನು ಕಡಿಮೇನೆ

    ದೇಶದೆಲ್ಲೆಡೆ ಶಾಂತಿಯನ್ನು ಸಾರುತ್ತಾರೆ ಎನ್ನಬೇಕು ಜನಸಾಮಾನ್ಯರು

    ಹೇಳುವುದು ಮಾತ್ರ ಲಾರ್ಡ ಬುದ್ಧ ನೋ ಯುದ್ಧ ಅನ್ನುತ್ತಾರೆ ಇವು ಭಾಷಣಕ್ಕೆ ಮಾತ್ರ ಸೀಮಿತ

    ಮಾಡುತ್ತಿರುವ ಕೆಲಸಗಳು ಮಾತ್ರ ಕೋಮುಗಲಭೆಗಳಿಗೆ ಹೇಳಿ ಕೊಟ್ಟಂತಹ ಮಾರ್ಗದರ್ಶಕರಾಗಿದ್ದಾರೆ ಜೈ ಭೀಮ್

  3. ಶಾಂತಿ ಸೌಹಾರ್ದತೆಯಿಂದ ಕೂಡಿದ ಈ ಭಾರತದಲ್ಲಿ, ಕೋಮುವಾದವನ್ನು ಹುಟ್ಟುಹಾಕುತ್ತಿರುವ, ಸಂವಿಧಾನದ ಆಶಯಕ್ಕೆ ಧಕ್ಕೆ ತರುತ್ತಿರುವ, ಪ್ರಧಾನಮಂತ್ರಿ ಅಂದರೆ ಅದು ನೀವೇ. ಇನ್ನು ಹೆಚ್ಚು ಹೇಳುವುದಕ್ಕೆ ಆಗುವುದಿಲ್ಲ, ದೇಶದ ಪ್ರತಿಯೊಬ್ಬ ಜನರು ನಿಮ್ಮ ನಡೆಯನ್ನು ವೀಕ್ಷಿಸುತ್ತಿದ್ದಾರೆ, ಎಚ್ಚರವಿರಲಿ ಎಲ್ಲಕ್ಕಿಂತ ದೊಡ್ಡದು ದೇಶ, ನಿಮ್ಮ ನಿರ್ಧಾರ ಎಲ್ಲ ಧರ್ಮವನ್ನು ಸಮಾನವಾಗಿ ನೋಡಬೇಕೆ ಹೊರತು, ಕೋಮುವಾದವನ್ನು ಸೃಷ್ಟಿಸಬಾರದು.

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...