HomeಚಳವಳಿRSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

RSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

- Advertisement -
- Advertisement -

ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಯನ್ನು ರಾಷ್ಟ್ರವ್ಯಾಪಿ ಜಾರಿ ಮಾಡುತ್ತಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಳನ್ನು ಖಂಡಿಸಿ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆರ್‌ಎಸ್‌ಎಸ್‌ನ ಪ್ರಧಾನ ಮಂತ್ರಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ #JhootJhootJhoot (ಸುಳ್ಳು, ಸುಳ್ಳು, ಸುಳ್ಳು) ಎಂಬ ಹ್ಯಾಶ್‌ಟ್ಯಾಗ್ ಕೂಡ ಸೇರಿಸಿದ್ದಾರೆ.

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಭಾನುವಾರ ಪ್ರಧಾನಿ ಮೋದಿಯವರ ಭಾಷಣದ ವಿಡಿಯೋ ಕ್ಲಿಪ್ ಮತ್ತು ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬಂಧನ ಕೇಂದ್ರದ ವಿಡಿಯೋವನ್ನು ರಾಹುಲ್‌ ಗಾಂಧಿ ಟ್ವೀಟ್‌ನೊಂದಿಗೆ ಹಂಚಿಕೊಂಡಿದ್ದಾರೆ. ಆ ಮೂಲಕ ಒಂದು ಕಡೆ ಬಂಧನ ಕೇಂದ್ರ ಕಟ್ಟುತ್ತಿದ್ದರೂ ನರೇಂದ್ರ ಮೋದಿಯವರು ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕುರಿತ ಪ್ರಧಾನಮಂತ್ರಿಯವರ ಹೇಳಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಅವರ ನಡೆಯನ್ನು ಪ್ರತಿಪಕ್ಷಗಳು ತೀವ್ರವಾಗಿ ಪ್ರಶ್ನಿಸಿವೆ.

ಕಾಂಗ್ರೆಸ್ ಮತ್ತು ನಗರ ನಕ್ಸಲರು ಈ ವಿಷಯದ ಬಗ್ಗೆ ವದಂತಿಗಳನ್ನು ಹಬ್ಬಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಕೆಲವು ನಗರ ನಕ್ಸಲರು ಎಲ್ಲಾ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಎಂಬ ವದಂತಿಗಳನ್ನು ಹರಡುತ್ತಿದ್ದಾರೆ. ದೇಶದ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವುದಿಲ್ಲ. ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ. ಭಾರತದ ಮುಸ್ಲಿಮರು ಚಿಂತಿಸಬೇಕಾಗಿಲ್ಲ. ಸಿಎಬಿ ಮತ್ತು ಎನ್‌ಆರ್‌ಸಿ ದೇಶದ ಮುಸ್ಲಿಮರಿಗೆ ಅನ್ವಯಿಸುವುದಿಲ್ಲ” ಎಂದು ಪ್ರಧಾನಿ ಮೋದಿ ಭಾನುವಾರ ರಾಮ್‌ಲೀಲಾ ಮೈದಾನದಲ್ಲಿ ನಡೆದ ಬೃಹತ್‌ ರ್‍ಯಾಲಿಯಲ್ಲಿ ತಿಳಿಸಿದ್ದರು.

“ನನ್ನ ಸರ್ಕಾರ 2014 ರಿಂದ ಅಧಿಕಾರಕ್ಕೆ ಬಂದಾಗಿನಿಂದ, ಎನ್‌ಆರ್‌ಸಿ ಬಗ್ಗೆ ಎಲ್ಲಿಯೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಭಾರತದ 130 ಕೋಟಿ ನಾಗರಿಕರಿಗೆ ಹೇಳಲು ನಾನು ಬಯಸುತ್ತೇನೆ. ಸುಪ್ರೀಂ ಕೋರ್ಟ್‌ನ ಆದೇಶದ ನಂತರವೇ ಈ ಎನ್‌ಆರ್‌ಸಿಯನ್ನು ಅಸ್ಸಾಂನಲ್ಲಿ ಮಾಡಲಾಗಿದೆ” ಎಂದು ಅವರು ಹೇಳಿದ್ದರು. ಅವರ 97 ನಿಮಿಷಗಳ ಭಾಷಣದಲ್ಲಿ ಹೆಚ್ಚಿನ ಸಮಯವನ್ನು ಎನ್‌ಆರ್‌ಸಿ ಮತ್ತು ಹೊಸ ಪೌರತ್ವ ಕಾನೂನಿಗೆ ಮೀಸಲಿ‌ಟ್ಟಿದ್ದರು.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡಿದ ಮೊದಲ ಕಾನೂನು ಎಂಬುದಾಗಿ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಬೃಹತ್‌ ಪ್ರತಿಭಟನೆಗಳು ನಡೆದಿವೆ. ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿರೋಧ ಪಕ್ಷಗಳು ಮತ್ತು ಇತರ ಪ್ರತಿಭಟನಾಕಾರರು ಕಾನೂನು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಎಂದು ಹೇಳುತ್ತಾರೆ ಮತ್ತು ಇದು ಸಂವಿಧಾನದ ಜಾತ್ಯತೀತ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲಯಲ್ಲಿ ರಾಹುಲ್‌ ಗಾಂಧಿ ಮಾಡಿದ ಟ್ವೀಟ್‌ ವೈರಲ್‌ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಕಾಂಗ್ರೆಸ್ , ಇತರೆ ಪಕ್ಷಗಳಿಗಾಗಿ ಗುರಿ ಇಟ್ಟಿದ್ದೀರಾ ಮೋದಿಯವರೇ, ಜನರ ಪರಿಸ್ಥಿತಿ ಬಗ್ಗೆ ಯೋಚಿಸಿ. ಒಂದು ಉಪಯೋಗ ನಿಮ್ಮಿಂದ ಆಗಿಲ್ಲ

  2. ಎರಡು ಸಾವಿರದ 14ನೇ ಚುನಾವಣೆಯಲ್ಲಿ ಕೊಟ್ಟ ಪ್ರಣಾಳಿಕೆ ಗಳೆಲ್ಲವೂ ಬರೀ ಸುಳ್ಳು ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡಿದವರಿಗೆ ಭಯವಿರಬೇಕು ನಮ್ಮ ಅಧಿಕಾರ ಅಂತ ಹೇಳಿದ ಮೋದಿ
    ಕೂದಲೆಳೆಯಷ್ಟು ಬದಲಾವಣೆ ತರಲಿಲ್ಲ ಮೇಕ್ ಇನ್ ಇಂಡಿಯಾ
    ಸ್ವಚ್ಛ ಭಾರತ
    ಸಂವಿಧಾನ ವಿರೋಧಿಯಾಗಿ ಮುಂದುವರಿಯುತ್ತಾ ಸಮಾಜದ ನಾಗರಿಕರು ಎಲ್ಲರಿಗೂ ದ್ರೋಹ ಮಾಡುತ್ತಾ ಹಿಟ್ಲರ್ ಭಾಷಣ ಬಿಟ್ರೆ ಬೇರೆ ಏನು
    ಹೊಸ ಯೋಜನೆಗಳು ಕೈಗಾರಿಕಾ ಸಂಸ್ಥೆ ಉದ್ಯೋಗ ಸೃಷ್ಟಿ ಕೃಷಿ ಇಲಾಖೆಗೆ ಸಂಬಂಧಪಟ್ಟ ಯಾವ ಯೋಜನೆಗಳನ್ನು ರೂಪಿಸಲಿಲ್ಲ

    ಕಾಂಗ್ರೆಸ್ನ ಮನಮೋಹನ್ ಸಿಂಗ್ ಹೋಲಿಸಿಕೊಂಡರೆ
    ನರೇಂದ್ರ ಮೋದಿ ಝೀರೋ ವ್ಯಾಲ್ಯೂ ನು ಕಡಿಮೇನೆ

    ದೇಶದೆಲ್ಲೆಡೆ ಶಾಂತಿಯನ್ನು ಸಾರುತ್ತಾರೆ ಎನ್ನಬೇಕು ಜನಸಾಮಾನ್ಯರು

    ಹೇಳುವುದು ಮಾತ್ರ ಲಾರ್ಡ ಬುದ್ಧ ನೋ ಯುದ್ಧ ಅನ್ನುತ್ತಾರೆ ಇವು ಭಾಷಣಕ್ಕೆ ಮಾತ್ರ ಸೀಮಿತ

    ಮಾಡುತ್ತಿರುವ ಕೆಲಸಗಳು ಮಾತ್ರ ಕೋಮುಗಲಭೆಗಳಿಗೆ ಹೇಳಿ ಕೊಟ್ಟಂತಹ ಮಾರ್ಗದರ್ಶಕರಾಗಿದ್ದಾರೆ ಜೈ ಭೀಮ್

  3. ಶಾಂತಿ ಸೌಹಾರ್ದತೆಯಿಂದ ಕೂಡಿದ ಈ ಭಾರತದಲ್ಲಿ, ಕೋಮುವಾದವನ್ನು ಹುಟ್ಟುಹಾಕುತ್ತಿರುವ, ಸಂವಿಧಾನದ ಆಶಯಕ್ಕೆ ಧಕ್ಕೆ ತರುತ್ತಿರುವ, ಪ್ರಧಾನಮಂತ್ರಿ ಅಂದರೆ ಅದು ನೀವೇ. ಇನ್ನು ಹೆಚ್ಚು ಹೇಳುವುದಕ್ಕೆ ಆಗುವುದಿಲ್ಲ, ದೇಶದ ಪ್ರತಿಯೊಬ್ಬ ಜನರು ನಿಮ್ಮ ನಡೆಯನ್ನು ವೀಕ್ಷಿಸುತ್ತಿದ್ದಾರೆ, ಎಚ್ಚರವಿರಲಿ ಎಲ್ಲಕ್ಕಿಂತ ದೊಡ್ಡದು ದೇಶ, ನಿಮ್ಮ ನಿರ್ಧಾರ ಎಲ್ಲ ಧರ್ಮವನ್ನು ಸಮಾನವಾಗಿ ನೋಡಬೇಕೆ ಹೊರತು, ಕೋಮುವಾದವನ್ನು ಸೃಷ್ಟಿಸಬಾರದು.

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು.ಅವರಿಗೆ 69 ವರ್ಷಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ದೀರ್ಘ ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಗಳು ಹೇಳಿವೆ. ಆರೋಗ್ಯದಲ್ಲಿ ಹಠಾತ್...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...