HomeಚಳವಳಿRSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

RSSನ ಪ್ರಧಾನಿ ಮೋದಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ: ರಾಹುಲ್‌ ಗಾಂಧಿ

- Advertisement -
- Advertisement -

ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಯನ್ನು ರಾಷ್ಟ್ರವ್ಯಾಪಿ ಜಾರಿ ಮಾಡುತ್ತಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಳನ್ನು ಖಂಡಿಸಿ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆರ್‌ಎಸ್‌ಎಸ್‌ನ ಪ್ರಧಾನ ಮಂತ್ರಿ ಭಾರತಮಾತೆಗೆ ಸುಳ್ಳು ಹೇಳುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ #JhootJhootJhoot (ಸುಳ್ಳು, ಸುಳ್ಳು, ಸುಳ್ಳು) ಎಂಬ ಹ್ಯಾಶ್‌ಟ್ಯಾಗ್ ಕೂಡ ಸೇರಿಸಿದ್ದಾರೆ.

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಭಾನುವಾರ ಪ್ರಧಾನಿ ಮೋದಿಯವರ ಭಾಷಣದ ವಿಡಿಯೋ ಕ್ಲಿಪ್ ಮತ್ತು ಅಸ್ಸಾಂನಲ್ಲಿ ಕಟ್ಟಲ್ಪಡುತ್ತಿರುವ ಬಂಧನ ಕೇಂದ್ರದ ವಿಡಿಯೋವನ್ನು ರಾಹುಲ್‌ ಗಾಂಧಿ ಟ್ವೀಟ್‌ನೊಂದಿಗೆ ಹಂಚಿಕೊಂಡಿದ್ದಾರೆ. ಆ ಮೂಲಕ ಒಂದು ಕಡೆ ಬಂಧನ ಕೇಂದ್ರ ಕಟ್ಟುತ್ತಿದ್ದರೂ ನರೇಂದ್ರ ಮೋದಿಯವರು ಇಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ಕುರಿತ ಪ್ರಧಾನಮಂತ್ರಿಯವರ ಹೇಳಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಅವರ ನಡೆಯನ್ನು ಪ್ರತಿಪಕ್ಷಗಳು ತೀವ್ರವಾಗಿ ಪ್ರಶ್ನಿಸಿವೆ.

ಕಾಂಗ್ರೆಸ್ ಮತ್ತು ನಗರ ನಕ್ಸಲರು ಈ ವಿಷಯದ ಬಗ್ಗೆ ವದಂತಿಗಳನ್ನು ಹಬ್ಬಿಸಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು, ಕೆಲವು ನಗರ ನಕ್ಸಲರು ಎಲ್ಲಾ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಎಂಬ ವದಂತಿಗಳನ್ನು ಹರಡುತ್ತಿದ್ದಾರೆ. ದೇಶದ ಮುಸ್ಲಿಮರನ್ನು ಬಂಧನ ಕೇಂದ್ರಗಳಿಗೆ ಕಳುಹಿಸುವುದಿಲ್ಲ. ಭಾರತದಲ್ಲಿ ಯಾವುದೇ ಬಂಧನ ಕೇಂದ್ರಗಳಿಲ್ಲ. ಭಾರತದ ಮುಸ್ಲಿಮರು ಚಿಂತಿಸಬೇಕಾಗಿಲ್ಲ. ಸಿಎಬಿ ಮತ್ತು ಎನ್‌ಆರ್‌ಸಿ ದೇಶದ ಮುಸ್ಲಿಮರಿಗೆ ಅನ್ವಯಿಸುವುದಿಲ್ಲ” ಎಂದು ಪ್ರಧಾನಿ ಮೋದಿ ಭಾನುವಾರ ರಾಮ್‌ಲೀಲಾ ಮೈದಾನದಲ್ಲಿ ನಡೆದ ಬೃಹತ್‌ ರ್‍ಯಾಲಿಯಲ್ಲಿ ತಿಳಿಸಿದ್ದರು.

“ನನ್ನ ಸರ್ಕಾರ 2014 ರಿಂದ ಅಧಿಕಾರಕ್ಕೆ ಬಂದಾಗಿನಿಂದ, ಎನ್‌ಆರ್‌ಸಿ ಬಗ್ಗೆ ಎಲ್ಲಿಯೂ ಯಾವುದೇ ಚರ್ಚೆ ನಡೆದಿಲ್ಲ ಎಂದು ಭಾರತದ 130 ಕೋಟಿ ನಾಗರಿಕರಿಗೆ ಹೇಳಲು ನಾನು ಬಯಸುತ್ತೇನೆ. ಸುಪ್ರೀಂ ಕೋರ್ಟ್‌ನ ಆದೇಶದ ನಂತರವೇ ಈ ಎನ್‌ಆರ್‌ಸಿಯನ್ನು ಅಸ್ಸಾಂನಲ್ಲಿ ಮಾಡಲಾಗಿದೆ” ಎಂದು ಅವರು ಹೇಳಿದ್ದರು. ಅವರ 97 ನಿಮಿಷಗಳ ಭಾಷಣದಲ್ಲಿ ಹೆಚ್ಚಿನ ಸಮಯವನ್ನು ಎನ್‌ಆರ್‌ಸಿ ಮತ್ತು ಹೊಸ ಪೌರತ್ವ ಕಾನೂನಿಗೆ ಮೀಸಲಿ‌ಟ್ಟಿದ್ದರು.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡಿದ ಮೊದಲ ಕಾನೂನು ಎಂಬುದಾಗಿ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಬೃಹತ್‌ ಪ್ರತಿಭಟನೆಗಳು ನಡೆದಿವೆ. ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿರೋಧ ಪಕ್ಷಗಳು ಮತ್ತು ಇತರ ಪ್ರತಿಭಟನಾಕಾರರು ಕಾನೂನು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಎಂದು ಹೇಳುತ್ತಾರೆ ಮತ್ತು ಇದು ಸಂವಿಧಾನದ ಜಾತ್ಯತೀತ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲಯಲ್ಲಿ ರಾಹುಲ್‌ ಗಾಂಧಿ ಮಾಡಿದ ಟ್ವೀಟ್‌ ವೈರಲ್‌ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಕಾಂಗ್ರೆಸ್ , ಇತರೆ ಪಕ್ಷಗಳಿಗಾಗಿ ಗುರಿ ಇಟ್ಟಿದ್ದೀರಾ ಮೋದಿಯವರೇ, ಜನರ ಪರಿಸ್ಥಿತಿ ಬಗ್ಗೆ ಯೋಚಿಸಿ. ಒಂದು ಉಪಯೋಗ ನಿಮ್ಮಿಂದ ಆಗಿಲ್ಲ

  2. ಎರಡು ಸಾವಿರದ 14ನೇ ಚುನಾವಣೆಯಲ್ಲಿ ಕೊಟ್ಟ ಪ್ರಣಾಳಿಕೆ ಗಳೆಲ್ಲವೂ ಬರೀ ಸುಳ್ಳು ಬ್ಲಾಕ್ ಮನಿ ಬೇನಾಮಿ ಆಸ್ತಿ ಮಾಡಿದವರಿಗೆ ಭಯವಿರಬೇಕು ನಮ್ಮ ಅಧಿಕಾರ ಅಂತ ಹೇಳಿದ ಮೋದಿ
    ಕೂದಲೆಳೆಯಷ್ಟು ಬದಲಾವಣೆ ತರಲಿಲ್ಲ ಮೇಕ್ ಇನ್ ಇಂಡಿಯಾ
    ಸ್ವಚ್ಛ ಭಾರತ
    ಸಂವಿಧಾನ ವಿರೋಧಿಯಾಗಿ ಮುಂದುವರಿಯುತ್ತಾ ಸಮಾಜದ ನಾಗರಿಕರು ಎಲ್ಲರಿಗೂ ದ್ರೋಹ ಮಾಡುತ್ತಾ ಹಿಟ್ಲರ್ ಭಾಷಣ ಬಿಟ್ರೆ ಬೇರೆ ಏನು
    ಹೊಸ ಯೋಜನೆಗಳು ಕೈಗಾರಿಕಾ ಸಂಸ್ಥೆ ಉದ್ಯೋಗ ಸೃಷ್ಟಿ ಕೃಷಿ ಇಲಾಖೆಗೆ ಸಂಬಂಧಪಟ್ಟ ಯಾವ ಯೋಜನೆಗಳನ್ನು ರೂಪಿಸಲಿಲ್ಲ

    ಕಾಂಗ್ರೆಸ್ನ ಮನಮೋಹನ್ ಸಿಂಗ್ ಹೋಲಿಸಿಕೊಂಡರೆ
    ನರೇಂದ್ರ ಮೋದಿ ಝೀರೋ ವ್ಯಾಲ್ಯೂ ನು ಕಡಿಮೇನೆ

    ದೇಶದೆಲ್ಲೆಡೆ ಶಾಂತಿಯನ್ನು ಸಾರುತ್ತಾರೆ ಎನ್ನಬೇಕು ಜನಸಾಮಾನ್ಯರು

    ಹೇಳುವುದು ಮಾತ್ರ ಲಾರ್ಡ ಬುದ್ಧ ನೋ ಯುದ್ಧ ಅನ್ನುತ್ತಾರೆ ಇವು ಭಾಷಣಕ್ಕೆ ಮಾತ್ರ ಸೀಮಿತ

    ಮಾಡುತ್ತಿರುವ ಕೆಲಸಗಳು ಮಾತ್ರ ಕೋಮುಗಲಭೆಗಳಿಗೆ ಹೇಳಿ ಕೊಟ್ಟಂತಹ ಮಾರ್ಗದರ್ಶಕರಾಗಿದ್ದಾರೆ ಜೈ ಭೀಮ್

  3. ಶಾಂತಿ ಸೌಹಾರ್ದತೆಯಿಂದ ಕೂಡಿದ ಈ ಭಾರತದಲ್ಲಿ, ಕೋಮುವಾದವನ್ನು ಹುಟ್ಟುಹಾಕುತ್ತಿರುವ, ಸಂವಿಧಾನದ ಆಶಯಕ್ಕೆ ಧಕ್ಕೆ ತರುತ್ತಿರುವ, ಪ್ರಧಾನಮಂತ್ರಿ ಅಂದರೆ ಅದು ನೀವೇ. ಇನ್ನು ಹೆಚ್ಚು ಹೇಳುವುದಕ್ಕೆ ಆಗುವುದಿಲ್ಲ, ದೇಶದ ಪ್ರತಿಯೊಬ್ಬ ಜನರು ನಿಮ್ಮ ನಡೆಯನ್ನು ವೀಕ್ಷಿಸುತ್ತಿದ್ದಾರೆ, ಎಚ್ಚರವಿರಲಿ ಎಲ್ಲಕ್ಕಿಂತ ದೊಡ್ಡದು ದೇಶ, ನಿಮ್ಮ ನಿರ್ಧಾರ ಎಲ್ಲ ಧರ್ಮವನ್ನು ಸಮಾನವಾಗಿ ನೋಡಬೇಕೆ ಹೊರತು, ಕೋಮುವಾದವನ್ನು ಸೃಷ್ಟಿಸಬಾರದು.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...