Homeಮುಖಪುಟಕಾಯಕ ತತ್ವವೇ ಸಮಾನತೆಯ ತತ್ವ ಅದನ್ನು ಆಚರಿಸೋಣ

ಕಾಯಕ ತತ್ವವೇ ಸಮಾನತೆಯ ತತ್ವ ಅದನ್ನು ಆಚರಿಸೋಣ

- Advertisement -
- Advertisement -

ರೈತಾಪಿ ಜನರು, ಕಾಯಕ ಜೀವಿಗಳು, ಮಹಿಳೆಯರು ಮತ್ತು ಕೆಳವರ್ಗದ ಜನರು ಈ ದೇಶದಲ್ಲಿ ಸಹಸ್ರಾರು ವರ್ಷಗಳಿಂದ ಮನುಧರ್ಮದ ಪ್ರಧಾನವಾದ ವರ್ಣ ವ್ಯವಸ್ಥೆಯಿಂದಾಗಿ ಪಡಬಾರದ ಕಷ್ಟಪಟ್ಟಿದ್ದಾರೆ. ಮೇಲ್ವರ್ವಗದ ಜನರಿಗಾಗಿ ತಮ್ಮ ಬದುಕಿನ ಎಲ್ಲ ಸುಖಭೋಗಗಳು ಅವರಿಗೆ ಧಾರೆಯರೆದು ಕೃತಜ್ಞರಾಗಿರುವ ಭಾವನೆ ಇತಿಹಾಸದ ಪುಟಗಳಲ್ಲಿ ನಾವು ನೋಡಬಹುದಾಗಿದೆ. ಕಾಯಕ ಯೋಗಿಯಾಗಿ ಕಾಯಕವಂತು ಮಾಡಲ್ಲಿಲ್ಲಾ ಆದರೆ ಎಲ್ಲಾ ಸೌಲಭ್ಯಗಳು ಮೆಲ್ಜಾತಿಯ ಜನರಿಗೆ ಮೀಸಲಾಗಿದ್ದವು.

ಎಂಟು ಶತಮಾನಗಳ ಹಿಂದೆ ಭಾರತದಲ್ಲಿ ವೈದಿಕಶಾಹಿ ಅತ್ಯಂತ ಪ್ರಬಲ ಶಾಲಿಯಾಗಿದ್ದ ಕಾಲವದು. ಚತುರ್ವಣಗಳನ್ನು ಮಾಡಿಕೊಂಡು, ಈ ನಾಲ್ಕೂ ವರ್ಣದಿಂದ ಹೊರಗಿರುವವರನ್ನು ಅಸ್ಪೃಶ್ಯರೆಂದು ಕರೆದು, ಅವರನ್ನು ಅತ್ಯಂತ ನಿಕೃಷ್ಟವಾಗಿ ಕಾಣುತ್ತಿದ್ದ ಕಾಲವದು. ಅಂದು ಇಲ್ಲಿ ಅನೇಕ ಮೂಢನಂಬಿಕೆಗಳು, ಗೊಡ್ಡು ಸಂಪ್ರದಾಯಗಳು, ಬಹುದೇವತೋಪಾಸನೆ, ಸ್ತ್ರೀಶೋಷಣೆ ಅನ್ಯಾಯಗಳಂತಹ ಅನೇಕ ಸಂಪ್ರದಾಯಗಳು ರುದ್ರ ತಾಂಡವಾಡುತ್ತಿದ್ದ ಕಾಲವದು – ಕಾಲವಾಗಿತ್ತು. ದೀನ, ದಲಿತರ ಶೋಷಣೆಯಂತೂ ಹೇಳತೀರದು, ಅತಿರೇಕದ ವರ್ತನೆಯಾಗಿತ್ತು. ಸ್ತ್ರೀಯನ್ನು ಕೇವಲ ಭೋಗದ ಗೊಂಬೆಯನ್ನಾಗಿ ಮಾಡಿಕೊಂಡು, ಅವಳಿಗೆ ಯಾವುದೇ ಧರ್ಮ ಸಂಸ್ಕಾರವಿಲ್ಲದೆ ನೋಡಿಕೊಳ್ಳುತ್ತಿದ್ದರು. ವಿಧವೆಯಾದವರನ್ನು ಅಮಾನುಷವಾಗಿ ಹಿಂಸಿಸುತ್ತಿದ್ದ ಕಾಲವದು.

ಬಡವರು, ಶೋಷಿತರು, ನೊಂದವರು, ಸ್ತ್ರೀಯರು ಒಕ್ಕೂರಲಿನಿಂದ ತಮ್ಮನ್ನುದ್ಧರಿಸುವ ಮಹಾಪುರುಷನ ಆಗಮನಕ್ಕಾಗಿ ಕಾತುರದಿಂದ ಕಾಯುತ್ತಿದ್ದ ಕಾಲದಲ್ಲಿ, ನೊಂದವರ ನಂದಾ ದೀಪವಾಗಿ,ಬಡವರ ಭಾಗ್ಯದ ಸಂಜೀವಿನಿಯಾಗಿ, ನಿರ್ಗತಿಕರ ಬಂಧುವಾಗಿ, ಶೋಷಿತರ ದ್ವನಿಯಾಗಿ, ಸ್ತ್ರೀಕುಲೋದ್ಧಾರಕರಾಗಿ, ಮಾನವತೆಯ ಸಾಕಾರ ಮೂರ್ತಿಯಾಗಿ, ದಿವ್ಯ ಜ್ಯೋತಿಯಾಗಿ,ಕಾಯಕ ತತ್ತ್ವದ ಕ್ರಾಂತಿ ಪುರುಷ ರಾಗಿ ಈ ನಾಡಿನಲ್ಲಿ ಜನ್ಮತಾಳಿದವರು ಬಸವಣ್ಣನವರು. ಪ್ರಯುಕ್ತ ಕಾಯಕ ವರ್ಗದ ಜನರಿಗೆ ಸರಿಯಾದ ಗೌರವ ನೀಡದೇ ಇರುವ ಕಾಲದಲ್ಲಿ ಕಾಯಕದ ಸಮಾನತೆಯ ಬಗೆ ಅಂದಿನ ಜನರಿಗೆ ಸಂಪೂರ್ಣ ಸರಿಯಾದ ತಿಳುವಳಿಕೆ ಕೊಡುವ – ನೀಡುವ ಮೂಲಕ ಕಾಯಕದ ಶ್ರೇಷ್ಠತೆಯ ಪ್ರಜ್ಞೆಯನ್ನು ಪ್ರತಿಯೊಬ್ಬ ಶರಣರ ಹೃನ್ಮಮಂದಿರದಲ್ಲಿ ತುಂಬಿದರು. ತರುವಾಯ ಕಾಯಕದ ಗೌರವ ಮತ್ತು ಮೌಲ್ಯಗಳನ್ನು ಸಮಸ್ತ ಶರಣ ಸಂಕುಲಕ್ಕೆ ತಿಳಿ ಹೇಳುವ ಕಾರ್ಯ ನಿರ್ವಹಿಸಿದರು, ಈ ಮೂಲಕ ಕಾಯಕ ವರ್ಗದ ಶರಣರನ್ನು ಒಟ್ಟು ಗೊಡಿಸುವ ಕಾರ್ಯದೊಂದಿಗೆ ಕಲ್ಯಾಣ ಕಾಯಕ ಕ್ರಾಂತಿಗೆ ಕಾರಣಿಭೊತರಾದರು ನಮ್ಮ ಅಣ್ಣ ಬಸವಣ್ಣನವರು.

ಕಾಯಕ ತತ್ವ:

ಕಾಯಕ ಮಾನವನ ಬದುಕಿನ ಬಹು ದೊಡ್ಡ ಅಂಗ,ಈ ಅಂಗದಿಂದಲೇ ನಮ್ಮ ಬದುಕು, ಬದುಕಿಗಾಗಿ ಕಾಯಕ ಮಾಡಲೇಬೇಕು,ಅಂದಾಗಲೇ ಮನುಷ್ಯನ ಬಾಳಿಗೊಂದು ಸುಂದರ ಅರ್ಥ ಬರುತ್ತದೆ. ಆದ್ದರಿಂದ ಮನುಷ್ಯ ತನ್ನ ಜೀವನ ನಿರ್ವಹಣೆಗಾಗಿ ಅವಲಂಬಿಸಿರುವ ವೃತ್ತಿಯೇ ಕಾಯಕ,ಅದರಲ್ಲಿ ಮೇಲುಕೀಳೆಂಬುದಿಲ್ಲ. ಕಾಯಕ ಮಾಡದವರು ಊಟ ಮಾಡಲು ಯೋಗ್ಯರಲ್ಲ. ವೈಚಾರಿಕತೆಯ ಧರ್ಮದೃಷ್ಟಿಯಿಂದ ನ್ಯಾಯವಾದ ರೀತಿಯಲ್ಲಿ ತಮ್ಮ ಕಾಯಕವನ್ನು ಮಾಡಬೇಕಾದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಹಾಗಾಗಿ ಪ್ರತಿಯೊಬ್ಬ ಮಾನವರೂ ಉದ್ಯೋಗಶೀಲನಾಗಬೇಕು. ತನಗೆ ಸಮಾಜಕ್ಕೆ ಮತ್ತು ರಾಷ್ಟ್ರಕ್ಕೆ ಆವಶ್ಯಕವಾದ ಪ್ರತಿಯೊಂದು ಕೆಲಸವನ್ನೂ ಪ್ರತಿಯೊಬ್ಬರೂ ನಿಸ್ವಾರ್ಥ ಸೇವಾ ಮನೋಭಾವದಿಂದ ಹಂಚಿಕೊಂಡು ಭಕ್ತಿ, ಭಾವ, ಶ್ರದ್ಧೆಯಿಂದ ಮಾಡಬೇಕು. ಮಾಡಿದಾಗಲೇ ಮನಸ್ಸಿಗೊಂದು ನೆಮ್ಮದಿಯ ನಿಟ್ಟುಸಿರು.

ಈ ಹಿನ್ನೆಲೆಯಲ್ಲಿ 12ನೇ ಶತಮಾನದ ಬಸವಾದಿ ಪ್ರಮಥರು ಅಂದು ಕೈಗೊಂಡ ಹಲವಾರು ಸಮಾಜ ಮುಖಿ ಸೇವೆಗಳ ಕಾರ್ಯಗಳು, ಕಾಯಕ ತತ್ವದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಅವರ ಕೊಡುಗೆ ಅಪಾರವಾದುದು. ಇವರಲ್ಲಿ ಅಗ್ರಗಣ್ಯ ನಾಯಕನೆಂದರೆ ಬಸವಣ್ಣನವರು. ಹಾಗಾಗಿ ಕಾಯಕ ತತ್ವದ ಪ್ರಮುಖ ರೂವಾರಿ, ಸಮಾನತೆಯ ಯುಗ ಪುರುಷ, ಭಕ್ತಿ ಬಂಢಾರಿ ಬಸವಣ್ಣನವರು ಕೈಗೊಂಡ ಕಾಯಕ ಧ್ಯೇಯದ ಕ್ರಾಂತಿಕಾರಿ ವಿಚಾರಗಳ ಹೆಜ್ಜೆಗಳು ಇಂದಿನ ಕಾರ್ಮಿಕ ಸಮಾಜಕ್ಕೆ ಅತ್ಯಗತ್ಯವಾಗಿವೆ.ಆದಕಾರಣ ಅವರ ಕಾಯಕ ತತ್ವವನ್ನು ನಾವೆಲ್ಲರೂ ಇಂದು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಗಬೇಕಾಗಿದೆ.ಕೇವಲ ತೋರಿಕೆಗಾಗಿ ಮಾಡದೇ, ಆತ್ಮತೃಪ್ತಿಗಾಗಿ ಮಾಡುವುದು ಲೇಸು ಹಾಗೂ ಕುಟುಂಬ ವರ್ಗಕ್ಕೂ, ನಾಡಿಗೂ, ದೇಶಕ್ಕೂ ಒಳ್ಳೆಯದು ಇದರಿಂದ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗುತ್ತದೆ, ನಮ್ಮೆಲ್ಲರ ಭವಿಷ್ಯ ಉಜ್ವಲವಾಗುತ್ತದೆ.

ಕಾಯಕ ನಿಷ್ಠೆ:

ದುಡಿದುಣ್ಣುವುದು ಮನುಷ್ಯ ಸಹಜ ಧರ್ಮ. ಆಹಾರ ದಕ್ಕಿಸಿಕೊಂಡ ಮಾತ್ರಕ್ಕೆ ಮನುಷ್ಯನ ಜವಾಬ್ದಾರಿ ಮುಗಿಯುವುದಿಲ್ಲ. ದುಡಿಮೆ ಮನುಷ್ಯನಿಗೆ ಸ್ವಾಭಿಮಾನವನ್ನೂ ಆತ್ಮವಿಶ್ವಾಸವನ್ನೂ ಜವಾಬ್ದಾರಿಯನ್ನೂ ಗಳಿಕೆ ಹಂಚಿಕೊಳ್ಳುವ ದಾಸೋಹ (ಸೇವಾ ಕಾರ್ಯಗಳು)ನಡೆಸುವ ಅವಕಾಶವನ್ನೂ ನೀಡುತ್ತದೆ. ಕಾಯಕನಿಷ್ಠೆ ಬದುಕನ್ನು ಸಮತೋಲನದಲ್ಲಿ ಇರಿಸುತ್ತದೆ. ಕಾಯಕದಲ್ಲಿ ತೊಡಗಿದವರು ತಪ್ಪು ಕಾರ್ಯಗಳನ್ನು ಮಾಡುವ ಪ್ರಮೇಯವೇ ಬರುವುದಿಲ್ಲ! ಹಾಗೆಂದೇ ಬಸವಣ್ಣನವರು ಕಾಯಕ ಪರಂಪರಕ್ಕೆ ಇನ್ನಿಲ್ಲದ ಮಹತ್ವ ನೀಡಿದರು. ಕಾಯಕ ಒಂದು ಅದ್ಭುತ ಪ್ರಕ್ರಿಯೆ. ನಮ್ಮ ನಮ್ಮ ಕೆಲಸವನ್ನು ನಾವು ಕಾಯಾ ವಾಚಾ ಭಕ್ತಿ, ಭಾವ,
ನಿಸ್ವಾರ್ಥ ಮನಸ್ಸಿನಿಂದ ಮಾಡಬೇಕು. ನಮ್ಮ ದೇಹದ ಪ್ರತಿ ಕಣವನ್ನೂ ನಾವು ಮಾಡುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು. ಒಂದೊಳ್ಳೆ ಸಿಹಿ ತಿನಿಸನ್ನು ನಾವು ತಿನ್ನುವಾಗ ನಮ್ಮ ಇಡೀ ದೇಹದ ಅಸ್ತಿತ್ವವೇ ಅದರ ಆಸ್ವಾದನೆಯಲ್ಲಿ ತೊಡಗಿಸಿಕೊಳ್ಳುತ್ತೇವೇ ಹಾಗೆ ನಮ್ಮ ಕೆಲಸದಲ್ಲೂ ತೊಡಗಿಸಿಕೊಳ್ಳಬೇಕು. ಆಗ ಸಹಜವಾಗಿ ನಮ್ಮ ಕೆಲಸದ ಮೇಲೆ ನಮಗೆ ಅಭಿಮಾನ, ಪ್ರೀತಿ ಮೂಡುವುದು. ಸತ್ಯ, ಶುದ್ಧ ಕಾಯಕದ ಮೂಲಕ ಜೀವನ ನಡೆಸುವ ಕುರಿತಂತೆ ಬಸವಣ್ಣನವರು ಸೇರಿದಂತೆ ಅನೇಕ ಶಿವಶರಣರು ಜನಸಾಮಾನ್ಯರಿಗೆ ಕರೆ ಕೊಟ್ಟಿದ್ದಾರೆ.

ಇದಲ್ಲದೆ ವಚನಗಳು ಬರೆಯುವ ಮೂಲಕ ಪರಿಣಾಮಕಾರಿಯಾಗಿ ಸಮಾಜವನ್ನು ತಿದ್ದುವ ಕಾರ್ಯ ಸಹ ಮಾಡಿದ್ದಾರೆ. ಅವರ ಕಾಯಕ ನಿಷ್ಠೆಯ ವಚನಗಳು ಇಂದಿನ ಸಮಾಜಕ್ಕೆ ಅತಿ ಹೆಚ್ಚು ಪ್ರಸ್ತುತವಾಗಿವೆ. ಅವರು ನೀಡಿರುವ ಸಂದೇಶಗಳನ್ನು ನಾವೆಲ್ಲರೂ ಪಾಲಿಸಿದ್ದಲ್ಲಿ ಅತ್ಯುತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಆದಕಾರಣ ನಮ್ಮ ಅಹಂಕಾರ ತೇಜಿಸಿ, ಮುಕ್ತ ನಿರ್ಮಲವಾದ ಮನಸ್ಸಿನಿಂದ ಕಾಯಕ ಮಾಡಲು ಆತ್ಮಸಾಕ್ಷಿಯಾಗಿ ಮುಂದಾಗೋಣ,ಮುಂದಾಗುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಗೌರವ ಸಿಗುವಂತೆ ನೋಡಿಕೋಳ್ಳೋಣ. ಗೌರವ ಸೀಗಬೇಕು, ಸಮೃದ್ಧಿ ಜೀವನವನ್ನು ಅವರು ಈ ಸಮಾಜದಲ್ಲಿ ಎಲ್ಲರೊಂದಿಗೆ ಅನ್ಯೋನ್ಯತೆಯಿಂದ ಬಾಳಬೇಕು. ಅಂದಾಗಲೇ ಬಸವಣ್ಣನವರ ಕಾಯಕ ನಿಷ್ಯಯ ವೈಚಾರಿಕ ವಿಚಾರಗಳಿಗೆ ನಾವೆಲ್ಲರೂ ಬೆಲೆ ನೀಡಿದಂತಾಗುತ್ತದೆ.

ಆಶಯ ಮಾತು:

ಸ್ವಾರ್ಥ ಹೀನ ಮನುಷ್ಯರ ಕಪಿಮುಷ್ಟಿಯಿಂದ ಬಿಡುಗಡೆ ಹೊಂದುವ ಮೂಲಕ ಹೊರಗಡೆ ಬನ್ನಿ, ಬರಬೇಕು. ನಿಸ್ವಾರ್ಥ ಸೇವಾ ಮನೋಭಾವನೆಯಿಂದ ಕಾಯಕ ಮಾಡಿ, ಮಾಡಬೇಕು. ಮಾಡುವ ಮೂಲಕ ಸರ್ವರಲ್ಲಿಯೊ ಕಾಯಕ ಪ್ರಜ್ಞೆಯ ಸ್ವೊರ್ತಿ ಮೂಡಿಸುವ ಕೆಲಸ ಆಗಬೇಕು.ನಾವೆಲ್ಲರೂ ಸೇರಿ ಮಾಡಬೇಕಾಗಿದೆ. ಪ್ರತಿಯೊಬ್ಬರು ಸ್ವಾಭಿಮಾನ – ಅಭಿಮಾನದಿಂದ, ಸ್ವಚ್ಚಂದವಾಗಿ, ನೆಮ್ಮದಿಯಿಂದ ಈ ದೇಶ ಹಾಗೂ ಈ ಸಮಾಜದಲ್ಲಿ ಬದುಕುವಂತಾಗಬೇಕೆಂಬುವುದೇ 12ನೇ ಶತಮಾನದ ಎಲ್ಲಾ ಶಿವಶರಣರ ಮಾಹಾದಾಶಯವಾಗಿದೆ. ಆದ್ದರಿಂದ ಕಾಯಕ ಸಮಾನತೆ ತತ್ವವನ್ನು ನಮ್ಮೆಲ್ಲರ ಅಃತಕರಣದ ಆತ್ಮಕ್ಕೆ ಜಾಗೃತಿ ಮೂಡಿಸಿರುವ ಬಸವಾದಿ ಪ್ರಮಥರನ್ನು ಈ ದಿನ ಸ್ಮರಿಸಬೇಕಾದ ಅಗತ್ಯವಿದೆ ಜೊತೆಗೆ ಕಾಲಘಟ್ಟದಲ್ಲಿ ಅನೇಕ ಶರಣರು ಕಾಯಕ ಲೋಕಕ್ಕೆ ಅನೇಕ ವಚನಗಳನ್ನು ನೀಡಿದ್ದಾರೆ,ಇಂದು ನಾವೆಲ್ಲರೂ ಅವರನ್ನು ನನೆಯುವ ಕೆಲಸ ಮಾಡಬೇಕಾಗಿದೆ.

ಇತಿಹಾಸದ ಪುಟಗಳಲ್ಲಿ ಅನೇಕ ಶರಣರು ಕಾಯಕ ಸಮಾನತೆಗಾಗಿ ತಮ್ಮ ಬದುಕಿನ ಜೀವನವನ್ನು ನಮ್ಮಗಾಗಿ ಧಾರೆಯೆರೆದಿದ್ದಾರೆ ಜೊತೆಗೆ ಬದಲಾವಣೆಗಾಗಿ ಶ್ರಮಿಸಿದ್ದಾರೆ ಎನ್ನುವುದು ನಾವ್ಯಾರು ಮರೆಯಬಾರದು. ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆಯಬೇಕಾಗಿದೆ. ನಡೆಯುವ ಮೂಲಕ ಸರ್ವರಿಗೂ ಕಾಯಕ ಸ್ನೇಹಿತರಾಗೋಣ, ಲೋಕಕ್ಕೆ ಮಾದರಿಯಾಗೋಣ.


ಇದನ್ನೂ ಓದಿ: 12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...