Homeಕರ್ನಾಟಕಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

’ಕೊರೊನಾ 2ನೇ ಅಲೆ ಬಳಿಕ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ’

- Advertisement -
- Advertisement -

“ದುಡಿಯುವ ಅರ್ಹತೆಯುಳ್ಳ ಪ್ರತಿಯೊಬ್ಬರಿಗೂ ಉದ್ಯೋಗ ಸೃಷ್ಟಿ ಮಾಡಬೇಕಿರುವುದು ಒಂದು ಜವಾಬ್ದಾರಿಯುತ ಸರ್ಕಾರದ ಆದ್ಯ ಕರ್ತವ್ಯ. ಆದರೆ, ನಮ್ಮ ಸರ್ಕಾರಗಳ ಆದ್ಯತೆ ಜನಸಾಮಾನ್ಯರ ಏಳಿಗೆಯಾಗಿಲ್ಲ, ಬದಲಿಗೆ ಕಾರ್ಪೊರೇಟ್ ಮನೆತನಗಳ ಸೇವೆಗೈಯುವುದು ಅವರ ಆದ್ಯತೆಯಾಗಿದೆ” ಎಂದು ಸಾಹಿತಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಭಾನುವಾರ ಎಐಡಿವೈಒ ರಾಜ್ಯ ಸಮಿತಿಯ ನೇತೃತ್ವದಲ್ಲಿ ನಡೆದ ’ನಿರುದ್ಯೋಗದ ವಿರುದ್ಧ ರಾಜ್ಯಮಟ್ಟದ ಆನ್ಲೆನ್ ಸಮಾವೇಶ’ವನ್ನು ಉದ್ಘಾಟಿಸಿ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಿದ್ದಾರೆ.

“ದೇಶದಲ್ಲಿ ಇಂದು 65 ಕೋಟಿ ಮಂದಿ ನಿರುದ್ಯೋಗಿಗಳಿದ್ದಾರೆ. ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗನೈಸೇಷನ್ ಪ್ರಕಾರ ಕಳೆದ 45 ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದಾಖಲಾಗಿದೆ. ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಭ್ರಮೆಯನ್ನು ಹಂಚಿದವರು ನಿರುದ್ಯೋಗವನ್ನು ನಿವಾರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 52 ಲಕ್ಷ ಹುದ್ದೆಗಳನ್ನು ಭರ್ತಿಮಾಡಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಮಾಡುವುದಾಗಿ ಹೇಳಿದ್ದ ಸರ್ಕಾರವೇ ನೀಡಿರುವ ಅಂಕಿಅಂಶದ ಪ್ರಕಾರ 2015 ರಲ್ಲಿ ಸರ್ಕಾರ ನೇಮಿಸಿದ ಹುದ್ದೆಗಳ ಸಂಖ್ಯೆ ಕೇವಲ 15,670  ಮಾತ್ರ. ಇತ್ತೀಚಿನ ವರ್ಷಗಳಲ್ಲಂತೂ ಯಾವುದೇ ನೇಮಕಾತಿಯೂ ನಡೆದಿಲ್ಲ” ಎಂದು ಅಂಕಿಅಂಶಗಳನ್ನು ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

“ಇತ್ತೀಚೆಗೆ ಉತ್ತರಪ್ರದೇಶದಲ್ಲಿ 368 ಗ್ರೂಪ್ ಡಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದಾಗ ಸುಮಾರು 23 ಲಕ್ಷ ಅರ್ಜಿಗಳು ಸಲ್ಲಿಕೆಯಾದವು. ಅದರಲ್ಲಿ 22 ಲಕ್ಷ ಜನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಪದವೀಧರರು ಮತ್ತು 265 ಜನರು ಡಾಕ್ಟರೇಟ್ ಪದವಿ ಪಡೆದ ಅರ್ಜಿದಾರರು ಇದ್ದರು. ಇದು ನಮ್ಮ ದೇಶದ ನಿರುದ್ಯೋಗದ ಭೀಕರತೆ” ಎಂದಿದ್ದಾರೆ.

“ಕೊರೊನಾ 2ನೇ ಅಲೆಯ ನಂತರ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಅಸ್ಸೊಚಾಮ್ ವರದಿಯ ಪ್ರಕಾರ ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ. ಸರ್ಕಾರದ ಜನವಿರೋಧಿ ಜಾಗತೀಕರಣ ನೀತಿಯ ಫಲ ಇದಾಗಿದೆ. ದೇಶದಲ್ಲಿ ಜಾಗತೀಕರಣದ ಕೂಸನ್ನು ಕಾಂಗ್ರೆಸ್ ಪೋಷಿಸಿತು. ಅದರ ಉನ್ಮತ್ತ ಯೌವನವನ್ನು ಈಗ ಬಿಜೆಪಿ ಸರ್ಕಾರ ಪೋಷಿಸುತ್ತಿದೆ. ಇದರ ಪರಿಣಾಮ ಇಂದು ದೇಶದ 74% ಸಂಪತ್ತನ್ನು ಕೇವಲ 1% ಬಂಡವಾಳಗಾರರು ಅನುಭವಿಸುತ್ತಿದ್ದಾರೆ. ಉಳಿದ 99% ಜನರು, ಕೇವಲ 26% ಸಂಪತ್ತಿನಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಈ ಸಂಪತ್ತಿನ ಅಸಮಾನ ಹಂಚಿಕೆ ಸರಿಯಾಗಬೇಕು. ಉದ್ಯಮಿ ಕೇಂದ್ರಿತ ಉದ್ಯೋಗ ರಹಿತ ಅಭಿವೃದ್ಧಿಯ ಬದಲಿಗೆ ಜನಕೇಂದ್ರಿತ ಉದ್ಯೋಗ ಸೃಷ್ಟಿಗೆ ಪೂರಕವಾದ ಅಭಿವೃದ್ಧಿಗಾಗಿ ಆಗ್ರಹಿಸಿ ಬಲಿಷ್ಟ ಹೋರಾಟ ನಡೆಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಒಂದು ಮೊಬೈಲ್‌ ಮೂಲಕ ಸಮಾವೇಶದಲ್ಲಿ ಭಾಗಿಯಾದ ಹಳ್ಳಿಗಳ ಜನರು

ಎಐಡಿವೈಒ ಅಖಿಲ ಭಾರತ ಅಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ  “ನಿರುದ್ಯೋಗದ ವಿರುದ್ಧದ ಹೋರಾಟ ಅಲ್ಪಕಾಲೀನ ಹೋರಾಟವಲ್ಲ. ಅದು ಒಂದು ಸ್ಪಷ್ಟ ವೈಚಾರಿಕತೆಯ ಆಧಾರದ ಮೇಲೆ ನಡೆಸಬೇಕಾದ ದೀರ್ಘಕಾಲೀನ ಹೋರಾಟವಾಗಿದೆ. ಸಮಸ್ಯೆಯ ಆಳವನ್ನು ಮತ್ತು ಮೂಲವನ್ನು ನಾವು ಸರಿಯಾಗಿ ಗ್ರಹಿಸಬೇಕು. ವೈಜ್ಞಾನಿಕ ವಿಶ್ಲೇಷಣೆಯ ನಂತರ ನಾವು ಒಂದು ವಿಚಾರವನ್ನು ಅಂಗೀಕರಿಸಬೇಕು. ನಿರುದ್ಯೋಗದ ನಿರ್ಮೂಲನೆಗೆ ನಿಮ್ಮ ಕಾರ್ಯ ಯೋಜನೆ ಏನೆಂದು ನಾವು ಆಡಳಿತಗಾರರನ್ನು ಪ್ರಶ್ನಿಸಬೇಕು. ಸರ್ಕಾರಗಳು ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಕಡಿತಗೊಳಿಸುತ್ತಿವೆ. ಮೊದಲು ಈ ಪ್ರಕ್ರಿಯೆಯನ್ನು ನಿಲ್ಲಿಸಲು ಮತ್ತು ಹೊಸ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರವನ್ನು ಒತ್ತಾಯಿಸಬೇಕು. ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗಾಗಿ ನಿರ್ದಿಷ್ಟ ಹಣವನ್ನು ಮೀಸಲಿಡಲು ಆಗ್ರಹಿಸಬೇಕು” ಎಂದಿದ್ದಾರೆ.

“ಆರ್ಥಿಕ ಹಿಂಜರಿತ ಮತ್ತು ಕೋವಿಡ್‌ನ ದಾಳಿಯಿಂದ ಜನಸಾಮಾನ್ಯರು ಜೀವನ ನಿರ್ವಹಣೆಗೆ ಪರಿತಪಿಸುತ್ತಿರುವಾಗ, ಜನರಿಗೆ ಸಂಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು ರಾಜಕೀಯ ಪಕ್ಷಗಳು ಮುಖ್ಯಮಂತ್ರಿ ಗಾದಿ ವಿಷಯದಲ್ಲಿ ತಲ್ಲಿನವಾಗಿವೆ. ಸರ್ಕಾರ ನೀಡುತ್ತಿರುವ ಪುಡಿಗಾಸಿನ ಪರಿಹಾರ ಪ್ಯಾಕೇಜ್‌ಗಳಲ್ಲಿಯೂ 90% ರಷ್ಟು ಉಳ್ಳವರ ಪಾಲಾಗುತ್ತಿದೆ. ಆದರೆ ಜನಸಾಮಾನ್ಯರ ತೆರಿಗೆಯ ಹಣವನ್ನು ಖಾಸಗೀ ಮಾಲೀಕರಿಗೆ ಖರ್ಚು ಮಾಡಿತ್ತಿರುವ ಸರ್ಕಾರದ ನೀತಿಗಳನ್ನು ನಾವು ಸೋಲಿಸಬೇಕು. ಎಲ್ಲಾ ಕ್ಷೇತ್ರದಲ್ಲಿ ಗರಿಷ್ಠ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರಗಳನ್ನು ಎಚ್ಚರಿಸುವಂಥ ಐಕ್ಯ ಹೋರಾಟಗಳನ್ನು ಕಟ್ಟಬೇಕು” ಎಂದು ಯುವಜನರಿಗೆ ಕರೆ ನೀಡಿದ್ದಾರೆ.

ಎಐಡಿವೈಓ ರಾಜ್ಯ ಕಾರ್ಯದರ್ಶಿಗಳಾದ ಡಾ. ಜಿ.ಎಸ್. ಕುಮಾರ್ ‘ನಿರುದ್ಯೋಗವು ಯುವಜನರನ್ನು ಕಾಡುತ್ತಿರುವ ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಕೋವಿಡ್ ನಂತರದ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಂಡಿದೆ. ಬಿಡಿಬಿಡಿಯಾದ ಹೋರಾಟದ ಧ್ವನಿಗಳನ್ನು ಒಂದು ಐಕ್ಯ ಹೋರಾಟವನ್ನಾಗಿ ಮಾರ್ಪಡಿಸಲು ಇಂದಿನ ಸಮಾವೇಶ ಭೂಮಿಕೆಯಾಗಲಿದೆ’ ಎಂದಿದ್ದಾರೆ.

ಎಐಡಿವೈಓ ರಾಜ್ಯಾಧ್ಯಕ್ಷೆ ಕಾ. ಎಂ.ಉಮಾದೇವಿ, ‘ಇಂದು ವಿವಿಧ ಕ್ಷೇತ್ರದಲ್ಲಿ ಅರ್ಹತೆ ಮತ್ತು ಕೌಶಲ್ಯಗಳಿಸಿರುವ ಕೋಟ್ಯಾಂತರ ಯುವಜನರು ನಿರುದ್ಯೋಗದಿಂದ ಬೇಸತ್ತು ಸರ್ಕಾರಗಳ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವಮಾನದಿಂದ ಎಷ್ಟೋ ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭವಿಷ್ಯದ ಕುರಿತು ಭರವಸೆ ಕಳೆದುಕೊಂಡ ಉದ್ಯೋಗಾಕಾಂಕ್ಷಿಗಳನ್ನು ಒಗ್ಗೂಡಿಸಿ ಈ ಸಮಾವೇಶ ನಡೆಯುತ್ತಿದೆ. ಇಲ್ಲಿ ನಮ್ಮ ಹೋರಾಟದ ಹೆಜ್ಜೆಗಳನ್ನು ನಿರ್ಧರಿಸಿ, ಅದನ್ನು ಒಂದು ಗಮ್ಯಕ್ಕೆ ಕೊಂಡೊಯ್ಯಲು ನಾವು ಸನ್ನದ್ಧರಾಗೋಣ’ ಎಂದು ಕರೆ ನೀಡಿದ್ದಾರೆ.

ಸುಮಾರು 800 ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಮಾವೇಶದಲ್ಲಿ ನಿರುದ್ಯೋಗದ ವಿರುದ್ಧದ ಮುಖ್ಯ ಗೊತ್ತುವಳಿಯ ಜೊತೆಗೆ ಐದು ಉಪ ಗೊತ್ತುವಳಿಗಳನ್ನು ಮಂಡಿಸಿ, ಚರ್ಚಿಸಿ, ಸರ್ವಾನುಮತದಿಂದ ಅಂಗೀಕರಿಸಲಾಯಿತು. ಜೊತೆಗೆ ರಾಜ್ಯಮಟ್ಟದ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್ ಅವರನ್ನು ನೇಮಿಸಲಾಗಿದೆ.


 ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...