Homeಕರ್ನಾಟಕಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

’ಕೊರೊನಾ 2ನೇ ಅಲೆ ಬಳಿಕ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ’

- Advertisement -
- Advertisement -

“ದುಡಿಯುವ ಅರ್ಹತೆಯುಳ್ಳ ಪ್ರತಿಯೊಬ್ಬರಿಗೂ ಉದ್ಯೋಗ ಸೃಷ್ಟಿ ಮಾಡಬೇಕಿರುವುದು ಒಂದು ಜವಾಬ್ದಾರಿಯುತ ಸರ್ಕಾರದ ಆದ್ಯ ಕರ್ತವ್ಯ. ಆದರೆ, ನಮ್ಮ ಸರ್ಕಾರಗಳ ಆದ್ಯತೆ ಜನಸಾಮಾನ್ಯರ ಏಳಿಗೆಯಾಗಿಲ್ಲ, ಬದಲಿಗೆ ಕಾರ್ಪೊರೇಟ್ ಮನೆತನಗಳ ಸೇವೆಗೈಯುವುದು ಅವರ ಆದ್ಯತೆಯಾಗಿದೆ” ಎಂದು ಸಾಹಿತಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಭಾನುವಾರ ಎಐಡಿವೈಒ ರಾಜ್ಯ ಸಮಿತಿಯ ನೇತೃತ್ವದಲ್ಲಿ ನಡೆದ ’ನಿರುದ್ಯೋಗದ ವಿರುದ್ಧ ರಾಜ್ಯಮಟ್ಟದ ಆನ್ಲೆನ್ ಸಮಾವೇಶ’ವನ್ನು ಉದ್ಘಾಟಿಸಿ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಿದ್ದಾರೆ.

“ದೇಶದಲ್ಲಿ ಇಂದು 65 ಕೋಟಿ ಮಂದಿ ನಿರುದ್ಯೋಗಿಗಳಿದ್ದಾರೆ. ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗನೈಸೇಷನ್ ಪ್ರಕಾರ ಕಳೆದ 45 ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದಾಖಲಾಗಿದೆ. ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಭ್ರಮೆಯನ್ನು ಹಂಚಿದವರು ನಿರುದ್ಯೋಗವನ್ನು ನಿವಾರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 52 ಲಕ್ಷ ಹುದ್ದೆಗಳನ್ನು ಭರ್ತಿಮಾಡಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಮಾಡುವುದಾಗಿ ಹೇಳಿದ್ದ ಸರ್ಕಾರವೇ ನೀಡಿರುವ ಅಂಕಿಅಂಶದ ಪ್ರಕಾರ 2015 ರಲ್ಲಿ ಸರ್ಕಾರ ನೇಮಿಸಿದ ಹುದ್ದೆಗಳ ಸಂಖ್ಯೆ ಕೇವಲ 15,670  ಮಾತ್ರ. ಇತ್ತೀಚಿನ ವರ್ಷಗಳಲ್ಲಂತೂ ಯಾವುದೇ ನೇಮಕಾತಿಯೂ ನಡೆದಿಲ್ಲ” ಎಂದು ಅಂಕಿಅಂಶಗಳನ್ನು ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

“ಇತ್ತೀಚೆಗೆ ಉತ್ತರಪ್ರದೇಶದಲ್ಲಿ 368 ಗ್ರೂಪ್ ಡಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದಾಗ ಸುಮಾರು 23 ಲಕ್ಷ ಅರ್ಜಿಗಳು ಸಲ್ಲಿಕೆಯಾದವು. ಅದರಲ್ಲಿ 22 ಲಕ್ಷ ಜನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಪದವೀಧರರು ಮತ್ತು 265 ಜನರು ಡಾಕ್ಟರೇಟ್ ಪದವಿ ಪಡೆದ ಅರ್ಜಿದಾರರು ಇದ್ದರು. ಇದು ನಮ್ಮ ದೇಶದ ನಿರುದ್ಯೋಗದ ಭೀಕರತೆ” ಎಂದಿದ್ದಾರೆ.

“ಕೊರೊನಾ 2ನೇ ಅಲೆಯ ನಂತರ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಅಸ್ಸೊಚಾಮ್ ವರದಿಯ ಪ್ರಕಾರ ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ. ಸರ್ಕಾರದ ಜನವಿರೋಧಿ ಜಾಗತೀಕರಣ ನೀತಿಯ ಫಲ ಇದಾಗಿದೆ. ದೇಶದಲ್ಲಿ ಜಾಗತೀಕರಣದ ಕೂಸನ್ನು ಕಾಂಗ್ರೆಸ್ ಪೋಷಿಸಿತು. ಅದರ ಉನ್ಮತ್ತ ಯೌವನವನ್ನು ಈಗ ಬಿಜೆಪಿ ಸರ್ಕಾರ ಪೋಷಿಸುತ್ತಿದೆ. ಇದರ ಪರಿಣಾಮ ಇಂದು ದೇಶದ 74% ಸಂಪತ್ತನ್ನು ಕೇವಲ 1% ಬಂಡವಾಳಗಾರರು ಅನುಭವಿಸುತ್ತಿದ್ದಾರೆ. ಉಳಿದ 99% ಜನರು, ಕೇವಲ 26% ಸಂಪತ್ತಿನಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಈ ಸಂಪತ್ತಿನ ಅಸಮಾನ ಹಂಚಿಕೆ ಸರಿಯಾಗಬೇಕು. ಉದ್ಯಮಿ ಕೇಂದ್ರಿತ ಉದ್ಯೋಗ ರಹಿತ ಅಭಿವೃದ್ಧಿಯ ಬದಲಿಗೆ ಜನಕೇಂದ್ರಿತ ಉದ್ಯೋಗ ಸೃಷ್ಟಿಗೆ ಪೂರಕವಾದ ಅಭಿವೃದ್ಧಿಗಾಗಿ ಆಗ್ರಹಿಸಿ ಬಲಿಷ್ಟ ಹೋರಾಟ ನಡೆಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಒಂದು ಮೊಬೈಲ್‌ ಮೂಲಕ ಸಮಾವೇಶದಲ್ಲಿ ಭಾಗಿಯಾದ ಹಳ್ಳಿಗಳ ಜನರು

ಎಐಡಿವೈಒ ಅಖಿಲ ಭಾರತ ಅಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ  “ನಿರುದ್ಯೋಗದ ವಿರುದ್ಧದ ಹೋರಾಟ ಅಲ್ಪಕಾಲೀನ ಹೋರಾಟವಲ್ಲ. ಅದು ಒಂದು ಸ್ಪಷ್ಟ ವೈಚಾರಿಕತೆಯ ಆಧಾರದ ಮೇಲೆ ನಡೆಸಬೇಕಾದ ದೀರ್ಘಕಾಲೀನ ಹೋರಾಟವಾಗಿದೆ. ಸಮಸ್ಯೆಯ ಆಳವನ್ನು ಮತ್ತು ಮೂಲವನ್ನು ನಾವು ಸರಿಯಾಗಿ ಗ್ರಹಿಸಬೇಕು. ವೈಜ್ಞಾನಿಕ ವಿಶ್ಲೇಷಣೆಯ ನಂತರ ನಾವು ಒಂದು ವಿಚಾರವನ್ನು ಅಂಗೀಕರಿಸಬೇಕು. ನಿರುದ್ಯೋಗದ ನಿರ್ಮೂಲನೆಗೆ ನಿಮ್ಮ ಕಾರ್ಯ ಯೋಜನೆ ಏನೆಂದು ನಾವು ಆಡಳಿತಗಾರರನ್ನು ಪ್ರಶ್ನಿಸಬೇಕು. ಸರ್ಕಾರಗಳು ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಕಡಿತಗೊಳಿಸುತ್ತಿವೆ. ಮೊದಲು ಈ ಪ್ರಕ್ರಿಯೆಯನ್ನು ನಿಲ್ಲಿಸಲು ಮತ್ತು ಹೊಸ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರವನ್ನು ಒತ್ತಾಯಿಸಬೇಕು. ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗಾಗಿ ನಿರ್ದಿಷ್ಟ ಹಣವನ್ನು ಮೀಸಲಿಡಲು ಆಗ್ರಹಿಸಬೇಕು” ಎಂದಿದ್ದಾರೆ.

“ಆರ್ಥಿಕ ಹಿಂಜರಿತ ಮತ್ತು ಕೋವಿಡ್‌ನ ದಾಳಿಯಿಂದ ಜನಸಾಮಾನ್ಯರು ಜೀವನ ನಿರ್ವಹಣೆಗೆ ಪರಿತಪಿಸುತ್ತಿರುವಾಗ, ಜನರಿಗೆ ಸಂಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು ರಾಜಕೀಯ ಪಕ್ಷಗಳು ಮುಖ್ಯಮಂತ್ರಿ ಗಾದಿ ವಿಷಯದಲ್ಲಿ ತಲ್ಲಿನವಾಗಿವೆ. ಸರ್ಕಾರ ನೀಡುತ್ತಿರುವ ಪುಡಿಗಾಸಿನ ಪರಿಹಾರ ಪ್ಯಾಕೇಜ್‌ಗಳಲ್ಲಿಯೂ 90% ರಷ್ಟು ಉಳ್ಳವರ ಪಾಲಾಗುತ್ತಿದೆ. ಆದರೆ ಜನಸಾಮಾನ್ಯರ ತೆರಿಗೆಯ ಹಣವನ್ನು ಖಾಸಗೀ ಮಾಲೀಕರಿಗೆ ಖರ್ಚು ಮಾಡಿತ್ತಿರುವ ಸರ್ಕಾರದ ನೀತಿಗಳನ್ನು ನಾವು ಸೋಲಿಸಬೇಕು. ಎಲ್ಲಾ ಕ್ಷೇತ್ರದಲ್ಲಿ ಗರಿಷ್ಠ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರಗಳನ್ನು ಎಚ್ಚರಿಸುವಂಥ ಐಕ್ಯ ಹೋರಾಟಗಳನ್ನು ಕಟ್ಟಬೇಕು” ಎಂದು ಯುವಜನರಿಗೆ ಕರೆ ನೀಡಿದ್ದಾರೆ.

ಎಐಡಿವೈಓ ರಾಜ್ಯ ಕಾರ್ಯದರ್ಶಿಗಳಾದ ಡಾ. ಜಿ.ಎಸ್. ಕುಮಾರ್ ‘ನಿರುದ್ಯೋಗವು ಯುವಜನರನ್ನು ಕಾಡುತ್ತಿರುವ ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಕೋವಿಡ್ ನಂತರದ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಂಡಿದೆ. ಬಿಡಿಬಿಡಿಯಾದ ಹೋರಾಟದ ಧ್ವನಿಗಳನ್ನು ಒಂದು ಐಕ್ಯ ಹೋರಾಟವನ್ನಾಗಿ ಮಾರ್ಪಡಿಸಲು ಇಂದಿನ ಸಮಾವೇಶ ಭೂಮಿಕೆಯಾಗಲಿದೆ’ ಎಂದಿದ್ದಾರೆ.

ಎಐಡಿವೈಓ ರಾಜ್ಯಾಧ್ಯಕ್ಷೆ ಕಾ. ಎಂ.ಉಮಾದೇವಿ, ‘ಇಂದು ವಿವಿಧ ಕ್ಷೇತ್ರದಲ್ಲಿ ಅರ್ಹತೆ ಮತ್ತು ಕೌಶಲ್ಯಗಳಿಸಿರುವ ಕೋಟ್ಯಾಂತರ ಯುವಜನರು ನಿರುದ್ಯೋಗದಿಂದ ಬೇಸತ್ತು ಸರ್ಕಾರಗಳ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವಮಾನದಿಂದ ಎಷ್ಟೋ ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭವಿಷ್ಯದ ಕುರಿತು ಭರವಸೆ ಕಳೆದುಕೊಂಡ ಉದ್ಯೋಗಾಕಾಂಕ್ಷಿಗಳನ್ನು ಒಗ್ಗೂಡಿಸಿ ಈ ಸಮಾವೇಶ ನಡೆಯುತ್ತಿದೆ. ಇಲ್ಲಿ ನಮ್ಮ ಹೋರಾಟದ ಹೆಜ್ಜೆಗಳನ್ನು ನಿರ್ಧರಿಸಿ, ಅದನ್ನು ಒಂದು ಗಮ್ಯಕ್ಕೆ ಕೊಂಡೊಯ್ಯಲು ನಾವು ಸನ್ನದ್ಧರಾಗೋಣ’ ಎಂದು ಕರೆ ನೀಡಿದ್ದಾರೆ.

ಸುಮಾರು 800 ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಮಾವೇಶದಲ್ಲಿ ನಿರುದ್ಯೋಗದ ವಿರುದ್ಧದ ಮುಖ್ಯ ಗೊತ್ತುವಳಿಯ ಜೊತೆಗೆ ಐದು ಉಪ ಗೊತ್ತುವಳಿಗಳನ್ನು ಮಂಡಿಸಿ, ಚರ್ಚಿಸಿ, ಸರ್ವಾನುಮತದಿಂದ ಅಂಗೀಕರಿಸಲಾಯಿತು. ಜೊತೆಗೆ ರಾಜ್ಯಮಟ್ಟದ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್ ಅವರನ್ನು ನೇಮಿಸಲಾಗಿದೆ.


 ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...