Homeಕರ್ನಾಟಕಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

’ಕೊರೊನಾ 2ನೇ ಅಲೆ ಬಳಿಕ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ’

- Advertisement -
- Advertisement -

“ದುಡಿಯುವ ಅರ್ಹತೆಯುಳ್ಳ ಪ್ರತಿಯೊಬ್ಬರಿಗೂ ಉದ್ಯೋಗ ಸೃಷ್ಟಿ ಮಾಡಬೇಕಿರುವುದು ಒಂದು ಜವಾಬ್ದಾರಿಯುತ ಸರ್ಕಾರದ ಆದ್ಯ ಕರ್ತವ್ಯ. ಆದರೆ, ನಮ್ಮ ಸರ್ಕಾರಗಳ ಆದ್ಯತೆ ಜನಸಾಮಾನ್ಯರ ಏಳಿಗೆಯಾಗಿಲ್ಲ, ಬದಲಿಗೆ ಕಾರ್ಪೊರೇಟ್ ಮನೆತನಗಳ ಸೇವೆಗೈಯುವುದು ಅವರ ಆದ್ಯತೆಯಾಗಿದೆ” ಎಂದು ಸಾಹಿತಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಭಾನುವಾರ ಎಐಡಿವೈಒ ರಾಜ್ಯ ಸಮಿತಿಯ ನೇತೃತ್ವದಲ್ಲಿ ನಡೆದ ’ನಿರುದ್ಯೋಗದ ವಿರುದ್ಧ ರಾಜ್ಯಮಟ್ಟದ ಆನ್ಲೆನ್ ಸಮಾವೇಶ’ವನ್ನು ಉದ್ಘಾಟಿಸಿ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಿದ್ದಾರೆ.

“ದೇಶದಲ್ಲಿ ಇಂದು 65 ಕೋಟಿ ಮಂದಿ ನಿರುದ್ಯೋಗಿಗಳಿದ್ದಾರೆ. ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗನೈಸೇಷನ್ ಪ್ರಕಾರ ಕಳೆದ 45 ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದಾಖಲಾಗಿದೆ. ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಭ್ರಮೆಯನ್ನು ಹಂಚಿದವರು ನಿರುದ್ಯೋಗವನ್ನು ನಿವಾರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 52 ಲಕ್ಷ ಹುದ್ದೆಗಳನ್ನು ಭರ್ತಿಮಾಡಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಮಾಡುವುದಾಗಿ ಹೇಳಿದ್ದ ಸರ್ಕಾರವೇ ನೀಡಿರುವ ಅಂಕಿಅಂಶದ ಪ್ರಕಾರ 2015 ರಲ್ಲಿ ಸರ್ಕಾರ ನೇಮಿಸಿದ ಹುದ್ದೆಗಳ ಸಂಖ್ಯೆ ಕೇವಲ 15,670  ಮಾತ್ರ. ಇತ್ತೀಚಿನ ವರ್ಷಗಳಲ್ಲಂತೂ ಯಾವುದೇ ನೇಮಕಾತಿಯೂ ನಡೆದಿಲ್ಲ” ಎಂದು ಅಂಕಿಅಂಶಗಳನ್ನು ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

“ಇತ್ತೀಚೆಗೆ ಉತ್ತರಪ್ರದೇಶದಲ್ಲಿ 368 ಗ್ರೂಪ್ ಡಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದಾಗ ಸುಮಾರು 23 ಲಕ್ಷ ಅರ್ಜಿಗಳು ಸಲ್ಲಿಕೆಯಾದವು. ಅದರಲ್ಲಿ 22 ಲಕ್ಷ ಜನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಪದವೀಧರರು ಮತ್ತು 265 ಜನರು ಡಾಕ್ಟರೇಟ್ ಪದವಿ ಪಡೆದ ಅರ್ಜಿದಾರರು ಇದ್ದರು. ಇದು ನಮ್ಮ ದೇಶದ ನಿರುದ್ಯೋಗದ ಭೀಕರತೆ” ಎಂದಿದ್ದಾರೆ.

“ಕೊರೊನಾ 2ನೇ ಅಲೆಯ ನಂತರ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಅಸ್ಸೊಚಾಮ್ ವರದಿಯ ಪ್ರಕಾರ ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ. ಸರ್ಕಾರದ ಜನವಿರೋಧಿ ಜಾಗತೀಕರಣ ನೀತಿಯ ಫಲ ಇದಾಗಿದೆ. ದೇಶದಲ್ಲಿ ಜಾಗತೀಕರಣದ ಕೂಸನ್ನು ಕಾಂಗ್ರೆಸ್ ಪೋಷಿಸಿತು. ಅದರ ಉನ್ಮತ್ತ ಯೌವನವನ್ನು ಈಗ ಬಿಜೆಪಿ ಸರ್ಕಾರ ಪೋಷಿಸುತ್ತಿದೆ. ಇದರ ಪರಿಣಾಮ ಇಂದು ದೇಶದ 74% ಸಂಪತ್ತನ್ನು ಕೇವಲ 1% ಬಂಡವಾಳಗಾರರು ಅನುಭವಿಸುತ್ತಿದ್ದಾರೆ. ಉಳಿದ 99% ಜನರು, ಕೇವಲ 26% ಸಂಪತ್ತಿನಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಈ ಸಂಪತ್ತಿನ ಅಸಮಾನ ಹಂಚಿಕೆ ಸರಿಯಾಗಬೇಕು. ಉದ್ಯಮಿ ಕೇಂದ್ರಿತ ಉದ್ಯೋಗ ರಹಿತ ಅಭಿವೃದ್ಧಿಯ ಬದಲಿಗೆ ಜನಕೇಂದ್ರಿತ ಉದ್ಯೋಗ ಸೃಷ್ಟಿಗೆ ಪೂರಕವಾದ ಅಭಿವೃದ್ಧಿಗಾಗಿ ಆಗ್ರಹಿಸಿ ಬಲಿಷ್ಟ ಹೋರಾಟ ನಡೆಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಒಂದು ಮೊಬೈಲ್‌ ಮೂಲಕ ಸಮಾವೇಶದಲ್ಲಿ ಭಾಗಿಯಾದ ಹಳ್ಳಿಗಳ ಜನರು

ಎಐಡಿವೈಒ ಅಖಿಲ ಭಾರತ ಅಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ  “ನಿರುದ್ಯೋಗದ ವಿರುದ್ಧದ ಹೋರಾಟ ಅಲ್ಪಕಾಲೀನ ಹೋರಾಟವಲ್ಲ. ಅದು ಒಂದು ಸ್ಪಷ್ಟ ವೈಚಾರಿಕತೆಯ ಆಧಾರದ ಮೇಲೆ ನಡೆಸಬೇಕಾದ ದೀರ್ಘಕಾಲೀನ ಹೋರಾಟವಾಗಿದೆ. ಸಮಸ್ಯೆಯ ಆಳವನ್ನು ಮತ್ತು ಮೂಲವನ್ನು ನಾವು ಸರಿಯಾಗಿ ಗ್ರಹಿಸಬೇಕು. ವೈಜ್ಞಾನಿಕ ವಿಶ್ಲೇಷಣೆಯ ನಂತರ ನಾವು ಒಂದು ವಿಚಾರವನ್ನು ಅಂಗೀಕರಿಸಬೇಕು. ನಿರುದ್ಯೋಗದ ನಿರ್ಮೂಲನೆಗೆ ನಿಮ್ಮ ಕಾರ್ಯ ಯೋಜನೆ ಏನೆಂದು ನಾವು ಆಡಳಿತಗಾರರನ್ನು ಪ್ರಶ್ನಿಸಬೇಕು. ಸರ್ಕಾರಗಳು ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಕಡಿತಗೊಳಿಸುತ್ತಿವೆ. ಮೊದಲು ಈ ಪ್ರಕ್ರಿಯೆಯನ್ನು ನಿಲ್ಲಿಸಲು ಮತ್ತು ಹೊಸ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರವನ್ನು ಒತ್ತಾಯಿಸಬೇಕು. ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗಾಗಿ ನಿರ್ದಿಷ್ಟ ಹಣವನ್ನು ಮೀಸಲಿಡಲು ಆಗ್ರಹಿಸಬೇಕು” ಎಂದಿದ್ದಾರೆ.

“ಆರ್ಥಿಕ ಹಿಂಜರಿತ ಮತ್ತು ಕೋವಿಡ್‌ನ ದಾಳಿಯಿಂದ ಜನಸಾಮಾನ್ಯರು ಜೀವನ ನಿರ್ವಹಣೆಗೆ ಪರಿತಪಿಸುತ್ತಿರುವಾಗ, ಜನರಿಗೆ ಸಂಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು ರಾಜಕೀಯ ಪಕ್ಷಗಳು ಮುಖ್ಯಮಂತ್ರಿ ಗಾದಿ ವಿಷಯದಲ್ಲಿ ತಲ್ಲಿನವಾಗಿವೆ. ಸರ್ಕಾರ ನೀಡುತ್ತಿರುವ ಪುಡಿಗಾಸಿನ ಪರಿಹಾರ ಪ್ಯಾಕೇಜ್‌ಗಳಲ್ಲಿಯೂ 90% ರಷ್ಟು ಉಳ್ಳವರ ಪಾಲಾಗುತ್ತಿದೆ. ಆದರೆ ಜನಸಾಮಾನ್ಯರ ತೆರಿಗೆಯ ಹಣವನ್ನು ಖಾಸಗೀ ಮಾಲೀಕರಿಗೆ ಖರ್ಚು ಮಾಡಿತ್ತಿರುವ ಸರ್ಕಾರದ ನೀತಿಗಳನ್ನು ನಾವು ಸೋಲಿಸಬೇಕು. ಎಲ್ಲಾ ಕ್ಷೇತ್ರದಲ್ಲಿ ಗರಿಷ್ಠ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರಗಳನ್ನು ಎಚ್ಚರಿಸುವಂಥ ಐಕ್ಯ ಹೋರಾಟಗಳನ್ನು ಕಟ್ಟಬೇಕು” ಎಂದು ಯುವಜನರಿಗೆ ಕರೆ ನೀಡಿದ್ದಾರೆ.

ಎಐಡಿವೈಓ ರಾಜ್ಯ ಕಾರ್ಯದರ್ಶಿಗಳಾದ ಡಾ. ಜಿ.ಎಸ್. ಕುಮಾರ್ ‘ನಿರುದ್ಯೋಗವು ಯುವಜನರನ್ನು ಕಾಡುತ್ತಿರುವ ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಕೋವಿಡ್ ನಂತರದ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಂಡಿದೆ. ಬಿಡಿಬಿಡಿಯಾದ ಹೋರಾಟದ ಧ್ವನಿಗಳನ್ನು ಒಂದು ಐಕ್ಯ ಹೋರಾಟವನ್ನಾಗಿ ಮಾರ್ಪಡಿಸಲು ಇಂದಿನ ಸಮಾವೇಶ ಭೂಮಿಕೆಯಾಗಲಿದೆ’ ಎಂದಿದ್ದಾರೆ.

ಎಐಡಿವೈಓ ರಾಜ್ಯಾಧ್ಯಕ್ಷೆ ಕಾ. ಎಂ.ಉಮಾದೇವಿ, ‘ಇಂದು ವಿವಿಧ ಕ್ಷೇತ್ರದಲ್ಲಿ ಅರ್ಹತೆ ಮತ್ತು ಕೌಶಲ್ಯಗಳಿಸಿರುವ ಕೋಟ್ಯಾಂತರ ಯುವಜನರು ನಿರುದ್ಯೋಗದಿಂದ ಬೇಸತ್ತು ಸರ್ಕಾರಗಳ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವಮಾನದಿಂದ ಎಷ್ಟೋ ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭವಿಷ್ಯದ ಕುರಿತು ಭರವಸೆ ಕಳೆದುಕೊಂಡ ಉದ್ಯೋಗಾಕಾಂಕ್ಷಿಗಳನ್ನು ಒಗ್ಗೂಡಿಸಿ ಈ ಸಮಾವೇಶ ನಡೆಯುತ್ತಿದೆ. ಇಲ್ಲಿ ನಮ್ಮ ಹೋರಾಟದ ಹೆಜ್ಜೆಗಳನ್ನು ನಿರ್ಧರಿಸಿ, ಅದನ್ನು ಒಂದು ಗಮ್ಯಕ್ಕೆ ಕೊಂಡೊಯ್ಯಲು ನಾವು ಸನ್ನದ್ಧರಾಗೋಣ’ ಎಂದು ಕರೆ ನೀಡಿದ್ದಾರೆ.

ಸುಮಾರು 800 ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಮಾವೇಶದಲ್ಲಿ ನಿರುದ್ಯೋಗದ ವಿರುದ್ಧದ ಮುಖ್ಯ ಗೊತ್ತುವಳಿಯ ಜೊತೆಗೆ ಐದು ಉಪ ಗೊತ್ತುವಳಿಗಳನ್ನು ಮಂಡಿಸಿ, ಚರ್ಚಿಸಿ, ಸರ್ವಾನುಮತದಿಂದ ಅಂಗೀಕರಿಸಲಾಯಿತು. ಜೊತೆಗೆ ರಾಜ್ಯಮಟ್ಟದ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್ ಅವರನ್ನು ನೇಮಿಸಲಾಗಿದೆ.


 ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...