Homeಕರ್ನಾಟಕಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

’ಕೊರೊನಾ 2ನೇ ಅಲೆ ಬಳಿಕ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ’

- Advertisement -
- Advertisement -

“ದುಡಿಯುವ ಅರ್ಹತೆಯುಳ್ಳ ಪ್ರತಿಯೊಬ್ಬರಿಗೂ ಉದ್ಯೋಗ ಸೃಷ್ಟಿ ಮಾಡಬೇಕಿರುವುದು ಒಂದು ಜವಾಬ್ದಾರಿಯುತ ಸರ್ಕಾರದ ಆದ್ಯ ಕರ್ತವ್ಯ. ಆದರೆ, ನಮ್ಮ ಸರ್ಕಾರಗಳ ಆದ್ಯತೆ ಜನಸಾಮಾನ್ಯರ ಏಳಿಗೆಯಾಗಿಲ್ಲ, ಬದಲಿಗೆ ಕಾರ್ಪೊರೇಟ್ ಮನೆತನಗಳ ಸೇವೆಗೈಯುವುದು ಅವರ ಆದ್ಯತೆಯಾಗಿದೆ” ಎಂದು ಸಾಹಿತಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಭಾನುವಾರ ಎಐಡಿವೈಒ ರಾಜ್ಯ ಸಮಿತಿಯ ನೇತೃತ್ವದಲ್ಲಿ ನಡೆದ ’ನಿರುದ್ಯೋಗದ ವಿರುದ್ಧ ರಾಜ್ಯಮಟ್ಟದ ಆನ್ಲೆನ್ ಸಮಾವೇಶ’ವನ್ನು ಉದ್ಘಾಟಿಸಿ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಿದ್ದಾರೆ.

“ದೇಶದಲ್ಲಿ ಇಂದು 65 ಕೋಟಿ ಮಂದಿ ನಿರುದ್ಯೋಗಿಗಳಿದ್ದಾರೆ. ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗನೈಸೇಷನ್ ಪ್ರಕಾರ ಕಳೆದ 45 ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದಾಖಲಾಗಿದೆ. ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಭ್ರಮೆಯನ್ನು ಹಂಚಿದವರು ನಿರುದ್ಯೋಗವನ್ನು ನಿವಾರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 52 ಲಕ್ಷ ಹುದ್ದೆಗಳನ್ನು ಭರ್ತಿಮಾಡಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಮಾಡುವುದಾಗಿ ಹೇಳಿದ್ದ ಸರ್ಕಾರವೇ ನೀಡಿರುವ ಅಂಕಿಅಂಶದ ಪ್ರಕಾರ 2015 ರಲ್ಲಿ ಸರ್ಕಾರ ನೇಮಿಸಿದ ಹುದ್ದೆಗಳ ಸಂಖ್ಯೆ ಕೇವಲ 15,670  ಮಾತ್ರ. ಇತ್ತೀಚಿನ ವರ್ಷಗಳಲ್ಲಂತೂ ಯಾವುದೇ ನೇಮಕಾತಿಯೂ ನಡೆದಿಲ್ಲ” ಎಂದು ಅಂಕಿಅಂಶಗಳನ್ನು ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

“ಇತ್ತೀಚೆಗೆ ಉತ್ತರಪ್ರದೇಶದಲ್ಲಿ 368 ಗ್ರೂಪ್ ಡಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದಾಗ ಸುಮಾರು 23 ಲಕ್ಷ ಅರ್ಜಿಗಳು ಸಲ್ಲಿಕೆಯಾದವು. ಅದರಲ್ಲಿ 22 ಲಕ್ಷ ಜನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಪದವೀಧರರು ಮತ್ತು 265 ಜನರು ಡಾಕ್ಟರೇಟ್ ಪದವಿ ಪಡೆದ ಅರ್ಜಿದಾರರು ಇದ್ದರು. ಇದು ನಮ್ಮ ದೇಶದ ನಿರುದ್ಯೋಗದ ಭೀಕರತೆ” ಎಂದಿದ್ದಾರೆ.

“ಕೊರೊನಾ 2ನೇ ಅಲೆಯ ನಂತರ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಅಸ್ಸೊಚಾಮ್ ವರದಿಯ ಪ್ರಕಾರ ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ. ಸರ್ಕಾರದ ಜನವಿರೋಧಿ ಜಾಗತೀಕರಣ ನೀತಿಯ ಫಲ ಇದಾಗಿದೆ. ದೇಶದಲ್ಲಿ ಜಾಗತೀಕರಣದ ಕೂಸನ್ನು ಕಾಂಗ್ರೆಸ್ ಪೋಷಿಸಿತು. ಅದರ ಉನ್ಮತ್ತ ಯೌವನವನ್ನು ಈಗ ಬಿಜೆಪಿ ಸರ್ಕಾರ ಪೋಷಿಸುತ್ತಿದೆ. ಇದರ ಪರಿಣಾಮ ಇಂದು ದೇಶದ 74% ಸಂಪತ್ತನ್ನು ಕೇವಲ 1% ಬಂಡವಾಳಗಾರರು ಅನುಭವಿಸುತ್ತಿದ್ದಾರೆ. ಉಳಿದ 99% ಜನರು, ಕೇವಲ 26% ಸಂಪತ್ತಿನಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಈ ಸಂಪತ್ತಿನ ಅಸಮಾನ ಹಂಚಿಕೆ ಸರಿಯಾಗಬೇಕು. ಉದ್ಯಮಿ ಕೇಂದ್ರಿತ ಉದ್ಯೋಗ ರಹಿತ ಅಭಿವೃದ್ಧಿಯ ಬದಲಿಗೆ ಜನಕೇಂದ್ರಿತ ಉದ್ಯೋಗ ಸೃಷ್ಟಿಗೆ ಪೂರಕವಾದ ಅಭಿವೃದ್ಧಿಗಾಗಿ ಆಗ್ರಹಿಸಿ ಬಲಿಷ್ಟ ಹೋರಾಟ ನಡೆಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಒಂದು ಮೊಬೈಲ್‌ ಮೂಲಕ ಸಮಾವೇಶದಲ್ಲಿ ಭಾಗಿಯಾದ ಹಳ್ಳಿಗಳ ಜನರು

ಎಐಡಿವೈಒ ಅಖಿಲ ಭಾರತ ಅಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ  “ನಿರುದ್ಯೋಗದ ವಿರುದ್ಧದ ಹೋರಾಟ ಅಲ್ಪಕಾಲೀನ ಹೋರಾಟವಲ್ಲ. ಅದು ಒಂದು ಸ್ಪಷ್ಟ ವೈಚಾರಿಕತೆಯ ಆಧಾರದ ಮೇಲೆ ನಡೆಸಬೇಕಾದ ದೀರ್ಘಕಾಲೀನ ಹೋರಾಟವಾಗಿದೆ. ಸಮಸ್ಯೆಯ ಆಳವನ್ನು ಮತ್ತು ಮೂಲವನ್ನು ನಾವು ಸರಿಯಾಗಿ ಗ್ರಹಿಸಬೇಕು. ವೈಜ್ಞಾನಿಕ ವಿಶ್ಲೇಷಣೆಯ ನಂತರ ನಾವು ಒಂದು ವಿಚಾರವನ್ನು ಅಂಗೀಕರಿಸಬೇಕು. ನಿರುದ್ಯೋಗದ ನಿರ್ಮೂಲನೆಗೆ ನಿಮ್ಮ ಕಾರ್ಯ ಯೋಜನೆ ಏನೆಂದು ನಾವು ಆಡಳಿತಗಾರರನ್ನು ಪ್ರಶ್ನಿಸಬೇಕು. ಸರ್ಕಾರಗಳು ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಕಡಿತಗೊಳಿಸುತ್ತಿವೆ. ಮೊದಲು ಈ ಪ್ರಕ್ರಿಯೆಯನ್ನು ನಿಲ್ಲಿಸಲು ಮತ್ತು ಹೊಸ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರವನ್ನು ಒತ್ತಾಯಿಸಬೇಕು. ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗಾಗಿ ನಿರ್ದಿಷ್ಟ ಹಣವನ್ನು ಮೀಸಲಿಡಲು ಆಗ್ರಹಿಸಬೇಕು” ಎಂದಿದ್ದಾರೆ.

“ಆರ್ಥಿಕ ಹಿಂಜರಿತ ಮತ್ತು ಕೋವಿಡ್‌ನ ದಾಳಿಯಿಂದ ಜನಸಾಮಾನ್ಯರು ಜೀವನ ನಿರ್ವಹಣೆಗೆ ಪರಿತಪಿಸುತ್ತಿರುವಾಗ, ಜನರಿಗೆ ಸಂಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು ರಾಜಕೀಯ ಪಕ್ಷಗಳು ಮುಖ್ಯಮಂತ್ರಿ ಗಾದಿ ವಿಷಯದಲ್ಲಿ ತಲ್ಲಿನವಾಗಿವೆ. ಸರ್ಕಾರ ನೀಡುತ್ತಿರುವ ಪುಡಿಗಾಸಿನ ಪರಿಹಾರ ಪ್ಯಾಕೇಜ್‌ಗಳಲ್ಲಿಯೂ 90% ರಷ್ಟು ಉಳ್ಳವರ ಪಾಲಾಗುತ್ತಿದೆ. ಆದರೆ ಜನಸಾಮಾನ್ಯರ ತೆರಿಗೆಯ ಹಣವನ್ನು ಖಾಸಗೀ ಮಾಲೀಕರಿಗೆ ಖರ್ಚು ಮಾಡಿತ್ತಿರುವ ಸರ್ಕಾರದ ನೀತಿಗಳನ್ನು ನಾವು ಸೋಲಿಸಬೇಕು. ಎಲ್ಲಾ ಕ್ಷೇತ್ರದಲ್ಲಿ ಗರಿಷ್ಠ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರಗಳನ್ನು ಎಚ್ಚರಿಸುವಂಥ ಐಕ್ಯ ಹೋರಾಟಗಳನ್ನು ಕಟ್ಟಬೇಕು” ಎಂದು ಯುವಜನರಿಗೆ ಕರೆ ನೀಡಿದ್ದಾರೆ.

ಎಐಡಿವೈಓ ರಾಜ್ಯ ಕಾರ್ಯದರ್ಶಿಗಳಾದ ಡಾ. ಜಿ.ಎಸ್. ಕುಮಾರ್ ‘ನಿರುದ್ಯೋಗವು ಯುವಜನರನ್ನು ಕಾಡುತ್ತಿರುವ ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಕೋವಿಡ್ ನಂತರದ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಂಡಿದೆ. ಬಿಡಿಬಿಡಿಯಾದ ಹೋರಾಟದ ಧ್ವನಿಗಳನ್ನು ಒಂದು ಐಕ್ಯ ಹೋರಾಟವನ್ನಾಗಿ ಮಾರ್ಪಡಿಸಲು ಇಂದಿನ ಸಮಾವೇಶ ಭೂಮಿಕೆಯಾಗಲಿದೆ’ ಎಂದಿದ್ದಾರೆ.

ಎಐಡಿವೈಓ ರಾಜ್ಯಾಧ್ಯಕ್ಷೆ ಕಾ. ಎಂ.ಉಮಾದೇವಿ, ‘ಇಂದು ವಿವಿಧ ಕ್ಷೇತ್ರದಲ್ಲಿ ಅರ್ಹತೆ ಮತ್ತು ಕೌಶಲ್ಯಗಳಿಸಿರುವ ಕೋಟ್ಯಾಂತರ ಯುವಜನರು ನಿರುದ್ಯೋಗದಿಂದ ಬೇಸತ್ತು ಸರ್ಕಾರಗಳ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವಮಾನದಿಂದ ಎಷ್ಟೋ ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭವಿಷ್ಯದ ಕುರಿತು ಭರವಸೆ ಕಳೆದುಕೊಂಡ ಉದ್ಯೋಗಾಕಾಂಕ್ಷಿಗಳನ್ನು ಒಗ್ಗೂಡಿಸಿ ಈ ಸಮಾವೇಶ ನಡೆಯುತ್ತಿದೆ. ಇಲ್ಲಿ ನಮ್ಮ ಹೋರಾಟದ ಹೆಜ್ಜೆಗಳನ್ನು ನಿರ್ಧರಿಸಿ, ಅದನ್ನು ಒಂದು ಗಮ್ಯಕ್ಕೆ ಕೊಂಡೊಯ್ಯಲು ನಾವು ಸನ್ನದ್ಧರಾಗೋಣ’ ಎಂದು ಕರೆ ನೀಡಿದ್ದಾರೆ.

ಸುಮಾರು 800 ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಮಾವೇಶದಲ್ಲಿ ನಿರುದ್ಯೋಗದ ವಿರುದ್ಧದ ಮುಖ್ಯ ಗೊತ್ತುವಳಿಯ ಜೊತೆಗೆ ಐದು ಉಪ ಗೊತ್ತುವಳಿಗಳನ್ನು ಮಂಡಿಸಿ, ಚರ್ಚಿಸಿ, ಸರ್ವಾನುಮತದಿಂದ ಅಂಗೀಕರಿಸಲಾಯಿತು. ಜೊತೆಗೆ ರಾಜ್ಯಮಟ್ಟದ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್ ಅವರನ್ನು ನೇಮಿಸಲಾಗಿದೆ.


 ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...