Homeಕರ್ನಾಟಕಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

’ಕೊರೊನಾ 2ನೇ ಅಲೆ ಬಳಿಕ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ’

- Advertisement -
- Advertisement -

“ದುಡಿಯುವ ಅರ್ಹತೆಯುಳ್ಳ ಪ್ರತಿಯೊಬ್ಬರಿಗೂ ಉದ್ಯೋಗ ಸೃಷ್ಟಿ ಮಾಡಬೇಕಿರುವುದು ಒಂದು ಜವಾಬ್ದಾರಿಯುತ ಸರ್ಕಾರದ ಆದ್ಯ ಕರ್ತವ್ಯ. ಆದರೆ, ನಮ್ಮ ಸರ್ಕಾರಗಳ ಆದ್ಯತೆ ಜನಸಾಮಾನ್ಯರ ಏಳಿಗೆಯಾಗಿಲ್ಲ, ಬದಲಿಗೆ ಕಾರ್ಪೊರೇಟ್ ಮನೆತನಗಳ ಸೇವೆಗೈಯುವುದು ಅವರ ಆದ್ಯತೆಯಾಗಿದೆ” ಎಂದು ಸಾಹಿತಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಭಾನುವಾರ ಎಐಡಿವೈಒ ರಾಜ್ಯ ಸಮಿತಿಯ ನೇತೃತ್ವದಲ್ಲಿ ನಡೆದ ’ನಿರುದ್ಯೋಗದ ವಿರುದ್ಧ ರಾಜ್ಯಮಟ್ಟದ ಆನ್ಲೆನ್ ಸಮಾವೇಶ’ವನ್ನು ಉದ್ಘಾಟಿಸಿ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಿದ್ದಾರೆ.

“ದೇಶದಲ್ಲಿ ಇಂದು 65 ಕೋಟಿ ಮಂದಿ ನಿರುದ್ಯೋಗಿಗಳಿದ್ದಾರೆ. ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗನೈಸೇಷನ್ ಪ್ರಕಾರ ಕಳೆದ 45 ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದಾಖಲಾಗಿದೆ. ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಭ್ರಮೆಯನ್ನು ಹಂಚಿದವರು ನಿರುದ್ಯೋಗವನ್ನು ನಿವಾರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 52 ಲಕ್ಷ ಹುದ್ದೆಗಳನ್ನು ಭರ್ತಿಮಾಡಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಮಾಡುವುದಾಗಿ ಹೇಳಿದ್ದ ಸರ್ಕಾರವೇ ನೀಡಿರುವ ಅಂಕಿಅಂಶದ ಪ್ರಕಾರ 2015 ರಲ್ಲಿ ಸರ್ಕಾರ ನೇಮಿಸಿದ ಹುದ್ದೆಗಳ ಸಂಖ್ಯೆ ಕೇವಲ 15,670  ಮಾತ್ರ. ಇತ್ತೀಚಿನ ವರ್ಷಗಳಲ್ಲಂತೂ ಯಾವುದೇ ನೇಮಕಾತಿಯೂ ನಡೆದಿಲ್ಲ” ಎಂದು ಅಂಕಿಅಂಶಗಳನ್ನು ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

“ಇತ್ತೀಚೆಗೆ ಉತ್ತರಪ್ರದೇಶದಲ್ಲಿ 368 ಗ್ರೂಪ್ ಡಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದಾಗ ಸುಮಾರು 23 ಲಕ್ಷ ಅರ್ಜಿಗಳು ಸಲ್ಲಿಕೆಯಾದವು. ಅದರಲ್ಲಿ 22 ಲಕ್ಷ ಜನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಪದವೀಧರರು ಮತ್ತು 265 ಜನರು ಡಾಕ್ಟರೇಟ್ ಪದವಿ ಪಡೆದ ಅರ್ಜಿದಾರರು ಇದ್ದರು. ಇದು ನಮ್ಮ ದೇಶದ ನಿರುದ್ಯೋಗದ ಭೀಕರತೆ” ಎಂದಿದ್ದಾರೆ.

“ಕೊರೊನಾ 2ನೇ ಅಲೆಯ ನಂತರ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಅಸ್ಸೊಚಾಮ್ ವರದಿಯ ಪ್ರಕಾರ ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ. ಸರ್ಕಾರದ ಜನವಿರೋಧಿ ಜಾಗತೀಕರಣ ನೀತಿಯ ಫಲ ಇದಾಗಿದೆ. ದೇಶದಲ್ಲಿ ಜಾಗತೀಕರಣದ ಕೂಸನ್ನು ಕಾಂಗ್ರೆಸ್ ಪೋಷಿಸಿತು. ಅದರ ಉನ್ಮತ್ತ ಯೌವನವನ್ನು ಈಗ ಬಿಜೆಪಿ ಸರ್ಕಾರ ಪೋಷಿಸುತ್ತಿದೆ. ಇದರ ಪರಿಣಾಮ ಇಂದು ದೇಶದ 74% ಸಂಪತ್ತನ್ನು ಕೇವಲ 1% ಬಂಡವಾಳಗಾರರು ಅನುಭವಿಸುತ್ತಿದ್ದಾರೆ. ಉಳಿದ 99% ಜನರು, ಕೇವಲ 26% ಸಂಪತ್ತಿನಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಈ ಸಂಪತ್ತಿನ ಅಸಮಾನ ಹಂಚಿಕೆ ಸರಿಯಾಗಬೇಕು. ಉದ್ಯಮಿ ಕೇಂದ್ರಿತ ಉದ್ಯೋಗ ರಹಿತ ಅಭಿವೃದ್ಧಿಯ ಬದಲಿಗೆ ಜನಕೇಂದ್ರಿತ ಉದ್ಯೋಗ ಸೃಷ್ಟಿಗೆ ಪೂರಕವಾದ ಅಭಿವೃದ್ಧಿಗಾಗಿ ಆಗ್ರಹಿಸಿ ಬಲಿಷ್ಟ ಹೋರಾಟ ನಡೆಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಒಂದು ಮೊಬೈಲ್‌ ಮೂಲಕ ಸಮಾವೇಶದಲ್ಲಿ ಭಾಗಿಯಾದ ಹಳ್ಳಿಗಳ ಜನರು

ಎಐಡಿವೈಒ ಅಖಿಲ ಭಾರತ ಅಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ  “ನಿರುದ್ಯೋಗದ ವಿರುದ್ಧದ ಹೋರಾಟ ಅಲ್ಪಕಾಲೀನ ಹೋರಾಟವಲ್ಲ. ಅದು ಒಂದು ಸ್ಪಷ್ಟ ವೈಚಾರಿಕತೆಯ ಆಧಾರದ ಮೇಲೆ ನಡೆಸಬೇಕಾದ ದೀರ್ಘಕಾಲೀನ ಹೋರಾಟವಾಗಿದೆ. ಸಮಸ್ಯೆಯ ಆಳವನ್ನು ಮತ್ತು ಮೂಲವನ್ನು ನಾವು ಸರಿಯಾಗಿ ಗ್ರಹಿಸಬೇಕು. ವೈಜ್ಞಾನಿಕ ವಿಶ್ಲೇಷಣೆಯ ನಂತರ ನಾವು ಒಂದು ವಿಚಾರವನ್ನು ಅಂಗೀಕರಿಸಬೇಕು. ನಿರುದ್ಯೋಗದ ನಿರ್ಮೂಲನೆಗೆ ನಿಮ್ಮ ಕಾರ್ಯ ಯೋಜನೆ ಏನೆಂದು ನಾವು ಆಡಳಿತಗಾರರನ್ನು ಪ್ರಶ್ನಿಸಬೇಕು. ಸರ್ಕಾರಗಳು ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಕಡಿತಗೊಳಿಸುತ್ತಿವೆ. ಮೊದಲು ಈ ಪ್ರಕ್ರಿಯೆಯನ್ನು ನಿಲ್ಲಿಸಲು ಮತ್ತು ಹೊಸ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರವನ್ನು ಒತ್ತಾಯಿಸಬೇಕು. ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗಾಗಿ ನಿರ್ದಿಷ್ಟ ಹಣವನ್ನು ಮೀಸಲಿಡಲು ಆಗ್ರಹಿಸಬೇಕು” ಎಂದಿದ್ದಾರೆ.

“ಆರ್ಥಿಕ ಹಿಂಜರಿತ ಮತ್ತು ಕೋವಿಡ್‌ನ ದಾಳಿಯಿಂದ ಜನಸಾಮಾನ್ಯರು ಜೀವನ ನಿರ್ವಹಣೆಗೆ ಪರಿತಪಿಸುತ್ತಿರುವಾಗ, ಜನರಿಗೆ ಸಂಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು ರಾಜಕೀಯ ಪಕ್ಷಗಳು ಮುಖ್ಯಮಂತ್ರಿ ಗಾದಿ ವಿಷಯದಲ್ಲಿ ತಲ್ಲಿನವಾಗಿವೆ. ಸರ್ಕಾರ ನೀಡುತ್ತಿರುವ ಪುಡಿಗಾಸಿನ ಪರಿಹಾರ ಪ್ಯಾಕೇಜ್‌ಗಳಲ್ಲಿಯೂ 90% ರಷ್ಟು ಉಳ್ಳವರ ಪಾಲಾಗುತ್ತಿದೆ. ಆದರೆ ಜನಸಾಮಾನ್ಯರ ತೆರಿಗೆಯ ಹಣವನ್ನು ಖಾಸಗೀ ಮಾಲೀಕರಿಗೆ ಖರ್ಚು ಮಾಡಿತ್ತಿರುವ ಸರ್ಕಾರದ ನೀತಿಗಳನ್ನು ನಾವು ಸೋಲಿಸಬೇಕು. ಎಲ್ಲಾ ಕ್ಷೇತ್ರದಲ್ಲಿ ಗರಿಷ್ಠ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರಗಳನ್ನು ಎಚ್ಚರಿಸುವಂಥ ಐಕ್ಯ ಹೋರಾಟಗಳನ್ನು ಕಟ್ಟಬೇಕು” ಎಂದು ಯುವಜನರಿಗೆ ಕರೆ ನೀಡಿದ್ದಾರೆ.

ಎಐಡಿವೈಓ ರಾಜ್ಯ ಕಾರ್ಯದರ್ಶಿಗಳಾದ ಡಾ. ಜಿ.ಎಸ್. ಕುಮಾರ್ ‘ನಿರುದ್ಯೋಗವು ಯುವಜನರನ್ನು ಕಾಡುತ್ತಿರುವ ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಕೋವಿಡ್ ನಂತರದ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಂಡಿದೆ. ಬಿಡಿಬಿಡಿಯಾದ ಹೋರಾಟದ ಧ್ವನಿಗಳನ್ನು ಒಂದು ಐಕ್ಯ ಹೋರಾಟವನ್ನಾಗಿ ಮಾರ್ಪಡಿಸಲು ಇಂದಿನ ಸಮಾವೇಶ ಭೂಮಿಕೆಯಾಗಲಿದೆ’ ಎಂದಿದ್ದಾರೆ.

ಎಐಡಿವೈಓ ರಾಜ್ಯಾಧ್ಯಕ್ಷೆ ಕಾ. ಎಂ.ಉಮಾದೇವಿ, ‘ಇಂದು ವಿವಿಧ ಕ್ಷೇತ್ರದಲ್ಲಿ ಅರ್ಹತೆ ಮತ್ತು ಕೌಶಲ್ಯಗಳಿಸಿರುವ ಕೋಟ್ಯಾಂತರ ಯುವಜನರು ನಿರುದ್ಯೋಗದಿಂದ ಬೇಸತ್ತು ಸರ್ಕಾರಗಳ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವಮಾನದಿಂದ ಎಷ್ಟೋ ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭವಿಷ್ಯದ ಕುರಿತು ಭರವಸೆ ಕಳೆದುಕೊಂಡ ಉದ್ಯೋಗಾಕಾಂಕ್ಷಿಗಳನ್ನು ಒಗ್ಗೂಡಿಸಿ ಈ ಸಮಾವೇಶ ನಡೆಯುತ್ತಿದೆ. ಇಲ್ಲಿ ನಮ್ಮ ಹೋರಾಟದ ಹೆಜ್ಜೆಗಳನ್ನು ನಿರ್ಧರಿಸಿ, ಅದನ್ನು ಒಂದು ಗಮ್ಯಕ್ಕೆ ಕೊಂಡೊಯ್ಯಲು ನಾವು ಸನ್ನದ್ಧರಾಗೋಣ’ ಎಂದು ಕರೆ ನೀಡಿದ್ದಾರೆ.

ಸುಮಾರು 800 ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಮಾವೇಶದಲ್ಲಿ ನಿರುದ್ಯೋಗದ ವಿರುದ್ಧದ ಮುಖ್ಯ ಗೊತ್ತುವಳಿಯ ಜೊತೆಗೆ ಐದು ಉಪ ಗೊತ್ತುವಳಿಗಳನ್ನು ಮಂಡಿಸಿ, ಚರ್ಚಿಸಿ, ಸರ್ವಾನುಮತದಿಂದ ಅಂಗೀಕರಿಸಲಾಯಿತು. ಜೊತೆಗೆ ರಾಜ್ಯಮಟ್ಟದ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್ ಅವರನ್ನು ನೇಮಿಸಲಾಗಿದೆ.


 ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...