Homeಕರ್ನಾಟಕಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

’ಕೊರೊನಾ 2ನೇ ಅಲೆ ಬಳಿಕ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ’

- Advertisement -
- Advertisement -

“ದುಡಿಯುವ ಅರ್ಹತೆಯುಳ್ಳ ಪ್ರತಿಯೊಬ್ಬರಿಗೂ ಉದ್ಯೋಗ ಸೃಷ್ಟಿ ಮಾಡಬೇಕಿರುವುದು ಒಂದು ಜವಾಬ್ದಾರಿಯುತ ಸರ್ಕಾರದ ಆದ್ಯ ಕರ್ತವ್ಯ. ಆದರೆ, ನಮ್ಮ ಸರ್ಕಾರಗಳ ಆದ್ಯತೆ ಜನಸಾಮಾನ್ಯರ ಏಳಿಗೆಯಾಗಿಲ್ಲ, ಬದಲಿಗೆ ಕಾರ್ಪೊರೇಟ್ ಮನೆತನಗಳ ಸೇವೆಗೈಯುವುದು ಅವರ ಆದ್ಯತೆಯಾಗಿದೆ” ಎಂದು ಸಾಹಿತಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಭಾನುವಾರ ಎಐಡಿವೈಒ ರಾಜ್ಯ ಸಮಿತಿಯ ನೇತೃತ್ವದಲ್ಲಿ ನಡೆದ ’ನಿರುದ್ಯೋಗದ ವಿರುದ್ಧ ರಾಜ್ಯಮಟ್ಟದ ಆನ್ಲೆನ್ ಸಮಾವೇಶ’ವನ್ನು ಉದ್ಘಾಟಿಸಿ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಿದ್ದಾರೆ.

“ದೇಶದಲ್ಲಿ ಇಂದು 65 ಕೋಟಿ ಮಂದಿ ನಿರುದ್ಯೋಗಿಗಳಿದ್ದಾರೆ. ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗನೈಸೇಷನ್ ಪ್ರಕಾರ ಕಳೆದ 45 ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದಾಖಲಾಗಿದೆ. ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಭ್ರಮೆಯನ್ನು ಹಂಚಿದವರು ನಿರುದ್ಯೋಗವನ್ನು ನಿವಾರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 52 ಲಕ್ಷ ಹುದ್ದೆಗಳನ್ನು ಭರ್ತಿಮಾಡಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಮಾಡುವುದಾಗಿ ಹೇಳಿದ್ದ ಸರ್ಕಾರವೇ ನೀಡಿರುವ ಅಂಕಿಅಂಶದ ಪ್ರಕಾರ 2015 ರಲ್ಲಿ ಸರ್ಕಾರ ನೇಮಿಸಿದ ಹುದ್ದೆಗಳ ಸಂಖ್ಯೆ ಕೇವಲ 15,670  ಮಾತ್ರ. ಇತ್ತೀಚಿನ ವರ್ಷಗಳಲ್ಲಂತೂ ಯಾವುದೇ ನೇಮಕಾತಿಯೂ ನಡೆದಿಲ್ಲ” ಎಂದು ಅಂಕಿಅಂಶಗಳನ್ನು ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

“ಇತ್ತೀಚೆಗೆ ಉತ್ತರಪ್ರದೇಶದಲ್ಲಿ 368 ಗ್ರೂಪ್ ಡಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದಾಗ ಸುಮಾರು 23 ಲಕ್ಷ ಅರ್ಜಿಗಳು ಸಲ್ಲಿಕೆಯಾದವು. ಅದರಲ್ಲಿ 22 ಲಕ್ಷ ಜನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಪದವೀಧರರು ಮತ್ತು 265 ಜನರು ಡಾಕ್ಟರೇಟ್ ಪದವಿ ಪಡೆದ ಅರ್ಜಿದಾರರು ಇದ್ದರು. ಇದು ನಮ್ಮ ದೇಶದ ನಿರುದ್ಯೋಗದ ಭೀಕರತೆ” ಎಂದಿದ್ದಾರೆ.

“ಕೊರೊನಾ 2ನೇ ಅಲೆಯ ನಂತರ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಅಸ್ಸೊಚಾಮ್ ವರದಿಯ ಪ್ರಕಾರ ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ. ಸರ್ಕಾರದ ಜನವಿರೋಧಿ ಜಾಗತೀಕರಣ ನೀತಿಯ ಫಲ ಇದಾಗಿದೆ. ದೇಶದಲ್ಲಿ ಜಾಗತೀಕರಣದ ಕೂಸನ್ನು ಕಾಂಗ್ರೆಸ್ ಪೋಷಿಸಿತು. ಅದರ ಉನ್ಮತ್ತ ಯೌವನವನ್ನು ಈಗ ಬಿಜೆಪಿ ಸರ್ಕಾರ ಪೋಷಿಸುತ್ತಿದೆ. ಇದರ ಪರಿಣಾಮ ಇಂದು ದೇಶದ 74% ಸಂಪತ್ತನ್ನು ಕೇವಲ 1% ಬಂಡವಾಳಗಾರರು ಅನುಭವಿಸುತ್ತಿದ್ದಾರೆ. ಉಳಿದ 99% ಜನರು, ಕೇವಲ 26% ಸಂಪತ್ತಿನಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಈ ಸಂಪತ್ತಿನ ಅಸಮಾನ ಹಂಚಿಕೆ ಸರಿಯಾಗಬೇಕು. ಉದ್ಯಮಿ ಕೇಂದ್ರಿತ ಉದ್ಯೋಗ ರಹಿತ ಅಭಿವೃದ್ಧಿಯ ಬದಲಿಗೆ ಜನಕೇಂದ್ರಿತ ಉದ್ಯೋಗ ಸೃಷ್ಟಿಗೆ ಪೂರಕವಾದ ಅಭಿವೃದ್ಧಿಗಾಗಿ ಆಗ್ರಹಿಸಿ ಬಲಿಷ್ಟ ಹೋರಾಟ ನಡೆಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಒಂದು ಮೊಬೈಲ್‌ ಮೂಲಕ ಸಮಾವೇಶದಲ್ಲಿ ಭಾಗಿಯಾದ ಹಳ್ಳಿಗಳ ಜನರು

ಎಐಡಿವೈಒ ಅಖಿಲ ಭಾರತ ಅಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ  “ನಿರುದ್ಯೋಗದ ವಿರುದ್ಧದ ಹೋರಾಟ ಅಲ್ಪಕಾಲೀನ ಹೋರಾಟವಲ್ಲ. ಅದು ಒಂದು ಸ್ಪಷ್ಟ ವೈಚಾರಿಕತೆಯ ಆಧಾರದ ಮೇಲೆ ನಡೆಸಬೇಕಾದ ದೀರ್ಘಕಾಲೀನ ಹೋರಾಟವಾಗಿದೆ. ಸಮಸ್ಯೆಯ ಆಳವನ್ನು ಮತ್ತು ಮೂಲವನ್ನು ನಾವು ಸರಿಯಾಗಿ ಗ್ರಹಿಸಬೇಕು. ವೈಜ್ಞಾನಿಕ ವಿಶ್ಲೇಷಣೆಯ ನಂತರ ನಾವು ಒಂದು ವಿಚಾರವನ್ನು ಅಂಗೀಕರಿಸಬೇಕು. ನಿರುದ್ಯೋಗದ ನಿರ್ಮೂಲನೆಗೆ ನಿಮ್ಮ ಕಾರ್ಯ ಯೋಜನೆ ಏನೆಂದು ನಾವು ಆಡಳಿತಗಾರರನ್ನು ಪ್ರಶ್ನಿಸಬೇಕು. ಸರ್ಕಾರಗಳು ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಕಡಿತಗೊಳಿಸುತ್ತಿವೆ. ಮೊದಲು ಈ ಪ್ರಕ್ರಿಯೆಯನ್ನು ನಿಲ್ಲಿಸಲು ಮತ್ತು ಹೊಸ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರವನ್ನು ಒತ್ತಾಯಿಸಬೇಕು. ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗಾಗಿ ನಿರ್ದಿಷ್ಟ ಹಣವನ್ನು ಮೀಸಲಿಡಲು ಆಗ್ರಹಿಸಬೇಕು” ಎಂದಿದ್ದಾರೆ.

“ಆರ್ಥಿಕ ಹಿಂಜರಿತ ಮತ್ತು ಕೋವಿಡ್‌ನ ದಾಳಿಯಿಂದ ಜನಸಾಮಾನ್ಯರು ಜೀವನ ನಿರ್ವಹಣೆಗೆ ಪರಿತಪಿಸುತ್ತಿರುವಾಗ, ಜನರಿಗೆ ಸಂಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು ರಾಜಕೀಯ ಪಕ್ಷಗಳು ಮುಖ್ಯಮಂತ್ರಿ ಗಾದಿ ವಿಷಯದಲ್ಲಿ ತಲ್ಲಿನವಾಗಿವೆ. ಸರ್ಕಾರ ನೀಡುತ್ತಿರುವ ಪುಡಿಗಾಸಿನ ಪರಿಹಾರ ಪ್ಯಾಕೇಜ್‌ಗಳಲ್ಲಿಯೂ 90% ರಷ್ಟು ಉಳ್ಳವರ ಪಾಲಾಗುತ್ತಿದೆ. ಆದರೆ ಜನಸಾಮಾನ್ಯರ ತೆರಿಗೆಯ ಹಣವನ್ನು ಖಾಸಗೀ ಮಾಲೀಕರಿಗೆ ಖರ್ಚು ಮಾಡಿತ್ತಿರುವ ಸರ್ಕಾರದ ನೀತಿಗಳನ್ನು ನಾವು ಸೋಲಿಸಬೇಕು. ಎಲ್ಲಾ ಕ್ಷೇತ್ರದಲ್ಲಿ ಗರಿಷ್ಠ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರಗಳನ್ನು ಎಚ್ಚರಿಸುವಂಥ ಐಕ್ಯ ಹೋರಾಟಗಳನ್ನು ಕಟ್ಟಬೇಕು” ಎಂದು ಯುವಜನರಿಗೆ ಕರೆ ನೀಡಿದ್ದಾರೆ.

ಎಐಡಿವೈಓ ರಾಜ್ಯ ಕಾರ್ಯದರ್ಶಿಗಳಾದ ಡಾ. ಜಿ.ಎಸ್. ಕುಮಾರ್ ‘ನಿರುದ್ಯೋಗವು ಯುವಜನರನ್ನು ಕಾಡುತ್ತಿರುವ ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಕೋವಿಡ್ ನಂತರದ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಂಡಿದೆ. ಬಿಡಿಬಿಡಿಯಾದ ಹೋರಾಟದ ಧ್ವನಿಗಳನ್ನು ಒಂದು ಐಕ್ಯ ಹೋರಾಟವನ್ನಾಗಿ ಮಾರ್ಪಡಿಸಲು ಇಂದಿನ ಸಮಾವೇಶ ಭೂಮಿಕೆಯಾಗಲಿದೆ’ ಎಂದಿದ್ದಾರೆ.

ಎಐಡಿವೈಓ ರಾಜ್ಯಾಧ್ಯಕ್ಷೆ ಕಾ. ಎಂ.ಉಮಾದೇವಿ, ‘ಇಂದು ವಿವಿಧ ಕ್ಷೇತ್ರದಲ್ಲಿ ಅರ್ಹತೆ ಮತ್ತು ಕೌಶಲ್ಯಗಳಿಸಿರುವ ಕೋಟ್ಯಾಂತರ ಯುವಜನರು ನಿರುದ್ಯೋಗದಿಂದ ಬೇಸತ್ತು ಸರ್ಕಾರಗಳ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವಮಾನದಿಂದ ಎಷ್ಟೋ ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭವಿಷ್ಯದ ಕುರಿತು ಭರವಸೆ ಕಳೆದುಕೊಂಡ ಉದ್ಯೋಗಾಕಾಂಕ್ಷಿಗಳನ್ನು ಒಗ್ಗೂಡಿಸಿ ಈ ಸಮಾವೇಶ ನಡೆಯುತ್ತಿದೆ. ಇಲ್ಲಿ ನಮ್ಮ ಹೋರಾಟದ ಹೆಜ್ಜೆಗಳನ್ನು ನಿರ್ಧರಿಸಿ, ಅದನ್ನು ಒಂದು ಗಮ್ಯಕ್ಕೆ ಕೊಂಡೊಯ್ಯಲು ನಾವು ಸನ್ನದ್ಧರಾಗೋಣ’ ಎಂದು ಕರೆ ನೀಡಿದ್ದಾರೆ.

ಸುಮಾರು 800 ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಮಾವೇಶದಲ್ಲಿ ನಿರುದ್ಯೋಗದ ವಿರುದ್ಧದ ಮುಖ್ಯ ಗೊತ್ತುವಳಿಯ ಜೊತೆಗೆ ಐದು ಉಪ ಗೊತ್ತುವಳಿಗಳನ್ನು ಮಂಡಿಸಿ, ಚರ್ಚಿಸಿ, ಸರ್ವಾನುಮತದಿಂದ ಅಂಗೀಕರಿಸಲಾಯಿತು. ಜೊತೆಗೆ ರಾಜ್ಯಮಟ್ಟದ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್ ಅವರನ್ನು ನೇಮಿಸಲಾಗಿದೆ.


 ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಪಿಎಂ...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೊಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ...

ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’

ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...