Homeಕರ್ನಾಟಕಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

ಸರ್ಕಾರಗಳ ಆದ್ಯತೆ ಜನಸಾಮಾನ್ಯರಲ್ಲ, ಕಾರ್ಪೊರೇಟರ್‌ಗಳು- ಡಾ.ಬರಗೂರು ರಾಮಚಂದ್ರಪ್ಪ

’ಕೊರೊನಾ 2ನೇ ಅಲೆ ಬಳಿಕ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ’

- Advertisement -
- Advertisement -

“ದುಡಿಯುವ ಅರ್ಹತೆಯುಳ್ಳ ಪ್ರತಿಯೊಬ್ಬರಿಗೂ ಉದ್ಯೋಗ ಸೃಷ್ಟಿ ಮಾಡಬೇಕಿರುವುದು ಒಂದು ಜವಾಬ್ದಾರಿಯುತ ಸರ್ಕಾರದ ಆದ್ಯ ಕರ್ತವ್ಯ. ಆದರೆ, ನಮ್ಮ ಸರ್ಕಾರಗಳ ಆದ್ಯತೆ ಜನಸಾಮಾನ್ಯರ ಏಳಿಗೆಯಾಗಿಲ್ಲ, ಬದಲಿಗೆ ಕಾರ್ಪೊರೇಟ್ ಮನೆತನಗಳ ಸೇವೆಗೈಯುವುದು ಅವರ ಆದ್ಯತೆಯಾಗಿದೆ” ಎಂದು ಸಾಹಿತಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಭಾನುವಾರ ಎಐಡಿವೈಒ ರಾಜ್ಯ ಸಮಿತಿಯ ನೇತೃತ್ವದಲ್ಲಿ ನಡೆದ ’ನಿರುದ್ಯೋಗದ ವಿರುದ್ಧ ರಾಜ್ಯಮಟ್ಟದ ಆನ್ಲೆನ್ ಸಮಾವೇಶ’ವನ್ನು ಉದ್ಘಾಟಿಸಿ ಡಾ.ಬರಗೂರು ರಾಮಚಂದ್ರಪ್ಪ ಮಾತನಾಡಿದ್ದಾರೆ.

“ದೇಶದಲ್ಲಿ ಇಂದು 65 ಕೋಟಿ ಮಂದಿ ನಿರುದ್ಯೋಗಿಗಳಿದ್ದಾರೆ. ನ್ಯಾಷನಲ್ ಸ್ಯಾಂಪಲ್ ಸರ್ವೆ ಆರ್ಗನೈಸೇಷನ್ ಪ್ರಕಾರ ಕಳೆದ 45 ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದಾಖಲಾಗಿದೆ. ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದು ಭ್ರಮೆಯನ್ನು ಹಂಚಿದವರು ನಿರುದ್ಯೋಗವನ್ನು ನಿವಾರಿಸುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 52 ಲಕ್ಷ ಹುದ್ದೆಗಳನ್ನು ಭರ್ತಿಮಾಡಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಮಾಡುವುದಾಗಿ ಹೇಳಿದ್ದ ಸರ್ಕಾರವೇ ನೀಡಿರುವ ಅಂಕಿಅಂಶದ ಪ್ರಕಾರ 2015 ರಲ್ಲಿ ಸರ್ಕಾರ ನೇಮಿಸಿದ ಹುದ್ದೆಗಳ ಸಂಖ್ಯೆ ಕೇವಲ 15,670  ಮಾತ್ರ. ಇತ್ತೀಚಿನ ವರ್ಷಗಳಲ್ಲಂತೂ ಯಾವುದೇ ನೇಮಕಾತಿಯೂ ನಡೆದಿಲ್ಲ” ಎಂದು ಅಂಕಿಅಂಶಗಳನ್ನು ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

“ಇತ್ತೀಚೆಗೆ ಉತ್ತರಪ್ರದೇಶದಲ್ಲಿ 368 ಗ್ರೂಪ್ ಡಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದಾಗ ಸುಮಾರು 23 ಲಕ್ಷ ಅರ್ಜಿಗಳು ಸಲ್ಲಿಕೆಯಾದವು. ಅದರಲ್ಲಿ 22 ಲಕ್ಷ ಜನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಪದವೀಧರರು ಮತ್ತು 265 ಜನರು ಡಾಕ್ಟರೇಟ್ ಪದವಿ ಪಡೆದ ಅರ್ಜಿದಾರರು ಇದ್ದರು. ಇದು ನಮ್ಮ ದೇಶದ ನಿರುದ್ಯೋಗದ ಭೀಕರತೆ” ಎಂದಿದ್ದಾರೆ.

“ಕೊರೊನಾ 2ನೇ ಅಲೆಯ ನಂತರ ಸುಮಾರು 1.47 ಕೋಟಿ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಅಸ್ಸೊಚಾಮ್ ವರದಿಯ ಪ್ರಕಾರ ದೇಶದ 100 ಮಂದಿ ಬಿಲಿಯನೇರ್‌ಗಳ ಆದಾಯದಲ್ಲಿ 13 ಲಕ್ಷ ಕೋಟಿ ರೂ.ಗಳ ಏರಿಕೆಯಾಗಿದೆ. ಸರ್ಕಾರದ ಜನವಿರೋಧಿ ಜಾಗತೀಕರಣ ನೀತಿಯ ಫಲ ಇದಾಗಿದೆ. ದೇಶದಲ್ಲಿ ಜಾಗತೀಕರಣದ ಕೂಸನ್ನು ಕಾಂಗ್ರೆಸ್ ಪೋಷಿಸಿತು. ಅದರ ಉನ್ಮತ್ತ ಯೌವನವನ್ನು ಈಗ ಬಿಜೆಪಿ ಸರ್ಕಾರ ಪೋಷಿಸುತ್ತಿದೆ. ಇದರ ಪರಿಣಾಮ ಇಂದು ದೇಶದ 74% ಸಂಪತ್ತನ್ನು ಕೇವಲ 1% ಬಂಡವಾಳಗಾರರು ಅನುಭವಿಸುತ್ತಿದ್ದಾರೆ. ಉಳಿದ 99% ಜನರು, ಕೇವಲ 26% ಸಂಪತ್ತಿನಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಈ ಸಂಪತ್ತಿನ ಅಸಮಾನ ಹಂಚಿಕೆ ಸರಿಯಾಗಬೇಕು. ಉದ್ಯಮಿ ಕೇಂದ್ರಿತ ಉದ್ಯೋಗ ರಹಿತ ಅಭಿವೃದ್ಧಿಯ ಬದಲಿಗೆ ಜನಕೇಂದ್ರಿತ ಉದ್ಯೋಗ ಸೃಷ್ಟಿಗೆ ಪೂರಕವಾದ ಅಭಿವೃದ್ಧಿಗಾಗಿ ಆಗ್ರಹಿಸಿ ಬಲಿಷ್ಟ ಹೋರಾಟ ನಡೆಸಬೇಕು” ಎಂದು ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಒಂದು ಮೊಬೈಲ್‌ ಮೂಲಕ ಸಮಾವೇಶದಲ್ಲಿ ಭಾಗಿಯಾದ ಹಳ್ಳಿಗಳ ಜನರು

ಎಐಡಿವೈಒ ಅಖಿಲ ಭಾರತ ಅಧ್ಯಕ್ಷರಾದ ಕಾ. ರಾಮಾಂಜನಪ್ಪ ಆಲ್ದಳ್ಳಿ  “ನಿರುದ್ಯೋಗದ ವಿರುದ್ಧದ ಹೋರಾಟ ಅಲ್ಪಕಾಲೀನ ಹೋರಾಟವಲ್ಲ. ಅದು ಒಂದು ಸ್ಪಷ್ಟ ವೈಚಾರಿಕತೆಯ ಆಧಾರದ ಮೇಲೆ ನಡೆಸಬೇಕಾದ ದೀರ್ಘಕಾಲೀನ ಹೋರಾಟವಾಗಿದೆ. ಸಮಸ್ಯೆಯ ಆಳವನ್ನು ಮತ್ತು ಮೂಲವನ್ನು ನಾವು ಸರಿಯಾಗಿ ಗ್ರಹಿಸಬೇಕು. ವೈಜ್ಞಾನಿಕ ವಿಶ್ಲೇಷಣೆಯ ನಂತರ ನಾವು ಒಂದು ವಿಚಾರವನ್ನು ಅಂಗೀಕರಿಸಬೇಕು. ನಿರುದ್ಯೋಗದ ನಿರ್ಮೂಲನೆಗೆ ನಿಮ್ಮ ಕಾರ್ಯ ಯೋಜನೆ ಏನೆಂದು ನಾವು ಆಡಳಿತಗಾರರನ್ನು ಪ್ರಶ್ನಿಸಬೇಕು. ಸರ್ಕಾರಗಳು ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಕಡಿತಗೊಳಿಸುತ್ತಿವೆ. ಮೊದಲು ಈ ಪ್ರಕ್ರಿಯೆಯನ್ನು ನಿಲ್ಲಿಸಲು ಮತ್ತು ಹೊಸ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರವನ್ನು ಒತ್ತಾಯಿಸಬೇಕು. ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗಾಗಿ ನಿರ್ದಿಷ್ಟ ಹಣವನ್ನು ಮೀಸಲಿಡಲು ಆಗ್ರಹಿಸಬೇಕು” ಎಂದಿದ್ದಾರೆ.

“ಆರ್ಥಿಕ ಹಿಂಜರಿತ ಮತ್ತು ಕೋವಿಡ್‌ನ ದಾಳಿಯಿಂದ ಜನಸಾಮಾನ್ಯರು ಜೀವನ ನಿರ್ವಹಣೆಗೆ ಪರಿತಪಿಸುತ್ತಿರುವಾಗ, ಜನರಿಗೆ ಸಂಕಷ್ಟಗಳಿಗೆ ಸ್ಪಂದಿಸುವುದನ್ನು ಬಿಟ್ಟು ರಾಜಕೀಯ ಪಕ್ಷಗಳು ಮುಖ್ಯಮಂತ್ರಿ ಗಾದಿ ವಿಷಯದಲ್ಲಿ ತಲ್ಲಿನವಾಗಿವೆ. ಸರ್ಕಾರ ನೀಡುತ್ತಿರುವ ಪುಡಿಗಾಸಿನ ಪರಿಹಾರ ಪ್ಯಾಕೇಜ್‌ಗಳಲ್ಲಿಯೂ 90% ರಷ್ಟು ಉಳ್ಳವರ ಪಾಲಾಗುತ್ತಿದೆ. ಆದರೆ ಜನಸಾಮಾನ್ಯರ ತೆರಿಗೆಯ ಹಣವನ್ನು ಖಾಸಗೀ ಮಾಲೀಕರಿಗೆ ಖರ್ಚು ಮಾಡಿತ್ತಿರುವ ಸರ್ಕಾರದ ನೀತಿಗಳನ್ನು ನಾವು ಸೋಲಿಸಬೇಕು. ಎಲ್ಲಾ ಕ್ಷೇತ್ರದಲ್ಲಿ ಗರಿಷ್ಠ ಉದ್ಯೋಗಗಳ ಸೃಷ್ಟಿಗಾಗಿ ನಾವು ಸರ್ಕಾರಗಳನ್ನು ಎಚ್ಚರಿಸುವಂಥ ಐಕ್ಯ ಹೋರಾಟಗಳನ್ನು ಕಟ್ಟಬೇಕು” ಎಂದು ಯುವಜನರಿಗೆ ಕರೆ ನೀಡಿದ್ದಾರೆ.

ಎಐಡಿವೈಓ ರಾಜ್ಯ ಕಾರ್ಯದರ್ಶಿಗಳಾದ ಡಾ. ಜಿ.ಎಸ್. ಕುಮಾರ್ ‘ನಿರುದ್ಯೋಗವು ಯುವಜನರನ್ನು ಕಾಡುತ್ತಿರುವ ಅತ್ಯಂತ ಗಂಭೀರ ಸಮಸ್ಯೆಯಾಗಿದೆ. ಕೋವಿಡ್ ನಂತರದ ದಿನಗಳಲ್ಲಿ ಮತ್ತಷ್ಟು ಉಲ್ಬಣಗೊಂಡಿದೆ. ಬಿಡಿಬಿಡಿಯಾದ ಹೋರಾಟದ ಧ್ವನಿಗಳನ್ನು ಒಂದು ಐಕ್ಯ ಹೋರಾಟವನ್ನಾಗಿ ಮಾರ್ಪಡಿಸಲು ಇಂದಿನ ಸಮಾವೇಶ ಭೂಮಿಕೆಯಾಗಲಿದೆ’ ಎಂದಿದ್ದಾರೆ.

ಎಐಡಿವೈಓ ರಾಜ್ಯಾಧ್ಯಕ್ಷೆ ಕಾ. ಎಂ.ಉಮಾದೇವಿ, ‘ಇಂದು ವಿವಿಧ ಕ್ಷೇತ್ರದಲ್ಲಿ ಅರ್ಹತೆ ಮತ್ತು ಕೌಶಲ್ಯಗಳಿಸಿರುವ ಕೋಟ್ಯಾಂತರ ಯುವಜನರು ನಿರುದ್ಯೋಗದಿಂದ ಬೇಸತ್ತು ಸರ್ಕಾರಗಳ ಮೇಲೆ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅವಮಾನದಿಂದ ಎಷ್ಟೋ ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭವಿಷ್ಯದ ಕುರಿತು ಭರವಸೆ ಕಳೆದುಕೊಂಡ ಉದ್ಯೋಗಾಕಾಂಕ್ಷಿಗಳನ್ನು ಒಗ್ಗೂಡಿಸಿ ಈ ಸಮಾವೇಶ ನಡೆಯುತ್ತಿದೆ. ಇಲ್ಲಿ ನಮ್ಮ ಹೋರಾಟದ ಹೆಜ್ಜೆಗಳನ್ನು ನಿರ್ಧರಿಸಿ, ಅದನ್ನು ಒಂದು ಗಮ್ಯಕ್ಕೆ ಕೊಂಡೊಯ್ಯಲು ನಾವು ಸನ್ನದ್ಧರಾಗೋಣ’ ಎಂದು ಕರೆ ನೀಡಿದ್ದಾರೆ.

ಸುಮಾರು 800 ಪ್ರತಿನಿಧಿಗಳು ಭಾಗವಹಿಸಿದ್ದ ಈ ಸಮಾವೇಶದಲ್ಲಿ ನಿರುದ್ಯೋಗದ ವಿರುದ್ಧದ ಮುಖ್ಯ ಗೊತ್ತುವಳಿಯ ಜೊತೆಗೆ ಐದು ಉಪ ಗೊತ್ತುವಳಿಗಳನ್ನು ಮಂಡಿಸಿ, ಚರ್ಚಿಸಿ, ಸರ್ವಾನುಮತದಿಂದ ಅಂಗೀಕರಿಸಲಾಯಿತು. ಜೊತೆಗೆ ರಾಜ್ಯಮಟ್ಟದ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಶರಣಪ್ಪ ಉದ್ಬಾಳ್ ಅವರನ್ನು ನೇಮಿಸಲಾಗಿದೆ.


 ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...