Homeಅಂತರಾಷ್ಟ್ರೀಯಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

ಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

- Advertisement -
- Advertisement -

| ಜಿ. ಆರ್. ವಿದ್ಯಾರಣ್ಯ |

ಕೈದಿಗಳು ಪೋಲಿಸ್ ಆತಿಥ್ಯದಲ್ಲಿ ತಾವು ಮಾಡದೇ ಇದ್ದ ತಪ್ಪನ್ನೂ ಸಹ ತಮ್ಮದೇ ಎಂದು ಕೆಲವೊಮ್ಮೆ ಒಪ್ಪಿಕೊಳ್ಳುವುದು ಏಕೆ ಎಂದು ಯೋಚಿಸಿದ್ದೀರಾ? ಇಲ್ಲಿದೆ ಒಂದು ವೈಜ್ಞಾನಿಕ ಉತ್ತರ, ನಾನು ಹೇಳುತ್ತಿರುವುದು ಓರ್ವ ವಿಕಸಿತ ದೇಶದ ಪೋಲಿಸ್ ಕಾರ್ಯ ವೈಖರಿಯನ್ನು ಆಧರಿಸಿದ ವಿಚಾರವಾದ. (ಡಿಸ್ಕ್ಲೇಮರ್: ಇದು ನಮ್ಮ ದೇಶದ ಪೋಲಿಸ್ ಬಗ್ಗೆ ಅಲ್ಲ, ಏಕೆಂದರೆ ಅವರ ತನಿಖಾ/ವಿಚಾರಣಾ ವೈಖರಿಯ ಬಗ್ಗೆ ನನಗೆ ಯಾವ ವೈಯುಕ್ತಿಕ ಅನುಭವವೂ ಇಲ್ಲ). ಇದು ಒಂದು ಆಟದ ರೀತಿಯಲ್ಲಿರುವ ತತ್ವವಾದ. ಇದನ್ನು “ದಿ ಪ್ರಿಸನರ್ಸ್ ಡೈಲೆಮ್ಮಾ” (ಕೈದಿಗಳ ಉಭಯ ಸಂಕಟ) ಎನ್ನುತ್ತಾರೆ.

ಒಂದು ದಿನ, ಏಕ ಕಾಲಕ್ಕೆ, ನಗರದ ಪೋಲಿಸರು ಇಬ್ಬರು ಅಪರಾಧಿಗಳನ್ನು, ಒಂದೇ ರೀತಿಯ ಅಪರಾಧಕ್ಕೆ ಬಂಧಿಸಿ, ಒಂದೇ ಲಾಕಪ್ಪಿನ ಬೇರೆ ಬೇರೆ ಕೋಣೆಯಲ್ಲಿ ಹಾಕುತ್ತಾರೆ. ಒಬ್ಬನ ಹೆಸರು “ಎ”, ಇನ್ನೊಬ್ಬನ ಹೆಸರು “ಬಿ” ಎಂದು ಇಟ್ಟುಕೊಳ್ಳೋಣ. ಇಬ್ಬರಿಗೂ ಪರಸ್ಪರ ಯಾವ ರೀತಿಯ ಪರಿಚಯವೂ ಇಲ್ಲ, ಹೆಸರಾಗಲೀ ಗೊತ್ತಿಲ್ಲ, ಕೇಳಿಲ್ಲ, ಸಂಬಂಧವಾಗಲೀ, ಸಂಪರ್ಕವಾಗಲೀ, ಅನುಕಂಪವಾಗಲೀ ಇಲ್ಲ. ಇಬ್ಬರಿಗೂ ಅವರು ಮಾಡಿ ಸಿಕ್ಕಿಬಿದ್ದ ಅಪರಾಧಕ್ಕೆ ಸಿಗಬಹುದಾದ ಶಿಕ್ಷೆಯೂ ಒಂದೇ ಪ್ರಮಾಣದ್ದಾಗಿರುತ್ತದೆ. ವಿಚಾರಣಗೆ ಬಂದ ತನಿಖಾಧಿಕಾರಿ ಇಬ್ಬರ ದಾಖಲೆಯನ್ನು ನೋಡಿ ಇಬ್ಬರಿಗೂ ಒಂದು ವರ್ಷ ಕಾರಾಗೃಹವಾಸ ಖಚಿತ ಎಂದುಕೊಳ್ಳುತ್ತಾನೆ. ಆದರೆ ಏನೋ ಅನುಮಾನ ಬಂದು, ಇವರಿಬ್ಬರೂ ಸೇರಿ ಇನ್ಯಾವುದೋ ದೊಡ್ಡ ಅಪರಾಧ ಏಕೆ ಎಸಗಿರಬಾರದು ಎಂದು ಯೋಚಿಸುತ್ತಾನೆ.

ಅದೇ ಲಹರಿಯಲ್ಲಿ ತನ್ನ ತನಿಖೆ ಮುಂದುವರೆಸುತ್ತಾ, ಮೊದಲು “ಎ” ಜೊತೆ ಮಾತನಾಡುತ್ತಾ “ನೋಡು, ಇಂದು ನೀನು ಸಿಕ್ಕಿಬಿದ್ದ ಅಪರಾಧಕ್ಕೆ ನಿನಗೆ ಒಂದು ವರ್ಷ ಜೈಲು ಶಿಕ್ಷೆ ಖಚಿತ ಆದರೆ ಹೋದ ವಾರ ನೀನು ಮತ್ತು ನಿನ್ನ ಸಂಗಡಿಗ ಮಾಡಿದ ಜಂಟಿ ಅಪರಾಧಕ್ಕೂ ಸೇರಿ, ಒಟ್ಟು ಮೂರು ವರ್ಷ ಜೈಲಾಗುತ್ತದೆ. ನಿನ್ನ ಸ್ನೇಹಿತನೂ ನಮ್ಮ ಕೈಗೆ ಸಿಕ್ಕಿದ್ದಾನೆ. ನೀವಿಬ್ಬರೂ ಅಪರಾಧ ಒಪ್ಪಿಕೊಂಡಲ್ಲಿ ಇಬ್ಬರಿಗೂ ಮೂರು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ಆಗದಂತೆ ನಾನು ಭರವಸೆ ಕೊಡುತ್ತೇನೆ. ಒಂದು ಪಕ್ಷ ನೀವಿಬ್ಬರೂ ನಿರಾಕರಿಸಿದರೆ ಇಬ್ಬರಿಗೂ ಒಂದು ವರ್ಷ ಜೈಲು ಶಿಕ್ಷೆ ಆಗುತ್ತದೆ, ಆದರೆ ನೀನು ನಮ್ಮೊಂದಿಗೆ ಸಹಕರಿಸಿ, ಅಪರಾಧ ಒಪ್ಪಿಕೊಂಡು, ನಿನ್ನ ಸಂಗಡಿಗ ಒಪ್ಪಿಕೊಳ್ಳದಿದ್ದರೆ ನಿನಗೆ ಕೇವಲ ಒಂದು ವರ್ಷ ಜೈಲು ಆಗುವಂತೆ ನಾನು ನೋಡಿಕೊಳ್ಳುತ್ತೇನೆ ಆದರೆ ಅಂತಹ ಪರಿಸ್ಥಿತಿಯಲ್ಲಿ ನಿನ್ನ ಸಂಗಡಿಗನಿಗೆ ಹತ್ತು ವರ್ಷ ಜೈಲು ಗ್ಯಾರಂಟಿ. ಅದೇ ರೀತಿ ನಿನ್ನ ಸಂಗಡಿಗ ನಮ್ಮೊಂದಿಗೆ ಸಹಕರಿಸಿ, ತಪ್ಪೊಪ್ಪಿಕೊಂಡು, ನೀನು ನಿರಾಕರಿಸಿದಲ್ಲಿ, ನಿನಗೆ ಹತ್ತು ವರ್ಷ, ನಿನ್ನ ಸಂಗಡಿಗ ಒಂದು ವರ್ಷದಲ್ಲಿ ಜೈಲಿನಿಂದ ಹೊರಹೋಗುತ್ತಾನೆ, ಸರಿಯಾಗಿ ಯೋಚಿಸಿ ನೋಡು” ಎಂದು ಹೇಳಿ ಹೊರ ಹೋಗುತ್ತಾನೆ.

ಇದೇ ವರಸೆಯನ್ನು ಆತ “ಬಿ” ಕೈದಿಗೂ ವಿವರಿಸುತ್ತಾನೆ. ಇಬ್ಬರೂ ಮಾಡಿರುವುದು ಕೇವಲ ಒಂದು ವರ್ಷ ಶಿಕ್ಷೆ ಆಗಬಹುದಾದ ಅಪರಾಧ. ಇಬ್ಬರೂ ಸೇರಿ ಯಾವ ಜಂಟೀ ಅಪರಾಧವನ್ನು ಮಾಡಿರುವುದಿಲ್ಲ. ಒಬ್ಬನಿಗೆ ಇನ್ನೋರ್ವ ಹೇಗೆ ಪ್ರತಿಕ್ರಿಯೆ ನೀಡುತ್ತಾನೆಂಬುದು ತಿಳಿದಿಲ್ಲ. ಎಲ್ಲವೂ ನ್ಯಾಯವಾಗಿ ನಡೆದಲ್ಲಿ, ಎಲ್ಲರೂ ಸತ್ಯವನ್ನೇ ನುಡಿದಲ್ಲಿ, ಅವರ ತಪ್ಪಿಗೆ ಆಗಬೇಕಾದ ಶಿಕ್ಷೆ ಒಂದು ವರ್ಷ. ಈಗ ನೀವೇ ಹೇಳಿ ಅವರಿಗೆ ಅವರ ತಪ್ಪೊಪ್ಪಿಗೆ/ನಿರಾಕರಣೆಯ ಆಧಾರದ ಮೇಲೆ ಎಷ್ಟು ಶಿಕ್ಷೆ ಆಗುತ್ತದೆ? ಇಬ್ಬರೂ ಕೈದಿಗಳು ತಾವು ಮಾಡದೇ ಇದ್ದ ತಪ್ಪು ಒಪ್ಪಿಕೊಳ್ಳಬೇಕೋ ಬೇಡವೋ? ಇದೇ “ಪ್ರಿಸನರ್ಸ್ ಡೈಲೆಮ್ಮಾ” – ಕೈದಿಗಳ ಉಭಯ ಸಂಕಟ.

ಈ ಆಟವನ್ನು “ದಿ ಗೇಮ್ ಥಿಯರಿ” ಎಂದೂ ಕರೆಯುತ್ತಾರೆ. ಇದನ್ನು ಮ್ಯಾನೇಜ್ಮೆಂಟ್ ಟೆಕ್ನಿಕ್ನಲ್ಲಿ ಕಂಪನಿಯ ರಣನೀತಿ ತಂಡದವರು (Strategy Team) ನಿಯಮಿತವಾಗಿ ಉಪಯೋಗಿಸುತ್ತಾರೆ. ಇದು ಮನಶಾಸ್ತ್ರ, ಮಾನವ ನಡತೆ ಆಧರಿಸಿದ ಅರ್ಥಶಾಸ್ತ್ರ (ಬೆಹೇವಿಯರಲ್ ಎಕನಾಮಿಕ್ಸ್) ಮತ್ತು ಗಣಿತಶಾಸ್ತ್ರವನ್ನು ಆಧರಿಸಿರುತ್ತದೆ. ಇದನ್ನು 1950ರಲ್ಲಿ ಮೂಲರೂಪದಲ್ಲಿ ಸೃಷ್ಟಿಸಿದವರು ಅಮೇರಿಕದ ರಿಸರ್ಚ್ ಎಂಡ್ ಡೆವಲಪ್ಮೆಂಟ್ ಸಂಸ್ಥೆಯ ಮೆರ್ರಿಲ್ ಫ್ಲಡ್ ಮತ್ತು ಮೆಲ್ವಿನ್ ಡ್ರೆಶರ್. ನಂತರ ಇದನ್ನು ಜೈಲು ಶಿಕ್ಷೆಯ ಆಟದ ಸ್ವರೂಪದಲ್ಲಿ ನಿರ್ಮಿಸಿದವರು ಆಲ್ಬರ್ಟ್ ಟಕರ್ ಎಂಬುವಾತ. ಇದರ ಉದ್ದೇಶ ಸಂಪೂರ್ಣ ಬುದ್ಧಿ ಸ್ಥಿಮಿತವುಳ್ಳ, ತಮ್ಮ ಸ್ವಹಿತವನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವಿರುವ ಇಬ್ಬರು ವ್ಯಕ್ತಿಗಳು ಏಕೆ ಸರಿಯಾದ ನಿರ್ಣಯಕ್ಕೆ ಬರಲಾಗುವುದಿಲ್ಲ ಎಂಬುದನ್ನು ಸಿದ್ಧಗೊಳಿಸುತ್ತದೆ.

ಎ ಮತ್ತು ಬಿ ತಮ್ಮ ನಿರ್ಧಾರ ತೆಗೆದುಕೊಳ್ಳಲು ಸಹಕಾರಿಯಾಗಿರುವ ಗಣಿತಶಾಸ್ತ್ರ ಆಧಾರದ ಲಾಭ-ನಷ್ಟದ ಕೋಷ್ಟಕ ನೋಡೋಣ. ಇದನ್ನು payoff matrix ಎಂದು ಕರೆಯುತ್ತಾರೆ.

ಮೊದಲೇ ತಿಳಿಸಿದಂತೆ ಎಲ್ಲವೂ ನ್ಯಾಯವಾಗಿ ನಡೆದಲ್ಲಿ, ಎಲ್ಲರೂ ಸತ್ಯವನ್ನೇ ನುಡಿದಲ್ಲಿ, ಕೈದಿಗಳ ತಪ್ಪಿಗೆ ಆಗಬೇಕಾಗಿರುವ ಶಿಕ್ಷೆ ಕೇವಲ ಒಂದು ವರ್ಷ (ಆಯ್ಕೆ-4). ಕೈದಿಗಳು ಪರಸ್ಪರ ಮಾತನಾಡಿಕೊಳ್ಳಲು ಸಾಧ್ಯವಾಗಿದ್ದಲ್ಲಿ ಇಬ್ಬರೂ ತಾವು ಇನ್ಯಾವ ಅಪರಾಧವನ್ನೂ ಮಾಡಿಲ್ಲ ಎಂದು ಆಪಾದನೆಯನ್ನು ನಿರಾಕರಿಸಿ ತಮ್ಮ ಆಯ್ಕೆ-4 ಎನ್ನುತ್ತಿದ್ದರು. ಆದರೆ ಪರಸ್ಪರ ಸಂಪರ್ಕವಿಲ್ಲದೆ ಇರುವುದರಿಂದ, ಇನ್ನೊಬ್ಬ ಯಾವ ರೀತಿ ಹೇಳಿಕೆ ನೀಡುತ್ತಾನೆಂದು ತಿಳಿಯದೆ, ಕೇವಲ ತನ್ನ ಹಿತ ಕಾಪಾಡಿಕೊಳ್ಳುವ ದೃಷ್ಟಿಯಿಂದ ಇಬ್ಬರೂ ಸಹಕರಿಸುತ್ತಾರೆ (ಆಯ್ಕೆ-1) ಅಂದರೆ ಇಬ್ಬರಿಗೂ 3 ವರ್ಷ ಶಿಕ್ಷೆಯಾಗುತ್ತದೆ, ಆಶ್ಚರ್ಯವಲ್ಲವೇ?

ಹೇಗೆಂದು ನೋಡೋಣ: ಇಬ್ಬರಿಗೂ ಇರುವ ಆಯ್ಕೆಗಳು ಎರಡು – ಸಹಕರಿಸುವುದು ಅಥವಾ ನಿರಾಕರಿಸುವುದು. ಎ ವತಿಯಿಂದ ಯೋಚಿಸುವುದಾದರೆ – ಆತ ಸಹಕರಿಸಲು ನಿರ್ಧರಿಸಿದಲ್ಲಿ ಬಿ ಸಹಕರಿಸಬಹುದು ಅಥವಾ ನಿರಾಕರಿಸಬಹುದು. ಅಕಸ್ಮಾತ್ ಬಿ ಸಹಕರಿಸಿದ್ದೇ ಆದಲ್ಲಿ ಇಬ್ಬರ ಆಯ್ಕೆಯೂ 1 ಆಗುತ್ತದೆ. ಬಿ ನಿರಾಕರಿಸಿದಲ್ಲಿ ಎ ಆಯ್ಕೆ-2 ಆಗುತ್ತದೆ ಮತ್ತು ಇದರಿಂದ ಎ ಗೆ ಹೆಚ್ಚಿನ ಲಾಭ,ಕೇವಲ 1 ವರ್ಷ ಶಿಕ್ಷೆ ಇದ್ದು, ಬಿ ಗೆ 10 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ. ಆದರೆ ಎ ನಿರಾಕರಿಸಲು ನಿರ್ಧರಿಸಿದಲ್ಲಿ, ಬಿ ಏನಾದರೂ ಸಹಕರಿಸಲು ಮುಂದಾದರೆ ಎ ಗೆ ಹೆಚ್ಚಿನ ನಷ್ಟ (10 ವರ್ಷ) ಮತ್ತು ಬಿ ಒಂದು ವರ್ಷದಲ್ಲಿ ಮುಕ್ತನಾಗುವ ಸಾಧ್ಯತೆ ಇದೆ (ಆಯ್ಕೆ 3). ಬಿ ಕೂಡ ನಿರಾಕರಿಸಬಹುದು, ಆಗ ಇಬ್ಬರಿಗೂ (ಆಯ್ಕೆ 4) ಒಂದು ವರ್ಷದ ಶಿಕ್ಷೆಯೇನೋ ಸಿಗುತ್ತದೆ ಆದರೆ ಬಿ ಖಂಡಿತ ಹಾಗೆಯೇ ಮಾಡುತ್ತಾನೆಂಬ ಖಾತ್ರಿ ಇಲ್ಲವಾಗಿ, ಎಲ್ಲಿ ಆಯ್ಕೆ-2ರಿಂದ ಆಯ್ಕೆ-3ಕ್ಕೆ ತಿರುಗಬಹುದೋ ಎಂಬ ಆತಂಕದಿಂದ ಆತ ಆಯ್ಕೆ-1ಕ್ಕೆ ಮನಸ್ಸು ಮಾಡುತ್ತಾನೆ. ಅದೇ ರೀತಿ ಬಿ ವತಿಯಿಂದ ಯೋಚಿಸಿದಾಗಲೂ ತಾನು ನಿರಾಕರಿಸುವುದರಿಂದ ಎಲ್ಲಿ ಆಯ್ಕೆ-4 ರ ಬದಲಾಗಿ ತನ್ನ ಆಯ್ಕೆ-2ಕ್ಕೆ ತಿರುಗುತ್ತದೋ ಎಂಬ ಹೆದರಿಕೆಯಿಂದ  ಆತನೂ ಆಯ್ಕೆ-1ಕ್ಕೆ ಮುಂದಾಗುತ್ತಾನೆ.

ಇದರಲ್ಲಿ ಆಯ್ಕೆ-4 ಎಲ್ಲರ ಹಿತದೃಷ್ಟಿಯಿಂದಲೂ ಸಮಂಜಸವಾಗಿದ್ದರೂ ಸಹ ಅದು ಕ್ಷಣಿಕ ಮತ್ತು ಅಸ್ಥಾಯಿ, ಏಕೆಂದರೆ ಇನ್ನೊಬ್ಬ ತನ್ನ ನಿರ್ಧಾರ ಬದಲಾಯಿಸಿದಲ್ಲಿ ಮೊದಲನೆಯವನಿಗೆ ಆಗಬಹುದಾದ ಲಾಭಕ್ಕಿಂತ ಹೆಚ್ಚು ನಷ್ಟವಾಗುವ ಸಾಧ್ಯತೆಯೇ ಇದೆ. ಆದ್ದರಿಂದ ಆಯ್ಕೆ-1 ಮಾತ್ರ ಸ್ಥಾಯೀ ಆಗುತ್ತದೆ. ಈ ಆಯ್ಕೆಯನ್ನು “ನ್ಯಾಷ್ ಇಕ್ವಿಲಿಬ್ರಿಯಂ” ಎನ್ನುತ್ತಾರೆ. ಇದನ್ನು ಗಣಿತಶಾಸ್ತ್ರದಂತೆ ಸಿದ್ಧಪಡಿಸಿದ ಖ್ಯಾತಿ ನೋಬೆಲ್ ಪ್ರಶಸ್ತಿ ವಿಜೇತ ಜಾನ್ ನ್ಯಾಷ್ ಅವರಿಗೆ ಸಲ್ಲುತ್ತದೆ. ಇವರ ತರ್ಕದ ಪ್ರಕಾರ ಇಬ್ಬರು ಅಥವಾ ಹೆಚ್ಚಿನ ಆಟಗಾರರಿರುವಂತಹ ಆಟದಲ್ಲಿ, ಮಿಕ್ಕವರು ತಮ್ಮ ಆಯ್ಕೆ ಬದಲಾಯಿಸದೇ ಇದ್ದಲ್ಲಿ, ಯಾವ ಆಟಗಾರನೂ ತನ್ನ ಸ್ವಂತ ಆಯ್ಕೆಯ ಬದಲಾವಣೆಯಿಂದ ಲಾಭ ಪಡೆದುಕೊಳ್ಳಲಾಗದು. ಈ ತರ್ಕ ಕೇವಲ ಕ್ರೀಡಾ ಜಗತ್ತಿನಲ್ಲಷ್ಟೇ ಅಲ್ಲ, ವ್ಯಾಪಾರ-ವಾಣಿಜ್ಯ-ಯುದ್ಧ ಕ್ಷೇತ್ರದಲ್ಲೂ ರಣನೀತಿಯಾಗಿ (ಸ್ಟ್ರ್ಯಾಟೆಜಿ) ಬಳಕೆಯಾಗುವುದನ್ನು ಕಾಣಬಹುದು.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....