Homeಅಂತರಾಷ್ಟ್ರೀಯಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

ಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

- Advertisement -
- Advertisement -

| ಜಿ. ಆರ್. ವಿದ್ಯಾರಣ್ಯ |

ಕೈದಿಗಳು ಪೋಲಿಸ್ ಆತಿಥ್ಯದಲ್ಲಿ ತಾವು ಮಾಡದೇ ಇದ್ದ ತಪ್ಪನ್ನೂ ಸಹ ತಮ್ಮದೇ ಎಂದು ಕೆಲವೊಮ್ಮೆ ಒಪ್ಪಿಕೊಳ್ಳುವುದು ಏಕೆ ಎಂದು ಯೋಚಿಸಿದ್ದೀರಾ? ಇಲ್ಲಿದೆ ಒಂದು ವೈಜ್ಞಾನಿಕ ಉತ್ತರ, ನಾನು ಹೇಳುತ್ತಿರುವುದು ಓರ್ವ ವಿಕಸಿತ ದೇಶದ ಪೋಲಿಸ್ ಕಾರ್ಯ ವೈಖರಿಯನ್ನು ಆಧರಿಸಿದ ವಿಚಾರವಾದ. (ಡಿಸ್ಕ್ಲೇಮರ್: ಇದು ನಮ್ಮ ದೇಶದ ಪೋಲಿಸ್ ಬಗ್ಗೆ ಅಲ್ಲ, ಏಕೆಂದರೆ ಅವರ ತನಿಖಾ/ವಿಚಾರಣಾ ವೈಖರಿಯ ಬಗ್ಗೆ ನನಗೆ ಯಾವ ವೈಯುಕ್ತಿಕ ಅನುಭವವೂ ಇಲ್ಲ). ಇದು ಒಂದು ಆಟದ ರೀತಿಯಲ್ಲಿರುವ ತತ್ವವಾದ. ಇದನ್ನು “ದಿ ಪ್ರಿಸನರ್ಸ್ ಡೈಲೆಮ್ಮಾ” (ಕೈದಿಗಳ ಉಭಯ ಸಂಕಟ) ಎನ್ನುತ್ತಾರೆ.

ಒಂದು ದಿನ, ಏಕ ಕಾಲಕ್ಕೆ, ನಗರದ ಪೋಲಿಸರು ಇಬ್ಬರು ಅಪರಾಧಿಗಳನ್ನು, ಒಂದೇ ರೀತಿಯ ಅಪರಾಧಕ್ಕೆ ಬಂಧಿಸಿ, ಒಂದೇ ಲಾಕಪ್ಪಿನ ಬೇರೆ ಬೇರೆ ಕೋಣೆಯಲ್ಲಿ ಹಾಕುತ್ತಾರೆ. ಒಬ್ಬನ ಹೆಸರು “ಎ”, ಇನ್ನೊಬ್ಬನ ಹೆಸರು “ಬಿ” ಎಂದು ಇಟ್ಟುಕೊಳ್ಳೋಣ. ಇಬ್ಬರಿಗೂ ಪರಸ್ಪರ ಯಾವ ರೀತಿಯ ಪರಿಚಯವೂ ಇಲ್ಲ, ಹೆಸರಾಗಲೀ ಗೊತ್ತಿಲ್ಲ, ಕೇಳಿಲ್ಲ, ಸಂಬಂಧವಾಗಲೀ, ಸಂಪರ್ಕವಾಗಲೀ, ಅನುಕಂಪವಾಗಲೀ ಇಲ್ಲ. ಇಬ್ಬರಿಗೂ ಅವರು ಮಾಡಿ ಸಿಕ್ಕಿಬಿದ್ದ ಅಪರಾಧಕ್ಕೆ ಸಿಗಬಹುದಾದ ಶಿಕ್ಷೆಯೂ ಒಂದೇ ಪ್ರಮಾಣದ್ದಾಗಿರುತ್ತದೆ. ವಿಚಾರಣಗೆ ಬಂದ ತನಿಖಾಧಿಕಾರಿ ಇಬ್ಬರ ದಾಖಲೆಯನ್ನು ನೋಡಿ ಇಬ್ಬರಿಗೂ ಒಂದು ವರ್ಷ ಕಾರಾಗೃಹವಾಸ ಖಚಿತ ಎಂದುಕೊಳ್ಳುತ್ತಾನೆ. ಆದರೆ ಏನೋ ಅನುಮಾನ ಬಂದು, ಇವರಿಬ್ಬರೂ ಸೇರಿ ಇನ್ಯಾವುದೋ ದೊಡ್ಡ ಅಪರಾಧ ಏಕೆ ಎಸಗಿರಬಾರದು ಎಂದು ಯೋಚಿಸುತ್ತಾನೆ.

ಅದೇ ಲಹರಿಯಲ್ಲಿ ತನ್ನ ತನಿಖೆ ಮುಂದುವರೆಸುತ್ತಾ, ಮೊದಲು “ಎ” ಜೊತೆ ಮಾತನಾಡುತ್ತಾ “ನೋಡು, ಇಂದು ನೀನು ಸಿಕ್ಕಿಬಿದ್ದ ಅಪರಾಧಕ್ಕೆ ನಿನಗೆ ಒಂದು ವರ್ಷ ಜೈಲು ಶಿಕ್ಷೆ ಖಚಿತ ಆದರೆ ಹೋದ ವಾರ ನೀನು ಮತ್ತು ನಿನ್ನ ಸಂಗಡಿಗ ಮಾಡಿದ ಜಂಟಿ ಅಪರಾಧಕ್ಕೂ ಸೇರಿ, ಒಟ್ಟು ಮೂರು ವರ್ಷ ಜೈಲಾಗುತ್ತದೆ. ನಿನ್ನ ಸ್ನೇಹಿತನೂ ನಮ್ಮ ಕೈಗೆ ಸಿಕ್ಕಿದ್ದಾನೆ. ನೀವಿಬ್ಬರೂ ಅಪರಾಧ ಒಪ್ಪಿಕೊಂಡಲ್ಲಿ ಇಬ್ಬರಿಗೂ ಮೂರು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ಆಗದಂತೆ ನಾನು ಭರವಸೆ ಕೊಡುತ್ತೇನೆ. ಒಂದು ಪಕ್ಷ ನೀವಿಬ್ಬರೂ ನಿರಾಕರಿಸಿದರೆ ಇಬ್ಬರಿಗೂ ಒಂದು ವರ್ಷ ಜೈಲು ಶಿಕ್ಷೆ ಆಗುತ್ತದೆ, ಆದರೆ ನೀನು ನಮ್ಮೊಂದಿಗೆ ಸಹಕರಿಸಿ, ಅಪರಾಧ ಒಪ್ಪಿಕೊಂಡು, ನಿನ್ನ ಸಂಗಡಿಗ ಒಪ್ಪಿಕೊಳ್ಳದಿದ್ದರೆ ನಿನಗೆ ಕೇವಲ ಒಂದು ವರ್ಷ ಜೈಲು ಆಗುವಂತೆ ನಾನು ನೋಡಿಕೊಳ್ಳುತ್ತೇನೆ ಆದರೆ ಅಂತಹ ಪರಿಸ್ಥಿತಿಯಲ್ಲಿ ನಿನ್ನ ಸಂಗಡಿಗನಿಗೆ ಹತ್ತು ವರ್ಷ ಜೈಲು ಗ್ಯಾರಂಟಿ. ಅದೇ ರೀತಿ ನಿನ್ನ ಸಂಗಡಿಗ ನಮ್ಮೊಂದಿಗೆ ಸಹಕರಿಸಿ, ತಪ್ಪೊಪ್ಪಿಕೊಂಡು, ನೀನು ನಿರಾಕರಿಸಿದಲ್ಲಿ, ನಿನಗೆ ಹತ್ತು ವರ್ಷ, ನಿನ್ನ ಸಂಗಡಿಗ ಒಂದು ವರ್ಷದಲ್ಲಿ ಜೈಲಿನಿಂದ ಹೊರಹೋಗುತ್ತಾನೆ, ಸರಿಯಾಗಿ ಯೋಚಿಸಿ ನೋಡು” ಎಂದು ಹೇಳಿ ಹೊರ ಹೋಗುತ್ತಾನೆ.

ಇದೇ ವರಸೆಯನ್ನು ಆತ “ಬಿ” ಕೈದಿಗೂ ವಿವರಿಸುತ್ತಾನೆ. ಇಬ್ಬರೂ ಮಾಡಿರುವುದು ಕೇವಲ ಒಂದು ವರ್ಷ ಶಿಕ್ಷೆ ಆಗಬಹುದಾದ ಅಪರಾಧ. ಇಬ್ಬರೂ ಸೇರಿ ಯಾವ ಜಂಟೀ ಅಪರಾಧವನ್ನು ಮಾಡಿರುವುದಿಲ್ಲ. ಒಬ್ಬನಿಗೆ ಇನ್ನೋರ್ವ ಹೇಗೆ ಪ್ರತಿಕ್ರಿಯೆ ನೀಡುತ್ತಾನೆಂಬುದು ತಿಳಿದಿಲ್ಲ. ಎಲ್ಲವೂ ನ್ಯಾಯವಾಗಿ ನಡೆದಲ್ಲಿ, ಎಲ್ಲರೂ ಸತ್ಯವನ್ನೇ ನುಡಿದಲ್ಲಿ, ಅವರ ತಪ್ಪಿಗೆ ಆಗಬೇಕಾದ ಶಿಕ್ಷೆ ಒಂದು ವರ್ಷ. ಈಗ ನೀವೇ ಹೇಳಿ ಅವರಿಗೆ ಅವರ ತಪ್ಪೊಪ್ಪಿಗೆ/ನಿರಾಕರಣೆಯ ಆಧಾರದ ಮೇಲೆ ಎಷ್ಟು ಶಿಕ್ಷೆ ಆಗುತ್ತದೆ? ಇಬ್ಬರೂ ಕೈದಿಗಳು ತಾವು ಮಾಡದೇ ಇದ್ದ ತಪ್ಪು ಒಪ್ಪಿಕೊಳ್ಳಬೇಕೋ ಬೇಡವೋ? ಇದೇ “ಪ್ರಿಸನರ್ಸ್ ಡೈಲೆಮ್ಮಾ” – ಕೈದಿಗಳ ಉಭಯ ಸಂಕಟ.

ಈ ಆಟವನ್ನು “ದಿ ಗೇಮ್ ಥಿಯರಿ” ಎಂದೂ ಕರೆಯುತ್ತಾರೆ. ಇದನ್ನು ಮ್ಯಾನೇಜ್ಮೆಂಟ್ ಟೆಕ್ನಿಕ್ನಲ್ಲಿ ಕಂಪನಿಯ ರಣನೀತಿ ತಂಡದವರು (Strategy Team) ನಿಯಮಿತವಾಗಿ ಉಪಯೋಗಿಸುತ್ತಾರೆ. ಇದು ಮನಶಾಸ್ತ್ರ, ಮಾನವ ನಡತೆ ಆಧರಿಸಿದ ಅರ್ಥಶಾಸ್ತ್ರ (ಬೆಹೇವಿಯರಲ್ ಎಕನಾಮಿಕ್ಸ್) ಮತ್ತು ಗಣಿತಶಾಸ್ತ್ರವನ್ನು ಆಧರಿಸಿರುತ್ತದೆ. ಇದನ್ನು 1950ರಲ್ಲಿ ಮೂಲರೂಪದಲ್ಲಿ ಸೃಷ್ಟಿಸಿದವರು ಅಮೇರಿಕದ ರಿಸರ್ಚ್ ಎಂಡ್ ಡೆವಲಪ್ಮೆಂಟ್ ಸಂಸ್ಥೆಯ ಮೆರ್ರಿಲ್ ಫ್ಲಡ್ ಮತ್ತು ಮೆಲ್ವಿನ್ ಡ್ರೆಶರ್. ನಂತರ ಇದನ್ನು ಜೈಲು ಶಿಕ್ಷೆಯ ಆಟದ ಸ್ವರೂಪದಲ್ಲಿ ನಿರ್ಮಿಸಿದವರು ಆಲ್ಬರ್ಟ್ ಟಕರ್ ಎಂಬುವಾತ. ಇದರ ಉದ್ದೇಶ ಸಂಪೂರ್ಣ ಬುದ್ಧಿ ಸ್ಥಿಮಿತವುಳ್ಳ, ತಮ್ಮ ಸ್ವಹಿತವನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವಿರುವ ಇಬ್ಬರು ವ್ಯಕ್ತಿಗಳು ಏಕೆ ಸರಿಯಾದ ನಿರ್ಣಯಕ್ಕೆ ಬರಲಾಗುವುದಿಲ್ಲ ಎಂಬುದನ್ನು ಸಿದ್ಧಗೊಳಿಸುತ್ತದೆ.

ಎ ಮತ್ತು ಬಿ ತಮ್ಮ ನಿರ್ಧಾರ ತೆಗೆದುಕೊಳ್ಳಲು ಸಹಕಾರಿಯಾಗಿರುವ ಗಣಿತಶಾಸ್ತ್ರ ಆಧಾರದ ಲಾಭ-ನಷ್ಟದ ಕೋಷ್ಟಕ ನೋಡೋಣ. ಇದನ್ನು payoff matrix ಎಂದು ಕರೆಯುತ್ತಾರೆ.

ಮೊದಲೇ ತಿಳಿಸಿದಂತೆ ಎಲ್ಲವೂ ನ್ಯಾಯವಾಗಿ ನಡೆದಲ್ಲಿ, ಎಲ್ಲರೂ ಸತ್ಯವನ್ನೇ ನುಡಿದಲ್ಲಿ, ಕೈದಿಗಳ ತಪ್ಪಿಗೆ ಆಗಬೇಕಾಗಿರುವ ಶಿಕ್ಷೆ ಕೇವಲ ಒಂದು ವರ್ಷ (ಆಯ್ಕೆ-4). ಕೈದಿಗಳು ಪರಸ್ಪರ ಮಾತನಾಡಿಕೊಳ್ಳಲು ಸಾಧ್ಯವಾಗಿದ್ದಲ್ಲಿ ಇಬ್ಬರೂ ತಾವು ಇನ್ಯಾವ ಅಪರಾಧವನ್ನೂ ಮಾಡಿಲ್ಲ ಎಂದು ಆಪಾದನೆಯನ್ನು ನಿರಾಕರಿಸಿ ತಮ್ಮ ಆಯ್ಕೆ-4 ಎನ್ನುತ್ತಿದ್ದರು. ಆದರೆ ಪರಸ್ಪರ ಸಂಪರ್ಕವಿಲ್ಲದೆ ಇರುವುದರಿಂದ, ಇನ್ನೊಬ್ಬ ಯಾವ ರೀತಿ ಹೇಳಿಕೆ ನೀಡುತ್ತಾನೆಂದು ತಿಳಿಯದೆ, ಕೇವಲ ತನ್ನ ಹಿತ ಕಾಪಾಡಿಕೊಳ್ಳುವ ದೃಷ್ಟಿಯಿಂದ ಇಬ್ಬರೂ ಸಹಕರಿಸುತ್ತಾರೆ (ಆಯ್ಕೆ-1) ಅಂದರೆ ಇಬ್ಬರಿಗೂ 3 ವರ್ಷ ಶಿಕ್ಷೆಯಾಗುತ್ತದೆ, ಆಶ್ಚರ್ಯವಲ್ಲವೇ?

ಹೇಗೆಂದು ನೋಡೋಣ: ಇಬ್ಬರಿಗೂ ಇರುವ ಆಯ್ಕೆಗಳು ಎರಡು – ಸಹಕರಿಸುವುದು ಅಥವಾ ನಿರಾಕರಿಸುವುದು. ಎ ವತಿಯಿಂದ ಯೋಚಿಸುವುದಾದರೆ – ಆತ ಸಹಕರಿಸಲು ನಿರ್ಧರಿಸಿದಲ್ಲಿ ಬಿ ಸಹಕರಿಸಬಹುದು ಅಥವಾ ನಿರಾಕರಿಸಬಹುದು. ಅಕಸ್ಮಾತ್ ಬಿ ಸಹಕರಿಸಿದ್ದೇ ಆದಲ್ಲಿ ಇಬ್ಬರ ಆಯ್ಕೆಯೂ 1 ಆಗುತ್ತದೆ. ಬಿ ನಿರಾಕರಿಸಿದಲ್ಲಿ ಎ ಆಯ್ಕೆ-2 ಆಗುತ್ತದೆ ಮತ್ತು ಇದರಿಂದ ಎ ಗೆ ಹೆಚ್ಚಿನ ಲಾಭ,ಕೇವಲ 1 ವರ್ಷ ಶಿಕ್ಷೆ ಇದ್ದು, ಬಿ ಗೆ 10 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ. ಆದರೆ ಎ ನಿರಾಕರಿಸಲು ನಿರ್ಧರಿಸಿದಲ್ಲಿ, ಬಿ ಏನಾದರೂ ಸಹಕರಿಸಲು ಮುಂದಾದರೆ ಎ ಗೆ ಹೆಚ್ಚಿನ ನಷ್ಟ (10 ವರ್ಷ) ಮತ್ತು ಬಿ ಒಂದು ವರ್ಷದಲ್ಲಿ ಮುಕ್ತನಾಗುವ ಸಾಧ್ಯತೆ ಇದೆ (ಆಯ್ಕೆ 3). ಬಿ ಕೂಡ ನಿರಾಕರಿಸಬಹುದು, ಆಗ ಇಬ್ಬರಿಗೂ (ಆಯ್ಕೆ 4) ಒಂದು ವರ್ಷದ ಶಿಕ್ಷೆಯೇನೋ ಸಿಗುತ್ತದೆ ಆದರೆ ಬಿ ಖಂಡಿತ ಹಾಗೆಯೇ ಮಾಡುತ್ತಾನೆಂಬ ಖಾತ್ರಿ ಇಲ್ಲವಾಗಿ, ಎಲ್ಲಿ ಆಯ್ಕೆ-2ರಿಂದ ಆಯ್ಕೆ-3ಕ್ಕೆ ತಿರುಗಬಹುದೋ ಎಂಬ ಆತಂಕದಿಂದ ಆತ ಆಯ್ಕೆ-1ಕ್ಕೆ ಮನಸ್ಸು ಮಾಡುತ್ತಾನೆ. ಅದೇ ರೀತಿ ಬಿ ವತಿಯಿಂದ ಯೋಚಿಸಿದಾಗಲೂ ತಾನು ನಿರಾಕರಿಸುವುದರಿಂದ ಎಲ್ಲಿ ಆಯ್ಕೆ-4 ರ ಬದಲಾಗಿ ತನ್ನ ಆಯ್ಕೆ-2ಕ್ಕೆ ತಿರುಗುತ್ತದೋ ಎಂಬ ಹೆದರಿಕೆಯಿಂದ  ಆತನೂ ಆಯ್ಕೆ-1ಕ್ಕೆ ಮುಂದಾಗುತ್ತಾನೆ.

ಇದರಲ್ಲಿ ಆಯ್ಕೆ-4 ಎಲ್ಲರ ಹಿತದೃಷ್ಟಿಯಿಂದಲೂ ಸಮಂಜಸವಾಗಿದ್ದರೂ ಸಹ ಅದು ಕ್ಷಣಿಕ ಮತ್ತು ಅಸ್ಥಾಯಿ, ಏಕೆಂದರೆ ಇನ್ನೊಬ್ಬ ತನ್ನ ನಿರ್ಧಾರ ಬದಲಾಯಿಸಿದಲ್ಲಿ ಮೊದಲನೆಯವನಿಗೆ ಆಗಬಹುದಾದ ಲಾಭಕ್ಕಿಂತ ಹೆಚ್ಚು ನಷ್ಟವಾಗುವ ಸಾಧ್ಯತೆಯೇ ಇದೆ. ಆದ್ದರಿಂದ ಆಯ್ಕೆ-1 ಮಾತ್ರ ಸ್ಥಾಯೀ ಆಗುತ್ತದೆ. ಈ ಆಯ್ಕೆಯನ್ನು “ನ್ಯಾಷ್ ಇಕ್ವಿಲಿಬ್ರಿಯಂ” ಎನ್ನುತ್ತಾರೆ. ಇದನ್ನು ಗಣಿತಶಾಸ್ತ್ರದಂತೆ ಸಿದ್ಧಪಡಿಸಿದ ಖ್ಯಾತಿ ನೋಬೆಲ್ ಪ್ರಶಸ್ತಿ ವಿಜೇತ ಜಾನ್ ನ್ಯಾಷ್ ಅವರಿಗೆ ಸಲ್ಲುತ್ತದೆ. ಇವರ ತರ್ಕದ ಪ್ರಕಾರ ಇಬ್ಬರು ಅಥವಾ ಹೆಚ್ಚಿನ ಆಟಗಾರರಿರುವಂತಹ ಆಟದಲ್ಲಿ, ಮಿಕ್ಕವರು ತಮ್ಮ ಆಯ್ಕೆ ಬದಲಾಯಿಸದೇ ಇದ್ದಲ್ಲಿ, ಯಾವ ಆಟಗಾರನೂ ತನ್ನ ಸ್ವಂತ ಆಯ್ಕೆಯ ಬದಲಾವಣೆಯಿಂದ ಲಾಭ ಪಡೆದುಕೊಳ್ಳಲಾಗದು. ಈ ತರ್ಕ ಕೇವಲ ಕ್ರೀಡಾ ಜಗತ್ತಿನಲ್ಲಷ್ಟೇ ಅಲ್ಲ, ವ್ಯಾಪಾರ-ವಾಣಿಜ್ಯ-ಯುದ್ಧ ಕ್ಷೇತ್ರದಲ್ಲೂ ರಣನೀತಿಯಾಗಿ (ಸ್ಟ್ರ್ಯಾಟೆಜಿ) ಬಳಕೆಯಾಗುವುದನ್ನು ಕಾಣಬಹುದು.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...