Homeಅಂತರಾಷ್ಟ್ರೀಯಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

ಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

- Advertisement -
- Advertisement -

| ಜಿ. ಆರ್. ವಿದ್ಯಾರಣ್ಯ |

ಕೈದಿಗಳು ಪೋಲಿಸ್ ಆತಿಥ್ಯದಲ್ಲಿ ತಾವು ಮಾಡದೇ ಇದ್ದ ತಪ್ಪನ್ನೂ ಸಹ ತಮ್ಮದೇ ಎಂದು ಕೆಲವೊಮ್ಮೆ ಒಪ್ಪಿಕೊಳ್ಳುವುದು ಏಕೆ ಎಂದು ಯೋಚಿಸಿದ್ದೀರಾ? ಇಲ್ಲಿದೆ ಒಂದು ವೈಜ್ಞಾನಿಕ ಉತ್ತರ, ನಾನು ಹೇಳುತ್ತಿರುವುದು ಓರ್ವ ವಿಕಸಿತ ದೇಶದ ಪೋಲಿಸ್ ಕಾರ್ಯ ವೈಖರಿಯನ್ನು ಆಧರಿಸಿದ ವಿಚಾರವಾದ. (ಡಿಸ್ಕ್ಲೇಮರ್: ಇದು ನಮ್ಮ ದೇಶದ ಪೋಲಿಸ್ ಬಗ್ಗೆ ಅಲ್ಲ, ಏಕೆಂದರೆ ಅವರ ತನಿಖಾ/ವಿಚಾರಣಾ ವೈಖರಿಯ ಬಗ್ಗೆ ನನಗೆ ಯಾವ ವೈಯುಕ್ತಿಕ ಅನುಭವವೂ ಇಲ್ಲ). ಇದು ಒಂದು ಆಟದ ರೀತಿಯಲ್ಲಿರುವ ತತ್ವವಾದ. ಇದನ್ನು “ದಿ ಪ್ರಿಸನರ್ಸ್ ಡೈಲೆಮ್ಮಾ” (ಕೈದಿಗಳ ಉಭಯ ಸಂಕಟ) ಎನ್ನುತ್ತಾರೆ.

ಒಂದು ದಿನ, ಏಕ ಕಾಲಕ್ಕೆ, ನಗರದ ಪೋಲಿಸರು ಇಬ್ಬರು ಅಪರಾಧಿಗಳನ್ನು, ಒಂದೇ ರೀತಿಯ ಅಪರಾಧಕ್ಕೆ ಬಂಧಿಸಿ, ಒಂದೇ ಲಾಕಪ್ಪಿನ ಬೇರೆ ಬೇರೆ ಕೋಣೆಯಲ್ಲಿ ಹಾಕುತ್ತಾರೆ. ಒಬ್ಬನ ಹೆಸರು “ಎ”, ಇನ್ನೊಬ್ಬನ ಹೆಸರು “ಬಿ” ಎಂದು ಇಟ್ಟುಕೊಳ್ಳೋಣ. ಇಬ್ಬರಿಗೂ ಪರಸ್ಪರ ಯಾವ ರೀತಿಯ ಪರಿಚಯವೂ ಇಲ್ಲ, ಹೆಸರಾಗಲೀ ಗೊತ್ತಿಲ್ಲ, ಕೇಳಿಲ್ಲ, ಸಂಬಂಧವಾಗಲೀ, ಸಂಪರ್ಕವಾಗಲೀ, ಅನುಕಂಪವಾಗಲೀ ಇಲ್ಲ. ಇಬ್ಬರಿಗೂ ಅವರು ಮಾಡಿ ಸಿಕ್ಕಿಬಿದ್ದ ಅಪರಾಧಕ್ಕೆ ಸಿಗಬಹುದಾದ ಶಿಕ್ಷೆಯೂ ಒಂದೇ ಪ್ರಮಾಣದ್ದಾಗಿರುತ್ತದೆ. ವಿಚಾರಣಗೆ ಬಂದ ತನಿಖಾಧಿಕಾರಿ ಇಬ್ಬರ ದಾಖಲೆಯನ್ನು ನೋಡಿ ಇಬ್ಬರಿಗೂ ಒಂದು ವರ್ಷ ಕಾರಾಗೃಹವಾಸ ಖಚಿತ ಎಂದುಕೊಳ್ಳುತ್ತಾನೆ. ಆದರೆ ಏನೋ ಅನುಮಾನ ಬಂದು, ಇವರಿಬ್ಬರೂ ಸೇರಿ ಇನ್ಯಾವುದೋ ದೊಡ್ಡ ಅಪರಾಧ ಏಕೆ ಎಸಗಿರಬಾರದು ಎಂದು ಯೋಚಿಸುತ್ತಾನೆ.

ಅದೇ ಲಹರಿಯಲ್ಲಿ ತನ್ನ ತನಿಖೆ ಮುಂದುವರೆಸುತ್ತಾ, ಮೊದಲು “ಎ” ಜೊತೆ ಮಾತನಾಡುತ್ತಾ “ನೋಡು, ಇಂದು ನೀನು ಸಿಕ್ಕಿಬಿದ್ದ ಅಪರಾಧಕ್ಕೆ ನಿನಗೆ ಒಂದು ವರ್ಷ ಜೈಲು ಶಿಕ್ಷೆ ಖಚಿತ ಆದರೆ ಹೋದ ವಾರ ನೀನು ಮತ್ತು ನಿನ್ನ ಸಂಗಡಿಗ ಮಾಡಿದ ಜಂಟಿ ಅಪರಾಧಕ್ಕೂ ಸೇರಿ, ಒಟ್ಟು ಮೂರು ವರ್ಷ ಜೈಲಾಗುತ್ತದೆ. ನಿನ್ನ ಸ್ನೇಹಿತನೂ ನಮ್ಮ ಕೈಗೆ ಸಿಕ್ಕಿದ್ದಾನೆ. ನೀವಿಬ್ಬರೂ ಅಪರಾಧ ಒಪ್ಪಿಕೊಂಡಲ್ಲಿ ಇಬ್ಬರಿಗೂ ಮೂರು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ಆಗದಂತೆ ನಾನು ಭರವಸೆ ಕೊಡುತ್ತೇನೆ. ಒಂದು ಪಕ್ಷ ನೀವಿಬ್ಬರೂ ನಿರಾಕರಿಸಿದರೆ ಇಬ್ಬರಿಗೂ ಒಂದು ವರ್ಷ ಜೈಲು ಶಿಕ್ಷೆ ಆಗುತ್ತದೆ, ಆದರೆ ನೀನು ನಮ್ಮೊಂದಿಗೆ ಸಹಕರಿಸಿ, ಅಪರಾಧ ಒಪ್ಪಿಕೊಂಡು, ನಿನ್ನ ಸಂಗಡಿಗ ಒಪ್ಪಿಕೊಳ್ಳದಿದ್ದರೆ ನಿನಗೆ ಕೇವಲ ಒಂದು ವರ್ಷ ಜೈಲು ಆಗುವಂತೆ ನಾನು ನೋಡಿಕೊಳ್ಳುತ್ತೇನೆ ಆದರೆ ಅಂತಹ ಪರಿಸ್ಥಿತಿಯಲ್ಲಿ ನಿನ್ನ ಸಂಗಡಿಗನಿಗೆ ಹತ್ತು ವರ್ಷ ಜೈಲು ಗ್ಯಾರಂಟಿ. ಅದೇ ರೀತಿ ನಿನ್ನ ಸಂಗಡಿಗ ನಮ್ಮೊಂದಿಗೆ ಸಹಕರಿಸಿ, ತಪ್ಪೊಪ್ಪಿಕೊಂಡು, ನೀನು ನಿರಾಕರಿಸಿದಲ್ಲಿ, ನಿನಗೆ ಹತ್ತು ವರ್ಷ, ನಿನ್ನ ಸಂಗಡಿಗ ಒಂದು ವರ್ಷದಲ್ಲಿ ಜೈಲಿನಿಂದ ಹೊರಹೋಗುತ್ತಾನೆ, ಸರಿಯಾಗಿ ಯೋಚಿಸಿ ನೋಡು” ಎಂದು ಹೇಳಿ ಹೊರ ಹೋಗುತ್ತಾನೆ.

ಇದೇ ವರಸೆಯನ್ನು ಆತ “ಬಿ” ಕೈದಿಗೂ ವಿವರಿಸುತ್ತಾನೆ. ಇಬ್ಬರೂ ಮಾಡಿರುವುದು ಕೇವಲ ಒಂದು ವರ್ಷ ಶಿಕ್ಷೆ ಆಗಬಹುದಾದ ಅಪರಾಧ. ಇಬ್ಬರೂ ಸೇರಿ ಯಾವ ಜಂಟೀ ಅಪರಾಧವನ್ನು ಮಾಡಿರುವುದಿಲ್ಲ. ಒಬ್ಬನಿಗೆ ಇನ್ನೋರ್ವ ಹೇಗೆ ಪ್ರತಿಕ್ರಿಯೆ ನೀಡುತ್ತಾನೆಂಬುದು ತಿಳಿದಿಲ್ಲ. ಎಲ್ಲವೂ ನ್ಯಾಯವಾಗಿ ನಡೆದಲ್ಲಿ, ಎಲ್ಲರೂ ಸತ್ಯವನ್ನೇ ನುಡಿದಲ್ಲಿ, ಅವರ ತಪ್ಪಿಗೆ ಆಗಬೇಕಾದ ಶಿಕ್ಷೆ ಒಂದು ವರ್ಷ. ಈಗ ನೀವೇ ಹೇಳಿ ಅವರಿಗೆ ಅವರ ತಪ್ಪೊಪ್ಪಿಗೆ/ನಿರಾಕರಣೆಯ ಆಧಾರದ ಮೇಲೆ ಎಷ್ಟು ಶಿಕ್ಷೆ ಆಗುತ್ತದೆ? ಇಬ್ಬರೂ ಕೈದಿಗಳು ತಾವು ಮಾಡದೇ ಇದ್ದ ತಪ್ಪು ಒಪ್ಪಿಕೊಳ್ಳಬೇಕೋ ಬೇಡವೋ? ಇದೇ “ಪ್ರಿಸನರ್ಸ್ ಡೈಲೆಮ್ಮಾ” – ಕೈದಿಗಳ ಉಭಯ ಸಂಕಟ.

ಈ ಆಟವನ್ನು “ದಿ ಗೇಮ್ ಥಿಯರಿ” ಎಂದೂ ಕರೆಯುತ್ತಾರೆ. ಇದನ್ನು ಮ್ಯಾನೇಜ್ಮೆಂಟ್ ಟೆಕ್ನಿಕ್ನಲ್ಲಿ ಕಂಪನಿಯ ರಣನೀತಿ ತಂಡದವರು (Strategy Team) ನಿಯಮಿತವಾಗಿ ಉಪಯೋಗಿಸುತ್ತಾರೆ. ಇದು ಮನಶಾಸ್ತ್ರ, ಮಾನವ ನಡತೆ ಆಧರಿಸಿದ ಅರ್ಥಶಾಸ್ತ್ರ (ಬೆಹೇವಿಯರಲ್ ಎಕನಾಮಿಕ್ಸ್) ಮತ್ತು ಗಣಿತಶಾಸ್ತ್ರವನ್ನು ಆಧರಿಸಿರುತ್ತದೆ. ಇದನ್ನು 1950ರಲ್ಲಿ ಮೂಲರೂಪದಲ್ಲಿ ಸೃಷ್ಟಿಸಿದವರು ಅಮೇರಿಕದ ರಿಸರ್ಚ್ ಎಂಡ್ ಡೆವಲಪ್ಮೆಂಟ್ ಸಂಸ್ಥೆಯ ಮೆರ್ರಿಲ್ ಫ್ಲಡ್ ಮತ್ತು ಮೆಲ್ವಿನ್ ಡ್ರೆಶರ್. ನಂತರ ಇದನ್ನು ಜೈಲು ಶಿಕ್ಷೆಯ ಆಟದ ಸ್ವರೂಪದಲ್ಲಿ ನಿರ್ಮಿಸಿದವರು ಆಲ್ಬರ್ಟ್ ಟಕರ್ ಎಂಬುವಾತ. ಇದರ ಉದ್ದೇಶ ಸಂಪೂರ್ಣ ಬುದ್ಧಿ ಸ್ಥಿಮಿತವುಳ್ಳ, ತಮ್ಮ ಸ್ವಹಿತವನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವಿರುವ ಇಬ್ಬರು ವ್ಯಕ್ತಿಗಳು ಏಕೆ ಸರಿಯಾದ ನಿರ್ಣಯಕ್ಕೆ ಬರಲಾಗುವುದಿಲ್ಲ ಎಂಬುದನ್ನು ಸಿದ್ಧಗೊಳಿಸುತ್ತದೆ.

ಎ ಮತ್ತು ಬಿ ತಮ್ಮ ನಿರ್ಧಾರ ತೆಗೆದುಕೊಳ್ಳಲು ಸಹಕಾರಿಯಾಗಿರುವ ಗಣಿತಶಾಸ್ತ್ರ ಆಧಾರದ ಲಾಭ-ನಷ್ಟದ ಕೋಷ್ಟಕ ನೋಡೋಣ. ಇದನ್ನು payoff matrix ಎಂದು ಕರೆಯುತ್ತಾರೆ.

ಮೊದಲೇ ತಿಳಿಸಿದಂತೆ ಎಲ್ಲವೂ ನ್ಯಾಯವಾಗಿ ನಡೆದಲ್ಲಿ, ಎಲ್ಲರೂ ಸತ್ಯವನ್ನೇ ನುಡಿದಲ್ಲಿ, ಕೈದಿಗಳ ತಪ್ಪಿಗೆ ಆಗಬೇಕಾಗಿರುವ ಶಿಕ್ಷೆ ಕೇವಲ ಒಂದು ವರ್ಷ (ಆಯ್ಕೆ-4). ಕೈದಿಗಳು ಪರಸ್ಪರ ಮಾತನಾಡಿಕೊಳ್ಳಲು ಸಾಧ್ಯವಾಗಿದ್ದಲ್ಲಿ ಇಬ್ಬರೂ ತಾವು ಇನ್ಯಾವ ಅಪರಾಧವನ್ನೂ ಮಾಡಿಲ್ಲ ಎಂದು ಆಪಾದನೆಯನ್ನು ನಿರಾಕರಿಸಿ ತಮ್ಮ ಆಯ್ಕೆ-4 ಎನ್ನುತ್ತಿದ್ದರು. ಆದರೆ ಪರಸ್ಪರ ಸಂಪರ್ಕವಿಲ್ಲದೆ ಇರುವುದರಿಂದ, ಇನ್ನೊಬ್ಬ ಯಾವ ರೀತಿ ಹೇಳಿಕೆ ನೀಡುತ್ತಾನೆಂದು ತಿಳಿಯದೆ, ಕೇವಲ ತನ್ನ ಹಿತ ಕಾಪಾಡಿಕೊಳ್ಳುವ ದೃಷ್ಟಿಯಿಂದ ಇಬ್ಬರೂ ಸಹಕರಿಸುತ್ತಾರೆ (ಆಯ್ಕೆ-1) ಅಂದರೆ ಇಬ್ಬರಿಗೂ 3 ವರ್ಷ ಶಿಕ್ಷೆಯಾಗುತ್ತದೆ, ಆಶ್ಚರ್ಯವಲ್ಲವೇ?

ಹೇಗೆಂದು ನೋಡೋಣ: ಇಬ್ಬರಿಗೂ ಇರುವ ಆಯ್ಕೆಗಳು ಎರಡು – ಸಹಕರಿಸುವುದು ಅಥವಾ ನಿರಾಕರಿಸುವುದು. ಎ ವತಿಯಿಂದ ಯೋಚಿಸುವುದಾದರೆ – ಆತ ಸಹಕರಿಸಲು ನಿರ್ಧರಿಸಿದಲ್ಲಿ ಬಿ ಸಹಕರಿಸಬಹುದು ಅಥವಾ ನಿರಾಕರಿಸಬಹುದು. ಅಕಸ್ಮಾತ್ ಬಿ ಸಹಕರಿಸಿದ್ದೇ ಆದಲ್ಲಿ ಇಬ್ಬರ ಆಯ್ಕೆಯೂ 1 ಆಗುತ್ತದೆ. ಬಿ ನಿರಾಕರಿಸಿದಲ್ಲಿ ಎ ಆಯ್ಕೆ-2 ಆಗುತ್ತದೆ ಮತ್ತು ಇದರಿಂದ ಎ ಗೆ ಹೆಚ್ಚಿನ ಲಾಭ,ಕೇವಲ 1 ವರ್ಷ ಶಿಕ್ಷೆ ಇದ್ದು, ಬಿ ಗೆ 10 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ. ಆದರೆ ಎ ನಿರಾಕರಿಸಲು ನಿರ್ಧರಿಸಿದಲ್ಲಿ, ಬಿ ಏನಾದರೂ ಸಹಕರಿಸಲು ಮುಂದಾದರೆ ಎ ಗೆ ಹೆಚ್ಚಿನ ನಷ್ಟ (10 ವರ್ಷ) ಮತ್ತು ಬಿ ಒಂದು ವರ್ಷದಲ್ಲಿ ಮುಕ್ತನಾಗುವ ಸಾಧ್ಯತೆ ಇದೆ (ಆಯ್ಕೆ 3). ಬಿ ಕೂಡ ನಿರಾಕರಿಸಬಹುದು, ಆಗ ಇಬ್ಬರಿಗೂ (ಆಯ್ಕೆ 4) ಒಂದು ವರ್ಷದ ಶಿಕ್ಷೆಯೇನೋ ಸಿಗುತ್ತದೆ ಆದರೆ ಬಿ ಖಂಡಿತ ಹಾಗೆಯೇ ಮಾಡುತ್ತಾನೆಂಬ ಖಾತ್ರಿ ಇಲ್ಲವಾಗಿ, ಎಲ್ಲಿ ಆಯ್ಕೆ-2ರಿಂದ ಆಯ್ಕೆ-3ಕ್ಕೆ ತಿರುಗಬಹುದೋ ಎಂಬ ಆತಂಕದಿಂದ ಆತ ಆಯ್ಕೆ-1ಕ್ಕೆ ಮನಸ್ಸು ಮಾಡುತ್ತಾನೆ. ಅದೇ ರೀತಿ ಬಿ ವತಿಯಿಂದ ಯೋಚಿಸಿದಾಗಲೂ ತಾನು ನಿರಾಕರಿಸುವುದರಿಂದ ಎಲ್ಲಿ ಆಯ್ಕೆ-4 ರ ಬದಲಾಗಿ ತನ್ನ ಆಯ್ಕೆ-2ಕ್ಕೆ ತಿರುಗುತ್ತದೋ ಎಂಬ ಹೆದರಿಕೆಯಿಂದ  ಆತನೂ ಆಯ್ಕೆ-1ಕ್ಕೆ ಮುಂದಾಗುತ್ತಾನೆ.

ಇದರಲ್ಲಿ ಆಯ್ಕೆ-4 ಎಲ್ಲರ ಹಿತದೃಷ್ಟಿಯಿಂದಲೂ ಸಮಂಜಸವಾಗಿದ್ದರೂ ಸಹ ಅದು ಕ್ಷಣಿಕ ಮತ್ತು ಅಸ್ಥಾಯಿ, ಏಕೆಂದರೆ ಇನ್ನೊಬ್ಬ ತನ್ನ ನಿರ್ಧಾರ ಬದಲಾಯಿಸಿದಲ್ಲಿ ಮೊದಲನೆಯವನಿಗೆ ಆಗಬಹುದಾದ ಲಾಭಕ್ಕಿಂತ ಹೆಚ್ಚು ನಷ್ಟವಾಗುವ ಸಾಧ್ಯತೆಯೇ ಇದೆ. ಆದ್ದರಿಂದ ಆಯ್ಕೆ-1 ಮಾತ್ರ ಸ್ಥಾಯೀ ಆಗುತ್ತದೆ. ಈ ಆಯ್ಕೆಯನ್ನು “ನ್ಯಾಷ್ ಇಕ್ವಿಲಿಬ್ರಿಯಂ” ಎನ್ನುತ್ತಾರೆ. ಇದನ್ನು ಗಣಿತಶಾಸ್ತ್ರದಂತೆ ಸಿದ್ಧಪಡಿಸಿದ ಖ್ಯಾತಿ ನೋಬೆಲ್ ಪ್ರಶಸ್ತಿ ವಿಜೇತ ಜಾನ್ ನ್ಯಾಷ್ ಅವರಿಗೆ ಸಲ್ಲುತ್ತದೆ. ಇವರ ತರ್ಕದ ಪ್ರಕಾರ ಇಬ್ಬರು ಅಥವಾ ಹೆಚ್ಚಿನ ಆಟಗಾರರಿರುವಂತಹ ಆಟದಲ್ಲಿ, ಮಿಕ್ಕವರು ತಮ್ಮ ಆಯ್ಕೆ ಬದಲಾಯಿಸದೇ ಇದ್ದಲ್ಲಿ, ಯಾವ ಆಟಗಾರನೂ ತನ್ನ ಸ್ವಂತ ಆಯ್ಕೆಯ ಬದಲಾವಣೆಯಿಂದ ಲಾಭ ಪಡೆದುಕೊಳ್ಳಲಾಗದು. ಈ ತರ್ಕ ಕೇವಲ ಕ್ರೀಡಾ ಜಗತ್ತಿನಲ್ಲಷ್ಟೇ ಅಲ್ಲ, ವ್ಯಾಪಾರ-ವಾಣಿಜ್ಯ-ಯುದ್ಧ ಕ್ಷೇತ್ರದಲ್ಲೂ ರಣನೀತಿಯಾಗಿ (ಸ್ಟ್ರ್ಯಾಟೆಜಿ) ಬಳಕೆಯಾಗುವುದನ್ನು ಕಾಣಬಹುದು.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...