Homeಮುಖಪುಟಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಲಕ್ಷಾಂತರ ರೂಪಾಯಿ ದುಡ್ಡುಕೊಟ್ಟು ಟ್ಯೂಶನ್ ಕೊಡಿಸಲು ಆಗುವ ಶ್ರೀಮಂತರಿಗೆ ಮಾತ್ರ ಅನುಕೂಲವಾಗುವಂತಹಾ NEET ಪರೀಕ್ಷಾ ವ್ಯವಸ್ತೆಯನ್ನು ಕರ್ನಾಟಕ ಕೈಬಿಡಬೇಕು.

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ಯುದ್ದ ಸಾರಿದ್ದು, ಕನ್ನಡಿಗ ವೈದ್ಯ ವಿದ್ಯಾರ್ಥಿಯ ಸಾವು ಕನ್ನಡಿಗರನ್ನು ಕೆರಳಿಸಿದೆ. ಅಲ್ಲದೆ ಪ್ರತಿಭಾವಂತ ಕನ್ನಡಿಗರೇಕೆ ವಿದ್ಯಾಭ್ಯಾಸಕ್ಕೆ ವಿದೇಶಗಳಿಗೆ ಹೋಗಿ ಬಲಿಯಾಗಬೇಕು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ NEET ಪರೀಕ್ಷೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ಕೂಡಲೇ ಅದನ್ನು ರದ್ದಗೊಳಿಸಬೇಕೆಂಬ ಗಟ್ಟಿ ದನಿ ಕೇಳಿಬಂದಿದೆ.

ಇಂದು ಕನ್ನಡಿಗರು ನೀಟ್ ವಿರುದ್ಧ ಟ್ವಿಟರ್‌ನಲ್ಲಿ ಅಭಿಯಾನ ನಡೆಸಿದ್ದಾರೆ. “ಒಂದೆಡೆ ಸೀಟಿಗೆ ಕೋಟಿಗಟ್ಟಲೆ ಹಣ ಬಾಚುವ ಕ್ಯಾಪಿಟೇಷನ್ ಲಾಬಿ, ಇನ್ನೊಂದೆಡೆ ಕನ್ನಡಿಗರ ಹಕ್ಕುಗಳನ್ನು ಕಸಿಯುತ್ತಿರುವ ನೀಟ್ ಎಂಬ ಷಡ್ಯಂತ್ರ. ಬಲಿಯಾಗುತ್ತಿರುವುದು ಕನ್ನಡಿಗರು” ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಾರಿದೆ.

ಕರ್ನಾಟಕವು ಭಾರತದಲ್ಲಿಯೇ ಅತಿ ಹೆಚ್ಚು MBBS ಕಾಲೇಜುಗಳು ಮತ್ತು ಸೀಟುಗಳನ್ನು ಹೊಂದಿದೆ. ಆದರೆ #NEET ನಿಂದಾಗಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಸೀಟು ಸಿಗುತ್ತಿಲ್ಲ. ಗ್ರಾಮೀಣ ಮತ್ತು ಕಡಿಮೆ ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಅಧ್ಯಯನದ ಕನಸನ್ನು ನನಸಾಗಿಸಲು ಇರುವ ಏಕೈಕ ಮಾರ್ಗವೆಂದರೆ ನೀಟ್ ರದ್ದುಗೊಳಿಸಬೇಕು ಎಂದು ಚೇತನ್ ಜೀರಾಳ್ ಟ್ವೀಟ್ ಮಾಡಿದ್ದಾರೆ.

ಲಕ್ಷಾಂತರ ರೂಪಾಯಿ ದುಡ್ಡುಕೊಟ್ಟು ಟ್ಯೂಶನ್ ಕೊಡಿಸಲು ಆಗುವ ಶ್ರೀಮಂತರಿಗೆ ಮಾತ್ರ ಅನುಕೂಲವಾಗುವಂತಹಾ NEET ಪರೀಕ್ಷಾ ವ್ಯವಸ್ತೆಯನ್ನು ಕರ್ನಾಟಕ ಕೈಬಿಡಬೇಕು. #BanNeet ಎಂದು ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ 3200 MBBS ಸೀಟುಗಳೊಂದಿಗೆ 20 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. 3200 ಸೀಟುಗಳಲ್ಲಿ ಸುಮಾರು 480 ಸೀಟುಗಳನ್ನು ಕೇಂದ್ರೀಯ ಕೋಟಾಕ್ಕೆ ನೀಡಲಾಗಿದೆ. ಕಟ್ಟಡ ನಮ್ಮದು, ಸೌಲಭ್ಯಗಳು ನಮ್ಮದು, ಅಧ್ಯಾಪಕರು ನಮ್ಮದು, ವಿಶ್ವವಿದ್ಯಾಲಯ ನಮ್ಮದು. ನಾವು ನಮ್ಮ ಸ್ಥಾನಗಳನ್ನು ಇತರರಿಗೆ ಏಕೆ ನೀಡಬೇಕು? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

ಶೇ.95 ಅಂಕ ಪಡೆದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳೂ ಸಹ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮೀಸಲಾತಿಯನ್ನು ದೂಷಿಸುವುದನ್ನು ನಿಲ್ಲಿಸಿ ಮತ್ತು ನೀಟ್ ಅನ್ನು ದೂಷಿಸಿ. ಸಮಸ್ಯೆ ಪರಿಹಾರಕ್ಕೆ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಿ, ಪ್ರತಿಮೆಗಳ ಬದಲಿಗೆ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿ. ಕ್ಯಾಪಿಟೇಶನ್ ಮಾಫಿಯಾವನ್ನು ನಿಯಂತ್ರಿಸಿ ಎಂದು ಚೇತನ್ ಕೃಷ್ಣ ಒತ್ತಾಯಿಸಿದ್ದಾರೆ.

7245 ಮೆಡಿಕಲ್ ಸೀಟುಗಳು ಇರುವ ಕರ್ನಾಟಕದಿಂದ ಅತಿ ಹೆಚ್ಚು ಸೀಟುಗಳನ್ನು ಬೇರೆ ರಾಜ್ಯಗಳಿಗೆ ಹಂಚುವ ವ್ಯವಸ್ಥೆಯೇ ನೀಟ್. ಒಂದು ದೇಶ, ಒಂದು ಪರೀಕ್ಷೆ ಹೆಸರಲ್ಲಿ ಒಕ್ಕೂಟ ಸರ್ಕಾರ ಕನ್ನಡದ ಮಕ್ಕಳ ಹಕ್ಕನ್ನು ಕಸಿದಿದೆ.‌ ಅದರ ಪರಿಣಾಮವಾಗಿಯೇ ಕನ್ನಡದ ಮಕ್ಕಳು ಹೊರದೇಶಗಳಿಗೆ ಹೋಗುವಂತಾಗಿದೆ. #BanNeet #RIPNaveen ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ  ಟ್ವೀಟ್ ಮಾಡಿದ್ದಾರೆ.

NEET ಎಂಬುದು ಪದೇ ಪದೇ ಬಡವರ ವಿರೋಧಿ, ಒಕ್ಕೂಟ ವ್ಯವಸ್ಥೆಯ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ. ಇದರಿಂದ ನಗರದ ಶ್ರೀಮಂತರಿಗೆ ಮಾತ್ರ ಲಾಭ. ಗ್ರಾಮೀಣ, ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಹ ಅವಕಾಶಗಳಿಂದ ವಂಚಿತರಾಗಿದ್ದಾರೆ. ಒಟ್ಟಾಗಿ ನಿಂತು ಈ ದಬ್ಬಾಳಿಕೆ ವಿರುದ್ಧ ಹೋರಾಡುವ ಸಮಯ ಇದಾಗಿದೆ. ನೀಟ್ ರದ್ದುಗೊಳಿಸೋಣ ಎಂದು ಶ್ರುತಿ ಮರುಳಪ್ಪ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...