Homeಮುಖಪುಟಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಲಕ್ಷಾಂತರ ರೂಪಾಯಿ ದುಡ್ಡುಕೊಟ್ಟು ಟ್ಯೂಶನ್ ಕೊಡಿಸಲು ಆಗುವ ಶ್ರೀಮಂತರಿಗೆ ಮಾತ್ರ ಅನುಕೂಲವಾಗುವಂತಹಾ NEET ಪರೀಕ್ಷಾ ವ್ಯವಸ್ತೆಯನ್ನು ಕರ್ನಾಟಕ ಕೈಬಿಡಬೇಕು.

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ಯುದ್ದ ಸಾರಿದ್ದು, ಕನ್ನಡಿಗ ವೈದ್ಯ ವಿದ್ಯಾರ್ಥಿಯ ಸಾವು ಕನ್ನಡಿಗರನ್ನು ಕೆರಳಿಸಿದೆ. ಅಲ್ಲದೆ ಪ್ರತಿಭಾವಂತ ಕನ್ನಡಿಗರೇಕೆ ವಿದ್ಯಾಭ್ಯಾಸಕ್ಕೆ ವಿದೇಶಗಳಿಗೆ ಹೋಗಿ ಬಲಿಯಾಗಬೇಕು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ NEET ಪರೀಕ್ಷೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ಕೂಡಲೇ ಅದನ್ನು ರದ್ದಗೊಳಿಸಬೇಕೆಂಬ ಗಟ್ಟಿ ದನಿ ಕೇಳಿಬಂದಿದೆ.

ಇಂದು ಕನ್ನಡಿಗರು ನೀಟ್ ವಿರುದ್ಧ ಟ್ವಿಟರ್‌ನಲ್ಲಿ ಅಭಿಯಾನ ನಡೆಸಿದ್ದಾರೆ. “ಒಂದೆಡೆ ಸೀಟಿಗೆ ಕೋಟಿಗಟ್ಟಲೆ ಹಣ ಬಾಚುವ ಕ್ಯಾಪಿಟೇಷನ್ ಲಾಬಿ, ಇನ್ನೊಂದೆಡೆ ಕನ್ನಡಿಗರ ಹಕ್ಕುಗಳನ್ನು ಕಸಿಯುತ್ತಿರುವ ನೀಟ್ ಎಂಬ ಷಡ್ಯಂತ್ರ. ಬಲಿಯಾಗುತ್ತಿರುವುದು ಕನ್ನಡಿಗರು” ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಾರಿದೆ.

ಕರ್ನಾಟಕವು ಭಾರತದಲ್ಲಿಯೇ ಅತಿ ಹೆಚ್ಚು MBBS ಕಾಲೇಜುಗಳು ಮತ್ತು ಸೀಟುಗಳನ್ನು ಹೊಂದಿದೆ. ಆದರೆ #NEET ನಿಂದಾಗಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಸೀಟು ಸಿಗುತ್ತಿಲ್ಲ. ಗ್ರಾಮೀಣ ಮತ್ತು ಕಡಿಮೆ ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಅಧ್ಯಯನದ ಕನಸನ್ನು ನನಸಾಗಿಸಲು ಇರುವ ಏಕೈಕ ಮಾರ್ಗವೆಂದರೆ ನೀಟ್ ರದ್ದುಗೊಳಿಸಬೇಕು ಎಂದು ಚೇತನ್ ಜೀರಾಳ್ ಟ್ವೀಟ್ ಮಾಡಿದ್ದಾರೆ.

ಲಕ್ಷಾಂತರ ರೂಪಾಯಿ ದುಡ್ಡುಕೊಟ್ಟು ಟ್ಯೂಶನ್ ಕೊಡಿಸಲು ಆಗುವ ಶ್ರೀಮಂತರಿಗೆ ಮಾತ್ರ ಅನುಕೂಲವಾಗುವಂತಹಾ NEET ಪರೀಕ್ಷಾ ವ್ಯವಸ್ತೆಯನ್ನು ಕರ್ನಾಟಕ ಕೈಬಿಡಬೇಕು. #BanNeet ಎಂದು ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ 3200 MBBS ಸೀಟುಗಳೊಂದಿಗೆ 20 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. 3200 ಸೀಟುಗಳಲ್ಲಿ ಸುಮಾರು 480 ಸೀಟುಗಳನ್ನು ಕೇಂದ್ರೀಯ ಕೋಟಾಕ್ಕೆ ನೀಡಲಾಗಿದೆ. ಕಟ್ಟಡ ನಮ್ಮದು, ಸೌಲಭ್ಯಗಳು ನಮ್ಮದು, ಅಧ್ಯಾಪಕರು ನಮ್ಮದು, ವಿಶ್ವವಿದ್ಯಾಲಯ ನಮ್ಮದು. ನಾವು ನಮ್ಮ ಸ್ಥಾನಗಳನ್ನು ಇತರರಿಗೆ ಏಕೆ ನೀಡಬೇಕು? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

ಶೇ.95 ಅಂಕ ಪಡೆದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳೂ ಸಹ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮೀಸಲಾತಿಯನ್ನು ದೂಷಿಸುವುದನ್ನು ನಿಲ್ಲಿಸಿ ಮತ್ತು ನೀಟ್ ಅನ್ನು ದೂಷಿಸಿ. ಸಮಸ್ಯೆ ಪರಿಹಾರಕ್ಕೆ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಿ, ಪ್ರತಿಮೆಗಳ ಬದಲಿಗೆ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿ. ಕ್ಯಾಪಿಟೇಶನ್ ಮಾಫಿಯಾವನ್ನು ನಿಯಂತ್ರಿಸಿ ಎಂದು ಚೇತನ್ ಕೃಷ್ಣ ಒತ್ತಾಯಿಸಿದ್ದಾರೆ.

7245 ಮೆಡಿಕಲ್ ಸೀಟುಗಳು ಇರುವ ಕರ್ನಾಟಕದಿಂದ ಅತಿ ಹೆಚ್ಚು ಸೀಟುಗಳನ್ನು ಬೇರೆ ರಾಜ್ಯಗಳಿಗೆ ಹಂಚುವ ವ್ಯವಸ್ಥೆಯೇ ನೀಟ್. ಒಂದು ದೇಶ, ಒಂದು ಪರೀಕ್ಷೆ ಹೆಸರಲ್ಲಿ ಒಕ್ಕೂಟ ಸರ್ಕಾರ ಕನ್ನಡದ ಮಕ್ಕಳ ಹಕ್ಕನ್ನು ಕಸಿದಿದೆ.‌ ಅದರ ಪರಿಣಾಮವಾಗಿಯೇ ಕನ್ನಡದ ಮಕ್ಕಳು ಹೊರದೇಶಗಳಿಗೆ ಹೋಗುವಂತಾಗಿದೆ. #BanNeet #RIPNaveen ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ  ಟ್ವೀಟ್ ಮಾಡಿದ್ದಾರೆ.

NEET ಎಂಬುದು ಪದೇ ಪದೇ ಬಡವರ ವಿರೋಧಿ, ಒಕ್ಕೂಟ ವ್ಯವಸ್ಥೆಯ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ. ಇದರಿಂದ ನಗರದ ಶ್ರೀಮಂತರಿಗೆ ಮಾತ್ರ ಲಾಭ. ಗ್ರಾಮೀಣ, ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಹ ಅವಕಾಶಗಳಿಂದ ವಂಚಿತರಾಗಿದ್ದಾರೆ. ಒಟ್ಟಾಗಿ ನಿಂತು ಈ ದಬ್ಬಾಳಿಕೆ ವಿರುದ್ಧ ಹೋರಾಡುವ ಸಮಯ ಇದಾಗಿದೆ. ನೀಟ್ ರದ್ದುಗೊಳಿಸೋಣ ಎಂದು ಶ್ರುತಿ ಮರುಳಪ್ಪ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...