Homeಮುಖಪುಟಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಲಕ್ಷಾಂತರ ರೂಪಾಯಿ ದುಡ್ಡುಕೊಟ್ಟು ಟ್ಯೂಶನ್ ಕೊಡಿಸಲು ಆಗುವ ಶ್ರೀಮಂತರಿಗೆ ಮಾತ್ರ ಅನುಕೂಲವಾಗುವಂತಹಾ NEET ಪರೀಕ್ಷಾ ವ್ಯವಸ್ತೆಯನ್ನು ಕರ್ನಾಟಕ ಕೈಬಿಡಬೇಕು.

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ಯುದ್ದ ಸಾರಿದ್ದು, ಕನ್ನಡಿಗ ವೈದ್ಯ ವಿದ್ಯಾರ್ಥಿಯ ಸಾವು ಕನ್ನಡಿಗರನ್ನು ಕೆರಳಿಸಿದೆ. ಅಲ್ಲದೆ ಪ್ರತಿಭಾವಂತ ಕನ್ನಡಿಗರೇಕೆ ವಿದ್ಯಾಭ್ಯಾಸಕ್ಕೆ ವಿದೇಶಗಳಿಗೆ ಹೋಗಿ ಬಲಿಯಾಗಬೇಕು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ NEET ಪರೀಕ್ಷೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ಕೂಡಲೇ ಅದನ್ನು ರದ್ದಗೊಳಿಸಬೇಕೆಂಬ ಗಟ್ಟಿ ದನಿ ಕೇಳಿಬಂದಿದೆ.

ಇಂದು ಕನ್ನಡಿಗರು ನೀಟ್ ವಿರುದ್ಧ ಟ್ವಿಟರ್‌ನಲ್ಲಿ ಅಭಿಯಾನ ನಡೆಸಿದ್ದಾರೆ. “ಒಂದೆಡೆ ಸೀಟಿಗೆ ಕೋಟಿಗಟ್ಟಲೆ ಹಣ ಬಾಚುವ ಕ್ಯಾಪಿಟೇಷನ್ ಲಾಬಿ, ಇನ್ನೊಂದೆಡೆ ಕನ್ನಡಿಗರ ಹಕ್ಕುಗಳನ್ನು ಕಸಿಯುತ್ತಿರುವ ನೀಟ್ ಎಂಬ ಷಡ್ಯಂತ್ರ. ಬಲಿಯಾಗುತ್ತಿರುವುದು ಕನ್ನಡಿಗರು” ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಾರಿದೆ.

ಕರ್ನಾಟಕವು ಭಾರತದಲ್ಲಿಯೇ ಅತಿ ಹೆಚ್ಚು MBBS ಕಾಲೇಜುಗಳು ಮತ್ತು ಸೀಟುಗಳನ್ನು ಹೊಂದಿದೆ. ಆದರೆ #NEET ನಿಂದಾಗಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಸೀಟು ಸಿಗುತ್ತಿಲ್ಲ. ಗ್ರಾಮೀಣ ಮತ್ತು ಕಡಿಮೆ ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಅಧ್ಯಯನದ ಕನಸನ್ನು ನನಸಾಗಿಸಲು ಇರುವ ಏಕೈಕ ಮಾರ್ಗವೆಂದರೆ ನೀಟ್ ರದ್ದುಗೊಳಿಸಬೇಕು ಎಂದು ಚೇತನ್ ಜೀರಾಳ್ ಟ್ವೀಟ್ ಮಾಡಿದ್ದಾರೆ.

ಲಕ್ಷಾಂತರ ರೂಪಾಯಿ ದುಡ್ಡುಕೊಟ್ಟು ಟ್ಯೂಶನ್ ಕೊಡಿಸಲು ಆಗುವ ಶ್ರೀಮಂತರಿಗೆ ಮಾತ್ರ ಅನುಕೂಲವಾಗುವಂತಹಾ NEET ಪರೀಕ್ಷಾ ವ್ಯವಸ್ತೆಯನ್ನು ಕರ್ನಾಟಕ ಕೈಬಿಡಬೇಕು. #BanNeet ಎಂದು ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ 3200 MBBS ಸೀಟುಗಳೊಂದಿಗೆ 20 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. 3200 ಸೀಟುಗಳಲ್ಲಿ ಸುಮಾರು 480 ಸೀಟುಗಳನ್ನು ಕೇಂದ್ರೀಯ ಕೋಟಾಕ್ಕೆ ನೀಡಲಾಗಿದೆ. ಕಟ್ಟಡ ನಮ್ಮದು, ಸೌಲಭ್ಯಗಳು ನಮ್ಮದು, ಅಧ್ಯಾಪಕರು ನಮ್ಮದು, ವಿಶ್ವವಿದ್ಯಾಲಯ ನಮ್ಮದು. ನಾವು ನಮ್ಮ ಸ್ಥಾನಗಳನ್ನು ಇತರರಿಗೆ ಏಕೆ ನೀಡಬೇಕು? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

ಶೇ.95 ಅಂಕ ಪಡೆದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳೂ ಸಹ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮೀಸಲಾತಿಯನ್ನು ದೂಷಿಸುವುದನ್ನು ನಿಲ್ಲಿಸಿ ಮತ್ತು ನೀಟ್ ಅನ್ನು ದೂಷಿಸಿ. ಸಮಸ್ಯೆ ಪರಿಹಾರಕ್ಕೆ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಿ, ಪ್ರತಿಮೆಗಳ ಬದಲಿಗೆ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿ. ಕ್ಯಾಪಿಟೇಶನ್ ಮಾಫಿಯಾವನ್ನು ನಿಯಂತ್ರಿಸಿ ಎಂದು ಚೇತನ್ ಕೃಷ್ಣ ಒತ್ತಾಯಿಸಿದ್ದಾರೆ.

7245 ಮೆಡಿಕಲ್ ಸೀಟುಗಳು ಇರುವ ಕರ್ನಾಟಕದಿಂದ ಅತಿ ಹೆಚ್ಚು ಸೀಟುಗಳನ್ನು ಬೇರೆ ರಾಜ್ಯಗಳಿಗೆ ಹಂಚುವ ವ್ಯವಸ್ಥೆಯೇ ನೀಟ್. ಒಂದು ದೇಶ, ಒಂದು ಪರೀಕ್ಷೆ ಹೆಸರಲ್ಲಿ ಒಕ್ಕೂಟ ಸರ್ಕಾರ ಕನ್ನಡದ ಮಕ್ಕಳ ಹಕ್ಕನ್ನು ಕಸಿದಿದೆ.‌ ಅದರ ಪರಿಣಾಮವಾಗಿಯೇ ಕನ್ನಡದ ಮಕ್ಕಳು ಹೊರದೇಶಗಳಿಗೆ ಹೋಗುವಂತಾಗಿದೆ. #BanNeet #RIPNaveen ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ  ಟ್ವೀಟ್ ಮಾಡಿದ್ದಾರೆ.

NEET ಎಂಬುದು ಪದೇ ಪದೇ ಬಡವರ ವಿರೋಧಿ, ಒಕ್ಕೂಟ ವ್ಯವಸ್ಥೆಯ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ. ಇದರಿಂದ ನಗರದ ಶ್ರೀಮಂತರಿಗೆ ಮಾತ್ರ ಲಾಭ. ಗ್ರಾಮೀಣ, ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಹ ಅವಕಾಶಗಳಿಂದ ವಂಚಿತರಾಗಿದ್ದಾರೆ. ಒಟ್ಟಾಗಿ ನಿಂತು ಈ ದಬ್ಬಾಳಿಕೆ ವಿರುದ್ಧ ಹೋರಾಡುವ ಸಮಯ ಇದಾಗಿದೆ. ನೀಟ್ ರದ್ದುಗೊಳಿಸೋಣ ಎಂದು ಶ್ರುತಿ ಮರುಳಪ್ಪ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...