Homeಕರ್ನಾಟಕವರ್ಷ ಕಳೆದರೂ ಮುಗಿಯದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ: ಕಣ್ಣೀರಿನಲ್ಲಿ ಕಾಲ ದೂಡುತ್ತಿರುವ ಭಾವೀ ಶಿಕ್ಷಕರು

ವರ್ಷ ಕಳೆದರೂ ಮುಗಿಯದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ: ಕಣ್ಣೀರಿನಲ್ಲಿ ಕಾಲ ದೂಡುತ್ತಿರುವ ಭಾವೀ ಶಿಕ್ಷಕರು

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ 500ಕ್ಕೂ ಅಭ್ಯರ್ಥಿಗಳ ಬದುಕಿಗೆ ಕೊಳ್ಳಿ ಇಟ್ಟಿರಿ. ಈಗ ಶಿಕ್ಷಕರ ನೇಮಕಾತಿಯಲ್ಲಿ 13,300 ಕ್ಕೂ ಹೆಚ್ಚು ಅಭ್ಯರ್ಥಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

- Advertisement -
- Advertisement -

ಬಿಜೆಪಿ ಸರ್ಕಾರ ಮತ್ತು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು 15,000 ಶಿಕ್ಷಕರ ನೇಮಕಾತಿ ಮಾಡಿಕೊಂಡಿದ್ದೇವೆ ಎಂದು ಹಲವಾರು ಬಾರಿ ತಮ್ಮನ್ನು ತಾವೇ ಹೊಗಳಿಕೊಂಡಿದ್ದುಂಟು. ಆದರೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿ ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸರ್ಕಾರ ಮಾಡಿದ ಯಡವಟ್ಟುಗಳಿಂದ ಒಬ್ಬರ ನಂತರ ಒಬ್ಬರಂತೆ ಹಲವರು ಕೋರ್ಟ್ ಮೆಟ್ಟಿಲೇರಿದ ಪರಿಣಾಮ ನೇಮಕಾತಿ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಲಿದ್ದು, ನೀತಿ ಸಂಹಿತೆ ಜಾರಿಗೆ ಬಂದಲ್ಲಿ ನೇಮಕಾತಿ ಪ್ರಕ್ರಿಯೆ ಮತ್ತೆ 5-6 ತಿಂಗಳು ಮುಂದೆ ಹೋಗುವ ಸಂಭವವಿದೆ. ಇದರಿಂದಾಗಿ ಶಿಕ್ಷಕರಾಗುವ ಕನಸಿನಲ್ಲಿದ್ದ ಸಾಮಾನ್ಯ ವರ್ಗದಲ್ಲಿ ಆಯ್ಕೆಯಾಗಿದ್ದ ಮತ್ತು ಯಾವುದೇ ಕಾನೂನು ತೊಡಗಿಲ್ಲದ ಭಾವೀ ಶಿಕ್ಷಕರು ಪ್ರತಿ ದಿನ ಕಣ್ಣೀರಿಡುತ್ತಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗಾಗಿ 2022ರ ಮಾರ್ಚ್‌ನಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅರ್ಜಿ ಕರೆಯಲಾಯಿತು. ಮೇ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಯಿತು. ನವೆಂಬರ್‌ನಲ್ಲಿ 1:2 ಮತ್ತು 1:1ರ ತಾತ್ಕಾಲಿಕ ಪಟ್ಟಿ ಪ್ರಕಟ ಮಾಡಿಲಾಯಿತು. ಆಯ್ಕೆಯಾದ ಭಾವೀ ಶಿಕ್ಷಕರು ಕೊನೆಗೂ ತಮ್ಮ ಆಸೆ ನೆರವೇರಿತು ಎಂಬ ಸಂಭ್ರಮದಲ್ಲಿದ್ದರು. ಆದರೆ ಪಟ್ಟಿ ಪ್ರಕಟವಾಗಿ ಆರು ತಿಂಗಳಾಗುತ್ತ ಬಂದರೂ ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮತ್ತು ನೇಮಕಾತಿ ಆದೇಶ ಸಿಕ್ಕಿಲ್ಲ.

ಈ ಹಿಂದೆ ಪೋಷಕರ ಜಾತಿ ಮತ್ತು ಅದಾಯ ಸಲ್ಲಿಸಿದ ವಿವಾಹಿತರನ್ನು ಸಾಮಾನ್ಯ ವರ್ಗದಲ್ಲಿ ಪರಿಗಣಿಸಿದ್ದನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿದರು. ಹಾಗಾಗಿ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಪೋಷಕರ ಜಾತಿ ಮತ್ತು ಅದಾಯ ಪ್ರಮಾಣ ಪತ್ರ ಸಲ್ಲಿಸಿದ ವಿವಾಹಿತರನ್ನು ಮೀಸಲಾತಿಯಲ್ಲಿ ಪರಿಗಣಿಸುವಂತೆ ಹಾಗೂ ಇರುವ ತಾತ್ಕಾಲಿಕ ಪಟ್ಟಿಯನ್ನು ರದ್ದುಪಡಿಸಿ ಹೊಸ ಪಟ್ಟಿ ಬಿಡುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಹಾಗಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಯಿತು. ಆನಂತರ ಮಾರ್ಚ್ 08ರಂದು ಸರ್ಕಾರ ಅಂತಿಮ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕೆಲ ಅಭ್ಯರ್ಥಿಗಳನ್ನು ಹೊರ ಹಾಕಲಾಗಿದೆ ಎಂದು ಆರೋಪಿಸಿ ಕೆಲವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿ ಆಯ್ಕೆ ಪಟ್ಟಿಗೆ ಮತ್ತೆ ತಡೆಯಾಜ್ಞೆ ತಂದಿದ್ದಾರೆ.

ಹಾಗಾಗಿ ಸದ್ಯದಲ್ಲಿ ವಿವಾದ ಬಗೆಹರಿಯುವ ಸೂಚನೆ ಕಂಡುಬರುತ್ತಿಲ್ಲ. “ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮೊದಲು ವರ್ಗಾವಣೆಯನ್ನು ಪೂರ್ಣಗೊಳಿಸುವುದು. ವರ್ಗಾವಣೆಯಿಂದಾಗಿ ಖಾಲಿಯಾದ ಹುದ್ದೆಗಳಿಗೆ ಹೊಸ ಶಿಕ್ಷಕರನ್ನು ನಿಯೋಜಿಸುವುದು ನಮ್ಮ ಯೋಜನೆಯಾಗಿದೆ. ಈಗ ವರ್ಗಾವಣೆಗೆ ಸಂಬಂಧಿಸಿದ ಕಡತವು ಇನ್ನೂ ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದಿರುವುದರಿಂದ ಎಲ್ಲವೂ ವಿಳಂಬವಾಗುತ್ತದೆ” ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳುತ್ತಾರೆ.

ಭಾವೀ ಶಿಕ್ಷಕರ ಆಕ್ರೋಶ; ಸಿಎಂ ಬೊಮ್ಮಾಯಿಗೆ ಪತ್ರ

ಪದೇ ಪದೇ ನೇಮಕಾತಿ ಪ್ರಕ್ರಿಯೆ ಮುಂದೆ ಹೋಗುತ್ತಿರುವುದರಿಂದ ಆಕ್ರೋಶಗೊಂಡಿರುವ ಭಾವೀ ಶಿಕ್ಷಕರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಉದ್ಯೋಗ ಸೃಷ್ಟಿ ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಿಮ್ಮ ಸರ್ಕಾರದ ಸಾಧನೆ ಸೊನ್ನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ 500ಕ್ಕೂ ಅಭ್ಯರ್ಥಿಗಳ ಬದುಕಿಗೆ ಕೊಳ್ಳಿ ಇಟ್ಟಿರಿ. ಈಗ ಶಿಕ್ಷಕರ ನೇಮಕಾತಿಯಲ್ಲಿ 13,300ಕ್ಕೂ ಹೆಚ್ಚು ಅಭ್ಯರ್ಥಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು ನಾಲ್ಕು ವರ್ಷಗಳಾಗುತ್ತಿವೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ 2021ರ ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆದರೂ ಇನ್ನೂ ನೇಮಕಾತಿ ಪ್ರಕ್ರಿಯೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ಮತ್ತು ಪಿಯುಸಿ ಉಪನ್ಯಾಸಕರ ನೇಮಕಾತಿ ಮಾಡಿಕೊಂಡಿಲ್ಲ. ಪೋಲಿಸ್ ಹುದ್ದೆಗಳ ನೇಮಕಾತಿ ಕೂಡ ಬಾಕಿ ಉಳಿದಿದೆ. ವರ್ಷಗಟ್ಟಲೆ ಓದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುತ್ತಿರುವ ಅದೆಷ್ಟೊ ಅಭ್ಯರ್ಥಿಗಳ‌ ಕನಸಿಗಳಿಗೆ ನೀರೆರೆಚುವ ಕೆಲಸವನ್ನು ನಿಮ್ಮ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಸದ್ಯ ಭಾವೀ ಶಿಕ್ಷಕರು ಖಾಸಗಿ ಶಾಲೆಗಳಲ್ಲಿ ಪಾಠ ಮಾಡುತ್ತಿದ್ದು, ಸರ್ಕಾರಿ ಶಿಕ್ಷಕರಾಗಿ ಆಯ್ಕೆಯಾಗಿರುವುದರಿಂದ ಈ ವರ್ಷದ ಅಂತ್ಯಕ್ಕೆ ಅವರನ್ನು ಕೆಲಸದಿಂದ ತೆಗೆಯಲಾಗುತ್ತದೆ. ಆದರೆ ಸರ್ಕಾರಿ ಕೆಲಸದ ನೇಮಕಾತಿ ಆದೇಶ ಸಿಗದುದ್ದರಿಂದ ಎರಡು ಕಡೆ ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿ ಅಲೆಯಬೇಕಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಾದರೆ ನಮಗೆ ಕೆಲಸ ಸಿಗುವುದು ಮತ್ತಷ್ಟು ಮುಂದೆ ಹೋಗುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತೇವೆ. ಮುಂದಿನ ಶೈಕ್ಷಣಿಗೆ ವರ್ಷದ ಒಳಗೆ ಶಿಕ್ಷಕರ ನೇಮಕಾತಿ ಆಗದೆ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುವ ಅಪಾಯವಿದೆ.

ಹಾಗಾಗಿ ಚುನಾವಣೆ ನೀತಿ ಸಂಹಿತೆಯಿಂದ ತೊಂದರೆಯಾಗದಂತೆ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನ ಚುರುಗೊಳಿಸಬೇಕು. ಕಲ್ಯಾಣ ಕರ್ನಾಟಕ ಹೊರತುಪಡಿಸಿ ಉಳಿದ ಭಾಗಗಳ ಭಾವೀ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ: ಸರ್ಕಾರದ ವಿರುದ್ಧ ಸುಪ್ರೀಂ ಮೊರೆ ಹೋದ 14 ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...