HomeUncategorized'ದಿ ಪ್ರಾಫೆಟ್' ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

‘ದಿ ಪ್ರಾಫೆಟ್’ ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

- Advertisement -
- Advertisement -

ಯೋಗೇಶ್ ಮಾಸ್ಟರ್ ಅಪಾರ ಓದು ಮತ್ತು ಜೀವನ ಪ್ರೀತಿಯಿರುವ ಸೃಜನಶೀಲ ವ್ಯಕ್ತಿ. ಡುಂಢಿ ಕಾದಂಬರಿ ವಿವಾದದಿಂದ ‘ಖ್ಯಾತ’ರಾದ ಅವರು ಬಹುಮುಖಿ ಪ್ರತಿಭೆಯುಳ್ಳ ಕಲಾವಿದ. ಈ ವಾರದಿಂದ ಅವರ ಪುಟಕ್ಕಿಟ್ಟ ಪುಟಗಳು ಇಲ್ಲಿ ಹೊಳೆಯಲಿವೆ. ಜೀವನದ ಬೇರೆ ಬೇರೆ ಸಂದರ್ಭದ ಜಟಿಲ ಕ್ಷಣಗಳಲ್ಲಿ ಎಂದೋ ಓದಿದ ಪುಸ್ತಕವೊಂದರಿಂದ ಒಳನೋಟವೊಂದು ಮನದಲ್ಲಿ ತೇಲಿ ಬರುತ್ತದೆ. ಆ ಪುಸ್ತಕವು ಜಗತ್ತಿನ ಯಾವುದೋ ಭಾಷೆಯ ಮಹತ್ವದ ಕೃತಿಯಾಗಿರಬಹುದು ಅಥವಾ ನಮ್ಮದೇ ಪರಿಸರದ ಭಾಷೆಯ ಪುಸ್ತಕವಾಗಿರಬಹುದು. ಅಂತಹ ಪುಸ್ತಕಗಳು ಕತ್ತಲೆಯಲ್ಲೂ ಹೊಳೆಯುತ್ತವೆ. ಆ ರೀತಿ ಹೊಳೆಯುವ ಮಹತ್ವದ ಸಾಲುಗಳನ್ನು ಮತ್ತು ಆ ಪುಸ್ತಕದ ಕುರಿತ ಸಾಂದರ್ಭಿಕ ಮಾಹಿತಿಯನ್ನು ಪ್ರತೀ ವಾರವೂ ನಮ್ಮ ಓದುಗರಿಗೆ ಯೋಗೇಶ್ ಮಾಸ್ಟರ್ ತಲುಪಿಸಲಿದ್ದಾರೆ.

ಆದಿಯಲ್ಲಿ ಆಕಾಶ ಮತ್ತು ಭೂಮಿಯನ್ನು ಸೃಷ್ಟಿಸಿದ ದೇವರು ಮನುಷ್ಯನನ್ನೂ ಸೃಷ್ಟಿಸಿದ ತನ್ನದೇ ಪ್ರತಿರೂಪದಲ್ಲಿ. ಆದಾಮ ಮತ್ತು ಹವ್ವರೆಂಬ ಆ ಗಂಡು ಹೆಣ್ಣುಗಳನ್ನು ಸ್ವತಂತ್ರವಾಗಿ ಸ್ವರ್ಗೋದ್ಯಾನದಲ್ಲಿ ಬಿಟ್ಟು, ಅರಿವನ್ನು ನೀಡುವ ಮರದ ಫಲವನ್ನು ತಿನ್ನಬಾರದೆಂಬ ನಿಬಂಧನೆಯನ್ನಿಟ್ಟು ಅವರನ್ನು ಚೆನ್ನಾಗಿಟ್ಟುಕೊಂಡಿದ್ದ. ತಿನ್ನಬಾರದು ಎಂದು ಅವನು ಏಕೆ ಹೇಳಿದ್ದನೋ?! ಆದರೆ ಅವಳು ತಿಂದಳು, ಅವನೂ ತಿಂದ. ಇಬ್ಬರಿಗೂ ಅರಿವುಂಟಾಯಿತು. ತಮ್ಮ ಬೆತ್ತಲೆಯನ್ನು ಅರಿವೆಯ ಕತ್ತಲೆಯಲ್ಲಿ ಇಟ್ಟುಕೊಳ್ಳಬೇಕೆಂಬುದೇ ಮೊದಲ ಅರಿವು. ತಾನು ಲೋಕ ಸಂಚಾರಕ್ಕೆ ಹೋಗಿದ್ದು ಮರಳಿ ಬಂದಾಗ ದೇವರು ಕಂಡಿದ್ದು, ಸ್ತ್ರೀ ತನ್ನ ಸಂಕೋಚದ ಮರೆಯಿಂದ ಉತ್ತರಿಸಿದ್ದು. ಕೋಪಗೊಂಡ ಅವನು ಸ್ವರ್ಗೋದ್ಯಾನದಿಂದ ಹೊರಗಟ್ಟಿದ. ಮಣ್ಣಿಂದ ಬಂದ ಮನುಷ್ಯರು ಮಣ್ಣಿಗೇ ಹೋಗಲೆನ್ನುತ್ತಾ ಗಂಡು-ಹೆಣ್ಣಿಗೆರಡು ಶಾಪಗಳನ್ನು ಕೊಟ್ಟ. ಹೆಣ್ಣಿಗೆ ನೋವಿನಲ್ಲಿ ಹೆರುವ ಶಾಪವಾದರೆ, ಗಂಡಿಗೆ ದುಡಿವ ಶಾಪವ.

ದೇವರು ಶಾಪ ಎನ್ನುವ ದುಡಿದು ಬದುಕುವುದನ್ನು ಖಲೀಲ್ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಬ್ಬರ ಭಾಗ್ಯ ಎನ್ನುತ್ತಾನೆ. ದುಡಿಯುವುದೆಂದರೆ ವಿಶ್ವದ ಅನಂತತೆಯು ಹೆಮ್ಮೆಯಿಂದ ಹೋಗುವ ಘನವೆತ್ತ ಮೆರವಣಿಗೆಯ ಭಾಗವಾಗುವುದು ಎನ್ನುತ್ತಾನೆ. ನಿನ್ನ ಹಣೆಯಲ್ಲಿ ದುಡಿಮೆಯೆಂಬುವುದು ದೌರ್ಭಾಗ್ಯವಾಗಿ ಬರೆದಿದ್ದರೆ, ದುಡಿಯುವಾಗ ಸುರಿವ ನಿನ್ನ ಬೆವರು ಅದನ್ನು ತೊಡೆದು ಹಾಕಿ ಬಿಡುವುದು ಎಂದು ಬಿಡುತ್ತಾನೆ ಈ ಪಾಪಿ ಖಲೀಲ.! ದೇವರ ಶಾಪವನ್ನು ಹೆಮ್ಮೆಯ ಬದುಕಿನ ಭಾಗವಾಗಿಸಿಕೊಳ್ಳುತ್ತಾನೆ. ಸಾಲದ್ದಕ್ಕೆ ಪ್ರೇಮದ ಮೂರ್ತ ಸ್ವರೂಪವೇ ದುಡಿಮೆ ಎನ್ನುತ್ತಾನೆ. ನೀನು ಪ್ರೀತಿಸುವುದನ್ನು ನಿನ್ನ ಕೆಲಸದಲ್ಲಿ ತೋರಿಸೆನ್ನುತ್ತಾನೆ.

ದಿ ಪ್ರಾಫೆಟ್ ಎಂದು ಖಲೀಲ್ ಗಿಬ್ರಾನ್ ಬರೆದ ಅರಿವಿನ ಹೊತ್ತಿಗೆಯು ಬಹುಪಾಲು ವಿಶ್ವದ ಎಲ್ಲಾ ಭಾಷೆಗಳಲ್ಲಿಯೂ ಅನುವಾದಿತವಾಗಿವೆ. ಕನ್ನಡದಲ್ಲಿ ಜಿ.ಎನ್ ರಂಗನಾಥ್, ಬಂಜಗೆರೆ ಜಯಪ್ರಕಾಶ್, ದೇವದತ್ತ ಇಡೀ ಪುಸ್ತಕವನ್ನೇ ಅನುವಾದಿಸಿದ್ದರೆ, ತಮಗೆ ಬೇಕಾದಂತಹ ಭಾಗಗಳನ್ನು ಬಹಳಷ್ಟು ಲೇಖಕರು ಅನುವಾದಿಸಿ ಸಂದರ್ಭೋಚಿತವಾಗಿ ತಮ್ಮ ಬರಹಗಳಲ್ಲಿ ಉಲ್ಲೇಖಿಸಿರುತ್ತಾರೆ. ಖಲೀಲನ ಪ್ರಾಫೆಟನ್ನು ಪ್ರವಾದಿ ಎನ್ನುವುದಕ್ಕಿಂತ ದಾರ್ಶನಿಕ ಎಂದು ಕನ್ನಡದಲ್ಲಿ ಕರೆಯುವುದು ಸೂಕ್ತವೆಂದೆನಿಸುತ್ತದೆ.
ಅಲ್ ಮುಸ್ತಾಫ ತನ್ನ ಪಟ್ಟಣಕ್ಕೆ ಮರಳಲು ಬೆಟ್ಟವಿಳಿದು ಬಂದಾಗ ಊರವರು ಸೇರುತ್ತಾರೆ.

ಎದೆಗೆ ಮಗುವನ್ನು ಅವುಚಿಕೊಂಡಿರುವ ಮಹಿಳೆ ಮಗುವಿನ ಬಗ್ಗೆ ಹೇಳು ಎಂದರೆ, “ಮಗುವೆಂಬುದು ನಿಮ್ಮ ಮೂಲಕ ಬಂದಿರುವವರೇ ಹೊರತು ನಿಮ್ಮಿಂದ ಅಲ್ಲ” ಎನ್ನುತ್ತಾ ಮಕ್ಕಳ ಮೇಲೆ ಪೋಕರಿಗಿರುವ ಅಧಿಕಾರವನ್ನು ಕಿತ್ತು, “ನೀವು ಮಕ್ಕಳಂತಾಗಬೇಕೇ ಹೊರತು, ಮಕ್ಕಳನ್ನು ನಿಮ್ಮಂತೆ ಮಾಡಬೇಡಿ. ಏಕೆಂದರೆ ಅವರು ಹೊಂದಿರುವ ಕನಸನ್ನು ನೀವು ಎಂದಿಗೂ ಹೊಂದಲಾರಿರಿ” ಎಂದೆಚ್ಚರಿಸುತ್ತಾನೆ. ಹಿರಿಯರಿಗೆ ಬಾಗಬೇಕು ಎಂದು ಸಾಮಾನ್ಯ ಬೋಧನೆಯನ್ನು ಮಕ್ಕಳಿಗೆ ಮಾಡುವಾಗ ಖಲೀಲ್ ನೀವು ಬಿಲ್ಲಿನಂತೆ ಬಾಗಿ ಮಕ್ಕಳು ಬಾಣದಂತೆ ಚಿಮ್ಮಲಿ ಎನ್ನುತ್ತಾನೆ.

ಮನೆ ಕಟ್ಟುವವನು ಮನೆಯ ಬಗ್ಗೆ ಕೇಳಿದರೆ, “ನಿನ್ನ ದೇಹದ ವಿಸ್ತೃತ ರೂಪವೇ ನಿನ್ನ ಮನೆ” ಎನ್ನುತ್ತಾನೆ. ವ್ಯಾಪಾರಿ ವ್ಯಾಪಾರದ ಬಗ್ಗೆ, ಪ್ರೇಮಿಯು ಪ್ರೇಮದ ಬಗ್ಗೆ, ತಳವಾರನು ಕಾನೂನು ವ್ಯವಸ್ಥೆಯ ಬಗ್ಗೆ, ಬಟ್ಟೆಯ ಬಗ್ಗೆ; ಹೀಗೆ ನಾನಾ ವಿಷಯಗಳ ಬಗ್ಗೆ ಕೇಳಿದವರಿಗೆಲ್ಲಾ ಉತ್ತರಿಸುತ್ತಾ ಹೋಗುವ ಅಲ್ ಮುಸ್ತಾಫ ತನ್ನ ಹಡಗು ಬರಲು ಹೊರಟು ಹೋಗುತ್ತಾನೆ, ಪ್ರಶ್ನಿಸಿದವರಿಗೆಲ್ಲಾ ಅರಿವಿನ ಒಳ ನೋಟಗಳನ್ನು ಕೊಟ್ಟು.

ಪ್ರಾಫೆಟ್ಟಿನ ಪುಟವಿಟ್ಟ ಪುಟಗಳು ಕತ್ತಲಲ್ಲಿಯೂ ಹೊಳೆಯುತ್ತಿರುತ್ತವೆ. ಸಂಬಂಧಗಳ ಸಂಘರ್ಷಗಳಲ್ಲಿ, ಅಸೂಯೆ, ಮತ್ಸರ ಮೂಡಿದ ಕ್ಷಣಗಳಲ್ಲಿ, ಲೋಕದ ರೂಢಿಯ ಭಾವನೆಗಳ್ಯಾವವೇ ಆದರೂ ಕಣ್ಣುಗಳಲ್ಲಿ ಕತ್ತಲಾಗಿ ದಾರಿ ಮಸುಕಾದಾಗ ಖಲೀಲನ ಪ್ರಾಫೆಟ್ ತನ್ನರಿವ ನೋಟಗಳ ಬೆಳಕನ್ನು ನಮ್ಮರಿವ ಕಣ್ಣುಗಳಿಗೆ ಧಾರೆಯೆರೆಯುತ್ತಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...