HomeUncategorized'ದಿ ಪ್ರಾಫೆಟ್' ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

‘ದಿ ಪ್ರಾಫೆಟ್’ ಖಲೀಲ್ ಗಿಬ್ರಾನ್ : ಯೋಗೇಶ್ ಮಾಸ್ಟರ್

- Advertisement -
- Advertisement -

ಯೋಗೇಶ್ ಮಾಸ್ಟರ್ ಅಪಾರ ಓದು ಮತ್ತು ಜೀವನ ಪ್ರೀತಿಯಿರುವ ಸೃಜನಶೀಲ ವ್ಯಕ್ತಿ. ಡುಂಢಿ ಕಾದಂಬರಿ ವಿವಾದದಿಂದ ‘ಖ್ಯಾತ’ರಾದ ಅವರು ಬಹುಮುಖಿ ಪ್ರತಿಭೆಯುಳ್ಳ ಕಲಾವಿದ. ಈ ವಾರದಿಂದ ಅವರ ಪುಟಕ್ಕಿಟ್ಟ ಪುಟಗಳು ಇಲ್ಲಿ ಹೊಳೆಯಲಿವೆ. ಜೀವನದ ಬೇರೆ ಬೇರೆ ಸಂದರ್ಭದ ಜಟಿಲ ಕ್ಷಣಗಳಲ್ಲಿ ಎಂದೋ ಓದಿದ ಪುಸ್ತಕವೊಂದರಿಂದ ಒಳನೋಟವೊಂದು ಮನದಲ್ಲಿ ತೇಲಿ ಬರುತ್ತದೆ. ಆ ಪುಸ್ತಕವು ಜಗತ್ತಿನ ಯಾವುದೋ ಭಾಷೆಯ ಮಹತ್ವದ ಕೃತಿಯಾಗಿರಬಹುದು ಅಥವಾ ನಮ್ಮದೇ ಪರಿಸರದ ಭಾಷೆಯ ಪುಸ್ತಕವಾಗಿರಬಹುದು. ಅಂತಹ ಪುಸ್ತಕಗಳು ಕತ್ತಲೆಯಲ್ಲೂ ಹೊಳೆಯುತ್ತವೆ. ಆ ರೀತಿ ಹೊಳೆಯುವ ಮಹತ್ವದ ಸಾಲುಗಳನ್ನು ಮತ್ತು ಆ ಪುಸ್ತಕದ ಕುರಿತ ಸಾಂದರ್ಭಿಕ ಮಾಹಿತಿಯನ್ನು ಪ್ರತೀ ವಾರವೂ ನಮ್ಮ ಓದುಗರಿಗೆ ಯೋಗೇಶ್ ಮಾಸ್ಟರ್ ತಲುಪಿಸಲಿದ್ದಾರೆ.

ಆದಿಯಲ್ಲಿ ಆಕಾಶ ಮತ್ತು ಭೂಮಿಯನ್ನು ಸೃಷ್ಟಿಸಿದ ದೇವರು ಮನುಷ್ಯನನ್ನೂ ಸೃಷ್ಟಿಸಿದ ತನ್ನದೇ ಪ್ರತಿರೂಪದಲ್ಲಿ. ಆದಾಮ ಮತ್ತು ಹವ್ವರೆಂಬ ಆ ಗಂಡು ಹೆಣ್ಣುಗಳನ್ನು ಸ್ವತಂತ್ರವಾಗಿ ಸ್ವರ್ಗೋದ್ಯಾನದಲ್ಲಿ ಬಿಟ್ಟು, ಅರಿವನ್ನು ನೀಡುವ ಮರದ ಫಲವನ್ನು ತಿನ್ನಬಾರದೆಂಬ ನಿಬಂಧನೆಯನ್ನಿಟ್ಟು ಅವರನ್ನು ಚೆನ್ನಾಗಿಟ್ಟುಕೊಂಡಿದ್ದ. ತಿನ್ನಬಾರದು ಎಂದು ಅವನು ಏಕೆ ಹೇಳಿದ್ದನೋ?! ಆದರೆ ಅವಳು ತಿಂದಳು, ಅವನೂ ತಿಂದ. ಇಬ್ಬರಿಗೂ ಅರಿವುಂಟಾಯಿತು. ತಮ್ಮ ಬೆತ್ತಲೆಯನ್ನು ಅರಿವೆಯ ಕತ್ತಲೆಯಲ್ಲಿ ಇಟ್ಟುಕೊಳ್ಳಬೇಕೆಂಬುದೇ ಮೊದಲ ಅರಿವು. ತಾನು ಲೋಕ ಸಂಚಾರಕ್ಕೆ ಹೋಗಿದ್ದು ಮರಳಿ ಬಂದಾಗ ದೇವರು ಕಂಡಿದ್ದು, ಸ್ತ್ರೀ ತನ್ನ ಸಂಕೋಚದ ಮರೆಯಿಂದ ಉತ್ತರಿಸಿದ್ದು. ಕೋಪಗೊಂಡ ಅವನು ಸ್ವರ್ಗೋದ್ಯಾನದಿಂದ ಹೊರಗಟ್ಟಿದ. ಮಣ್ಣಿಂದ ಬಂದ ಮನುಷ್ಯರು ಮಣ್ಣಿಗೇ ಹೋಗಲೆನ್ನುತ್ತಾ ಗಂಡು-ಹೆಣ್ಣಿಗೆರಡು ಶಾಪಗಳನ್ನು ಕೊಟ್ಟ. ಹೆಣ್ಣಿಗೆ ನೋವಿನಲ್ಲಿ ಹೆರುವ ಶಾಪವಾದರೆ, ಗಂಡಿಗೆ ದುಡಿವ ಶಾಪವ.

ದೇವರು ಶಾಪ ಎನ್ನುವ ದುಡಿದು ಬದುಕುವುದನ್ನು ಖಲೀಲ್ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಬ್ಬರ ಭಾಗ್ಯ ಎನ್ನುತ್ತಾನೆ. ದುಡಿಯುವುದೆಂದರೆ ವಿಶ್ವದ ಅನಂತತೆಯು ಹೆಮ್ಮೆಯಿಂದ ಹೋಗುವ ಘನವೆತ್ತ ಮೆರವಣಿಗೆಯ ಭಾಗವಾಗುವುದು ಎನ್ನುತ್ತಾನೆ. ನಿನ್ನ ಹಣೆಯಲ್ಲಿ ದುಡಿಮೆಯೆಂಬುವುದು ದೌರ್ಭಾಗ್ಯವಾಗಿ ಬರೆದಿದ್ದರೆ, ದುಡಿಯುವಾಗ ಸುರಿವ ನಿನ್ನ ಬೆವರು ಅದನ್ನು ತೊಡೆದು ಹಾಕಿ ಬಿಡುವುದು ಎಂದು ಬಿಡುತ್ತಾನೆ ಈ ಪಾಪಿ ಖಲೀಲ.! ದೇವರ ಶಾಪವನ್ನು ಹೆಮ್ಮೆಯ ಬದುಕಿನ ಭಾಗವಾಗಿಸಿಕೊಳ್ಳುತ್ತಾನೆ. ಸಾಲದ್ದಕ್ಕೆ ಪ್ರೇಮದ ಮೂರ್ತ ಸ್ವರೂಪವೇ ದುಡಿಮೆ ಎನ್ನುತ್ತಾನೆ. ನೀನು ಪ್ರೀತಿಸುವುದನ್ನು ನಿನ್ನ ಕೆಲಸದಲ್ಲಿ ತೋರಿಸೆನ್ನುತ್ತಾನೆ.

ದಿ ಪ್ರಾಫೆಟ್ ಎಂದು ಖಲೀಲ್ ಗಿಬ್ರಾನ್ ಬರೆದ ಅರಿವಿನ ಹೊತ್ತಿಗೆಯು ಬಹುಪಾಲು ವಿಶ್ವದ ಎಲ್ಲಾ ಭಾಷೆಗಳಲ್ಲಿಯೂ ಅನುವಾದಿತವಾಗಿವೆ. ಕನ್ನಡದಲ್ಲಿ ಜಿ.ಎನ್ ರಂಗನಾಥ್, ಬಂಜಗೆರೆ ಜಯಪ್ರಕಾಶ್, ದೇವದತ್ತ ಇಡೀ ಪುಸ್ತಕವನ್ನೇ ಅನುವಾದಿಸಿದ್ದರೆ, ತಮಗೆ ಬೇಕಾದಂತಹ ಭಾಗಗಳನ್ನು ಬಹಳಷ್ಟು ಲೇಖಕರು ಅನುವಾದಿಸಿ ಸಂದರ್ಭೋಚಿತವಾಗಿ ತಮ್ಮ ಬರಹಗಳಲ್ಲಿ ಉಲ್ಲೇಖಿಸಿರುತ್ತಾರೆ. ಖಲೀಲನ ಪ್ರಾಫೆಟನ್ನು ಪ್ರವಾದಿ ಎನ್ನುವುದಕ್ಕಿಂತ ದಾರ್ಶನಿಕ ಎಂದು ಕನ್ನಡದಲ್ಲಿ ಕರೆಯುವುದು ಸೂಕ್ತವೆಂದೆನಿಸುತ್ತದೆ.
ಅಲ್ ಮುಸ್ತಾಫ ತನ್ನ ಪಟ್ಟಣಕ್ಕೆ ಮರಳಲು ಬೆಟ್ಟವಿಳಿದು ಬಂದಾಗ ಊರವರು ಸೇರುತ್ತಾರೆ.

ಎದೆಗೆ ಮಗುವನ್ನು ಅವುಚಿಕೊಂಡಿರುವ ಮಹಿಳೆ ಮಗುವಿನ ಬಗ್ಗೆ ಹೇಳು ಎಂದರೆ, “ಮಗುವೆಂಬುದು ನಿಮ್ಮ ಮೂಲಕ ಬಂದಿರುವವರೇ ಹೊರತು ನಿಮ್ಮಿಂದ ಅಲ್ಲ” ಎನ್ನುತ್ತಾ ಮಕ್ಕಳ ಮೇಲೆ ಪೋಕರಿಗಿರುವ ಅಧಿಕಾರವನ್ನು ಕಿತ್ತು, “ನೀವು ಮಕ್ಕಳಂತಾಗಬೇಕೇ ಹೊರತು, ಮಕ್ಕಳನ್ನು ನಿಮ್ಮಂತೆ ಮಾಡಬೇಡಿ. ಏಕೆಂದರೆ ಅವರು ಹೊಂದಿರುವ ಕನಸನ್ನು ನೀವು ಎಂದಿಗೂ ಹೊಂದಲಾರಿರಿ” ಎಂದೆಚ್ಚರಿಸುತ್ತಾನೆ. ಹಿರಿಯರಿಗೆ ಬಾಗಬೇಕು ಎಂದು ಸಾಮಾನ್ಯ ಬೋಧನೆಯನ್ನು ಮಕ್ಕಳಿಗೆ ಮಾಡುವಾಗ ಖಲೀಲ್ ನೀವು ಬಿಲ್ಲಿನಂತೆ ಬಾಗಿ ಮಕ್ಕಳು ಬಾಣದಂತೆ ಚಿಮ್ಮಲಿ ಎನ್ನುತ್ತಾನೆ.

ಮನೆ ಕಟ್ಟುವವನು ಮನೆಯ ಬಗ್ಗೆ ಕೇಳಿದರೆ, “ನಿನ್ನ ದೇಹದ ವಿಸ್ತೃತ ರೂಪವೇ ನಿನ್ನ ಮನೆ” ಎನ್ನುತ್ತಾನೆ. ವ್ಯಾಪಾರಿ ವ್ಯಾಪಾರದ ಬಗ್ಗೆ, ಪ್ರೇಮಿಯು ಪ್ರೇಮದ ಬಗ್ಗೆ, ತಳವಾರನು ಕಾನೂನು ವ್ಯವಸ್ಥೆಯ ಬಗ್ಗೆ, ಬಟ್ಟೆಯ ಬಗ್ಗೆ; ಹೀಗೆ ನಾನಾ ವಿಷಯಗಳ ಬಗ್ಗೆ ಕೇಳಿದವರಿಗೆಲ್ಲಾ ಉತ್ತರಿಸುತ್ತಾ ಹೋಗುವ ಅಲ್ ಮುಸ್ತಾಫ ತನ್ನ ಹಡಗು ಬರಲು ಹೊರಟು ಹೋಗುತ್ತಾನೆ, ಪ್ರಶ್ನಿಸಿದವರಿಗೆಲ್ಲಾ ಅರಿವಿನ ಒಳ ನೋಟಗಳನ್ನು ಕೊಟ್ಟು.

ಪ್ರಾಫೆಟ್ಟಿನ ಪುಟವಿಟ್ಟ ಪುಟಗಳು ಕತ್ತಲಲ್ಲಿಯೂ ಹೊಳೆಯುತ್ತಿರುತ್ತವೆ. ಸಂಬಂಧಗಳ ಸಂಘರ್ಷಗಳಲ್ಲಿ, ಅಸೂಯೆ, ಮತ್ಸರ ಮೂಡಿದ ಕ್ಷಣಗಳಲ್ಲಿ, ಲೋಕದ ರೂಢಿಯ ಭಾವನೆಗಳ್ಯಾವವೇ ಆದರೂ ಕಣ್ಣುಗಳಲ್ಲಿ ಕತ್ತಲಾಗಿ ದಾರಿ ಮಸುಕಾದಾಗ ಖಲೀಲನ ಪ್ರಾಫೆಟ್ ತನ್ನರಿವ ನೋಟಗಳ ಬೆಳಕನ್ನು ನಮ್ಮರಿವ ಕಣ್ಣುಗಳಿಗೆ ಧಾರೆಯೆರೆಯುತ್ತಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...